• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕಂಪ್ಲೀಟ್‌ ಲಾಕ್‌ಡೌನ್: ಎರಡನೇ ಅಲೆಯಿಂದ ರಾಜ್ಯವನ್ನು ರಕ್ಷಿಸಲು ಇದೊಂದೇ ಪರಿಹಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
May 8, 2021
in CHIKKABALLAPUR, COVID-19
Reading Time: 2 mins read
0
ಕಂಪ್ಲೀಟ್‌ ಲಾಕ್‌ಡೌನ್: ಎರಡನೇ ಅಲೆಯಿಂದ  ರಾಜ್ಯವನ್ನು ರಕ್ಷಿಸಲು ಇದೊಂದೇ ಪರಿಹಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್‌ ಸೋಂಕಿತರಿಗೆ ಜೈನ್‌ ಆಸ್ಪತ್ರೆಯಲ್ಲಿ 100 ಬೆಡ್‌

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕರ್ಫ್ಯೂ ರೀತಿಯ ಲಾಕ್‌ಡೌನ್ ಅಷ್ಟೊಂದು ಪರಿಣಾಮಕಾರಿಯಾಗಿ ಫಲಿತಾಂಶ ನೀಡಲಿಲ್ಲ. ಪಾಸಿಟೀವ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲೇ ಇದೆ. ಈ ಚೈನ್‌ಲಿಂಕ್‌ನ್ನು ಸಂಪೂರ್ಣವಾಗಿ ಮುರಿಯಬೇಕಾದರೆ ಸಂಪೂರ್ಣ ಲಾಕ್‌ಡೌನ್‌ ಒಂದೇ ಅಸ್ತ್ರವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಹೊರವಲಯದ ಜಡಲತಿಮ್ಮನಹಳ್ಳಿ ಬಳಿ ನಿರ್ಮಾಣ ಹಂತದಲ್ಲಿರುವ ಜೈನ್ ಆಸ್ಪತ್ರೆಯಲ್ಲಿ 100 ಬೆಡ್‌ಗಳನ್ನು ಜಿಲ್ಲೆಯ ಕೋವಿಡ್ ರೋಗಿಗಳಿಗೆ ಬಳಕೆ ಮಾಡಿಕೊಳ್ಳುವ ಸಂಬಂಧ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.

ಅಲ್ಲಿನ ಬೆಡ್ ವ್ಯವಸ್ಥೆ, ಐಸಿಯು, ಆಕ್ಸಿಜನ್ ಪೂರೈಕೆ ಸೇರಿದಂತೆ ಇತರೆ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಇಂದೂ ಕೂಡ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಾಗಿದೆ. ಒಟ್ಟು 592 ಮಂದಿ (ಶೇ.1.21ರಷ್ಟು) ಸಾವನ್ನಪ್ಪಿದ್ದಾರೆ. ಈ ದಿಸೆಯಲ್ಲಿ ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಕಳೆದ ಬಾರಿಯಂತೆ ಲಾಕ್‌ಡೌನ್‌ನ್ನು ಅತ್ಯಂತ ಕಠಿಣವಾಗಿ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ 14 ದಿನಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಂಡರೆ ಮಾತ್ರ ಈ ಸಂಕಷ್ಟದಿಂದ ನಾವು ಪಾರಾಗಬಹುದು. ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದು ಕೊಂಡಿದ್ದಾರೆ” ಎಂದರು.

ಏಕಾಏಕಿ 2 ಪಟ್ಟು ರೋಗಿಗಳು ಹೆಚ್ಚಾದಾಗ ಸ್ವಾಭಾವಿಕವಾಗಿ ಸಮಸ್ಯೆಗಳು ಉಂಟಾಗುವುದು ಸಹಜ. ಆದರೂ ಕೂಡ ಸರಕಾರ ಮತ್ತು ನಾವು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದೇವೆ. ಇದಲ್ಲದೇ ಆಕ್ಸಿಜನ್ ಬೇಡಿಕೆಯೂ ಏಕಾಏಕಿ ಹೆಚ್ಚಾಗಿದ್ದು, 1700 ಟನ್ ಆಕ್ಸಿಜನ್ ಬೇಡಿಕೆ ಬಂದಿದೆ. ಇದು ಯಾರ ಊಹೆಗೂ ಬಂದಿರಲಿಲ್ಲ. ಈ ಹಿಂದೆ ಯಾವ ರೋಗಕ್ಕೂ, ಯಾವ ಸೋಂಕಿಗೂ ಇಷ್ಟು ದೊಡ್ಡ ಪ್ರಮಾಣದ ಆಕ್ಸಿಜನ್ ಬೇಡಿಕೆ ಬಂದಿರಲಿಲ್ಲ. ಹಾಗಾಗಿ ಸ್ವಲ್ಪ ತೊಂದರೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಕೂಡ ನಮಗೆ 1200 ಟನ್ʼನಷ್ಟು ಆಕ್ಸಿಜನ್ ಬೇಕು ಎಂಬ ನಮ್ಮ ಮನವಿಯನ್ನು ಪುರಸ್ಕರಿಸಿದೆ. 1200 ಟನ್‌ನಷ್ಟು ಆಕ್ಸಿಜನ್‌ನ್ನು ಅಧಿಕೃತವಾಗಿ ಕರ್ನಾಟಕಕ್ಕೆ ಕೊಡಬೇಕು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಕೇಂದ್ರ ಸರಕಾರವು ದೊಡ್ಡ ಸವಾಲಿನ ನಡುವೆಯೂ ರಾಜ್ಯಕ್ಕೆ 960 ಟನ್ ಆಕ್ಸಿಜನ್ ನೀಡಲು ಒಪ್ಪಿದೆ. ಆದರೆ, ಕೆಲವೊಂದು ಲಾಜಿಸ್ಟಿಕ್ ಸಮಸ್ಯೆಯಿಂದ ಆಕ್ಸಿಜನ್ ಸರಬರಾಜು ತಡವಾಗಬಹುದು. ಆದರೂ ಕೂಡ ಎಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಲಾಗುತ್ತಿದೆ. ಸರಕಾರ, ಸಚಿವರೆಲ್ಲರ ಒಮ್ಮತದ ಸಹಕಾರದಿಂದ ಆದಷ್ಟು ಮಟ್ಟಿಗೆ ನಿಯಂತ್ರಣ ಮಾಡಲಾಗುತ್ತಿದೆ ಎಂದರು ಸಚಿವರು.

ಜೈನ್‌ ಆಸ್ಪತ್ರೆಯಿಂದ 100 ಬೆಡ್

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಜೈನ್ ಆಸ್ಪತ್ರೆಯವರು ತಮ್ಮಲ್ಲಿನ 100 ಬೆಡ್‌ಗಳನ್ನು ಜಿಲ್ಲೆಯ ಕೋವಿಡ್ ರೋಗಿಗಳಿಗೆ ಬಳಕೆ ಮಾಡಿಕೊಳ್ಳಲು ಮುಂದೆ ಬಂದಿದ್ದು, ಇಲ್ಲಿ 100 ಬೆಡ್ ವ್ಯವಸ್ಥೆ ಮಾಡಲಾಗಿದೆ. 9 ಐಸಿಯು ಬೆಡ್‌ಗಳು ಇದ್ದು, ಜಿಲ್ಲೆಯ ರೋಗಿಗಳಿಗೆ ಅನುಕೂಲವಾಗಲಿದೆ. ಇನ್ನು ಜೈನ್ ಆಸ್ಪತ್ರೆಯಲ್ಲಿ ಈಗಾಗಲೇ 2 ಆಕ್ಸಿಜನ್ ಟ್ಯಾಂಕರ್ ಸಿದ್ಧವಿದೆ. ಇನ್ನೂ 4 ಕೆಎಲ್ ಟ್ಯಾಂಕರ್ ತರಿಸಲು ಪ್ರಯುತ್ನಿಸುತ್ತಿದ್ದೇವೆ. ಜಿಲ್ಲಾ ಆಸ್ಪತ್ರೆಗೆ 13 ಕೆಎಲ್ ಅಳವಡಿಕೆಗೆ ಪ್ರಯತ್ನಿಸಲಾಗುತ್ತಿದೆ. ಜಿಲ್ಲಾಡಳಿತವು ಎಲ್ಲಾ ರೀತಿಯಲ್ಲಿ ವ್ಯವಸ್ಥೆಗಳನ್ನು ಮಾಡಿದೆ ಎಂದು‌ ಡಾ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು. ಹಾಸಿಗೆಗಳ ಹೆಚ್ಚಳ, ಆಕ್ಸಿಜನ್ ಮತ್ತು ರೆಮ್ಡೆಸಿವಿರ್ ಔಷಧದ ಸಮರ್ಪಕ ಲಭ್ಯತೆ ಸೇರಿದಂತೆ ಹಲವು ಕ್ರಮಗಳ ಕುರಿತು ಸೂಚನೆ ನೀಡಲಾಯಿತು. ಜಿಲ್ಲಾಧಿಕಾರಿ ಶ್ರೀಮತಿ ಆರ್.ಲತಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/xoEnHHpq30

— Dr Sudhakar K (Modi ka Parivar) (@DrSudhakar_) May 7, 2021

ಪ್ರತಿ ಸೋಂಕಿತನಿಗೂ ಕಿಟ್

ಬಳಿಕ ಸರಕಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ಕೋವಿಡ್ ನಿಯಂತ್ರಣದ ಬಗ್ಗೆ ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಗುಣಮಟ್ಟದ ಪೌಷ್ಠಿಕ ಆಹಾರವನ್ನು ಕೋವಿಡ್ ರೋಗಿಗಳಿಗೆ ನೀಡಬೇಕು. ಆಸ್ಪತ್ರೆಗಳಲ್ಲಿ ಸ್ಪಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ಪ್ರತಿಯೊಬ್ಬ ಕೋವಿಡ್ ಸೊಂಕಿತನಿಗೂ ಆರೋಗ್ಯ ಕಿಟ್‌ನ್ನು ವಿತರಿಸಬೇಕು. ಅನಗತ್ಯವಾಗಿ ರೆಮಿಡಿಸಿವಿರ್‌ನ್ನು ರೋಗಿಗಳಿಗೆ ನೀಡಬಾರದು. ತಜ್ಞ ವೈದ್ಯರ ಶಿಫಾರಸ್ಸಿನಂತೆ ಔಷಧಿ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸಚಿವರು ಸೂಚಿಸಿದರು.

ಈಗಾಗಲೇ ಸರಕಾರದ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿ ಹಳ್ಳಿಗಳಲ್ಲೂ ಟಾಸ್ಕ್ ಪೋರ್ಸ್ ಸಮಿತಿಗಳನ್ನು ರಚಿಸಿ, ಪರಿಣಾಮಕಾರಿಯಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದಾರೆ. ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರು ಮುನ್ನೆಚ್ಚರಿಕೆಯಾಗಿ ಪ್ರತಿ ಸೊಂಕಿತರ ಮನೆಗೆ ಭೇಟಿ ಕೊಟ್ಟು ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ ಎಂದರು ಸಚಿವರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ರಮೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಜೈನ್ ಆಸ್ಪತ್ರೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ವೈದ್ಯರು ಉಪಸ್ಥಿತರಿದ್ದರು.

Tags: 100 beds for covid patientschikkaballapuacovid19dr k sudhakarjain hospital
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಮೇ 10-24: 14 ದಿನ ಕರ್ನಾಟಕ ಕಂಪ್ಲೀಟ್‌ ಲಾಕ್‌;‌ ಅಂತಾರಾಜ್ಯ & ಅಂತರ್‌ ಜಿಲ್ಲಾ ಗಡಿಗಳು ಸಂಪೂರ್ಣ ಬಂದ್‌, ಹಾಲು-ತರಕಾರಿ ತರಲಿಕ್ಕೂ ಬೈಕ್ ಬಳಸುವಂತಿಲ್ಲ!!

Leave a Reply Cancel reply

Your email address will not be published. Required fields are marked *

Recommended

ಎಲ್ಲ ಸರಕಾರಿ ಅಧಿಕಾರಿಗಳು & ಸಿಬ್ಬಂದಿಗೂ ಕೋವಿಡ್‌ ಲಸಿಕೆ ಕಡ್ಡಾಯ; ಎರಡನೇ ಅಲೆ ತಡೆಯಲು ಇದು ಸಹಾಯಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಯಾವುದೇ ದೇಶದಿಂದ ಬಂದರೂ ಕಡ್ಡಾಯ ಕೋವಿಡ್ ಪರೀಕ್ಷೆ

3 years ago
ಗುಡಿಬಂಡೆ ಗ್ರೀನ್ ಪೊಲೀಸ್ ಠಾಣೆಗೆ SP ನಾಗೇಶ್ ಭೇಟಿ

ಗುಡಿಬಂಡೆ ಗ್ರೀನ್ ಪೊಲೀಸ್ ಠಾಣೆಗೆ SP ನಾಗೇಶ್ ಭೇಟಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ