• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌, ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

cknewsnow desk by cknewsnow desk
May 11, 2021
in COVID-19, STATE
Reading Time: 1 min read
0
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್
912
VIEWS
FacebookTwitterWhatsuplinkedinEmail

ಡಿಸಿಎಂ ನೇತೃತ್ವದ ಉನ್ನತ ಸಭೆಯಲ್ಲಿ ತೀರ್ಮಾನ I ಅಗತ್ಯ ಔಷಧಿ, RAT ಕಿಟ್‌, RTPCR ಕಿಟ್‌ ಖರೀದಿಗೂ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್‌ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಇದರ ಜತೆಗೆ 3 ಕೋಟಿ ವ್ಯಾಕ್ಸಿನ್‌ ಖರೀದಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 1 ಕೋಟಿ ಕೋವ್ಯಾಕ್ಸಿನ್‌, 2 ಕೋಟಿ ಕೋವಿಶೀಲ್ಡ್‌ ಲಸಿಕೆ ಸೇರಿದೆ. 18 ವರ್ಷದಿಂದ ಮೇಲ್ಪಟ್ಟು ಜನರಿಗೆ ಲಸಿಕೆ ಕೊಡಲು ಆರಂಭಿಸಿದ ನಂತರ  ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಖರೀದಿ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಡಿಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಆಖ್ತರ್‌, ಔಷಧಿ ಖರೀದಿ ಉಸ್ತುವಾರಿ ಅಂಜುಂ ಪರ್ವೇಜ್‌,  ರಾಜ್ಯ ಔಷಧ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಲತಾ ಕುಮಾರಿ, ಆರೋಗ್ಯ ಇಲಾಖೆ ನಿರ್ದೇಶಕ ಓಂ ಪ್ರಕಾಶ್‌ ಪಾಟೀಲ್‌ ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯ ನಂತರ ಮಾಹಿತಿ ನೀಡಿದ ಡಿಸಿಎಂ, ಈವರೆಗೂ ಕೇಂದ್ರ ಸರಕಾರ ಹಂಚಿಕೆ ಮಾಡುತ್ತಿದ್ದ ಲಸಿಕೆಯನ್ನು ಬಿಟ್ಟರೆ ನೇರವಾಗಿ ಮುಕ್ತ ಮಾರುಕಟ್ಟೆಯಲ್ಲಿ ಟೆಂಡರ್‌ ಕರೆದು ಖಾಸಗಿ ಕಂಪನಿಗಳಿಂದ ಖರೀದಿ ಮಾಡಿರಲಿಲ್ಲ. ‌ಇವತ್ತೇ ಟೆಂಡರ್‌ ಕರೆಯಲು ಸೂಚಿಸಲಾಗಿದ್ದು, ಯಾವ ಕಂಪನಿ ಬೇಕಾದರೂ ಟೆಂಡರ್‌ನಲ್ಲಿ ಭಾಗವಹಿಸಬಹುದು. ಏಳು ದಿನದ ಒಳಗಾಗಿ ಈ ಪ್ರಕ್ರಿಯೆ ಮುಗಿಸಿ ಟೆಂಡರ್‌ ಪಡೆಯುವ ಕಂಪನಿಯು ಲಸಿಕೆಯನ್ನು ಪೂರೈಕೆ ಆರಂಭಿಸಬೇಕು ಎಂದರು.

Held a meeting with Latha Kumari IAS & other officials regarding #Remdesivir & other drug, medical logistics, procurement, supply, stocking for next 6 months.

Our intent is to ensure sufficient long-term availability & make best use of the resources available to us. pic.twitter.com/OPGQ5m49QM

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 11, 2021

1 ಲಕ್ಷ ಪಲ್ಸ್ ಅ್ಯಕ್ಸಿ ಮೀಟರ್‌ ಖರೀದಿ

ಸೋಂಕಿತರಿಗೆ ಅಗತ್ಯವಾದ ಪಲ್ಸಾಕ್ಸಿ ಮೀಟರ್‌ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕೂಡಲೇ ಒಂದು ಲಕ್ಷ ಪಲ್ಸಾಕ್ಸಿ ಮೀಟರ್‌ಗಳನ್ನು ಖರೀದಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಅವುಗಳನ್ನು ಎಲ್ಲ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಹಂಚಲಾಗುವುದು. ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮತ್ತು ಸೋಂಕಿತರು ಗುಣಮುಖರಾದ ನಂತರ ವಾಪಸ್‌ ಪಡೆಯುವುದು ಆಯಾ ಡಿಎಚ್‌ಒ & ಟಿಎಚ್‌ಒ ಹೊಣೆ. ಈ ಮೂಲಕ ಪಲ್ಸಾಕ್ಸಿ ಮೀಟರ್ ಬ್ಯಾಂಕ್ ಮಾಡುವ ಉದ್ದೇಶ ಇದೆ ಎಂದು ಡಿಸಿಎಂ ಹೇಳಿದರು.

ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾದ ಐವರ್‌ಮೆಕ್ಟಿನ್ ಮಾತ್ರೆಯನ್ನು 10 ಲಕ್ಷ ಖರೀದಿ ಮಾಡಲಾಗಿದ್ದು, ಇದೇ 14ಕ್ಕೆ ಪೂರೈಕೆ ಶುರುವಾಗುತ್ತದೆ. ಅಲ್ಲದೆ, ಇನ್ನೂ 25 ಲಕ್ಷ ಮಾತ್ರೆ ಖರೀದಿಸುವಂತೆ ಸೂಚಿಸಿದ್ದೇನೆ. ಇದು ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಲಭ್ಯ ಇರಬೇಕು. ಜತೆಗೆ, 35 ಲಕ್ಷ ಜಿಂಕ್‌ ಟ್ಯಾಬ್ಲೆಟ್‌ ಹಾಗೂ ಒಂದು ಕೋಟಿ ಕಾಲ್ಸಿಚಿನ್ ಮಾತ್ರೆಗಳನ್ನೂ ಕೂಡಲೇ ಖರೀದಿ ಮಾಡಲು ನಿರ್ಧರಿಸಲಾಗಿದೆ. ಈ ಎಲ್ಲ ಔಷಧಿಗಳು ರಾಜ್ಯದ ಎಲ್ಲ ಜಿಲ್ಲಾ, ತಾಲೂಕು, ಆಸ್ಪತ್ರೆ ಹಾಗೂ ಪ್ರಾಥಮಿಕ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಈಗ 10.50 ಲಕ್ಷ ರಾಟ್‌ ಕಿಟ್‌ ಇವೆ, ಇನ್ನೂ ವಾರಕ್ಕೆ ಆಗುತ್ತವೆ. ಈಗ ದಿನಕ್ಕೆ 50 ಸಾವಿರದಂತೆ ಪೂರೈಕೆ ಆಗುತ್ತಿವೆ. ಜತೆಗೆ, 37 ಲಕ್ಷ ಆರ್‌ಟಿಪಿಸಿಆರ್‌ ಕಿಟ್‌ಗಳನ್ನೂ ಖರೀದಿ ಮಾಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ರೆಮಿಡಿಸಿವರ್‌ ಸರಬರಾಜು ಮಾಡದ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಇದೇ ವೇಳೆ ಮುಖ್ಯ ಕಾರ್ಯದರ್ಶಿಗಳ ಜತೆ ಮಾತನಾಡಿದ ಡಿಸಿಎಂ ಅವರು, ನೊಟೀಸ್‌ ಕೊಟ್ಟರೂ ಸಕಾಲಕ್ಕೆ ರೆಮಿಡಿಸಿವರ್‌ ಪೂರೈಕೆ ಮಾಡದ ಕಂಪನಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇನ್ನು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರನ್ನು ದಾಖಲು ಮಾಡಿಕೊಳ್ಳುವ ಮುನ್ನ ಭೌತಿಕ ಪರೀಕ್ಷೆ ನಡೆಸಿಯೇ ದಾಖಲು ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಗಂಭೀರ ಸೋಂಕಿತರಿಗೆ ಹಾಸಿಗೆಗಳು ಸಿಗುತ್ತವೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಲಸಿಕೆಗಾಗಿ ಹಳ್ಳಿಗಳಿಗೆ ಹೋಗುವುದು ಬೇಡ

ನಗರದ ಜನರು ಲಸಿಕೆ ಪಡೆಯಲು ಗ್ರಾಮೀಣ ಪ್ರದೇಶಕ್ಕೆ ಹೋಗುವುದು ಬೇಡ. ಅವರು ನಗರದಲ್ಲೇ ಲಸಿಕೆ ಪಡೆಯಲಿ. ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಕೆ ಮಾಡಲು ಎಲ್ಲ ಕ್ರಮ ವಹಿಸಲಾಗಿದೆ ಎಂದ ಡಿಸಿಎಂ, ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಮಾಹಿತಿ ನೀಡಿದರು.

Lead Photo courtesy: Wikipedia

Tags: covaxinCovid second wavecovid19covishielddr cn ashwathnarayankarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ

ಕೋವಿಡ್‌ ಎಫೆಕ್ಟ್‌: ದ್ವಿತೀಯ ಪಿಯುಸಿ ನಂತರ 2021ನೇ ಸಾಲಿನ #CET ಕೂಡ ಮುಂದಕ್ಕೆ; ಅಗಸ್ಟ್‌ 28 & 29ರಂದು ಪರೀಕ್ಷೆ

Leave a Reply Cancel reply

Your email address will not be published. Required fields are marked *

Recommended

ಡಿಪ್ಲೊಮೋ ಪಠ್ಯಕ್ಕೆ ಟ್ರೀಟ್‌ಮೆಂಟ್; 40,000 ವಿದ್ಯಾರ್ಥಿಗಳು ಪಾಸಾದರೆ, ಕೇವಲ 20% ಅಭ್ಯರ್ಥಿಗಳಿಗೂ ಕೆಲಸ ಸಿಗುತ್ತಿಲ್ಲ!

ಡಿಪ್ಲೊಮೋ ಪಠ್ಯಕ್ಕೆ ಟ್ರೀಟ್‌ಮೆಂಟ್; 40,000 ವಿದ್ಯಾರ್ಥಿಗಳು ಪಾಸಾದರೆ, ಕೇವಲ 20% ಅಭ್ಯರ್ಥಿಗಳಿಗೂ ಕೆಲಸ ಸಿಗುತ್ತಿಲ್ಲ!

5 years ago
ಸರಕಾರ ಕೊಟ್ಟ 10 ಕೋಟಿಯಲ್ಲೇ ದಸರಾ ಉತ್ಸವ ಮುಗಿಸಿದ ಸಚಿವ ಸೋಮಶೇಖರ್;‌ ನ.1ರಂದು ಲೆಕ್ಕಪತ್ರ ಬಿಡುಗಡೆ

ಏಪ್ರಿಲ್‌ 10 ರಿಂದ 20ರವೆರೆಗೆ ಮೈಸೂರು ಪ್ರವಾಸಿ ತಾಣಗಳ ಭೇಟಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ; ಬೆಂಗಳೂರಿನಿಂದ ಬಂದರೂ ಅಷ್ಟೇ ಎಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ