ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌ ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

ಚೋಳರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ಕೆರೆ ಸುಮಾರು 96 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಅಲ್ಲಿಯ 3 ಐತಿಹಾಸಿಕ ಕಲ್ಯಾಣಿಗಳು ಸಾವಿರಾರು ವರ್ಷಗಳ ಇತಿಹಾಸಕ್ಕೆ ಸಾಕ್ಷಿ. ಧರ್ಮ-ಐತಿಹಾಸಿಕ ದೃಷ್ಟಿಯಿಂದ ಸೂಕ್ಷ್ಮ ಪಾರಂಪರಿಕ ತಾಣವಾದ ರಂಗಸ್ಥಳವು ಬಿಜೆಪಿ ಸರಕಾರದ ಅವಧಿಯಲ್ಲೇ ವಿನಾಶದತ್ತ ಸಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.