• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಜಲಮೂಲಗಳ ಸಂರಕ್ಷಣೆಯಲ್ಲಿ ಜಡತ್ವ; ಗುಮ್ಮನಾಯಕನಪಾಳ್ಯ ಪಾಳೇಗಾರರು ಕಟ್ಟಿಸಿದ ಕಲ್ಯಾಣಿಗಳನ್ನೂ ಕಾಪಾಡಿಕೊಳ್ಳಲು ಕದಲದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ

cknewsnow desk by cknewsnow desk
April 29, 2021
in CHIKKABALLAPUR, EDITORS'S PICKS, STATE
Reading Time: 2 mins read
0
ಜಲಮೂಲಗಳ ಸಂರಕ್ಷಣೆಯಲ್ಲಿ ಜಡತ್ವ; ಗುಮ್ಮನಾಯಕನಪಾಳ್ಯ ಪಾಳೇಗಾರರು ಕಟ್ಟಿಸಿದ ಕಲ್ಯಾಣಿಗಳನ್ನೂ ಕಾಪಾಡಿಕೊಳ್ಳಲು ಕದಲದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ
923
VIEWS
FacebookTwitterWhatsuplinkedinEmail

ಗುಮ್ಮನಾಯಕನ ಪಾಳ್ಯದಲ್ಲಿ ಪಾಳೇಗಾರರು ಕಲ್ಯಾಣಿಯನ್ನು ನಿರ್ಮಿಸಿದ್ದಾರೆ. ಈಗ ಆ ಕಲ್ಯಾಣಿಯಲ್ಲಿ ಕಳೆ-ಮುಳ್ಳಿನ ಗಿಡಗಳು ಬೆಳೆದಿವೆ. ಮುಂದಿನ ತಲೆಮಾರುಗಳಿಗೂ ಉಳಿಸಿ ಸಂರಕ್ಷಣೆ ಮಾಡಬೇಕಾದ ಈ ಕಲ್ಯಾಣಿಯ ಬಗ್ಗೆ ಜಿಲ್ಲಾಡಳಿತಕ್ಕೆ ತಾತ್ಸಾರ ಏಕೆ? ಐತಿಹಾಸಿಕ ಸಂಪತ್ತಿನ ಮೇಲೆ ಅಸಡ್ಡೆ ಯಾಕೆ?

SPECIAL REPORT

by Ra Na Gopala Reddy Bagepalli

ಬಾಗೇಪಲ್ಲಿ: ತಾಲೂಕಿನ ಆಚೇಪಲ್ಲಿ, ಗುಮ್ಮನಾಯಕಪಾಳ್ಯ ಸೇರಿ ವಿವಿಧ ಗ್ರಾಮಗಳಲ್ಲಿನ ಐತಿಹಾಸಿಕ ಹಾಗೂ ಅತ್ಯಂತ ಅಪರೂಪದ ಕಲ್ಯಾಣಿಗಳು ವಿನಾಶದ ಅಂಚಿನಲ್ಲಿವೆ.

ಅವುಗಳಲ್ಲಿ ಕಳೆ, ಮುಳ್ಳಿನ ಗಿಡಗಳು ಹಾಗೂ ಕಸ ಕಡ್ಡಿಗಳು ತುಂಬುಹೋಗಿ ನೀರು ಕಲುಷಿತವಾಗಿದ್ದು, ನಮ್ಮ ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಆಡಳಿತದ ದಿವ್ಯನಿರ್ಲಕ್ಷ್ಯಕ್ಕೆ ಕನ್ನಡಿಯಂತಿವೆ.

ಬರಪೀಡಿತ ಬಯಲುಸೀಮೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಸಲು ಹಿಂದಿನ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಚೆಕ್ ಡ್ಯಾಂ, ಕಲ್ಯಾಣಿಗಳನ್ನು ಸ್ವಚ್ಛ ಮಾಡಲು ಆದೇಶ ನೀಡಿದ್ದರು. ಆಯಾ ತಾಲೂಕು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ಸಿಬ್ಬಂದಿ ಗ್ರಾಮಸ್ಥರೊಂದಿಗೆ ತಾಲೂಕಿನ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿಸಿದ್ದರು. ಆದರೆ ಇದೀಗ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡಿಸಿಲ್ಲ. ಕಲ್ಯಾಣಿಗಳಲ್ಲಿ ಕಳೆ ಹಾಗೂ ಮುಳ್ಳಿನ ಗಿಡಗಳು ಬೆಳೆದಿವೆ. ಕಸ-ಕಡ್ಡಿಗಳನ್ನು ಹಾಕಲಾಗಿದೆ. ಮದ್ಯದ ಬಾಟಲಿಗಳು ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಸುರಿಯಲಾಗಿದೆ. ಕಲ್ಯಾಣಿಗಳನ್ನು ಅಕ್ರಮ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ.

ತಾಲೂಕಿನಲ್ಲಿ ಯಾವುದೇ ನದಿ ನಾಲೆಗಳು ಇಲ್ಲ. ಶಾಶ್ವತ ಜಲಮೂಲಗಳು ಇಲ್ಲ. ಕೇವಲ ಮಳೆಯಾಧಾರಿತ ಪ್ರದೇಶ ಆಗಿದೆ. ರೈತರು ಮಳೆಯನ್ನೇ ನಂಬಿಕೊಂಡು ತರಕಾರಿ ಹಾಗೂ ಧಾನ್ಯಗಳನ್ನು ಬೆಳೆಯಬೇಕಾಗಿದೆ. ತಾಲೂಕಿನ ಕೆಲ ಪ್ರದೇಶಗಳಲ್ಲಿ ಮಳೆ ಆಗದೇ ರೈತರು ತಮ್ಮ ಹೊಲ-ಗದ್ದೆಗಳನ್ನು ಬಂಜರುಗೊಳಿಸಿದ್ದಾರೆ. ಕೃಷಿ ಚಟುವಟಿಕೆಗಳನ್ನು ಬಿಟ್ಟು ನಗರ ಪ್ರದೇಶಗಳಿಗೆ ವಲಸೆ ಹೋಗಿ, ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಕೋವಿಡ್‌ ಮತ್ತು ಲಾಕ್‌ಡೌನ್‌ ಬಂದು ಪುನಾ ಕೃಷಿಯತ್ತ ಚಿತ್ತ ಹರಿಸಿದ್ದಾರಾದರೂ ಅವರಿಗೆ ಬೇಸಾಯ ಮಾಡಲು ನೀರಿಲ್ಲ.

ತಾಲೂಕಿನಲ್ಲಿ ಸಮರ್ಪಕವಾಗಿ ಮಳೆ ಆಗುತ್ತಿಲ್ಲ. ಕೆಲವೆಡೆ ತರಕಾರಿ ಹಾಗೂ ಬೆಳೆಗಳನ್ನು ಬೆಳೆಯಲು ನೀರಿಲ್ಲ. ಕೃಷಿಗೆ ಅಗತ್ಯವಾದಷ್ಟು ನೀರಿನ ಕೊರತೆ ಇದೆ. ತಾಲೂಕಿನಲ್ಲಿ ಚಿತ್ರಾವತಿ, ವಂಡಮಾನ್ ಸೇರಿ ಕೆರೆ-ಕಟ್ಟೆ, ಚೆಕ್ ಡ್ಯಾಂ, ಗುಂಡಿಗಳಲ್ಲಿ ನೀರಿನ ಶೇಖರಣೆ ಇಲ್ಲ. ಅಂರ್ತಜಲ ಕುಸಿತವಾಗಿದೆ. ಅನೇಕ ಕಡೆ ಜನ ಹಾಗೂ ಜಾನುವಾರುಗಳಿಗೂ ನೀರಿನ ಕೊರತೆ ಇದೆ. ತಾಲೂಕಿನ ಗೂಳೂರು ಹೋಬಳಿಯ ಬಹುತೇಕ ರೈತರು ಪಟ್ಟಣ ಪ್ರದೇಶಕ್ಕೆ ತೆರಳಿ ಸಿಮೆಂಟ್, ಗಾರೆ ಹಾಗೂ ಮರಕೆಲಸಗಳಿಗೆ ಬಂದು ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ದಿನದ ಕೂಲಿ ಹಣ ಪಡೆದು ಜೀವನ ಸಾಗಿಸುವಂತಾಗಿದೆ.

560 ವರ್ಷಗಳಷ್ಟು ದೀರ್ಘ ಕಾಲ ಪಾಳೇಗಾರರು ಆಳ್ವಿಕೆ ನಡೆಸಿದ್ದರು. ತಾಲ್ಲೂಕಿನ ಐತಿಹಾಸಿಕ ಗುಮ್ಮನಾಯಕಪಾಳ್ಯದ ಗ್ರಾಮದ ಮುಖ್ಯದ್ವಾರದಲ್ಲಿ ಪಾಳೇಗಾರರು ಸುಂದರ, ವಿಶಾಲವಾದ ಕಲ್ಯಾಣಿಯನ್ನು ನಿರ್ಮಿಸಿದ್ದಾರೆ. ಇದೇ ಮಾದರಿಯಲ್ಲಿ ಆಚೇಪಲ್ಲಿ ಕ್ರಾಸ್ʼನಿಂದ ಪಾತಪಾಳ್ಯಕ್ಕೆ ಸಂಚರಿಸುವ ಮಾರ್ಗದಲ್ಲಿ ಒಂದು ಕಲ್ಯಾಣಿ ಇದೆ. ಹೀಗೆ ತಾಲೂಕಿನಲ್ಲಿ 20ಕ್ಕೂ ಹೆಚ್ಚು ಕಲ್ಯಾಣಿಗಳಿವೆ. ಇವುಗಳನ್ನು ಸ್ವಚ್ಛಗೊಳಿಸಿ, ಹೂಳು ತೆಗೆದು ಸಂರಕ್ಷಿಸಿ ಮಳೆಯ ನೀರನ್ನು ಶೇಖರಣೆ ಮಾಡಬೇಕಾಗಿದೆ. ಇದರಿಂದ ಜಲಪೂರಣ ಮಾಡಿದಂತಾಗುತ್ತದೆ ಎಂದು ಗ್ರಾಮಸ್ಥರು ಹಾಗೂ ತಾಲೂಕಿನ ಪ್ರಮುಖರು ಒತ್ತಾಯಿಸಿದ್ದಾರೆ.

ಪ್ರಾಚೀನ ಕಟ್ಟೆಗಳ ರಕ್ಷಣೆ ಮಾಡಿ

‘ತಾಲೂಕಿನಲ್ಲಿ ಮಳೆ ಬರುವ ಮುನ್ನವೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪರಗೋಡು ಬಳಿ ಇರುವ ಚಿತ್ರಾವತಿ, ವಂಡಮಾನ್ ಮತ್ತಿತರೆ ಕೆರೆ-ಕಟ್ಟೆ, ಚೆಕ್ ಡ್ಯಾಂಗಳು ಹಾಗೂ ಕಲ್ಯಾಣಿಗಳ ಸ್ವಚ್ಛತೆ ಆಗಬೇಕು. ಕಲ್ಲುಕಟ್ಟಡವನ್ನು ಸಮರ್ಪಕವಾಗಿ ಮಾಡಬೇಕು. ಮಳೆಯ ನೀರನ್ನು ಶೇಖರಣೆ ಮಾಡಿದರೆ ಅಂತರ್ಜಲ ಹೆಚ್ಚಿಸುತ್ತದೆ. ಜನ-ಜಾನುವಾರುಗಳಿಗೆ ನೀರು ಸಿಗುತ್ತದೆ. ಕಲ್ಯಾಣಿಗಳನ್ನು ಪಂಚಾ ಮಾಡಿಸಬೇಕು. ನೀರನ್ನು ಶೇಖರಣೆ ಮಾಡುವಂತೆ ಮಳೆ ಆಗುವ ಸಂದರ್ಭದಲ್ಲಿ ಚೆಕ್ ಡ್ಯಾಂಗಳನ್ನು ಕಾಲ ಕಾಲಕ್ಕೆ ನಿರ್ವಹಣೆ ಮಾಡಬೇಕು. ಸರ್ಕಾರ ಹಾಗೂ ಜನರು ಕೆರೆ-ಕಟ್ಟೆ, ಚೆಕ್ ಡ್ಯಾಂಗಳನ್ನು ಹಾಗೂ ಹಳೇ ಕಾಲದ ಕಲ್ಯಾಣಿಗಳನ್ನು ಉಳಿಸಿಕೊಂಡರೆ ಸಾಕಷ್ಟು ನೀರಿನ ಕೊರತೆಯನ್ನು ನೀಗಿಸಿಕೊಳ್ಳಬಹುದು’ ಎಂದು ರೈತಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ ಹೇಳುತ್ತಾರೆ.

‘ತಾಲೂಕಿನ ಗುಮ್ಮನಾಯಕನ ಪಾಳ್ಯದಲ್ಲಿ ಪಾಳೇಗಾರರು ಕಲ್ಯಾಣಿಯನ್ನು ನಿರ್ಮಿಸಿದ್ದಾರೆ. ಇದೀಗ ಕಲ್ಯಾಣಿಯಲ್ಲಿ ಕಳೆ ಹಾಗೂ ಮುಳ್ಳಿನ ಗಿಡಗಳು ಬೆಳೆದಿವೆ. ಮಳೆಯ ನೀರನ್ನು ಶೇಖರಣೆ ಮಾಡುವ ಕೆರೆ-ಕಟ್ಟೆಗಳು, ಚೆಕ್ ಡ್ಯಾಂಗಳು ಹಾಗು ರಾಜಕಾಲುವೆಗಳು ಸೇರಿದಂತೆ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಬೇಕಾಗಿದೆ. ಕೂಡಲೇ ಕಲ್ಯಾಣಿಯನ್ನು ಅಧಿಕಾರಿಗಳು ಸ್ವಚ್ಛತೆ ಮಾಡಿಸಬೇಕು’ ಎಂದು ಗುಮ್ಮನಾಯಕನ ಪಾಳ್ಯದ ಶ್ರೀರಾಮ ಆಗ್ರಹಿಸಿದರು.

ಕಲ್ಯಾಣಿಗಳು ಬಹಳ ಆಕರ್ಷಕ

ಪಾಳೇಗಾರರು ನಿರ್ಮಿಸಿರುವ ಕಲ್ಯಾಣಿಗಳು, ಕೆರೆಕಟ್ಟೆಗಳನ್ನು ನಾವು ಸಂರಕ್ಷಣೆ ಮಾಡಲೇಬೇಕಾಗಿದೆ. ಅವುಗಳನ್ನು ಅತ್ಯಂತ ವಿಶೇಷವಾಗಿ, ಸುಂದರವಾಗಿ ಅಷ್ಟೇ ವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಇದನ್ನು ಎಲ್ಲರೂ ಗಮನಿಸಬೇಕು. ಪ್ರವಾಸೋದ್ಯಮ ಇಲಾಖೆ ಇವುಗಳನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿ ನಿರ್ವಹಿಸಬೇಕು. ಪಾಳೇಗಾರರು ಕಟ್ಟಿಸಿದ ಕಲ್ಯಾಣಿಗಳನ್ನು ಪುರಾತತ್ವ ಇಲಾಖೆ ಸಂರಕ್ಷಿಸಬೇಕು. ಒಮ್ಮೆ ಈ ಐತಿಹಾಸಿಕ ಸಂಪತ್ತನ್ನು ಕಳೆದುಕೊಂಡರೆ ಅದಕ್ಕಿಂತ ದೊಡ್ಡ ನಷ್ಟ ಮತ್ತೊಂದಿಲ್ಲ ಎನ್ನುತ್ತಾರೆ ಜನರು.

Tags: bagepallichikkaballapuragummanayaka fortunder ground water sourcewater ponds
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ

ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ

Leave a Reply Cancel reply

Your email address will not be published. Required fields are marked *

Recommended

ಗುಡುಗಿದ ಕುಮಾರಸ್ವಾಮಿ; ವಿದ್ಯುತ್‌ ದರ ಏರಿಕೆ ಇಲ್ಲ ಎಂದ ಸರಕಾರ

ಗುಡುಗಿದ ಕುಮಾರಸ್ವಾಮಿ; ವಿದ್ಯುತ್‌ ದರ ಏರಿಕೆ ಇಲ್ಲ ಎಂದ ಸರಕಾರ

3 years ago
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ

ಕೋವಿಡ್ ಪ್ರಕರಣ ಹೆಚ್ಚಲು ಕಾರಣ ಕೊಟ್ಟ ಡಾ.ಸುಧಾಕರ್

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ