• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

#COVID19KARNATAKA‌ : ಕೊರೋನಾ ನಿರ್ವಹಣೆಯ ಎಲ್ಲ ಜವಾಬ್ದಾರಿಗಳಿಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ಗೆ ಕೊಕ್ ಕೊಟ್ಟ ಮುಖ್ಯಮಂತ್ರಿ!‌ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಭಾರೀ ಹಿನ್ನಡೆ

cknewsnow desk by cknewsnow desk
May 5, 2021
in COVID-19, STATE
Reading Time: 2 mins read
0
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ
925
VIEWS
FacebookTwitterWhatsuplinkedinEmail

ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ವೈಫಲ್ಯದಿಂದ ಕೋವಿಡ್‌ ಸೋಂಕಿತರು ಸಾವನ್ನಪ್ಪಿದ ಧಾರುಣ ಘಟನೆಗಳು ತೀವ್ರ ಕಂಪನ ಸೃಷ್ಟಿ ಮಾಡಿವೆ. ಮುಖ್ಯವಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮೇಲೆ ತೂಗುಗತ್ತಿ ತೂಗುತ್ತಿದೆ. ಮೊದಲ ಹಂತದಲ್ಲಿ ಸಚಿವಗಿರಿ ಬಿಟ್ಟು ಉಳಿದೆಲ್ಲ ಜವಾಬ್ದಾರಿಗಳಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ನಡೆದ ವಿಶೇಷ ಸಚಿವ ಸಂಪುಟದ ಸಭೆಯ ನಂತರ ಮುಖ್ಯಮಂತ್ರಿ @BSYBJP ರವರು ನಡೆಸಿದ ಮಾಧ್ಯಮಗೋಷ್ಠಿಯ ಪ್ರಮುಖಾಂಶಗಳು;#KarnatakaFightsCorona #Unite2FightCorona @PMOIndia pic.twitter.com/wbsEogQcQD

— CM of Karnataka (@CMofKarnataka) May 4, 2021

ಬೆಂಗಳೂರು: ಕಳೆದ ಬಾರಿ ಸಂಪುಟ ಪುನಾರಚನೆಯಾಗಿ ಖಾತೆ ಹಂಚಿಕೆ ಸಂದರ್ಭದಲ್ಲಿ ಎರಡು ಖಾತೆಗಳಿಗಾಗಿ ರಚ್ಚೆ ಹಿಡಿದು ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಸರಕಾರದ ಮಟ್ಟದಲ್ಲಿ ಹಾಗೂ ಕೋವಿಡ್‌ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ಮೂಲೆಗುಂಪು ಮಾಡಲಾಗಿದೆ.

ಚಾಮರಾಜನಗರ ದುರಂತದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಕೋವಿಡ್‌ ಜವಾಬ್ದಾರಿಗಳನ್ನು ಮರು ಹಂಚಿಕೆ ಮಾಡಿದ್ದು, ಆರೋಗ್ಯ ಸಚಿವ ಸುಧಾಕರ್ ಅವರಿ​ಗೆ ಯಾವ ಹೊಣೆಗಾರಿಕೆಯನ್ನು ವಹಿಸಿಲ್ಲ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಾಥಮಿಕ ಶಿಕ್ಷಣ ಖಾತೆ ಮಂತ್ರಿ ಎಸ್.ಸುರೇಶ್‌ ಕುಮಾರ್‌ ಅವರಿಗೆ ಕೂಡ ಯಾವ ಜವಾಬ್ದಾರಿಯನ್ನು ವಹಿಸಿಲ್ಲ. ಆದರೆ, ಈ ಇಬ್ಬರು ಸಚಿವರು ರಾಜ್ಯ ಕೋವಿಡ್‌ ಕಾರ್ಯಪಡೆಯಲ್ಲಿ ಹೆಸರಿಗಷ್ಟೇ ಸದಸ್ಯರಾಗಿದ್ದಾರೆ.

ಆಮ್ಲಜನಕದ ಘೋರ ವೈಫಲ್ಯದ ಕಾರಣದಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಐವರು ಹಾಗೂ ಚಾಮರಾಜನಗರದಲ್ಲಿ 25 ಕೋವಿಡ್‌ ಸೋಂಕಿತರು ಧಾರುಣವಾಗಿ ಸಾವನ್ನಪ್ಪಿದ್ದು ಹಾಗೂ ಕೋವಿಡ್‌ ನಿರ್ವಹಣೆಯಲ್ಲಿ ಅನೇಕ ಸಲ ಲಿಮಿಟ್‌ ಕ್ರಾಸ್‌ ಮಾಡಿದ ಕಾರಣಕ್ಕೆ ಡಾ.ಸುಧಾಕರ್‌ ಬೆಲೆ ತೆತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಕ್ರಷರ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿ ಆರು ಕಾರ್ಮಿಕರು ಅಮಾನುಷವಾಗಿ ಸಾವನ್ನಪ್ಪಿದ ಸಂದರ್ಭದಲ್ಲೇ ಬಿಜೆಪಿ ಹೈಕಮಾಂಡ್‌ ಸುಧಾಕರ್‌ ಮೇಲೆ ಕಣ್ಣಿಟ್ಟಿತ್ತು. ಆಮೇಲೆ ಕೋವಿಡ್‌ ನಿರ್ವಹಣೆಯಲ್ಲಿ ಉಂಟಾದ ವೈಫಲ್ಯಗಳು ಹಾಗೂ ಪ್ರತಿಪಕ್ಷ ನಾಯಕರಿಂದ ಕೇಳಿಬಂದ ಆರೋಪಗಳ ಕಾರಣದಿಂದಲೂ ಸುಧಾಕರ್‌ ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ರೆಡಾರ್‌ನಲ್ಲೇ ಇದ್ದರು. ಮೊದಲ ಹಂತವಾಗಿ ಅವರನ್ನು ಕೋವಿಡ್‌ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಡಿಸಿಎಂಗೆ ಮಹತ್ವದ ಹೊಣೆ

‌ಹಿರಿಯ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಬೆಳಗಾವಿ ಜಿಲ್ಲೆ ಉಸ್ತುವಾರಿ ನೀಡಿದ ನಂತರ ಮತ್ತೊಬ್ಬ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರಿಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ.

ಇನ್ನೊಂದು ಮಹತ್ವದ ಹೊಣೆಯಾದ ಕೋವಿಡ್‌ ವಾರ್‌ ರೂಂ ಉಸ್ತುವಾರಿಯನ್ನು ಸಚಿವ ಅರವಿಂದ ಲಿಂಬಾವಳಿ ಅವರಿಗೆ ನೀಡಲಾಗಿದೆ. ಉಳಿದೆಲ್ಲ ಜವಾಬ್ದಾರಿಗಳಿಗಿಂದ ಮತ್ತೂ ಮಹತ್ವದ್ದಾದ ಆಮ್ಲಜನಕ​ ಹಂಚಿಕೆ ಜವಾಬ್ದಾರಿಯನ್ನು ಹಿರಿಯ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕೊಡಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರದ ಜತೆಯೂ ಶೆಟ್ಟರ್‌ ಅವರೇ ಸಂವಹನ ನಡೆಸಲಿದ್ದಾರೆ.

ಮೇಲಿನ ಎಲ್ಲ ಜವಾಬ್ದಾರಿಗಳಷ್ಟೇ ಪ್ರಾಮುಖ್ಯತೆಯುಳ್ಳ ಸಿಬ್ಬಂದಿ ನಿರ್ವಹಣೆ, ನೇಮಕಾತಿ & ರೆಮಿಡಿಸ್ವೀರ್​‌ ಮತ್ತಿತರೆ ಔಷಧ ಪೂರೈಕೆ ಕಂಪನಿಗಳ ಜತೆಗೆ ಸಮನ್ವಯ ನಡೆಸುವ & ಖರೀದಿ ವ್ಯವಹಾರ ನಡೆಸುವ ಹೊಣೆಯನ್ನು ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರಿಗೆ ವಹಿಸಲಾಗಿದೆ.

ಅಲ್ಲದೆ, ಡಾ.ಸುಧಾಕರ್‌ ಉಸ್ತುವಾರಿಯಲ್ಲಿದ್ದ ಎಲ್ಲ ಮೆಡಿಕಲ್‌ ಕಾಲೇಜುಗಳ ಜಗೆ ಸಂವಹನ ನಡೆಸುವ ಹಾಗೂ ಔಷಧಿ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಹೊಣೆಯನ್ನು ಡಿಸಿಎಂ ಅವರಿಗೇ ಕೊಡಲಾಗಿದೆ.

ಇದಾದ ಮೇಲೆ, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆ ಮಾಡುವ ಹೊಣೆಗಾರಿಕೆಯನ್ನು ಮತ್ತೋರ್ವ ಹಿರಿಯ ಸಚಿವದ್ವಯರಾದ ಆರ್​.ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಬೆಡ್‌ ಹಂಚಿಕೆಯಲ್ಲಿ ಬಿಬಿಎಂಪಿ ಹಾಗೂ ಖಾಸಗಿ ಆಸ್ಪತ್ರೆಗಳ ವಲಯದಲ್ಲಿ ಭಾರೀ ಅವ್ಯಹಾರ ನಡೆಯುತ್ತಿರುವುದನ್ನು ಸಂಸದ ತೇಜಸ್ವಿ ಸೂರ್ಯ ಪತ್ತೆ ಹಚ್ಚಿದ ಬೆನ್ನಲ್ಲೇ ಬೆಡ್‌ ಹಂಚಿಕೆ ಹೊಣೆಗಾರಿಕೆಯನ್ನೂ ಈ ಇಬ್ಬರು ಸಚಿವರಿಗೆ ಹಂಚಲಾಗಿದೆ.

ಆರಂಭದಿಂದಲೂ ಆತೃಪ್ತಿ

ಲಾಕ್‌ಡೌನ್‌ ಹೇರಿಕೆ ಸೇರಿದಂತೆ ಕೋವಿಡ್‌ ನಿರ್ವಹಣೆಯಲ್ಲಿ ಆರಂಭದಿಂದೂ ಡಾ.ಸುಧಾಕರ್‌ ವಿರುದ್ಧ ಅತೃಪ್ತಿ ಇದ್ದೇ ಇತ್ತು. ಹಲವಾರು ಶಾಸಕರು, ಸಚಿವರು ಮುಖ್ಯಮಂತ್ರಿಗಳ ಬಳಿ ಅವರ ವಿರುದ್ಧ ಪದೇಪದೆ ದೂರಿದ್ದರು. ಮುಖ್ಯಮಂತ್ರಿ ಅವರ ಆಪ್ತ ಶಾಸಕ ರೇಣುಕಾಚಾರ್ಯ ಅವರು ಬಹಿರಂಗವಾಗಿಯೇ ಸುಧಾಕರ್‌ ವಿರುದ್ಧ ಗುಡುಗಿದ್ದರಲ್ಲದೆ ನೇರವಾಗಿ ಯಡಿಯೂರಪ್ಪ ಅವರಿಗೂ ದೂರಿದ್ದರು. ಹಾಗೆಯೇ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರಿಗೂ ಕೆಲ ಶಾಸಕರು ಆರೋಗ್ಯ ಸಚಿವರ ವಿರುದ್ಧ ದೂರಿದ್ದರು.

ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್‌ ನಿರ್ವಹಣೆ ವಿಚಾರದಲ್ಲಿ ಎಲ್ಲ ಸಚಿವರಿಗೂ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಎಲ್ಲ ಉಸ್ತುವಾರಿ ಸಚಿವರೂ ಅವರವರ ಜಿಲ್ಲೆಗಳಲ್ಲೇ ಮೊಕ್ಕಾಂ ಹೂಡಿರಬೇಕು ಎಂದು ಖಡಕ್‌ ಸೂಚನೆ ನೀಡಿದ್ದಾರೆ.

ತಮ್ಮ ಬೇಜವಾಬ್ದಾರಿಯಿಂದ 24 ಜನ ರೋಗಿಗಳ ಸಾವಿಗೆ ಕಾರಣರಾದ ಮುಖ್ಯಮಂತ್ರಿ @BSYBJP, ಆರೋಗ್ಯ ಸಚಿವ @mla_sudhakar, ಜಿಲ್ಲಾ ಉಸ್ತುವಾರಿ ಸಚಿವ @nimmasuresh ಘಟನೆಯ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ. ಇವರಿಗೆ ಮಾನ ಮರ್ಯಾದಿಯಿದ್ದರೆ ತಮ್ಮ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರರು. 7/9

— Siddaramaiah (@siddaramaiah) May 4, 2021

ಇದೇ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ರಾಜೀನಾಮೆಗೆ ಕಾಂಗ್ರೆಸ್‌ ಡಿಮಾಂಡ್‌ ಮಾಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯ ಮಾಡಿದ್ದಾರೆ.

BBMP ಡೆತ್ ಆಡಿಟ್‌ನಲ್ಲಿ 100ಕ್ಕೂ ಹೆಚ್ಚು ಜನ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಮರಣ ಹೊಂದಿದ್ದಾರೆ ಎಂದು ಒಪ್ಪಿಕೊಂಡಿದೆ. ಬೆಂಗಳೂರಿನಲ್ಲಿಯೇ ಇಷ್ಟು, ರಾಜ್ಯಾದ್ಯಂತ ಇನ್ನೆಷ್ಟು?

ಅರೆಬರೆಯ ಗೋಲ್ಮಾಲ್ ಲೆಕ್ಕದಲ್ಲಿಯೇ ಇಷ್ಟು, ಲೆಕ್ಕಕ್ಕೆ ಸಿಗದಿರುವುದು ಇನ್ನೆಷ್ಟು?

ಇದಕ್ಕೆ ಹೊಣೆಯಾದ @mla_sudhakar
ತಲೆದಂಡ ಯಾವಾಗ @BSYBJP ಅವರೇ?

— Karnataka Congress (@INCKarnataka) May 4, 2021

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಬಿಎಂಪಿ ಡೆತ್ ಆಡಿಟ್‌ನಲ್ಲಿ 100ಕ್ಕೂ ಹೆಚ್ಚು ಜನ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಮರಣ ಹೊಂದಿದ್ದಾರೆ ಎಂದು ಒಪ್ಪಿಕೊಂಡಿದೆ. ಬೆಂಗಳೂರಿನಲ್ಲಿಯೇ ಇಷ್ಟು, ರಾಜ್ಯಾದ್ಯಂತ ಇನ್ನೆಷ್ಟು? ಇದಕ್ಕೆ ಹೊಣೆಯಾದ ಆರೋಗ್ಯ ಸಚಿವ ಸುಧಾಕರ್ ಅವರ ತಲೆದಂಡ ಯಾವಾಗ ಎಂದು ಪ್ರಶ್ನಿಸಿದೆ. 

Tags: bs yediyurappachamarajanagaracovid19karnataka oxygen tragedykolarno responsibility for dr k sudhakar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ಸಂಕಷ್ಟ ಕಾಲದಲ್ಲಿ ಹಾಹಾಕಾರ; ನಿರ್ಗತಿಕರಿಗೆ ಆಹಾರ, ನೀರು ಕೊಟ್ಟ ಸುಖೀಭವ ಚಾರಿಟಬಲ್ ಟ್ರಸ್ಟ್‌

ಕೋವಿಡ್‌ ಸಂಕಷ್ಟ ಕಾಲದಲ್ಲಿ ಹಾಹಾಕಾರ; ನಿರ್ಗತಿಕರಿಗೆ ಆಹಾರ, ನೀರು ಕೊಟ್ಟ ಸುಖೀಭವ ಚಾರಿಟಬಲ್ ಟ್ರಸ್ಟ್‌

Leave a Reply Cancel reply

Your email address will not be published. Required fields are marked *

Recommended

ಅಂಗಾಂಗ ದಾನ, ನಾವೂ ಒಮ್ಮೆ ಯೋಚಿಸೋಣ..

ಪರೀಕ್ಷೆ ಬರೆಯುವಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ

3 years ago
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಜೂನ್‌ 21ರಿಂದ ಜುಲೈ 5ರವರೆಗೆ ಪರೀಕ್ಷೆ; ಸಮಯವಿದೆ, ಚೆನ್ನಾಗಿ ಓದಿ ಎಂದು ಮಕ್ಕಳಿಗೆ ಧೈರ್ಯ ತುಂಬಿದ ಸಚಿವ ಸುರೇಶ್‌ ಕುಮಾರ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ