• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
May 14, 2021
in CHIKKABALLAPUR, COVID-19
Reading Time: 2 mins read
0
ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail

ಬಾಗೇಪಲ್ಲಿ ತಾಲೂಕು ಆಸ್ಪತ್ರೆಗೆ ಭೇಟಿ I ಜಿಲ್ಲೆಯ 1077 ಹೆಲ್ಪ್‌ಲೈನ್‌ಗೆ ಚಾಲನೆ I 24X7 ಇಲ್ಲಿಗೆ ಕಾಲ್‌ ಮಾಡಬಹುದು

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್‌-19 ನಿಯಂತ್ರಣ ಮಾಡುವುದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಆರೋಗ್ಯ & ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿಕೊಂಡರು.

ಶುಕ್ರವಾರ ಬಾಗೇಪಲ್ಲಿ ತಾಲೂಕು ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದೆ. ಜಿಲ್ಲಾಧಿಕಾರಿ ಆರ್.ಲತಾ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿತರ ಪತ್ತೆ, ಚಿಕಿತ್ಸೆಯಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಪರಿಸ್ಥಿತಿ ಕೈ ಮೀರದಂತೆ ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಭಾಯಿಸಿದೆ ಎಂದು ಹಾಡಿ ಹೊಗಳಿದರು.

ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳು ಮತ್ತು ಎಲ್ಲಾ ಕೋವಿಡ್ ಕೇರ್ ಕೇಂದ್ರಗಳಲ್ಲಿರುವ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ಗುಣಮಟ್ಟದ ಆಹಾರ, ಸ್ವಚ್ಛತೆಯ ಜತೆಗೆ ಕುಡಿಯಲು ಮತ್ತು ಸ್ನಾನಕ್ಕೆ ಬಿಸಿ ನೀರು, ಸ್ವಚ್ಛ ಶೌಚಾಲಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಡಾ.ಸುಧಾಕರ್‌ ತಿಳಿಸಿದರು.

ಬಾಗೇಪಲ್ಲಿಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಲಾಯಿತು. ಆಂಬ್ಯುಲೆನ್ಸ್ ಮತ್ತು ಬೆಡ್ ಲಭ್ಯತೆ, ಆಕ್ಸಿಜನ್ ಮತ್ತು ಔಷಧದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನಿಗಾ ವಹಿಸಲು ಸೂಚನೆ ನೀಡಲಾಯಿತು. ಜಿಲ್ಲಾಧಿಕಾರಿ ಆರ್.ಲತಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/RLuiXOwmtw

— Dr Sudhakar K (Modi ka Parivar) (@DrSudhakar_) May 14, 2021

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಆರ್.ಕಬಾಡೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಯಲ್ಲಾ ರಮೇಶ್ ಬಾಬು, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಹಾಗೂ ಬಾಗೇಪಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ನೆರವಾಗಲು @Projectstepone ಸಹಯೋಗದೊಂದಿಗೆ ಆರಂಭಿಸಲಾಗಿರುವ 1077 ಸಹಾಯವಾಣಿಗೆ ಚಾಲನೆ ನೀಡಲಾಯಿತು. ಸೋಂಕು ಧೃಢಪಟ್ಟ ಕೆಲವೇ ಗಂಟೆಗಳಲ್ಲಿ ಆ ವ್ಯಕ್ತಿಯನ್ನು ದೂರವಾಣಿ ಮೂಲಕ ಸಂಪರ್ಕಿಸುವ ವ್ಯವಸ್ಥೆ ರೂಪಿಸಲಾಗಿದೆ.

1/2 pic.twitter.com/BV3ZxUPGIB

— Dr Sudhakar K (Modi ka Parivar) (@DrSudhakar_) May 14, 2021

ಸಹಾಯವಾಣಿಗೆ ಚಾಲನೆ

ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ಮತ್ತು ವೈದ್ಯಕೀಯ ಸಲಹೆ ನೀಡಲು ಚಿಕ್ಕಬಳ್ಳಾಪುರದಲ್ಲಿ ಸ್ಥಾಪಿಸಿರುವ 1077 ಸಂಖ್ಯೆ ಸಹಾಯವಾಣಿಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದರು.

ಸ್ಟೆಪ್ ಒನ್ ಸಂಸ್ಥೆ, ಈಶಾ ಫೌಂಡೇಶನ್, ಶ್ರೀ ಸಾಯಿಕೃಷ್ಣ ಸೇವಾ ಟ್ರಸ್ಟ್ʼಗಳು ಜಿಲ್ಲಾಡಳಿತದ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗಾಗಿ ಆರಂಭಿಸಿದ ಸಹಾಯವಾಣಿಯಿಂದ ಜನರಿಗೆ ಅನುಕೂಲವಾಗಲಿದೆ. ಕೋವಿಡ್ ರೋಗಿಗಳಿಗೆ ನೆರವಾಗಲು ಸ್ಟೆಪ್ ಒನ್ ಕಂಪನಿಯಿಂದ ಈ ಸಹಾಯವಾಣಿ ಆರಂಭಿಸಲಾಗಿದೆ. 178 ಮಂದಿ ವೈದ್ಯರು ಮಾರ್ಗದರ್ಶನ ನೀಡಲಿದ್ದಾರೆ. ಇದಕ್ಕಾಗಿ ಒಟ್ಟು ನೂರು ಲೈನ್ʼಗಳನ್ನು ಪಡೆದುಕೊಳ್ಳಲಾಗಿದೆ. ಯಾರೇ ಆಗಲಿ ಪಾಸಿಟಿವ್ ಬಂದ ಕೂಡಲೇ ಮಾರ್ಗದರ್ಶನ ನೀಡಿ ಔಷಧಿ ಕಿಟ್ ನೀಡುವುದು, ಮನೆಯಲ್ಲೇ ಅವರಿಗೆ ವೈದ್ಯಕೀಯ ಮಾರ್ಗದರ್ಶನವನ್ನು ದಿನದ 24 ಗಂಟೆ ಒದಗಿಸಲಾಗುವುದು. ಮನೆಯಲ್ಲಿ ಆರೈಕೆ ಪಡೆಯುತ್ತಿರುವವರಿಗೆ ಸಲಹೆ, ರೋಗ ಲಕ್ಷಣ ಹೆಚ್ಚಿದರೆ ಆಸ್ಪತ್ರೆಗೆ ದಾಖಲಿಸುವುದು ಸೇರಿದಂತೆ ಎಲ್ಲ ಬಗೆಯ ಮಾರ್ಗದರ್ಶನವನ್ನು ಈ ಸಹಾಯವಾಣಿ ಮೂಲಕ ನೀಡಲಾಗುವುದು ಎಂದು ಸಚಿವರು ವಿವರಿಸಿದರು.

ಇಂತಹ ಕ್ರಮಗಳಿಂದ ಕೋವಿಡ್ ಆಸ್ಪತ್ರೆಗಳ ಮೇಲೆ ಇರುವ ಒತ್ತಡವನ್ನು ಕಡಿಮೆ ಮಾಡುವ ಜತೆಗೆ ಅರ್ಹ ರೋಗಿಗಳಿಗೆ ಹಾಸಿಗೆ ದೊರಕಿಸಲು ನೆರವಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇದೇ ಮಾದರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ. ಕೆಲ ಜಿಲ್ಲಾಡಳಿತಗಳು ಈಗಾಗಲೇ ಆರಂಭಿಸಿವೆ ಎಂದು ತಿಳಿಸಿದರು.

ಸಹಾಯವಾಣಿ ಕೇಂದ್ರದಲ್ಲಿ ಸ್ವಯಂಸೇವಾ ಸಂಸ್ಥೆ ವೈದ್ಯರ ಜತೆ ಕೆಲವರಿಗೆ ವೇತನ ನೀಡಿ ನೇಮಕ ಮಾಡಿಕೊಳ್ಳಲಾಗಿದೆ. ಇವರೆಲ್ಲರೂ ಪರಿಣತಿ ಪಡೆದವರಾಗಿದ್ದು ಸೋಂಕಿತರು ಯಾವುದೇ ಭಯ- ಆತಂಕಗಳಿಲ್ಲದೆ ಇವರ ಸಲಹೆ, ಮಾರ್ಗದರ್ಶನ ಪಡೆಯಬಹುದು ಎಂದು ಸಚಿವರು ಕಿವಿಮಾತು ಹೇಳಿದರು.

ಸಿ.ವಿ.ರಾಮನ್ ನಗರದಲ್ಲಿರುವ ಡಿಆರ್ ಡಿಒ ಸಂಸ್ಥೆಗೆ ಭೇಟಿ ನೀಡಿ ಕೋವಿಡ್-19 ವಿರುದ್ಧ ನಡೆಸುತ್ತಿರುವ ಸಂಶೋಧನಾ ಕಾರ್ಯಗಳ ಬಗ್ಗೆ ವಿಜ್ಞಾನಿಗಳು ಮತ್ತು ಸಂಶೋಧಕರೊಂದಿಗೆ ಸಮಾಲೋಚನೆ ನಡೆಸಲಾಯಿತು. @DRDO_India ಅಭಿವೃದ್ಧಿ ಪಡಿಸಿರುವ 2-ಡಿಜಿ ಔಷಧ, ಸ್ಥಾಪಿಸಿರುವ ಆಕ್ಸಿಜನ್ ಉತ್ಪಾದನಾ ಘಟಕ, ಕೋವಿಡ್ ಆಸ್ಪತ್ರೆಯ ಬಗ್ಗೆ ಮಾಹಿತಿ ಪಡೆಯಲಾಯಿತು. pic.twitter.com/Hw0FD6TWLO

— Dr Sudhakar K (Modi ka Parivar) (@DrSudhakar_) May 14, 2021

ಡಿಆರ್ʼಡಿಒ ಔಷಧಿಯನ್ನು ರಾಜ್ಯದಲ್ಲಿ ಪರಿಚಯಿಸಬೇಕಿದೆ. ಈ ಸಂಸ್ಥೆ ಆಕ್ಸಿಜನ್ ಜನರೇಟರ್ ಅನ್ನೂ ಕೂಡ ತಯಾರಿಸಿದೆ. ಬೆಂಗಳೂರಿನ ಸಿ.ವಿ.ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ಸಾವಿರ ಕೆಎಲ್ ಸಾಮರ್ಥ್ಯದ್ದನ್ನು ಅಳವಡಿಸಲು ನಿರ್ಧರಿಸಲಾಗಿದೆ. ನಾಳೆ ಅಥವಾ ನಾಳಿದ್ದು ಅದನ್ನು ಉದ್ಘಾಟಿಸಲಾಗುವುದು. ಆಕ್ಸಿಕೇರ್ ಸಿಸ್ಟಮ್ ಅನ್ನು ಸಂಸ್ಥೆ ಸಿದ್ಧಪಡಿಸಿದೆ. ಆ ಬಗ್ಗೆ ಕೂಡ ಚರ್ಚೆ ನಡೆದಿದ್ದು ಮುಂದಿನ ದಿನಗಳಲ್ಲಿ ಅಗತ್ಯತೆಗೆ ಅನುಗುಣವಾಗಿ ಅದನ್ನು ಖರೀದಿ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಕೊರೊನಾ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸಿದರೆ, 3ನೇ ಹಂತವನ್ನೂ ತಡೆಗಟ್ಟಬಹುದು. ಲಸಿಕೆಯ ವಿಚಾರದಲ್ಲಿ ಗೊಂದಲ ಬೇಡ. ಲಸಿಕೆ ಲಭ್ಯವಾದಂತೆಲ್ಲ ಜನರಿಗೆ ನೀಡಲಾಗುವುದು. ಈಗ ಆದ್ಯತೆ ಮೇರೆಗೆ ಮೊದಲ ಡೋಸ್ ನೀಡಿರುವ 45 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಎರಡು ಕಂಪನಿಗಳು ಮಾತ್ರ ಲಸಿಕೆ ತಯಾರಿಸುತ್ತಿವೆ. ಹೀಗಾಗಿ ಇದು ಸ್ವಲ್ಪ ಸವಾಲಿನಿಂದ ಕೂಡಿದೆ. ಒಂದು ತಿಂಗಳಿಗೆ 8 ಕೋಟಿ ಲಸಿಕೆ ತಯಾರಾಗುತ್ತಿದೆ. ಕ್ರಮೇಣ 9 ಕೋಟಿಗೆ ಹೆಚ್ಚಳವಾಗಿ, ಜುಲೈನಿಂದ ಉತ್ಪಾದನೆ ದುಪ್ಪಟ್ಟಾಗಲಿದೆ ಎಂದರು ಸಚಿವರು.

ಲಸಿಕೆಯ ಗುಣಮಟ್ಟದ ಬಗ್ಗೆ ಈ ಹಿಂದೆ ಅನುಮಾನಪಟ್ಟವರು ಈಗ ಲಸಿಕೆ ಕೊರತೆ ಬಗ್ಗೆ ಟೀಕೆಗಳನ್ನು ಮಾಡುತ್ತಿರುವುದು ಹಾಸ್ಯಾಸ್ಪದ. ಎಲ್ಲ ರಾಜಕೀಯ ಪಕ್ಷಗಳು ಒಗ್ಗೂಡಿ ಈ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ನಡೆಸಬೇಕು. ಇದರಲ್ಲಿ ರಾಜಕೀಯ ಮಾಡಬಾರದು. 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವುದಿಲ್ಲ ಎಂದು ಹೇಳಿಲ್ಲ. ಇದನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಇಂದು ಬೆಳಗ್ಗೆ ಬೆಂಗಳೂರಿ ಸ್ವತಂತ್ರ್ಯ ಉದ್ಯಾನವನದ ಬಳಿ ಭುವನಮ್ ಫೌಂಡೇಶನ್ ನಿಂದ ಸಿದ್ಧಪಡಿಸಿರುವ ಆಕ್ಸಿಜನ್ ಬಸ್ ಸೇವೆಗೆ ಸಚಿವ ಸುಧಾಕರ್ ಚಾಲನೆ ನೀಡಿದರು. ನಂತರ ಮಾತನಾಡಿ, ಕಷ್ಟಕಾಲದಲ್ಲಿ ಜನರಿಗೆ ನೆರವಾಗಲು ಭುವನಮ್ ತಂಡ ಆಕ್ಸಿಜನ್ ವ್ಯವಸ್ಥೆ ಮಾಡಿದೆ. ಇದು ಶ್ಲಾಘನೀಯ ಎಂದರು.

Tags: bagepallichikkaballapuracovid19dr k sudhakarhealth ministerhelpline
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಕೋವಿಡ್-19 ವಿರುದ್ಧದ ಹೋರಾಟಕ್ಕೆ ಆಯುರ್ವೇದದ ಬಲ; ಖೋಡೆ ಉದ್ಯಮ ಸಮೂಹದಿಂದ  ವೈರಾನಾರ್ಮ್ ಅಭಿವೃದ್ಧಿ, ಎನ್/ಎಲ್ ಅನುಪಾತ ತಗ್ಗಿಸುವ ಪ್ರತಿರೋಧಕ

ಕೋವಿಡ್-19 ವಿರುದ್ಧದ ಹೋರಾಟಕ್ಕೆ ಆಯುರ್ವೇದದ ಬಲ; ಖೋಡೆ ಉದ್ಯಮ ಸಮೂಹದಿಂದ ವೈರಾನಾರ್ಮ್ ಅಭಿವೃದ್ಧಿ, ಎನ್/ಎಲ್ ಅನುಪಾತ ತಗ್ಗಿಸುವ ಪ್ರತಿರೋಧಕ

Leave a Reply Cancel reply

Your email address will not be published. Required fields are marked *

Recommended

ಭಾರತ ಗಣರಾಜ್ಯದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ

ಭಾರತ ಗಣರಾಜ್ಯದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ

3 years ago
ಬಾಗೇಪಲ್ಲಿಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಸಕ್ಸಸ್;‌ ಪಟ್ಟಣ ಸೇರಿ ತಾಲೂಕಿನಾದ್ಯಂತ ಜನಜೀವನ ಬಹತೇಕ ಸ್ತಬ್ಧ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯಲ್ಲೇ ಕಂಟ್ರೋಲ್‌ಗೆ ಬರುತ್ತಿಲ್ಲ ಮಹಾಮಾರಿ ಕೊರೋನ!!, ಚಿಕ್ಕಬಳ್ಳಾಪುರ ಜಿಲ್ಲೆ 4 ದಿನ ಕಂಪ್ಲೀಟ್ ಲಾಕ್‌ಡೌನ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ