• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಭಾರತರತ್ನ ನೀಡಲು 34 ವರ್ಷ ವಿಳಂಬ ಮಾಡಿದ ಕಾಂಗ್ರೆಸ್‌ ಪಕ್ಷವನ್ನು ಇತಿಹಾಸ ಕ್ಷಮಿಸುವುದಿಲ್ಲ ಎಂದ ಡಾ.ಕೆ.ಸುಧಾಕರ್

cknewsnow desk by cknewsnow desk
April 14, 2021
in CHIKKABALLAPUR, STATE
Reading Time: 1 min read
0
ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಭಾರತರತ್ನ ನೀಡಲು 34 ವರ್ಷ ವಿಳಂಬ ಮಾಡಿದ ಕಾಂಗ್ರೆಸ್‌ ಪಕ್ಷವನ್ನು ಇತಿಹಾಸ ಕ್ಷಮಿಸುವುದಿಲ್ಲ ಎಂದ ಡಾ.ಕೆ.ಸುಧಾಕರ್
942
VIEWS
FacebookTwitterWhatsuplinkedinEmail

ಅಂಬೇಡ್ಕರ್ ಅವರಂತಹ ವ್ಯಕ್ತಿಯನ್ನು ಕೂಡ ಚುನಾವಣೆಯಲ್ಲಿ ಜನರು ಸೋಲಿಸಿದರು. ಬಾಬು ಜಗಜೀವನರಾಮ್ ಅವರು ಪ್ರಧಾನಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಉದ್ದೇಶಪೂರ್ವಕವಾಗಿ ಅವರನ್ನು ಪ್ರಧಾನಿಯಾಗಲು ಬಿಡಲಿಲ್ಲ.


ಚಿಕ್ಕಬಳ್ಳಾಪುರ: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾವಿನ 34 ವರ್ಷಗಳ ಬಳಿಕವೂ ಅವರನ್ನು ಸ್ಮರಿಸದವರನ್ನು ಹಾಗೂ ಅವರಿಗೆ ಭಾರತರತ್ನ ನೀಡದವರನ್ನು ಇತಿಹಾಸ ಎಂದಿಗೂ ಕ್ಷಮಿಸುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ 130ನೇ ಜಯಂತಿ ಹಾಗೂ ಡಾ.ಬಾಬು ಜಗಜೀವನರಾಮ್ 114ನೇ ಜಯಂತಿ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಚಹಾ ಮಾರುತ್ತಿದ್ದ ವ್ಯಕ್ತಿಯೊಬ್ಬ ದೇಶದ ಪ್ರಧಾನಿಯಾಗಿದ್ದಾರೆಂದರೆ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವೇ ಕಾರಣ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿಕೊಂಡಿದ್ದಾರೆ. ಅದಕ್ಕಾಗಿ ಸಂವಿಧಾನ ಒಪ್ಪಿದ ದಿನವನ್ನು ʼಸಂವಿಧಾನ ದಿನʼವೆಂದು ಆಚರಿಸಲಾಗುತ್ತಿದೆ. ಆದರೆ ಅಂಬೇಡ್ಕರರ ಸಾವಿನ 34 ವರ್ಷಗಳ ಬಳಿಕವೂ ಅವರನ್ನು ಸ್ಮರಿಸುವ ಕೆಲಸ ಯಾರೂ ಮಾಡಿರಲಿಲ್ಲ. ‘ಗರೀಬಿ ಹಠಾವೋ’ ಎಂದೇ ಹೇಳಿಕೊಂಡು 70 ವರ್ಷ ರಾಜ್ಯಭಾರ ಮಾಡಿದ ಸರಕಾರಗಳಿಗೆ, ಅಂಬೇಡ್ಕರರಿಗೆ ಭಾರತ ರತ್ನ ನೀಡಬೇಕೆಂದು ಅನ್ನಿಸಲಿಲ್ಲ. ಇತಿಹಾಸವು ಅಂಥವರನ್ನು ಕ್ಷಮಿಸುವುದಿಲ್ಲ. ಯಾರು ದೀನದಲಿತರ ಚಿಂತನೆ ಮಾಡುತ್ತಿದ್ದಾರೆ, ನಿಜವಾದ ಕಾರ್ಯಕ್ರಮ ಯಾರು ನೀಡಿದ್ದಾರೆ ಎಂಬ ಬಗ್ಗೆ ಜನರು ಚಿಂತನೆ ನಡೆಸಬೇಕು ಎಂದರು ಡಾ.ಸುಧಾಕರ್.

ಡಾ.ಅಂಬೇಡ್ಕರ್ ಅವರ ಜನ್ಮದಿನದಂದು ಮಾಲಾರ್ಪಣೆ ಮಾಡಿದರೆ, ಅವರ ಆಶಯಗಳಿಗನುಗುಣವಾಗಿ ನಡೆದಿದ್ದೇವೆ ಎಂದರ್ಥವಲ್ಲ. ಕೇಂದ್ರದ ಮೋದಿ ಸರಕಾರ, 8 ಕೋಟಿ ಜನರಿಗೆ ಉಜ್ವಲ ಯೋಜನೆಯಡಿ, ಉಚಿತ ಅನಿಲ ನೀಡಿದೆ. 10 ಕೋಟಿ ದೀನ ದಲಿತರಿಗೆ ರಾಷ್ಟ್ರೀಕೃತ ಬ್ಯಾಂಕ್ʼಗಳಲ್ಲಿ ಸಾಲ ಸೌಲಭ್ಯ ಕಲ್ಪಿಸಿದೆ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯಲು ಶುದ್ಧ ನೀರು ನೀಡಲಾಗಿದೆ. ಈ ರೀತಿ ಸೌಲಭ್ಯ ನೀಡುವುದೇ ನಿಜವಾದ ಸಮಾನತೆ ಎಂದು ಸಚಿವರು ಹೇಳಿದರು.

ಅಂಬೇಡ್ಕರ್ ಅವರಂತಹ ವ್ಯಕ್ತಿಯನ್ನು ಕೂಡ ಚುನಾವಣೆಯಲ್ಲಿ ಜನರು ಸೋಲಿಸಿದರು. ಈ ಇತಿಹಾಸ ನಮ್ಮ ಮುಂದೆಯೇ ಇದ್ದು, ಯಾರು ಯಾರ ಪರವಿದ್ದರು ಎಂದು ಅರ್ಥ ಮಾಡಿಕೊಳ್ಳಬೇಕು. ಸಮಾನ ಅವಕಾಶ ನೀಡುವ ಸಂವಿಧಾನ ನಮ್ಮೊಂದಿಗಿದೆ. ಅತ್ಯಂತ ಸಣ್ಣ ಸಮುದಾಯದ ಜನರು ಕೂಡ ಮುಖ್ಯಮಂತ್ರಿಗಳಾಗಿರುವುದಕ್ಕೆ ಸಂವಿಧಾನ ಕಾರಣ ಎಂದರು ಡಾ.ಸುಧಾಕರ್.

ಅಂಬೇಡ್ಕರ್ ಜಯಂತಿಯನ್ನು ಸಮಾನತೆ ಹಾಗೂ ಸ್ವಾಭಿಮಾನದ ಹಬ್ಬವಾಗಿ ಆಚರಿಸಬೇಕು. ಅವರು ನನ್ನ ಜೀವನದ ಆದರ್ಶ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಇಬ್ಬರೂ ದೇಶದ ನಕ್ಷತ್ರಗಳು. ಇಬ್ಬರೂ ನಾಯಕರು ಅಸ್ಪಶ್ಯತೆ, ಅಸಮಾನತೆ ಹೋಗಲಾಡಿಸಲು ಜೀವನ ಮೀಸಲಿಟ್ಟರು ಎಂದು ಅವರು ನುಡಿದರು.

ಹಸಿರು ಕ್ರಾಂತಿಗೆ ಕಾರಣರಾದ ಬಾಬು ಜಗಜೀವನರಾಮ್ ಅವರು ಪ್ರಧಾನಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಉದ್ದೇಶಪೂರ್ವಕವಾಗಿ ಅವರನ್ನು ಪ್ರಧಾನಿಯಾಗಲು ಬಿಡಲಿಲ್ಲ.
ಅಂಬೇಡ್ಕರರು ಹೊಂದಿದ್ದ ಶಿಕ್ಷಣದಿಂದ ಶ್ರೀಮಂತರಾಗಿ ಯಾವುದೇ ದೇಶದಲ್ಲಿ ಬದುಕಲು ಸಾಧ್ಯವಿತ್ತು. ಆದರೆ ತಮ್ಮ ಸಮುದಾಯದವರಿಗೆ ಹಕ್ಕುಗಳು ದೊರೆತಿಲ್ಲ, ಜನರು ಬಲಹೀನರಾಗಿದ್ದಾರೆ ಹಾಗೂ ಅವರೆಲ್ಲರನ್ನೂ ಮುಖ್ಯವಾಹಿನಿಗೆ ತರಬೇಕೆನ್ನುವ ಉದ್ದೇಶದಿಂದ ದಲಿತರ ಏಳಿಗೆಗೆ ದುಡಿದರು ಎಂದು ಸಚಿವರು ಹೇಳಿದರು.

ಲಾಕ್‌ಡೌನ್ ಪರ್ಯಾಯವಲ್ಲ

ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಪರ್ಯಾಯವಲ್ಲ. ಜನರು ಇದನ್ನು ಅರ್ಥ ಮಾಡಿಕೊಂಡು ಜನತಾ ಕರ್ಫ್ಯೂ ವಿಧಿಸಿಕೊಳ್ಳಬೇಕು. ಸಮಾರಂಭಗಳನ್ನು ಸರಳವಾಗಿ ಮಾಡಬೇಕು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಪ್ರಕರಣ ಸಂಖ್ಯೆ ಹೆಚ್ಚಿದರೆ ಜಿಲ್ಲಾಡಳಿತವನ್ನೇ ಹೊಣೆ ಮಾಡಲಾಗುತ್ತದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಪಾಲಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌, ಮಾವು ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್‌ ಮುಂತಾದವರು ಉಪಸ್ಥಿತರಿದ್ದರು.

Tags: ambedkar 130th birth daybabu jagjeevan ramchikkaballapuradr br ambedkarindiakarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಭೂಮಿ ಮತ್ತು ಕೈಗಾರಿಕೆಗಳನ್ನು ರಾಷ್ಟ್ರೀಕರಣ ಮಾಡುವುದು ಅಂಬೇಡ್ಕರ್ ಅವರ ಕನಸಾಗಿತ್ತು: ಡಾ.ಅನಿಲ್‌ಕುಮಾರ್

ಭೂಮಿ ಮತ್ತು ಕೈಗಾರಿಕೆಗಳನ್ನು ರಾಷ್ಟ್ರೀಕರಣ ಮಾಡುವುದು ಅಂಬೇಡ್ಕರ್ ಅವರ ಕನಸಾಗಿತ್ತು: ಡಾ.ಅನಿಲ್‌ಕುಮಾರ್

Leave a Reply Cancel reply

Your email address will not be published. Required fields are marked *

Recommended

ಪ್ರೊ.ಬಿ.ಗಂಗಾಧರ ಮೂರ್ತಿ: ವೈಚಾರಿಕ ಚಿಂತನೆಯ ಪ್ರಖರ ಬೆಳಕು

ಪ್ರೊ.ಬಿ.ಗಂಗಾಧರ ಮೂರ್ತಿ: ವೈಚಾರಿಕ ಚಿಂತನೆಯ ಪ್ರಖರ ಬೆಳಕು

3 years ago
ಕೋವಿಡ್‌ ತೊಲಗಿದರೆ ಮುಂದಿನ ವರ್ಷ ಅದ್ಧೂರಿ ದಸರಾ; ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ ಸಿಎಂ

ಕೋವಿಡ್‌ ತೊಲಗಿದರೆ ಮುಂದಿನ ವರ್ಷ ಅದ್ಧೂರಿ ದಸರಾ; ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ ಸಿಎಂ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ