• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮೇ 1ರಿಂದಲೇ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19‌ ವ್ಯಾಕ್ಸಿನ್; ಎರಡನೇ ಅಲೆ ಕಟ್ಟಿಹಾಕಲು ಮಹತ್ತ್ವದ ನಿರ್ಧಾರ ಕೈಗೊಂಡ ಕೇಂದ್ರ ಸರಕಾರ, ಇನ್ನು ಸಬೂಬು ಏಕೆ? ಪಡೆಯಿರಿ ಲಸಿಕೆ

cknewsnow desk by cknewsnow desk
April 19, 2021
in COVID-19, NATION, STATE
Reading Time: 1 min read
0
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
916
VIEWS
FacebookTwitterWhatsuplinkedinEmail

ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಭೆಯಲ್ಲಿ ಮಹತ್ವ್ವದ ನಿರ್ಧಾರ; ಇದು ಜಗತ್ತಿನಲ್ಲೇ ಮೂರನೇ ಹಂತದ ಅತಿದೊಡ್ಡ ಲಸಿಕೆ ಅಭಿಯಾನ

ನವದೆಹಲಿ: ಕೋವಿಡ್‌ ಎರಡನೇ ಅಲೆಯನ್ನು ಶತಾಯಗತಾಯ ಕಟ್ಟಿಹಾಕಲು ಹೊರಟಿರುವ ಕೇಂದ್ರ ಸರಕಾರ ಮೇ 1ರಿಂದಲೇ ಕೋವಿಡ್-19 ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಅಂದಿನಿಂದಲೇ 18 ವರ್ಷದ ಮೇಲ್ಪಟ್ಟ ಎಲ್ಲ ವಯೋಮಿತಿಯವರಿಗೆ ಲಸಿಕೆ ನೀಡುವುದೂ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ 3 ಹಂತಗಳ ಕಾರ್ಯತಂತ್ರವನ್ನು ಪ್ರಕಟಿಸಿದೆ. ಈವರೆಗೆ 45 ವರ್ಷಕ್ಕೂ ಮೇಲ್ಪಟ್ಟ ವಯಸ್ಸಿನವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ.

ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಗರಿಷ್ಠ ಪ್ರಮಾಣದ ಜನರಿಗೆ ಲಸಿಕೆ ನೀಡುವುದು ಸರಕಾರದ ಉದ್ದೇಶವಾಗಿದ್ದು, ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ಜನರಿಗೆ ಲಸಿಕೆ ನೀಡಲು ಯೋಜನೆ ರೂಪಿಸಿದೆ.

ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಅದರಲ್ಲಿ ಲಸಿಕೆ ನೀಡುವ ವಯಸ್ಸಿನ ಮಿತಿ ಇಳಿಕೆ ನಿರ್ಧಾರವೂ ಒಂದು.

ಜಗತ್ತಿನ ಅತಿದೊಡ್ಡ ಲಸಿಕೆ ಆಭಿಯಾನ

ಲಸಿಕೆಯ ಬೆಲೆ, ಲಸಿಕೆ ಸಂಗ್ರಹಣೆ, ವ್ಯಾಕ್ಸಿನ್‌ ಪಡೆಯುವವರ ವಯೋಮಿತಿ ಹಾಗೂ ಲಸಿಕೆ ಅಭಿಯಾನದ ನಿರ್ವಹಣೆಯ ಬಗ್ಗೆ ಪ್ರಧಾನಿ ಮಹತ್ತ್ವದ ಚರ್ಚೆ ನಡೆಸಿದರು. ಇದು ಜಗತ್ತಿನಲ್ಲಿಯೇ ಮೂರನೇ ಹಂತದ ಅತಿದೊಡ್ಡ ವ್ಯಾಕ್ಸಿನ್‌ ಅಭಿಯಾನವಾಗಿದೆ.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಉತ್ಸಾಹದಿಂದ ಮುಂದೆ ಬಂದು ಲಸಿಕೆ ಪಡೆಯಬೇಕು ಎಂದು ಪ್ರಧಾನಮಂತ್ರಿ ಕರೆ ನೀಡಿದರಲ್ಲದೆ, ಲಸಿಕೆ ತಯಾರಕರು ತಮ್ಮ ಉತ್ಪಾದನೆಯ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಸಲಹೆ ಮಾಡಿದರು.

ರಾಜ್ಯಗಳು ನೇರವಾಗಿ ಲಸಿಕೆ ಪಡೆಯಬಹುದು

ವ್ಯಾಕ್ಸಿನ್‌ ತಯಾರಕರು ತಮ್ಮ ಉತ್ಪಾದನೆಯ ಶೇ.50ರಷ್ಟು ಲಸಿಕೆಯನ್ನು ರಾಜ್ಯಗಳಿಗೆ ನೇರವಾಗಿ ಒದಗಿಸಬಹುದಾಗಿದೆ. ಹಾಗೆಯೇ ಮುಕ್ತ ಮಾರುಕಟ್ಟೆಯಲ್ಲಿ ಪೂರ್ವನಿಗಧಿತ ಬೆಲೆಗೆ ಲಸಿಕೆಯನ್ನು ಕೊಡಬಹುದಾಗಿದೆ. ಜತೆಗೆ, ಹೆಚ್ಚುವರಿ ಲಸಿಕೆಯನ್ನು ನೇರವಾಗಿ ಉತ್ಪಾದಕರಿಂದಲೇ ಸಂಗ್ರಹಿಸಲು ರಾಜ್ಯಗಳಿಗೆ ಅವಕಾಶ ನೀಡುವ ಬಗ್ಗೆ ಪ್ರಧಾನಿ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಮೂರನೇ ಹಂತದ ವ್ಯಾಕ್ಸಿನ್‌ ಅಭಿಯಾನವನ್ನು ಅತ್ಯಂತ ಕರಾರುವಕ್ಕಾದ ಕಾರ್ಯತಂತ್ರದೊಂದಿಗೆ ರೂಪಿಸಲಾಗಿದೆ. ವೇಗವಾಗಿ ಹಾಗೂ ಅತಿ ಹೆಚ್ಚು ಜನರಿಗೆ ಕಡಿಮೆ ಅವಧಿಯಲ್ಲಿ ಲಸಿಕೆ ನೀಡುವುದು ಈ ಕಾರ್ಯತಂತ್ರದ ಭಾಗವಾಗಿದೆ. ವೈಜ್ಞಾನಿಕವಾಗಿ, ಜಾಗತಿಕ ಮಾನದಂಡಗಳ ಪ್ರಕಾರ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಂತೆ ಈ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ತಿಳಿಸಿದ್ದಾರೆ.

ಡಾ.ಮನಮೋಹನ್‌ ಸಿಂಗ್‌ ಪತ್ರ ಬರೆದಿದ್ದರು

ಭಾನುವಾರವಷ್ಟೇ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಲಸಿಕೆ ಅಭಿಯಾನವನ್ನು ಚುರುಕುಗೊಳಿಸಬೇಕಾಗಿ ಸಲಹೆ ನೀಡಿದ್ದರು. ಅಲ್ಲದೆ, ಕೋವಿಡ್‌ ಎರಡನೇ ಅಲೆ ತಡೆಗೆ ಪಂಚಸೂತ್ರಗಳನ್ನು ಸೂಚಿಸಿದ್ದರು. ಆ ಮರುದಿನವೇ ಪ್ರಧಾನಿ ಸಭೆ ಕರೆದು 18 ವರ್ಷಕ್ಕೂ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಮಹತ್ತ್ವದ ನಿರ್ಧಾರ ಕೈಗೊಂಡಿದ್ದಾರೆ.

ಡಾ.ಹರ್ಷವರ್ಧನ್‌ ಉಡಾಫೆ

ಮನಮೋಹನ್‌ ಸಿಂಗ್‌ ಅವರ ಪತ್ರಕ್ಕೆ ಪ್ರತ್ಯುತ್ತರ ನೀಡಿರುವ ಸಚಿವ ಡಾ.ಹರ್ಷವರ್ಧನ್‌, ಅತ್ಯಂತ ಬಾಲಿಷ ಉತ್ತರ ನೀಡಿದ್ದು, ಓರ್ವ ಮಾಜಿ ಪ್ರಧಾನಿಯನ್ನು ಗೇಲಿ ಮಾಡಿ ನಗೆಪಾಟಲಿಗೀಡಾಗಿದ್ದಾರೆ.

ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವ ಬದಲು ಮೂರ್ಖತನದ ಪ್ರತ್ಯುತ್ತರ ಕೊಟ್ಟಿರುವ ಆರೋಗ್ಯ ಸಚಿವರು ಈ ಮೂಲಕ ಅನಾರೋಗ್ಯಕರ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ ಎಂದು ಜಾಲತಾಣಗಳಲ್ಲಿ ಟೀಕಿಸಲಾಗುತ್ತಿದೆ.

ಸರಕಾರ ಹಾಗೂ ತಾನು ಮಾಡುತ್ತಿರುವುದೇ ಸರಿ ಎನ್ನುವ ಧಿಮಾಕಿನಿಂದ ಹರ್ಷವರ್ಧನ್‌ ಉತ್ತರ ಕೊಟ್ಟಿದ್ದಾರೆಂದು ಟ್ವಿಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾಮೆಂಟ್‌ಗಳನ್ನು ಹರ್ಷವರ್ಧನ್‌ಗೆ ಟ್ಯಾಗ್‌ ಮಾಡಿ ಚಳಿ ಬಿಡಿಸಿದ್ದಾರೆ.

History shall be kinder to you Dr Manmohan Singh ji if your offer of ‘constructive cooperation’ and valuable advice was followed by your @INCIndia leaders as well in such extraordinary times !

Here’s my reply to your letter to Hon’ble PM Sh @narendramodi ji 👍 @PMOIndia pic.twitter.com/IJcz3aL2mo

— Dr Harsh Vardhan (Modi Ka Pariwar) (@drharshvardhan) April 19, 2021
Tags: covid19indiaindia vaccination drivekarnatakavaccination above18 years
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಅವಸಾನದತ್ತ ದೇವಿಕುಂಟೆ ಗಿರಿಯ ಕೋಟೆ, ಕಲ್ಯಾಣಿ, ಬಾವಿ & ಸ್ಮಾರಕಗಳು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ-ಪುರಾತತ್ವ ಇಲಾಖೆ, ಭಾಗ್ಯನಗರ ಆಗುವ ಮುನ್ನವೇ ಕಳಾಹೀನವಾದ ಬಾಗೇಪಲ್ಲಿ!!

ಅವಸಾನದತ್ತ ದೇವಿಕುಂಟೆ ಗಿರಿಯ ಕೋಟೆ, ಕಲ್ಯಾಣಿ, ಬಾವಿ & ಸ್ಮಾರಕಗಳು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ-ಪುರಾತತ್ವ ಇಲಾಖೆ, ಭಾಗ್ಯನಗರ ಆಗುವ ಮುನ್ನವೇ ಕಳಾಹೀನವಾದ ಬಾಗೇಪಲ್ಲಿ!!

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ಮಾಡಿಸಿಕೊಡುವ ಭರವಸೆ ನೀಡಿದ ಗುಂಜೂರು ಶ್ರೀನಿವಾಸ ರೆಡ್ಡಿ

ಗುಡಿಬಂಡೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ಮಾಡಿಸಿಕೊಡುವ ಭರವಸೆ ನೀಡಿದ ಗುಂಜೂರು ಶ್ರೀನಿವಾಸ ರೆಡ್ಡಿ

4 years ago
ನವದೆಹಲಿಯ ಅಮೆರಿಕದ ರಾಯಭಾರ ಕಚೇರಿಗೆ ಚಾರ್ಜ್ ಡಿ ಅಫೈರ್ಸ್ ಆಗಿ ರಾಯಭಾರಿ ಡೇನಿಯಲ್ ಸ್ಮಿತ್ ನೇಮಕ; ಕೋವಿಡ್‌ ಸೋಂಕಿನ ಅವಧಿಯಲ್ಲಿ ಬೈಡನ್‌ ಆಡಳಿತದ ಮಹತ್ತ್ವದ ಹೆಜ್ಜೆ

ನವದೆಹಲಿಯ ಅಮೆರಿಕದ ರಾಯಭಾರ ಕಚೇರಿಗೆ ಚಾರ್ಜ್ ಡಿ ಅಫೈರ್ಸ್ ಆಗಿ ರಾಯಭಾರಿ ಡೇನಿಯಲ್ ಸ್ಮಿತ್ ನೇಮಕ; ಕೋವಿಡ್‌ ಸೋಂಕಿನ ಅವಧಿಯಲ್ಲಿ ಬೈಡನ್‌ ಆಡಳಿತದ ಮಹತ್ತ್ವದ ಹೆಜ್ಜೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ