• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಆಮ್ಲಜನಕ ಕೊರತೆಯುಳ್ಳ ಸೋಂಕಿತರಿಗೆ ನೆರವು: ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

cknewsnow desk by cknewsnow desk
May 12, 2021
in COVID-19, NEWS IN USE, STATE
Reading Time: 1 min read
0
ಆಮ್ಲಜನಕ ಕೊರತೆಯುಳ್ಳ ಸೋಂಕಿತರಿಗೆ ನೆರವು: ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ
911
VIEWS
FacebookTwitterWhatsuplinkedinEmail

ಹೋಮ್‌ ಐಸೋಲೇಷನ್‌ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.

To support people in home isolation, #OxygenConcentrators are being provided to the patients at their doorstep in association with @Olacabs, @zerodhaonline and @GiveIndia foundation.

This will help in stabilising the saturation in patients with oxygen level <94.

1/2 pic.twitter.com/Uob5SMZOTq

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 12, 2021

ಬೆಂಗಳೂರು: ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು.

ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು ಕೈಜೋಡಿಸಿವೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, “ಇಡೀ ರಾಜ್ಯದಲ್ಲಿಯೇ ಮೊತ್ತ ಮೊದಲಿಗೆ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕೆಲಸವನ್ನು ನಾನು ಆರಂಭ ಮಾಡಿದೆ. ಅದಕ್ಕೆ ಉತ್ತಮ ಫಲಿತಾಂಶ ಸಿಕ್ಕಿತು. ಈಗ ಇಡೀ ಬೆಂಗಳೂರಿಗೆ ವಿಸ್ತರಿಸುತ್ತಿದ್ದು, ಅದಕ್ಕೆ ಓಲಾ ಸಹಕಾರ ನೀಡುತ್ತಿರುವುದು ಖುಷಿಯ ವಿಚಾರ” ಎಂದರು.

ಹೋಮ್‌ ಐಸೋಲೇಷನ್‌ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು. ಅವರು ಓಲಾ ಆಪ್‌ ಮೂಲಕ ಆನ್‌ಲೈನ್‌ನಲ್ಲಿ ಬೇಡಿಕೆ ಸಲ್ಲಿಸಿದ 30 ನಿಮಿಷದೊಳಗೆ ಅವರಿಗೆ ತಲುಪುತ್ತದೆ. ಸೋಂಕಿತರು 5,000 ರೂ. ಭದ್ರತಾ ಠೇವಣಿ (ಡಿಜಿಟಲ್‌ ಮೂಲಕ) ಇಟ್ಟು ಇವುಗಳನ್ನು ಪಡೆಯಬೇಕು. ಈ ಸಾಂದ್ರಕಗಳನ್ನು ವಾಪಸ್‌ ಪಡೆಯುವಾಗ ಈ ಮೊತ್ತವನ್ನು ಹಿಂತಿರುಗಿಸಲಾಗುವುದು. ಜತೆಗೆ, ಸೋಂಕಿತರಿಗೆ ಈ ಯಂತ್ರವನ್ನು ಹೇಗೆ ಬಳಕೆ ಮಾಡಬೇಕು ಎಂಬುದನ್ನೂ ಹೇಳಿಕೊಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಸದ್ಯಕ್ಕೆ 500 ಆಮ್ಲಜನಕ ಸಾಂದ್ರಕಗಳ ಮೂಲಕ ಈ ನೆಟ್‌ವರ್ಕ್‌ ಮಾಡಲಾಗಿದೆ. ಇವತ್ತು ಮಲ್ಲೇಶ್ವರ ಮತ್ತು ಕೋರಮಂಗಲದಲ್ಲಿ ವಿದ್ಯುಕ್ತವಾಗಿ ಆರಂಭ ಮಾಡಲಾಗಿದೆ. ಕ್ರಮೇಣ ಮತ್ತಷ್ಟು ಪ್ರಮಾಣದಲ್ಲಿ ವಿಸ್ತರಣೆ ಮಾಡಲಾಗುವುದು. ಈ ಸೇವೆ ಸಂಪೂರ್ಣ ಉಚಿತವಾಗಿರುತ್ತದೆ. ಇದರ ಜತೆಯಲ್ಲೇ ಟೆಲಿಕನ್ಸಲ್‌ಟೆನ್ಸಿ ಕೊಡುವ ಚಿಂತನೆಯೂ ಇದೆ. ಅಗತ್ಯಬಿದ್ದರೆ ಅಂಥ ಸೋಂಕಿತರಿಗೆ ಔಷಧೋಪಾಚಾರವನ್ನೂ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸೆಕೆಂಡ್‌ ಡೋಸ್‌ನವರಿಗೆ ಸಮಸ್ಯೆ ಇಲ್ಲ

ಪ್ರಸ್ತುತ ದಿನಕ್ಕೆ 2.5 ಲಕ್ಷ ಡೋಸ್‌ ಲಸಿಕೆಯನ್ನು ಒದಗಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಲಸಿಕೆ ಸಮಸ್ಯೆ ಇಲ್ಲ. ಮೊದಲು ಕೇವಲ 1 ಲಕ್ಷ ಡೋಸ್‌ ಮಾತ್ರ ನೀಡಲಾಗುತ್ತಿತ್ತು. ಸೆಕೆಂಡ್‌ ಡೋಸ್ ಪಡೆಯುತ್ತಿರುವವರಿಗೆ ಕೊರತೆ ಉಂಟಾಗುತ್ತಿಲ್ಲ. ಮೊದಲ ಡೋಸ್‌ ಪಡೆಯುತ್ತಿರುವರಿಗೆ ಮಾತ್ರ ಸಣ್ಣ ಪ್ರಮಾಣದಲ್ಲಿ ಸಮಸ್ಯೆ ಆಗುತ್ತಿದೆ ಎಂದು ಡಿಸಿಎಂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದೇ ದಿನ ಏಕಾಎಕಿ ಹೆಚ್ಚು ಜನ ಲಸಿಕೆ ಕೇಂದ್ರಕ್ಕೆ ನುಗ್ಗಬಾರದು. ಈ ಮುನ್ನ ಮೊದಲು ಬಂದರಿಗೆ ಲಸಿಕೆ ಕೊಡಲಾಗುತ್ತಿತ್ತು. ಇನ್ನು ಮುಂದೆ 45 ವರ್ಷ ಮೇಲ್ಪಟ್ಟವರು ಕೂಡ ಆನ್‌ಲೈನ್‌ ಮೂಲಕವೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು ಡಿಸಿಎಂ.

ಈ ಸಂದರ್ಭದಲ್ಲಿ ಓಲಾ ಕಂಪನಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೌರವ್‌ ಪೋರ್‌ವಾಲ್‌ ಮಾತನಾಡಿ, ಇಂತಹ ಸಂಕಷ್ಟ ಸಂದರ್ಭದಲ್ಲಿ ಸರ್ಕಾರದ ಜತೆ ಕೈಜೋಡಿಸಿ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ. ಈ ಯೋಜನೆಯನ್ನು ಬೆಂಗಳೂರು ‌ಮಾತ್ರವಲ್ಲದೆ, ಇಡೀ ದೇಶದಲ್ಲಿ ವಿಸ್ತರಿಸಲಾಗುವುದು. 10,000 ಆಮ್ಲಜನಕ ಸಾಂದ್ರಕಗಳನ್ನು ಜನ ಬಳಕೆ ನೀಡುವ ಉದ್ದೇಶ ಇದೆ‌ ಎಂದರು.

ಗಿವ್‌ ಇಂಡಿಯಾದ ಸರ್ಕಾರದ ಜತೆಗಿನ ಪಾಲುದಾರಿಕೆಯ ವ್ಯವಸ್ಥಾಪಕ‌ ನಿರ್ದೇಶಕ ಕೆ.ಪಿ.ವಿನೋದ್‌ ಮಾತನಾಡಿ, ಸರ್ಕಾರ ಮತ್ತು ಓಲಾ ಜತೆಗೆ ಗೀವ್ ಇಂಡಿಯಾ ಸೇರಿ‌ ಕೆಲಸ‌ ಮಾಡುತ್ತಿರುವುದು ಖುಷಿಯ ವಿಚಾರ. ಮೊದಲ ಹಂತದಲ್ಲಿ 500 ಸಾಂದ್ರಕ ಕೊಡುತ್ತಿದ್ದು  ಅಗತ್ಯ ನೋಡಿಕೊಂಡು ಇನ್ನೂ ಹೆಚ್ವು ಸರಬರಾಜು ಮಾಡಲಾಗುವುದು ಎಂದರು.

ಗೀವ್ ಇಂಡಿಯಾ, ಓಲಾ ಜತೆ ಸಂಯೋಜನೆಯ ಕೆಲಸ‌ ಮಾಡಿದ ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು ಈ ಸಂದರ್ಭದಲ್ಲಿ ಹಾಜರಿದ್ದರು.

Tags: Bengalurucovid19dr cn ashwath narayanKarnataka covid-19olaoxygen concentrator
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ವ್ಯಾಕ್ಸಿನ್‌ ವಿಚಾರದಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಜನರಿಗೆ ಸುಳ್ಳು ಹೇಳುತ್ತಿವೆ ಎಂದು ಆರೋಪ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿಯಲ್ಲಿ ತಿರಂಗ ಬೈಕ್ ಜಾಥಾ

ಬಾಗೇಪಲ್ಲಿಯಲ್ಲಿ ತಿರಂಗ ಬೈಕ್ ಜಾಥಾ

3 years ago
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಬೆಳೆದ ರಾಗಿಗೆ ಬೆಂಬಲ ಬೆಲೆ; ಖರೀದಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ಕ್ವಿಂಟಾಲ್‌ಗೆ 3,250 ರೂಪಾಯಿ ಬೆಲೆ; ಅನ್ನದಾತನ ಮುಖದಲ್ಲಿ ಮಂದಹಾಸ

ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಬೆಳೆದ ರಾಗಿಗೆ ಬೆಂಬಲ ಬೆಲೆ; ಖರೀದಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ಕ್ವಿಂಟಾಲ್‌ಗೆ 3,250 ರೂಪಾಯಿ ಬೆಲೆ; ಅನ್ನದಾತನ ಮುಖದಲ್ಲಿ ಮಂದಹಾಸ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ