• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕಾಂಗ್ರೆಸ್‌ ಕಾರ್ಯಕಾರಿಣಿ ನಂತರ ಪ್ರಧಾನಿ ನರೇಂದ್ರ ಮೋದಿಗೆ ತುರ್ತು ಪತ್ರ ಬರೆದ ಡಾ.ಮನಮೋಹನ್‌ ಸಿಂಗ್;‌ ಕೋವಿಡ್‌ ಎರಡನೇ ಅಲೆ ತಡೆಯಲು ಅವರು ಕೊಟ್ಟ ಸಲಹೆ ಏನು?

cknewsnow desk by cknewsnow desk
April 18, 2021
in COVID-19, NATION, STATE
Reading Time: 1 min read
0
ಕಾಂಗ್ರೆಸ್‌ ಕಾರ್ಯಕಾರಿಣಿ ನಂತರ ಪ್ರಧಾನಿ ನರೇಂದ್ರ ಮೋದಿಗೆ ತುರ್ತು ಪತ್ರ ಬರೆದ ಡಾ.ಮನಮೋಹನ್‌ ಸಿಂಗ್;‌ ಕೋವಿಡ್‌ ಎರಡನೇ ಅಲೆ ತಡೆಯಲು ಅವರು ಕೊಟ್ಟ ಸಲಹೆ ಏನು?
915
VIEWS
FacebookTwitterWhatsuplinkedinEmail

ನೋಟ್‌ ಬ್ಯಾನ್‌ ಬ್ಲಂಡರ್‌ನಿಂದ ಆಗುವ ಅನಾಹುತಗಳ ಬಗ್ಗೆ ನಿಷ್ಠುರವಾಗಿ ಹೇಳಿದ್ದ ಡಾ. ಮನಮೋಹನ್‌ ಸಿಂಗ್‌, ಈಗ ಕೋವಿಡ್‌ ಎರಡನೇ ಅಲೆ ವಿರುದ್ಧ ಹೋರಾಟ ನಡೆಸುವ ಬಗ್ಗೆಯೂ ಖಡಕ್‌ ಸಲಹೆಗಳನ್ನೇ ನೀಡಿದ್ದಾರೆ.


ನವದೆಹಲಿ: ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ದಿನೇದಿನೆ ಬಿಗಡಾಯಿಸುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸುವಂತೆ ಸಲಹೆ ಮಾಡಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್‌ ವಿರುದ್ಧ ನಮ್ಮಲ್ಲಿರುವ ದೊಡ್ಡ ಅಸ್ತ್ರವೆಂದರೆ, ಅದು ವ್ಯಾಕ್ಸಿನ್‌ ಮಾತ್ರ ಎಂದಿರುವ ಅವರು; ಹೆಚ್ಚು ಸಂಖ್ಯೆಯಷ್ಟು ಜನರಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಕ್ಷಿಪ್ರಗತಿಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಸದ್ಯ ದೇಶದಲ್ಲಿ ಕೋವಿಂಡ್‌ ಸೋಂಕಿತರ ಪ್ರಮಾಣ ಅಂಕೆಮೀರಿ ಹೆಚ್ಚಾಗುತ್ತಿದೆ. ಕೋವಿಡ್ ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ಲಸಿಕೆಗೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಬೇಕು. ಲಸಿಕೆಯ ಸಂಖ್ಯೆಯ ಬಗ್ಗೆ ನೋಡದೆ ಪ್ರತಿಯೊಬ್ಬರಿಗೂ ಲಸಿಕೆ ಹಾಕುವತ್ತ ಗಮನ ಹರಿಸಬೇಕು ಎಂದು ಮನಮೋಹನ್‌ ಅವರು ಪ್ರಧಾನಿಗೆ ಸಲಹೆ ಮಾಡಿದ್ದಾರೆ.

ಭಾರತವು ಸದ್ಯಕ್ಕೆ ಹೊಂದಿರುವ ಜನಸಂಖ್ಯೆಯ ಒಂದು ಸಣ್ಣ ಪ್ರಮಾಣಕ್ಕೆ ಮಾತ್ರ ಲಸಿಕೆ ಕೊಡಲಾಗಿದೆ. ಇನ್ನೂ ಬಹುದೊಡ್ಡ ಜನಸಂಖ್ಯೆಯ ಪ್ರಮಾಣಕ್ಕೆ ಚಿಕಿತ್ಸೆ ಕೊಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಕಾರ್ಯತಂತ್ರವನ್ನು ರೂಪಿಸಿಕೊಂಡು ಲಸಿಕೆ ಅಭಿಯಾನವನ್ನು ಮರು ರೂಪಿಸಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಎಲ್ಲೆ ಆಗಲಿ, ಲಸಿಕೆ, ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮುಂದಿನ ಆರು ತಿಂಗಳವರೆಗೂ ಲಸಿಕೆಯ ಬೇಡಿಕೆ ಹಾಗೂ ಪೂರೈಕೆ ಮಾಡಲಾಗುವ ಡೋಸ್ ವಿವರವನ್ನು ಕೇಂದ್ರ ಸರಕಾರ ಪ್ರಕಟಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

ಕೋವಿಡ್‌ ಬಗ್ಗೆ ಚರ್ಚೆ ನಡೆಸಲು ದಿಲ್ಲಿಯಲ್ಲಿಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿತ್ತು. ಸಭೆಯ ನಂತರ ಮನಮೋಹನ್‌ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

Key to our fight against Covid19 must be ramping up vaccination effort. We must resist temptation to look at absolute numbers being vaccinated, focus instead on percentage of population vaccinated: Former PM Dr. Manmohan Singh writes to PM Modi on ramping up vaccination programme pic.twitter.com/ZD5SbQOE0u

— Congress (@INCIndia) April 18, 2021

ಸಿಂಗ್‌ ಸಲಹೆಗಳು ವೈರಲ್‌

ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿ ಡಾ.ಮನಮೋಹನ್‌ ಸಿಂಗ್‌ ಅವರ ಸಲಹೆಗಳ ಪ್ರೆಸ್‌ನೋಟ್‌ ವೈರಲ್‌ ಆಗಿದೆ. ಅನೇಕರು ಈ ಹೇಳಿಕೆಯನ್ನು ಪ್ರಧಾನಮಂತ್ರಿ ಕಚೇರಿ ಹಾಗೂ ನರೇಂದ್ರ ಮೋದಿ ಅವರಿಗೆ ಟ್ಯಾಗ್‌ ಮಾಡಿ, ಹಿರಿಯ ನಾಯಕರಾದ ಮನಮೋಹನ್‌ ಸಿಂಗ್‌ ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪ್ರಧಾನಿಯನ್ನು ಒತ್ತಾಯ ಮಾಡಿದ್ದಾರೆ.

ರಾಜಕೀಯದ ಹಿನ್ನೆಲೆಯಲ್ಲಿ ಮನಮೋಹನ್‌ ಅವರ ಸಲಹೆಗಳನ್ನು ನೋಡಬೇಡಿ. ಅವರ ಅನುಭವ ಹಾಗೂ ವಿತ್ತತಜ್ಞರಾಗಿ ದೇಶವನ್ನು ನೋಡುತ್ತಿರವ ಹಿನ್ನೆಲೆಯಲ್ಲಿ ಅವರ ಸಲಹೆಗಳನ್ನು ಗ್ರಹಿಸಿ. ಅವರ ಸಲಹೆಗಳನ್ನು ಪಾಲಿಸಿ ಎಂದು ಇನ್ನೊಬ್ಬರು ಡಿಮಾಂಡ್‌ ಮಾಡಿದ್ದಾರೆ.

ನೋಟ್‌ ಬ್ಯಾನ್‌ ಬಗ್ಗೆ ವಸ್ತುಸ್ಥಿತಿಯನ್ನು ದೇಶದ ಮುಂದೆ ಬಿಚ್ಚಿಟ್ಟ ಏಕೈಕ ನಾಯಕರಾಗಿದ್ದರು ಮನಮೋಹನ್‌ ಸಿಂಗ್.‌ ಅವರು ಹೇಳಿದ್ದೆಲ್ಲವೂ ನಡೆಯಿತು. ಅವರ ಆತಂಕಗಳು ನಿಜವಾದವು. ಅವರ ಸಲಹೆಗಳನ್ನು ಉಪೇಕ್ಷೆ ಮಾಡಬೇಡಿ ಎಂದು ಟ್ವಿಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

Lead photo from Narendra Modi Facebook

Tags: Covid second wavecovid19Former Prime Minister Manmohan Singhindialetter to modiprime minister narendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್‌ ಕೊಟ್ಟ ಪೋಲಿಸರು

ಕೋವಿಡ್‌ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್‌ ಕೊಟ್ಟ ಪೋಲಿಸರು

Leave a Reply Cancel reply

Your email address will not be published. Required fields are marked *

Recommended

ಮನರೇಗಾ ಕಾರ್ಮಿಕರಿಂದ ಮೇ ಡೇ ಆಚರಣೆ; ಶ್ರಮ ದರೋಡೆ ನಿಲ್ಲಿಸಿ, ಶ್ರಮ ಗೌರವ ಹೆಚ್ಚಿಸಿ ಎಂದು ಸರಕಾರಕ್ಕೆ ಒತ್ತಾಯ

ಮನರೇಗಾ ಕಾರ್ಮಿಕರಿಂದ ಮೇ ಡೇ ಆಚರಣೆ; ಶ್ರಮ ದರೋಡೆ ನಿಲ್ಲಿಸಿ, ಶ್ರಮ ಗೌರವ ಹೆಚ್ಚಿಸಿ ಎಂದು ಸರಕಾರಕ್ಕೆ ಒತ್ತಾಯ

4 years ago
ತೆರಿಗೆ ಸಂಗ್ರಹದ ಲೆಕ್ಕ ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ: ಪೆಟ್ರೋಲ್,  ಡೀಸೆಲ್‌ನಿಂದ 15,861 ಕೋಟಿ ರೂ. ಟ್ಯಾಕ್ಸ್‌ ಕಲೆಕ್ಷನ್‌

ಕಾಲೇಜು ಉಪನ್ಯಾಸಕರ ವರ್ಗಾವಣೆ; 27ರಿಂದ ಸಾಮಾನ್ಯ ಅಭ್ಯರ್ಥಿಗಳ ಕೌನ್ಸೆಲಿಂಗ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ