• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮೇ 10-24: 14 ದಿನ ಕರ್ನಾಟಕ ಕಂಪ್ಲೀಟ್‌ ಲಾಕ್‌;‌ ಅಂತಾರಾಜ್ಯ & ಅಂತರ್‌ ಜಿಲ್ಲಾ ಗಡಿಗಳು ಸಂಪೂರ್ಣ ಬಂದ್‌, ಹಾಲು-ತರಕಾರಿ ತರಲಿಕ್ಕೂ ಬೈಕ್ ಬಳಸುವಂತಿಲ್ಲ!!

cknewsnow desk by cknewsnow desk
May 7, 2021
in COVID-19, NEWS IN USE, STATE
Reading Time: 1 min read
0
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ
916
VIEWS
FacebookTwitterWhatsuplinkedinEmail

Lead photo by CkPhotography ಸಿಕೆಪಿ@ckphotographi

ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಈ ಕಠಿಣ ಲಾಕ್‌ಡೌನ್​ ರಾಜ್ಯಾದ್ಯಂತ ಜಾರಿ.

ಬೆಂಗಳೂರು: ಕೋವಿಡ್‌ ಎರಡನೇ ಅಲೆಯನ್ನು ಹತ್ತಿಕ್ಕಲು ಕೊನೆಗೂ ರಾಜ್ಯ ಸರಕಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ಮೇ 10ರಿಂದ 24ರ ವರೆಗೆ ಎರಡು ವಾರ ಕಾಲ ರಾಜ್ಯಪೂರ್ತಿ ಕಠಿಣ ಲಾಕ್​ಡೌನ್​ ಜಾರಿ ಮಾಡಲಾಗಿದೆ.

ಕೊರೋನಾ ಕರ್ಫ್ಯೂ ಮಾಡಿದಾಗ್ಯೂ ಜನ ಪಾಲನೆ ಮಾಡಲಿಲ್ಲ. ಪರಿಣಾಮ ಸೋಂಕಿನ ಪ್ರಮಾಣ ನಾಗಾಲೋಟದಲ್ಲಿ ಹೆಚ್ಚುತ್ತಲೇ ಹೋಯಿತು. ಸಾವಿನ ಸಂಖ್ಯೆ ಮಿತಿಮೀರತೊಡಗಿದಾಗ ದಿಕ್ಕೆಟ್ಟ ಸರಕಾರ ಈ ಕ್ರಮಕ್ಕೆ ಮುಂದಾಗಿದೆ.

ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಈ ಕಠಿಣ ಲಾಕ್‌ಡೌನ್​ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಾಲು, ಆಹಾರ ಪದಾರ್ಥ, ದಿನಸಿ, ತರಕಾರಿಯಂಥ ಅತ್ಯಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಲಾಗಿದೆ

ಮುಖ್ಯಮಂತ್ರಿ ಯಡಿಯೂರಪ್ಪ ಲಾಕ್‌ಡೌನ್‌ ವಿಷಯವನ್ನು ಪ್ರಕಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಿಗಿ ಕ್ರಮಗಳನ್ನು ಪಾಲನೆ ಮಾಡದೆ ಬೇರೆ ದಾರಿ ಇಲ್ಲ ಎಂದಿದ್ದಾರೆ. ಬಳಿಕ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಲಾಕ್​ಡೌನ್​ ಮಾರ್ಗಸೂಚಿಯನ್ನು ಪ್ರಕಟಿಸಿದರು.

'ರಾಜ್ಯದಲ್ಲಿ ಕೋವಿಡ್-19 2ನೇ ಅಲೆ ತೀವ್ರ ಪರಿಣಾಮ ಬೀರುತ್ತಿರುವುದರಿಂದ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಇದೇ ಮೇ 10, ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಪರಿಷ್ಕೃತ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುವುದು. ನಾಗರಿಕರು ಸಹಕರಿಸಬೇಕು ಎಂದು ಕೋರುತ್ತೇನೆ' : ಮುಖ್ಯಮಂತ್ರಿ @BSYBJP.

— CM of Karnataka (@CMofKarnataka) May 7, 2021

ಏನಿರುತ್ತೆ? ಏನಿರುವುದಿಲ್ಲ?

  • ನಿತ್ಯ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳು ಲಭ್ಯ, ಖರೀದಿಗೆ ಅವಕಾಶ. ಬೆಳಗ್ಗೆ ಹತ್ತು ಗಂಟೆ ನಂತರ ಯಾರೂ ರಸ್ತೆಗೇ ಬರುವಂತಿಲ್ಲ.
  • ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಹಾಲು ಮಾರಾಟಕ್ಕೆ ಅವಕಾಶ.
  • ಮದ್ಯ ಪಾರ್ಸೆಲ್‌ಗೆ ಅವಕಾಶ ನೀಡಲಾಗಿದೆ. ಪಬ್‌, ಕ್ಲಬ್‌, ಬಾರ್‌ ತೆರೆಯುವಂತಿಲ್ಲ.
  • ಅಗತ್ಯ ವಸ್ತು ಖರೀದಿಗೆ ವಾಹನದಲ್ಲಿ ಹೋಗಲು ಅವಕಾಶ ಇಲ್ಲ. ನಡೆದುಕೊಂಡೇ ಹೋಗಬೇಕು.
  • ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ.
  • ವೈದ್ಯಕೀಯ ತುರ್ತುಸೇವೆಗಳಿಗೆ ನಿರ್ಬಂಧ ಇಲ್ಲ. ಆರೋಗ್ಯ ಸಿಬ್ಬಂದಿ ಸಂಚಾರಕ್ಕೆ ತೊಂದರೆ ಇಲ್ಲ.
  • ಪತ್ರಕರ್ತರು ಹಾಗೂ ಮಾಧ್ಯಮಕ್ಕೆ ಸಂಬಂಧಿಸಿದವರ ಸಂಚಾರಕ್ಕೆ ಅಡ್ಡಿ ಇಲ್ಲ.
  • ಹೋಟೆಲ್​ಗಳಿಂದ ಪಾರ್ಸೆಲ್ ಮಾತ್ರ ಪಡೆಯಬಹುದು.
  • ಸರಕಾರಿ ಕಚೇರಿಗಳಲ್ಲಿ ಪೂರ್ಣ ಹಾಜರಾತಿಗೆ ಅವಕಾಶವಿಲ್ಲ. ಸೀಮಿತ ಸಿಬ್ಬಂದಿಗೆ ಮಾತ್ರ ಅವಕಾಶ.
  • ಮದುವೆಗಳಿಗೆ ವಿಘ್ನ ಇಲ್ಲ. ಆದರೆ, 50 ಜನ ಭಾಗಿಯಾಗುವುದಕ್ಕೆ ಮಾತ್ರ ಅವಕಾಶ.
  • ತುರ್ತು ಕಾರಣವಿದ್ದರೆ ಸಂಚಾರಕ್ಕೆ ಅವಕಾಶವಿದೆ. ಆದಕ್ಕೆ ಅಗತ್ಯ ದಾಖಲೆ ಬೇಕು.
  • ಇ-ಕಾಮರ್ಸ್‌ಗೆ ಅವಕಾಶ, ಅನ್ಲೈನ್‌ ಶಾಪಿಂಗ್‌ ನಿರಾತಂಕ.
  • ತಳ್ಳುವ ಗಾಡಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ.
  • ಎಂದಿನಂತೆ ರೈಲು, ವಿಮಾನ ಸಂಚಾರ ಇರುತ್ತದೆ. ಟಿಕೆಟ್ ತೋರಿಸುವುದು ಕಡ್ಡಾಯ.
  • ಆವರಣದಲ್ಲಿ ನಿರ್ಮಾಣ ಆಗುವ ಕಟ್ಟಡ ಕಾಮಗಾರಿಗಳಿಗೆ ಮಾತ್ರ ಅವಕಾಶ.
  • ಯಾರಿಗೂ ಪಾಸ್‌ ಕೊಡುವುದಿಲ್ಲ.
  • ಸಿದ್ಧ ಉಡುಪು ಕಾರ್ಖಾನೆಗಳು ಸಂಪೂರ್ಣ ಬಂದ್.‌
  • ಕಾರ್ಮಿಕರು & ಕೆಲಸಗಾರರು ಬೆಂಗಳೂರು ನಗರ ಬಿಟ್ಟು ಹೋಗುವಂತಿಲ್ಲ.
  • ಅಂತಾರಾಜ್ಯ & ಅಂತರ್‌ ಜಿಲ್ಲಾ ಗಡಿಗಳೆಲ್ಲ ಬಂದ್. ಜಿಲ್ಲೆಯಿಂದ ಜಿಲ್ಲೆಗೆ ಓಡಾಟ ಇರುವುದಿಲ್ಲ.
  • ಕೈಗಾರಿಕೆ ಚಟುವಟಿಕೆಗಳಿಗೂ ಅವಕಾಶವಿಲ್ಲ.
  • ಯಾವುದೇ ರೀತಿಯ ಸಾರಿಗೆಗೆ ಅವಕಾಶ ಇರಲ್ಲ. ಬಸ್‌, ಕ್ಯಾಬ್‌, ಆಟೋ, ಮೆಟ್ರೋ ಇರೋದಿಲ್ಲ. ಟ್ಯಾಕ್ಸಿ, ಆಟೋ, ಕ್ಯಾಬ್​ಗಳಿಗೆ ತುರ್ತು ಸೇವೆಗೆ ಮಾತ್ರ ಅವಕಾಶವಿದೆ.
  • ಶಾಲೆ ಕಾಲೇಜು ಬಂದ್.‌ ಆನ್ಲೈನ್‌ ಕಾಸ್‌ ಇರುತ್ತದೆ.
  • ಮಾಲ್, ಸಿನಿಮಾ ಮಂದಿರ, ಉದ್ಯಾನವನ, ಮನರಂಜನಾ ಪಾರ್ಕ್‌ಗಳು ಬಂದ್.‌
  • ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ಅವಕಾಶ.

Tags: covid19karnataka fights coronakarnataka lockdownUnite2FightCoronaಕರ್ನಾಟಕ ಕಂಪ್ಲೀಟ್‌ ಲಾಕ್‌
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

Leave a Reply Cancel reply

Your email address will not be published. Required fields are marked *

Recommended

ನವರಾತ್ರಿಗೆ ಕತ್ತಲೆಭಾಗ್ಯ ಖಾತರಿ; ಹೊಸ ವರ್ಷಕ್ಕೆ ಕಗ್ಗತ್ತಲೆಭಾಗ್ಯ!!

ನಾಲ್ಕೇ ದಿನದಲ್ಲಿ ಕಲ್ಲಿದ್ದಲು ಖಾಲಿ; ಕಗ್ಗತ್ತಲಿನತ್ತ ಸಾಗಿದೆ ಕರ್ನಾಟಕ

2 years ago
ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

ಬಿಜೆಪಿ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಿಂದ ಕೋವಿಡ್ ಹೆಚ್ಚಳ: ಹೆಚ್.ವಿಶ್ವನಾಥ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ