• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

cknewsnow desk by cknewsnow desk
April 30, 2021
in COVID-19, POLITICS, STATE
Reading Time: 2 mins read
0
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ
913
VIEWS
FacebookTwitterWhatsuplinkedinEmail

ಕೋವಿಡ್‌ ಎರಡನೇ ಅಲೆಯಲ್ಲಿ ತೇಲುತ್ತಿರುವ ಕರ್ನಾಟಕದ ವಿವಿಧ ಕಡೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮುಗ್ಗರಿಸಿದೆ. ಅಚ್ಚರಿ ಎಂಬಂತೆ ಕಾಂಗ್ರೆಸ್‌ ಎಲ್ಲಡೆ ಜಯದ ಕೇಕೆ ಹಾಕಿದೆ. ಎರಡರಲ್ಲಿ ಒಂದು ಕಡೆ ಅಧಿಕಾರ ಕಳೆದುಕೊಂಡಿದೆ.

ಬೆಂಗಳೂರು: ಕೋವಿಡ್‌ ಹುಚ್ಚೆದ್ದು ಕುಣಿಯುತ್ತಿರುವ ಹೊತ್ತಿನಲ್ಲಿಯೇ ಹೊರಬಿದ್ದರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಆಡಳಿತಾರೂಢ ಬಿಜೆಪಿಗೆ ಶಾಕ್‌ ನೀಡಿದೆ.

ರಾಜ್ಯದಲ್ಲಿ ಅನಿಯಂತ್ರಿತವಾಗಿ ಹಬ್ಬುತ್ತಿರುವ ಸೋಂಕಿನ ನಡುವೆಯೂ ನಡೆದ ಮತದಾನವು ಬಹುತೇಕ ಆಡಳಿತಾರೂಢ ಪಕ್ಷಕ್ಕೇ ಅನುಕೂಲವಾಗಿರುತ್ತದೆ ಎಂಬ ʼಕೆಲವರʼ ನಿರೀಕ್ಷೆಗಳ ನಡುವೆಯೇ ಬಿಜೆಪಿ ಸೋತು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಗೆಲುವಿನ ನಗೆ ಬೀರಿವೆ.

ಬಳ್ಳಾರಿ ಮಹಾನಗರ ಪಾಲಿಕೆ ಸೇರಿ ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದರೆ, ಜೆಡಿಎಸ್‌ ಸಾಧನೆ ತೃಪ್ತಿಕರವಾಗಿದೆ. ಬಿಜೆಪಿ ಮಾತ್ರ ನಿರೀಕ್ಷೆಗಳನ್ನು ಹುಸಿ ಮಾಡಿ ಹಿಂದಕ್ಕೆ ಬಿದ್ದಿದೆ.

ಹಾಗಾದರೆ; ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಚುನಾವಣೆ ಮೇಲೆ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಭಾವ ಇರುತ್ತದಾ? ಎಂಬ ಪ್ರಶ್ನೆ ಈಗೆದ್ದಿದೆ. ರಾಜಕೀಯ ಪಕ್ಷಗಳ ಚಿಹ್ನೆಗಳ ಮೇಲೆಯೇ ನಡೆದ ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಳೀಯ ಸಂಸ್ಥೆಗಳ ಪೈಕಿ 7 ಕಡೆ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ಬಳ್ಳಾರಿ ಮಹಾನಗರ ಪಾಲಿಕೆ

ಸಚಿವರಾದ ಶ್ರೀರಾಮುಲು, ಆನಂದ್‌ ಸಿಂಗ್‌ ಅವರಿರುವ ಬಳ್ಳಾರಿಯ ಮಹಾನಗರ ಪಾಲಿಕೆ ಕಾಂಗ್ರೆಸ್​ ತೆಕ್ಕೆಗೆ ಹೋಗಿದೆ. ಒಟ್ಟು 39 ವಾರ್ಡುಗಳ ಪೈಕಿ ಕಾಂಗ್ರೆಸ್‌ 29ರಲ್ಲಿ ಗೆದ್ದಿದ್ದರೆ, ಬಿಜೆಪಿ 13 ಕಡೆ ಗೆದ್ದಿದೆ. ಇಲ್ಲಿ ಜೆಡಿಎಸ್‌ ಸಾಧನೆ ಶೂನ್ಯ. ಬಳ್ಳಾರಿಯ ಸೋಲು ಬಿಜೆಪಿಗೆ ದೊಡ್ಡ ಆಘಾತವಾಗಿದೆ ಮಾತ್ರವಲ್ಲದೆ, ಕಾಂಗ್ರೆಸ್‌ ಪಾಲಿಗೆ ಬಿಗ್‌ ಬ್ರೇಕ್‌ಥ್ರೂ ಆಗಿದೆ ಎನ್ನಬಹುದು.

ರಾಮನಗರ ನಗರಸಭೆ

ರಾಮನಗರ ನಗರಸಭೆ ನಗರಸಭೆಯಲ್ಲಿ ಬಿಜೆಪಿ ಖಾತೆ ತೆರೆಯಲಾಗಿಲ್ಲ. ಇದು ಕಾಂಗ್ರೆಸ್‌ ವಶಕ್ಕೆ ಹೋಗಿದೆ. ಕೈಗೆ ಸ್ಪಷ್ಟ‌ ಬಹುತವೂ ಸಿಕ್ಕಿದೆ. ಒಟ್ಟು 31 ವಾರ್ಡ್​ಗಳ ಪೈಕಿ ಕಾಂಗ್ರೆಸ್ 19 ಕಡೆ, ಜೆಡಿಎಸ್​​​ 11 ವಾರ್ಡ್​ನಲ್ಲಿ ಜಯ ಗಳಿಸಿವೆ. ಇನ್ನು ಒಂದು ವಾರ್ಡ್​ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದರೆ, ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಉಸ್ತುವಾರಿಯ ಬಿಜೆಪಿ ಒಂದು ವಾರ್ಡ್​ನಲ್ಲೂ ಖಾತೆ ತೆರೆದಿಲ್ಲ.

ಗುಡಿಬಂಡೆಯಲ್ಲಿ ಕಾಂಗ್ರೆಸ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರಸ್‌ ಜಯಭೇರಿ ಸಾಧಿಸಿದೆ. ಈ ಚುನಾವಣೆ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು ಗುಡಿಬಂಡೆ ಕಡೆ ತಲೆ ಹಾಕಿಲ್ಲ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳೆಲ್ಲವೂ ಉಸ್ತುವಾರಿ ಸಚಿವರ ಹುಟ್ಟೂರು ಪೆರೇಸಂದ್ರ ದಾಟಿಬರದೇ ಇದ್ದದ್ದೂ ಜನರ ಆಕ್ರೋಶಕ್ಕೆ ಕಾರಣ ಆಗಿರಬಹುದು. ಒಟ್ಟು 11 ವಾರ್ಡುಗಳಲ್ಲಿ ಕಾಂಗ್ರೆಸ 6 ಕಡೆ ಗೆದ್ದರೆ, ಜೆಡಿಎಸ್‌ 2 ವಾರ್ಡುಗಳಲ್ಲಿ ಜಯ ಗಳಿಸಿದೆ.

ಚನ್ನಪಟ್ಟಣದಲ್ಲಿ ಜೆಡಿಎಸ್‌

ಇನ್ನು ಜೆಡಿಎಸ್‌ ಭದ್ರಕೋಟೆಗಳಲ್ಲಿ ಒಂದಾಗಿದ್ದ ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಧಿಕಾರ ಉಳಿಸಿಕೊಂಡಿದೆ. ಒಟ್ಟು 31 ವಾರ್ಡುಗಳಲ್ಲಿ 16ಕಡೆ ಜೆಡಿಎಸ್‌ ಗೆಲುವು ಸಾಧಿಸಿದೆ. ಇನ್ನೂ ಬಿಜೆಪಿ 7 ಕಡೆ ಗೆದ್ದರೆ, ಕಾಂಗ್ರೆಸ್‌ ಕೂಡ 7 ವಾರ್ಡುಗಳಲ್ಲಿ ಜಯ ಗಳಿಸಿದೆ.

ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನತೆಗೆ ನನ್ನ ಮನದಾಳದ ಕೃತಜ್ಞತೆಗಳು.

ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು.@JanataDal_S
1/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 30, 2021

ಭದ್ರಾವತಿಯಲ್ಲಿ ಕಾಂಗ್ರೆಸ್‌

ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಒಟ್ಟು 35 ವಾರ್ಡ್​ಗಳ ಪೈಕಿ 18 ವಾರ್ಡ್​ಗಳಲ್ಲಿ ಜಯ ಗಳಿಸಿದೆ. ಬಿಜೆಪಿ 4 ಕಡೆ ಮಾತ್ರ ಗೆದ್ದಿದೆ. ಇನ್ನು 11 ಕಡೆ ಗೆದ್ದಿರುವ ಜೆಡಿಎಸ್‌ ಕಮಲ ಪಾಳಯಕ್ಕೆ ಬಲವಾದ ಸಡ್ಡು ಹೊಡೆದಿದೆ.

ತೀರ್ಥಹಳ್ಳಿಯಲ್ಲೂ ಬಿಜೆಪಿ ಇಲ್ಲ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಇನ್ನೊಂದು ತಾಲೂಕು ತೀರ್ಥಹಳ್ಳಿಯಲ್ಲೂ ಬಿಜೆಪಿಗೆ ಶಾಕ್‌ ಆಗಿದೆ. ಕಳೆದ 25 ವರ್ಷಗಳಿಂದ ಇಲ್ಲಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 15 ವಾರ್ಡ್​ಗಳ ಪೈಕಿ 9ರಲ್ಲಿ ಕಾಂಗ್ರೆಸ್ ಗೆದ್ದರೆ, ಬಿಜೆಪಿ 6 ವಾರ್ಡ್​ಗಳಲ್ಲಿ ಮಾತ್ರ ಗೆದ್ದಿದೆ.

ಬೇಲೂರು ಕೂಡ ಕಾಂಗ್ರೆಸ್‌ಗೆ

ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ಪುರಸಭೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಜಯಭೇರಿ ಭಾರಿಸಿದೆ. 25 ವಾರ್ಡ್​ಗಳಲ್ಲಿ ಕಾಂಗ್ರೆಸ್​ ಜಯ ಗಳಿಸಿದ್ದು, 5 ವಾರ್ಡ್ʼಗಳಲ್ಲಿ ಮಾತ್ರ ಜೆಡಿಎಸ್ ಗೆಲುವು ಸಿಕ್ಕಿದೆ. ಇನ್ನು, ಒಂದು ಕಡೆಯಷ್ಟೇ ಬಿಜೆಪಿ ಗೆದ್ದಿದೆ.

ಮಡಿಕೇರಿಯಲ್ಲಿ ಮಾತ್ರ ಕಮಲ

ಸಮಾಧಾನಕರ ಸಂಗತಿ ಎಂದರೆ, ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. 23 ಸ್ಥಾನಗಳ ಪೈಕಿ ಬಿಜೆಪಿ 16 ಕಡೆ ಗೆದ್ದು ಬೀಗಿದೆ. ಆದರೆ ಅಚ್ಚರಿ ಎಂಬಂತೆ ಎಸ್‌ಡಿಪಿಐ 5 ಕಡೆ ಜಯಿಸಿದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಲಾ 1 ಕಡೆ ಮಾತ್ರ ಗೆಲುವು ಸಾಧಿಸಿವೆ.

ಬೀದರ್‌ನಲ್ಲೂ ಹಿಂದೆ ಬಿದ್ದ ಬಿಜೆಪಿ

ಇನ್ನು, ಒಟ್ಟು 35 ಸ್ಥಾನಗಳ ಬೀದರ್ ನಗರಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಆದರೆ, 15 ಕಡೆ ಗೆದ್ದಿರುವ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 15, ಬಿಜೆಪಿ 8, ಜೆಡಿಎಸ್ 7, ಎಐಎಂಐಎಂ 2 ಮತ್ತೂ ಆಮ್ʼಆದ್ಮಿ ಪಕ್ಷ ಒಂದೆಡೆ ಗೆದ್ದಿದೆ. ಈ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಇನ್ನೆರಡು ವಾರ್ಡುಗಳಲ್ಲಿ ಚುನಾವಣೆ ನಡೆದಿಲ್ಲ. ಆದರೆ, ಅಧಿಕಾರಕ್ಕೇರಲು ಕಾಂಗ್ರೆಸ್‌ ಪ್ರಯತ್ನಗಳನ್ನು ಶುರು ಮಾಡಿದೆ.

Tags: bjpCongressjdskarnatakaurban local bodies elections
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಮ್ಮನಾಯಕನ ಪಾಳ್ಯದ ಮೇಲೆ ದಾಳಿ ಮಾಡಿದ್ದನಾ ಟಿಪ್ಪು ಸುಲ್ತಾನ್?‌ ಪಾಳೇಗಾರರ  ಖಜಾನೆಯಲ್ಲಿದ್ದ ಅಪಾರ ಸಂಪತ್ತು ಎಲ್ಲಿಗೆ ಹೋಯಿತು? ಹೂತು ಹೋಗುತ್ತಿದೆ 700  ವರ್ಷಗಳ ಇತಿಹಾಸ!!

ಗುಮ್ಮನಾಯಕನ ಪಾಳ್ಯದ ಮೇಲೆ ದಾಳಿ ಮಾಡಿದ್ದನಾ ಟಿಪ್ಪು ಸುಲ್ತಾನ್?‌ ಪಾಳೇಗಾರರ ಖಜಾನೆಯಲ್ಲಿದ್ದ ಅಪಾರ ಸಂಪತ್ತು ಎಲ್ಲಿಗೆ ಹೋಯಿತು? ಹೂತು ಹೋಗುತ್ತಿದೆ 700 ವರ್ಷಗಳ ಇತಿಹಾಸ!!

Leave a Reply Cancel reply

Your email address will not be published. Required fields are marked *

Recommended

ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

4 years ago
ಹಲೋ ಅಪ್ಪಾ..!

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳಲ್ಲೇ ವರ್ಗದ ಪಟ್ಟಿಯಲ್ಲೂ ಒಳನುಸಳಿದ್ದು ಹೇಗೆ?

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ