• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸೋಂಕು ನಿಯಂತ್ರಣದಲ್ಲಿ ಮಾರ್ಗಸೂಚನೆ ನಿರ್ಲಕ್ಷ್ಯ I ಕೋವಿಡ್‌ ಕೇರ್‌ ಸೆಂಟರ್‌, ಆಕ್ಸಿಜನ್‌ ಬಳಕೆ, ಔಷಧ ನಿರ್ವಹಣೆಯಲ್ಲಿ ವಿಫಲ I ಚಿತ್ರದುರ್ಗ ಜಿಲ್ಲಾಡಳಿತದ ಮೇಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೆಂಡಾಮಂಡಲ

cknewsnow desk by cknewsnow desk
May 20, 2021
in CHIKKABALLAPUR, COVID-19, STATE
Reading Time: 1 min read
0
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ
913
VIEWS
FacebookTwitterWhatsuplinkedinEmail

ಮನೆಗಳಲ್ಲಿರುವ ಎರಡೂವರೆ ಸಾವಿರ ಸೋಂಕಿತರನ್ನು ಕೂಡಲೇ ಕೋವಿಡ್‌ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲು ತಾಕೀತು

ಚಿತ್ರದುರ್ಗ: ಕೋವಿಡ್‌ ನಿಯಂತ್ರಣದಲ್ಲಿ ಸರಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದ ಕಾರಣಕ್ಕೆ ಜಿಲ್ಲೆಯಲ್ಲಿ ಸೋಂಕು ಏರುಗತಿಯಲ್ಲಿದೆ. ತಕ್ಷಣವೇ ಜಿಲ್ಲಾಡಳಿತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್‌ ಪರಿಶೀಲನಾ ಸಭೆಯಲ್ಲಿ ಗುರುವಾರ ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾತನಾಡಿದ ಸಚಿವರು, ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡದಿರುವ, ಸ್ಯಾಂಪಲ್‌ಗಳ ಪರೀಕ್ಷೆಯನ್ನು ಆಯಾ ದಿನವೇ ಸಿಗುವಂತೆ ನೋಡಿಕೊಳ್ಳದಿರುವುದೇ ಸೋಂಕು ತೀವ್ರಗತಿಯಲ್ಲಿ ಹರಡಲು ಕಾರಣವಾಗಿದೆ. ತಕ್ಷಣವೇ ಈ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಡಳಿತ ಬೇಡಿಕೆ ಇರಿಸಿರುವಂತೆ ಆಕ್ಸಿಜನ್‌ ಪ್ರಮಾಣ ಹೆಚ್ಚಿಸಲು, ವೈದ್ಯರ ಕೋರತೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಚಿವರು ಸಭೆಯಿಂದಲೇ ರಾಜ್ಯ ಮಟ್ಟದ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಸೂಕ್ತ ಪ್ರಮಾಣದ ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಜಿಲ್ಲೆಯಲ್ಲಿ ಹೋಮ್‌ ಐಸೋಲೇಶನ್‌ ವ್ಯವಸ್ಥೆಯಲ್ಲಿ ಗೊಂದಲಗಳಿಂದ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆಗುತ್ತಿಲ್ಲ. ಹೀಗಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಆರಂಭಿಸಿ ರೋಗ ಲಕ್ಷಣ ಇಲ್ಲದವರನ್ನು ಕಡ್ಡಾಯವಾಗಿ ಈ ಕೇಂದ್ರಗಳಿಗೆ ಕರೆತರಬೇಕು. ಹಾಸ್ಟೆಲ್‌ಗಳು, ಶಾಲೆ – ಕಾಲೇಜು ಇತ್ಯಾದಿ ಸರಕಾರಿ ಕಟ್ಟಡಗಳಲ್ಲಿ ಈ ಕೇಂದ್ರಗಳನ್ನು ತೆರೆಯಬೇಕು ಎಂದು ಅವರು ಸೂಚನೆ ನೀಡಿದರು.

ಎಚ್ಚರ ತಪ್ಪಿದರೆ ಅನಾಹುತ

ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಹೆಚ್ಚಿನ ಮಟ್ಟದಲ್ಲಿ ಇಲ್ಲದಿರುವುದರಿಂದ ಕೋವಿಡ್‌ ಆರೈಕೆ ಕೇಂದ್ರಗಳು ಕಡ್ಡಾಯ ಆರಂಭ ಆಗಲೇಬೇಕು. ಹೀಗಾಗಿ ಅತ್ಯಂತ ಹೆಚ್ಚು ಕಾಳಜಿಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಬೂತ್‌ ಮಟ್ಟದಲ್ಲಿ ಅಥವಾ ಗ್ರಾಮ ಮಟ್ಟದಲ್ಲಿ ರಚಿಸಿರುವ ಟಾಸ್ಕ್‌ಫೋರ್ಸ್‌ಗಳು ಹೆಚ್ಚು ಕ್ರಿಯಾಶೀಲರಾಗಿ ಮನೆಯಲ್ಲಿರುವ ಎರಡೂವರೆ ಸಾವಿರ ಸೋಂಕಿತರನ್ನು ಕೂಡಲೇ ಕೋವಿಡ್‌ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ದೇಶದ ಪ್ರತಿಷ್ಠಿತ ಸಂಸ್ಥೆ ನಡೆಸಿರುವ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏರುಗತಿಯಲ್ಲಿದ್ದ ಸೋಂಕು ಈಗ ಇಳಿಕೆ ಕಂಡಿದೆ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಆ ಟ್ರೆಂಡ್‌ ಕಂಡುಬಂದಿಲ್ಲ. ಇದಕ್ಕೆ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂಬ ಸಂಶಯಗಳಿವೆ. ಈ ಪರಿಸ್ಥಿತಿ ಬದಲಾಗಬೇಕು ಎಂದು ಅವರು ಎಚ್ಚರಿಕೆ ನೀಡಿದರು.

ವರದಿ ಅದೇ ದಿನ ಕೊಡಬೇಕು

ಕೊರೋನಾ ಟೆಸ್ಟ್‌ಗಳ ಪರೀಕ್ಷಾ ವರದಿ ಆಯಾ ದಿನ ಬರುತ್ತಿಲ್ಲ ಎಂಬ ದೂರುಗಳಿವೆ. ಆಯಾ ದಿನದ ಫಲಿತಾಂಶವನ್ನು ಅದೇ ದಿನ ಸಿಗುವಂತೆ ಮಾಡಿ ಅವರನ್ನು ಐಸೋಲೇಟ್‌ ಮಾಡುವುದು, ಆರೈಕೆ ಮಾಡುವುದನ್ನು ಮಾಡಿದರೆ ನಿಯಂತ್ರಣ ಖಂಡಿತ ಸಾಧ್ಯವಿದೆ.  ಆಕ್ಟಿವ್‌ ಪ್ರಕರಣಗಳಲ್ಲಿರುವ ಎಲ್ಲರಿಗೂ ಮೆಡಿಸನ್‌ ಕಿಟ್‌ ಕಡ್ಡಾಯವಾಗಿ ನೀಡಲೇಬೇಕು. ಔಷಧಗಳ ಕೊರತೆ ಇದ್ದರೆ ತಕ್ಷಣ ಬೇಡಿಕೆ ಸಲ್ಲಿಸಿದರೆ ಒದಗಿಸಲಾಗುವುದು. ಯಾವುದೇ ಕಾರಣಕ್ಕೂ ಸ್ಟಿರಾಯ್ಡ್‌ಗಳ ಬಳಕೆ ಮಾಡಲೇಬಾರದು. ಅನಿವಾರ್ಯ ಪ್ರಕರಣಗಳಿದ್ದಲ್ಲಿ ವೈದ್ಯರ ನಿಗಾ ವ್ಯವಸ್ಥೆಯಲ್ಲಿ ಮಾತ್ರ ಬಳಕೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

ಆಕ್ಸಿಜನ್‌ ಬಳಕೆಗೆ ಸಂಬಂಧಿಸಿದಂತೆ ಆಡಿಟ್‌ ಮಾಡಿಸಬೇಕು. ಇಲ್ಲವಾದಲ್ಲಿ ನಿರ್ದಿಷ್ಟ ಪ್ರಮಾಣದ ನಿರ್ದಿಷ್ಟ ಬಳಕೆ ಗೊತ್ತಾಗುವುದಿಲ್ಲ. ಅಗತ್ಯವಿದ್ದಲ್ಲಿ ಮಾತ್ರ ಬಳಕೆ ಮಾಡಬೇಕು, ಇಲ್ಲವಾದಲ್ಲಿ ರೋಗಿಗೆ ಅನುಕೂಲಕ್ಕಿಂತ ಅನಾನುಕೂಲ ಹೆಚ್ಚು. ಈ ಸಮಿತಿ ಪ್ರತಿ ತಾಲ್ಲೂಕಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ವರದಿ ಸಿದ್ಧಪಡಿಸಬೇಕು. ಸದ್ಯ ಜಿಲ್ಲಾಡಳಿತದ ವರದಿ ಪ್ರಕಾರ 591 ರೋಗಿಗಗಳಿಗೆ ಆಕ್ಸಿಜನ್‌ ನೀಡಲಾಗುತ್ತಿದೆ. ಸರ್ಕಾರ 8.5 ಕೆ.ಎಲ್‌ ಆಕ್ಸಿಜನ್‌ ಒದಗಿಸಲಾಗುತ್ತಿದೆ. ಅದರ ಗುಣಾತ್ಮಕ ಬಳಕೆ ಆಗಬೇಕು. ಹೆಚ್ಚುವರಿಯಾಗಿ 4 ಕೆ.ಎಲ್‌  ನಿಂದ 5 ಕೆಎಲ್‌ ವರೆಗೆ ನೀಡಲು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹಾಸಿಗೆ ಸಂಖ್ಯೆ ಹೆಚ್ಚಿಸಿ ಬಸವೇಶ್ವರ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಶೇಕಡಾ ಎಪ್ಪತ್ತೈದರಷ್ಟು ಹಾಸಿಗೆಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಅದೇ ರೀತಿ ವೈದ್ಯರು ಮತ್ತು ಸಿಬ್ಬಂದಿಗಳನ್ನೂ ಸಂಸ್ಥೆ  ಕೋವಿಡ್‌ ನಿಯಂತ್ರಣ ವಿಷಯದಲ್ಲಿ ಒದಗಿಸಬೇಕು. ಜತೆಗೆ ಐನೂರು ಹಾಸಿಗೆಗಳಿಗೆ ಆಕ್ಸಿಜನ್‌ ಲೈನ್‌ ಅಳವಡಿಕೆ ಮಾಡಬೇಕು. ಅದಕ್ಕೆ ಬೇಕಿರುವ ಎಲ್ಲಾ ನೆರವನ್ನೂ ಸರ್ಕಾರ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ನೋಂದಣಿ ಆಗದ ಖಾಸಗಿ ಆಸ್ಪತ್ರೆಗಳನ್ನು ತಕ್ಷಣ ನೋಂದಣಿ ಮಾಡಬೇಕು. ಮೂದು ದಿನದೊಳಗೆ ಈ ಪ್ರಕ್ರಿಯೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಜಿಲ್ಲಾ ಆಸ್ಪತ್ರೆಗೆ ಹಿರಿಯ ಅಧಿಕಾರಿಯೊಬ್ಬರನ್ನು ತಕ್ಷಣದಿಂದಲೇ ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಬೇಕು. ಅವರು ಪ್ರತಿಯೊಂದು ವಿಷಯದಲ್ಲೂ ಪ್ರತಿದಿನ ಪರಿಶೀಲನೆ ನಡೆಸಿ ಲೋಪಗಳ ನಿವಾರಣೆ ಮಾಡಬೇಕು ಎಂದು ಸೂಚನೆ ನೀಡಿದರು. 

 ವಾರದೊಳಗೆ ನೇಮಕ

ಮೂವರು ವೈದ್ಯರು, ತಜ್ಞರು 9 ಮತ್ತು ಜಿಲ್ಲಾ ಆಸ್ಪತ್ರೆಗೆ 1 ಹುದ್ದೆ ಖಾಲಿ ಇವೆ. ಅವುಗಳನ್ನು ತಕ್ಷಣ ನೇಮಕ ಮಾಡಿ ಕಳುಹಿಸಲಾಗುವುದು. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ವೈದ್ಯರಿಗೆ ಹೆಚ್ಚಿನ ವೇತನ ನೀಡಿ ಹೊಸದಾಗಿ ನೇಮಕ ಮಾಡಿಕೊಳ್ಳಬೇಕು. ಬಸವೇಶ್ವರ ಮೆಡಿಕಲ್‌ ಕಾಲೇಜಿನ ಪದವಿ ಪೂರ್ಣಗೊಳಿಸಿರುವವರು, ಪಿಜಿ ವಿದ್ಯಾರ್ಥಿಗಳನ್ನು ನಿಯೋಜಿಸಬೇಕು ಮತ್ತು ಅವರಿಗೂ ನಿಗದಿತ ಸಂಭಾವನೆ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್‌ ಆಸ್ಪತ್ರೆಗೆ ರೋಗಿಗಳ ಸಂಬಂಧಿಕರನ್ನು ಯಾರನ್ನೂ ಒಳಗೆ ಬಿಡುವಂತಿಲ್ಲ. ಆಸ್ಪತ್ರೆಗೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಬೇಕು. ರೆಮ್ಡಿಸ್ವೇರ್‌ ಹಾಗೂ ಇತರೆ ಔಷಧಗಳ ಬಳಕೆಗೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಇಲ್ಲದ ಜಿಲ್ಲಾ ಆರೋಗ್ಯಾಧಿಕಾರಿ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಪ್ರತಿದಿನ ಬೇಕಿರುವ ಔಷಧಗಳ ಎಲ್ಲಾ ವಿವರ ಅವರ ಬಳಿ ಇರಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಹಿರಿಯ ಶಾಕಸರಾದ ತಿಪ್ಪಾರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಚಂದ್ರಣ್ಣ, ಶಾಸಕಿ ಪೂರ್ಣಿಮಾ ಮತ್ತು ರಘುಮೂರ್ತಿ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮತ್ತೆ ಮತ್ತೆ ಕಾಡುವ ರಾಜೀವ್‌ ಗಾಂಧಿ ಎಂಬ ಶತಮಾನದ ಮುನ್ನೋಟ ಮತ್ತೂ ಬರೀ ವಿಷಾದ ಉಳಿಸಿಬಿಟ್ಟ ವೇಲುಪಿಳ್ಳೈ ಪ್ರಭಾಕರನೆಂಬ ಪರಮ ಚಾಣಾಕ್ಷನ ಪರಮ ತಪ್ಪು ಹೆಜ್ಜೆಗಳು!

ಮತ್ತೆ ಮತ್ತೆ ಕಾಡುವ ರಾಜೀವ್‌ ಗಾಂಧಿ ಎಂಬ ಶತಮಾನದ ಮುನ್ನೋಟ ಮತ್ತೂ ಬರೀ ವಿಷಾದ ಉಳಿಸಿಬಿಟ್ಟ ವೇಲುಪಿಳ್ಳೈ ಪ್ರಭಾಕರನೆಂಬ ಪರಮ ಚಾಣಾಕ್ಷನ ಪರಮ ತಪ್ಪು ಹೆಜ್ಜೆಗಳು!

Leave a Reply Cancel reply

Your email address will not be published. Required fields are marked *

Recommended

ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್‌ ಸೇರಿ 24 ಸಚಿವರ ಪ್ರಮಾಣ

ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್‌ ಸೇರಿ 24 ಸಚಿವರ ಪ್ರಮಾಣ

2 years ago
4 ಶೋಗಳಿಗೆ 154 ಪ್ರೇಕ್ಷಕರು! ಟೋಟಲ್‌ ಕಲೆಕ್ಷನ್‌ 5ರಿಂದ  6 ಸಾವಿರ ಮಾತ್ರ!!

ಚಿತ್ರಮಂದಿರಗಳು 100% ಓಪೆನ್

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ