• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಬ್ಲ್ಯಾಕ್ ಫಂಗಸ್ ಮೂಲ ಬೆನ್ಹತ್ತಿದ ಸರಕಾರ; ಯಾವ ದೇಶದಲ್ಲೂ ಗುಣಮುಖರಾದ ಸೋಂಕಿತರಲ್ಲಿ ಕಾಣಿಸಿಕೊಳ್ಳದ ಕಪ್ಪು ಶಿಲೀಂದ್ರ ಭಾರತದಲ್ಲೇ ಕಾಣಿಸಿಕೊಂಡಿದ್ದು ಏಕೆ?

cknewsnow desk by cknewsnow desk
May 23, 2021
in COVID-19, STATE
Reading Time: 1 min read
0
ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌
914
VIEWS
FacebookTwitterWhatsuplinkedinEmail

ತಜ್ಞ ವೈದ್ಯರಿಂದ ನಾಳೆಯಿಂದಲೇ ತೀವ್ರ ಅಧ್ಯಯನ / ಕಪ್ಪು ಶಿಲೀಂದ್ರ ಚಿಕಿತ್ಸೆಗೆ ಹೊಸ ಮಾರ್ಗಸೂಚಿ ಶೀಘ್ರ


ಬೆಂಗಳೂರು: ಕೋವಿಡ್-19 ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಅಪಾಯಕಾರಿ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಮೂಲವನ್ನು ಪತ್ತೆ ಹಚ್ಚಲು ಸುಪ್ರಸಿದ್ಧ ವೈದ್ಯರು ಹಾಗೂ ಸೂಕ್ಷ್ಮಾಣುಜೀವಿ ತಜ್ಞರಿಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನಿರ್ದೇಶನ ನೀಡಿದರು.

ಬೆಂಗಳೂರಿನಲ್ಲಿ ಭಾನುವಾರ ಈ ಬಗ್ಗೆ ರಾಜ್ಯದ ಖ್ಯಾತ ತಜ್ಞ ವೈದ್ಯರೂ ಹಾಗೂ ಕೋವಿಡ್ & ಬ್ಲ್ಯಾಕ್ ಫಂಗಸ್ ಚಿಕಿತ್ಸಾ ಶಿಷ್ಟಾಚಾರ ಸಮಿತಿಗಳ ತಜ್ಞರ ಸಭೆಯಲ್ಲಿ ಪಾಲ್ಗೊಂಡು ಸಮಾಲೋಚನೆ ನಡೆಸಿದ ನಂತರ ಡಿಸಿಎಂ, ನಾಳೆಯಿಂದಲೇ (ಸೋಮವಾರ) ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ ಮೂಲ ಹುಡುಕುವಂತೆ ಸೂಚಿಸಿದರು.

ಅಲ್ಲದೆ, ಅತಿ ಶೀಘ್ರದಲ್ಲಿಯೇ ಈ ಬಗ್ಗೆ ವರದಿ ನೀಡಬೇಕು ಹಾಗೂ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಹೊಸ ಮಾರ್ಗಸೂಚಿ ರೂಪಿಸುವಂತೆಯೂ ಅವರು ನಿರ್ದೇಶನ ತಜ್ಞರಿಗೆ ತಿಳಿಸಿದರು.

ಅತ್ಯಂತ ಮಹತ್ವದ ಈ ಸಭೆಯ ಆರಂಭದಲ್ಲಿ ಮಣಿಪಾಲ್ ಆಸ್ಪತ್ರೆಯ ಇ ಎನ್ ಟಿ ತಜ್ಞ ವೈದ್ಯರೂ  ಡಾ.ಸಂಪತ್ ಚಂದ್ರ ಪ್ರಸಾದ್ ರಾವ್ ನೀಡಿದ ಪ್ರಾತ್ಯಕ್ಷಿಕೆಯಲ್ಲಿ, ಜಗತ್ತಿನ ಯಾವ ದೇಶದಲ್ಲೂ ಕೋವಿಡ್ ನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳದ ಬ್ಲ್ಯಾಕ್ ಫಂಗಸ್ ಭಾರತದಲ್ಲಿ ಮಾತ್ರ ಏಕೆ ಕಾಣಿಸಿಕೊಳ್ಳುತ್ತಿದೆ ಎಂಬ ಬಗ್ಗೆ ಮಾಹಿತಿ ನೀಡಿದರು.

ಡಾ.ಸಂಪತ್ ಹೇಳುವುದೇನು?

  • ಬ್ಲಾಕ್ ಫಂಗಸ್ ಮೊದಲ ಅಲೆ ವೇಳೆ ಕಂಡುಬರಲಿಲ್ಲ. ಈಗ ಏಕೆ ಕಾಣಿಸಿಕೊಂಡಿದೆ? ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಪೂರೈಕೆ ಮಾಡಲಾಗುತ್ತಿರುವ ಆಮ್ಲಜನಕದಿಂದ ಬರುತ್ತಿದೆಯಾ? ಯಾವುದೇ ದೇಶದಲ್ಲೂ ಕಾಣಿಸಿಕೊಳ್ಳದ ಈ ಕಾಯಿಲೆ ನಮ್ಮಲ್ಲೇ ಕಂಡು ಬಂದಿದ್ದೇಕೆ? ನಮ್ಮಲ್ಲಿನ ಲೋಪವೇನು? ಇದನ್ನು ಪತ್ತೆ ಮಾಡುವ ಪ್ರಯತ್ನ ಮಾಡಬೇಕು.
  • ಸದ್ಯಕ್ಕೆ ಬಳಕೆಯಾಗುತ್ತಿರುವ ಆಕ್ಸಿಜನ್ ಶುದ್ದವಾಗಿದೆಯೇ? ಆಮ್ಲಜನಕ ಸಾಂದ್ರಕಗಳಿಗೆ ಡಿಸ್ಟಲರಿ ನೀರು ಬಳಕೆಯಾಗುತ್ತಿದೆಯಾ? ಇಲ್ಲವಾ? ಐಸಿಯುಗಳ ಸ್ವಚ್ಛತೆ ಯಾವ ಮಟ್ಟದಲ್ಲಿದೆ? ಆಸ್ಪತ್ರೆಗಳ ಸ್ವಚ್ಛತೆ ಹಾಗೂ ಆಮ್ಲಜನಕ ಸಿಲಿಂಡರ್ ಗಳ ಸ್ವಚ್ಛತೆಯನ್ನು ವೈದ್ಯಕೀಯ ಮಾರ್ಗಸೂಚಿ ಪ್ರಕಾರ ಮಾಡಲಾಗುತ್ತಿದೆಯಾ? ಅಲ್ಲದೆ, ನೈಟ್ರೋಜನ್ ಬಳಸಿ ಆಮ್ಲಜನಕವನ್ನು ಉತ್ಪಾದಿಸಲಾಗುತ್ತಿದೆ. ಆ ಪ್ರಕ್ರಿಯೆ ಹೇಗೆ ನಡೆಯುತ್ತಿದೆ? ಸದ್ಯಕ್ಕೆ ಬೇಡಿಕೆ ಹೆಚ್ಚಾಗಿರುವ ಕಾರಣ ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುವ ಆಮ್ಲಜನಕವನ್ನೆಲ್ಲ ವೈದ್ಯಕೀಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಇದರಿಂದ ಅಡ್ಡ ಪರಿಣಾಮ ಉಂಟಾಗಿರಬಹುದಾ? ಆಸ್ಪತ್ರೆಗಳಲ್ಲಿನ  ಆಮ್ಲಜನಕ ಘಟಕ, ಅವುಗಳಿಂದ ಪೂರೈಕೆಯಾಗುವ ಪೈಪುಗಳ ಸ್ವಚ್ಛತೆ ಕಾಪಾಡಿಕೊಳ್ಳಲಾಗಿದೆಯಾ? ಈ ಎಲ್ಲ ಪ್ರಶ್ನೆಗಳ ಬಗ್ಗೆ ಉತ್ತರ ಹುಡುಕುವಂತೆ ತಜ್ಞ ವೈದ್ಯರಿಗೆ ಸೂಚನೆ ನೀಡಲಾಗಿದೆ.

ರೆಫರ್ ಮಾಡುವ ಆಸ್ಪತ್ರೆಗಳ ಪರಿಶೀಲನೆ

ಕಳೆದ 7 ದಿನಗಳಲ್ಲಿ 700 ಬ್ಲ್ಯಾಕ್ ಫಂಗಸ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ಸದ್ಯಕ್ಕೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಹುತೇಕ ರೋಗಿಗಳ ಸಣ್ಣಪುಟ್ಟ ಆಸ್ಪತ್ರೆಗಳಿಂದ ರೆಫರ್ ಆಗಿ ಬಂದಿದ್ದಾರೆ. ಇವರನ್ನು ರೆಫರ್ ಮಾಡಿದ ಆಸ್ಪತ್ರೆಗಳ ವ್ಯವಸ್ಥೆಯನ್ನೂ ಪರಿಶೀಲನೆ ಮಾಡುವಂತೆ ತಜ್ಞರಿಗೆ ತಿಳಿಸಲಾಗಿದೆ. ಅಲ್ಲೆಲ್ಲ ಚಿಕಿತ್ಸಾ ಶಿಷ್ಟಾಚಾರ ಪಾಲಿಸಲಾಗಿದೆಯಾ? ಅಲ್ಲಿ ಬಳಕೆ ಮಾಡಲಾದ ಆಕ್ಸಿಜನ್ ಉತ್ತಮ ಗುಣಮಟ್ಟದ್ದೇ? ಅದು ಎಲ್ಲಿಂದ ಬಂದಿದೆ? ಆ ಮೂಲವನ್ನು ಹುಡುಕಿ ಅಧ್ಯಯನ ಮಾಡಲು ತಿಳಿಸಲಾಗಿದೆ. ಈ ಕೆಲಸ ನಾಳೆಯಿಂದಲೇ‌ ನಡೆಯಲಿದೆ ಎಂದು‌ ಉಪ ಮುಖ್ಯಮಂತ್ರಿ ತಿಳಿಸಿದರು.

ರೋಗಿಗಳಿಗೆ ಆಸ್ಪತ್ರೆಗಳು ಎಷ್ಟು ಸುರಕ್ಷಿತ ಎಂಬ ಬಗ್ಗೆ ನಾವು ಖಾತರಿ ಮಾಡಿಕೊಳ್ಳಬೇಕಿದೆ. ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸಾ ಶಿಷ್ಟಾಚಾರವನ್ನು ಚಾಚೂ ತಪ್ಪದೆ ಪಾಲಿಸಲಾಗಿದೆಯಾ? ಬ್ಲ್ಯಾಕ್ ಫಂಗಸ್ ಪೀಡಿತರಿಗೆ ಗುಣಮಟ್ಟದ ಚಿಕಿತ್ಸೆ ಲಭ್ಯವಿದೆಯಾ? ಸರಕಾರ ನೀಡುತ್ತಿರುವ ಎಲ್ಲ ಸೌಲಭ್ಯಗಳು ಪರಿಣಾಮಕಾರಿಯಾಗಿ ಬಳಕೆ ಆಗುತ್ತಿವೆಯಾ?

ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕುವ ಕೆಲಸ ಮಾಡಲಾಗುತ್ತಿದ್ದು, ಸೋಮವಾರದಿಂದಲೇ ತಜ್ಞರ ತಂಡಗಳು ಅಧ್ಯಯನ ನಡೆಸಿ ಅತಿ ಶೀಘ್ರದಲ್ಲಿಯೇ ವರದಿ ನೀಡಲಿವೆ. ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉಪೇಕ್ಷೆ ಮಾಡುವ ಪ್ರಶ್ನೆ ಇಲ್ಲ ಎಂದು ಡಿಸಿಎಂ ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೋವಿಡ್ ಚಿಕಿತ್ಸೆ ಶಿಷ್ಟಾಚಾರ ಸಮಿತಿ ಅಧ್ಯಕ್ಷ ಡಾ.ಸಚ್ಚಾದಾನಂದ, ಸದಸ್ಯರಾದ ಡಾ.ರವಿ, ಡಾ.ಶಶಿಭೂಷಣ, ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಶಿಷ್ಟಾಚಾರ ಸಮಿತಿ ಅಧ್ಯಕ್ಷೆ ಡಾ.ಅಂಬಿಕಾ, ಕ್ಯಾನ್ಸರ್ ತಜ್ಞ ಡಾ.ವಿಶಾಲ್ ರಾವ, ಆರೋಗ್ಯ ಇಲಾಖೆ ನಿರ್ದೇಶಕ ಡಾ.ಓಂಪ್ರಕಾಶ್ ಪಾಟೀಲ ಸೇರಿದಂತೆ ಹತ್ತಕ್ಕೂ ಹೆಚ್ಚು ಖ್ಯಾತ ತಜ್ಞ ವೈದ್ಯರು ಇದ್ದರು.

Tags: black funguscovid19dr cn ashwathnarayanindiakarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಿಯಂತ್ರಣಕ್ಕೆ ಬಾರದ ಕೋವಿಡ್‌ ಮಾರಿ; ಚಿಕ್ಕಬಳ್ಳಾಪುರಕ್ಕೆ ಲಾಕ್‌ಡೌನ್‌ ಒಂದೇ ದಾರಿ!  ಮೇ 27ರಿಂದ ಆರೋಗ್ಯ ಸಚಿವರ ಜಿಲ್ಲೆ ಮತ್ತೆ 4 ದಿನ ಬಂದ್ ಆಗುತ್ತಿರುವುದೇಕೆ?

ನಿಯಂತ್ರಣಕ್ಕೆ ಬಾರದ ಕೋವಿಡ್‌ ಮಾರಿ; ಚಿಕ್ಕಬಳ್ಳಾಪುರಕ್ಕೆ ಲಾಕ್‌ಡೌನ್‌ ಒಂದೇ ದಾರಿ! ಮೇ 27ರಿಂದ ಆರೋಗ್ಯ ಸಚಿವರ ಜಿಲ್ಲೆ ಮತ್ತೆ 4 ದಿನ ಬಂದ್ ಆಗುತ್ತಿರುವುದೇಕೆ?

Leave a Reply Cancel reply

Your email address will not be published. Required fields are marked *

Recommended

ವಿಧಾನಮಂಡಲ ಅಧಿವೇಶನ

ಫೆಬ್ರುವರಿ 14 ರಿಂದ 25ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ

3 years ago
ಜನತಾ ಜಲಧಾರೆ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 4 ಜಿಲ್ಲೆಗಳ ಮುಖಂಡರ ಜತೆ ಹೆಚ್‌ಡಿಕೆ ಚರ್ಚೆ

ಜನತಾ ಜಲಧಾರೆ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 4 ಜಿಲ್ಲೆಗಳ ಮುಖಂಡರ ಜತೆ ಹೆಚ್‌ಡಿಕೆ ಚರ್ಚೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ