• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಪಂಚರಾಜ್ಯ ಚುನಾವಣೆ ಬ್ಯುಸಿಯಲ್ಲಿ ಬಿದ್ದು ಮೋದಿ ಕೊರೊನ ನಿರ್ವಹಣೆ ಮರೆತರು ಎಂದು ದೂರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

cknewsnow desk by cknewsnow desk
May 24, 2021
in COVID-19, NATION, STATE
Reading Time: 2 mins read
0
ಪಂಚರಾಜ್ಯ ಚುನಾವಣೆ ಬ್ಯುಸಿಯಲ್ಲಿ ಬಿದ್ದು ಮೋದಿ ಕೊರೊನ ನಿರ್ವಹಣೆ ಮರೆತರು ಎಂದು ದೂರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು
910
VIEWS
FacebookTwitterWhatsuplinkedinEmail

ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತ ಹಠಕ್ಕೆ ಬಿದ್ದರು, ಗೆಲ್ಲುವ ಉಮೇದಿನಲ್ಲಿ ಕೊರೊನಾ ನಿರ್ವಹಣೆ ಮರೆತರು

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಿಂದಲೇ ದೇಶದಲ್ಲಿ ಕೊರೊನ ಹೆಚ್ಚಾಗಿದೆ. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಂಕಿನ ಬಗ್ಗೆ ಹೆಚ್ಚು ಗಮನ ಕೊಡಲಿಲ್ಲ. ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಅನಾಹುತ ಆಗುತ್ತಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು. ಕೇಂದ್ರ ಸರ್ಕಾರದವರು ಈ ರಾಜ್ಯಗಳ ಚುನಾವಣೆ ಕಡೆ ಹೆಚ್ಚು ಗಮನ ಕೊಟ್ಟರು. ಪ್ರಧಾನಿ ಕೂಡ ಹೆಚ್ಚು ತೊಡಗಿಸಿಕೊಂಡರು. ಸ್ವತಃ ಅವರ ಕ್ಷೇತ್ರದಲ್ಲೂ ಸೋಂಕು ಹೆಚ್ಚಾಗಿದೆ. ಹೀಗಾಗಿ ಸ್ವಲ್ಪ ಅವರು ಭಾವೋದ್ವೇಗಕ್ಕೆ ಒಳಗಾಗಿ ಮಾತಾಡಿದ್ದಾರೆ ಎಂದರು.

ಚುನಾವಣೆ ಕೆಲಸದಿಂದ ಕೊರೊನಾ ಕೆಲಸದಲ್ಲಿ ಮೋದಿ ಅವರು ಸ್ವಲ್ಪ ಅಲಕ್ಷ್ಯ ಮಾಡಿದ್ರು ಅಂತ ಎಲ್ಲರೂ ಮಾತನಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಹೆಚ್ಚು ಸಮಸ್ಯೆ ಆಗೋದಕ್ಕೆ ಕಾರಣ ಆಗಿರಬಹುದು. ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತ ಪಣಕ್ಕೆ ಬಿದ್ದರು. ಗೆಲ್ಲುವ ಉಮೇದಿನಲ್ಲಿ ಕೊರೊನಾ ನಿರ್ವಹಣೆ ಮರೆತರು ಎಂದು ಗೌಡರು ಟೀಕಿಸಿದರು.

ಕೇಂದ್ರದಿಂದ ಲಸಿಕೆ, ಔಷಧಿ, ವೆಂಟಿಲೇಟರ್, ಆಕ್ಸಿಜನ್ ನಿಡುವುದರಲ್ಲಿ ಮಲತಾಯಿ ಧೋರಣೆ ತೋರಿದೆ ಅನ್ನುವ ವಿಚಾರ ಈ ಬಗ್ಗೆ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಕುಮಾರಸ್ವಾಮಿ ಕೂಡ ಈ ಬಗ್ಗೆ ಅನೇಕ ಬಾರಿ ಮಾತಾಡಿದ್ದಾರೆ. ಜತೆಗೆ, ಹಣಕಾಸು ಹಂಚಿಕೆಯಲ್ಲೂ ನಮಗೆ ಅನ್ಯಾಯ ಆಗಿದೆ. ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡ್ತಾರೆ. ನಮಗೆ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಗೌಡರು ಹೇಳಿದರು.

ಕೊರೊನಾ ವಿಚಾರದಲ್ಲಿ ಪ್ರಧಾನಿ‌ ಮೋದಿ ಹಾಗೂ ನಮ್ಮ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೊಟ್ಟಿದ್ದೀನಿ. ನಾನು 12 ಸಲಹೆಗಳನ್ನು ಕೊಟ್ಟಿದ್ದೆ. ಅದರಲ್ಲಿ ಕೆಲವು ಸಲಹೆಗಳನ್ನಷ್ಟೇ ಕಾರ್ಯಗತ ಮಾಡುತ್ತಿದ್ದಾರೆ. ಮೊದಲ ಅಲೆಯಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ರು ಅಂತ ಮೋದಿಯನ್ನ ಎಲ್ಲರೂ ಹೊಗಳಿದ್ದರು. ಎರಡನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚಳ ಆಗಿದೆ. ಜತೆಗೆ, ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಬಗ್ಗೆ ಆತಂಕ ಹುಟ್ಟುಕೊಂಡಿದೆ. ದೇಶ ವಿದೇಶಗಳ ಎಕ್ಸ್ʼಪರ್ಟ್ʼಗಳು ಇದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು ಅವರು.‌

ಕುಮಾರಸ್ವಾಮಿ ಪ್ರತಿ ಹಂತದಲ್ಲೂ ಸರಕಾರವನ್ನು ಎಚ್ಚರಿಸುವ ಕೆಲಸ ಮಾಡ್ತಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಬೀದಿಗಳಿದು ಹೋರಾಟ ಮಾಡುವ ಸ್ಥಿತಿ ಇಲ್ಲ. ಆದ್ರೆ ಸರಕಾರವನ್ನು ಎಚ್ಚರಿಸುವ ಕೆಲಸವನ್ನು ನಾವು ಮಾಡ್ತೀವಿ. ಜತೆಗೆ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನತೆಯ ಸಂಕಷ್ಟಕ್ಕೆ ನೆರವಾಗಬೇಕೆಂದು ಮಾಧ್ಯಮದವರ ಮುಖೇನ ಮನವಿ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದರು.

“ನನ್ನ ಜೀವಿತಾವಧಿಯಲ್ಲಿ ಇಂತಹ ದೊಡ್ಡ ಸಾಂಕ್ರಾಮಿಕ ರೋಗ ನೋಡಿಲ್ಲ ಇದರಿಂದ ದೇಶದ ಜನ ಸಮಸ್ಯೆಗೆ ಸಿಲುಕಿದ್ದಾರೆ.”

ರೆಮಿಡಿಸ್ವೀರ್, ಲಸಿಕೆ ಕಳ್ಳದಾರಿಯಲ್ಲಿ ಮಾರಾಟ ಮಾಡ್ತಿದ್ದಾರೆ. ಈಗಾಗಲೇ ಅನೇಕ ಜನರನ್ನು ಬಂಧನ ಮಾಡಿದ್ದಾರೆ. ಆಡಳಿತದಲ್ಲಿ ಕೆಲ ಲೋಪಗಳು ಇರಬಹುದು. ಇದೆಲ್ಲವನ್ನೂ ಸರಿ ಮಾಡುವ ಕೆಲಸ ಸರಕಾರ ತಕ್ಷಣ ಮಾಡಬೇಕು. ಸರಕಾರಕ್ಕೆ ಕುಮಾರಸ್ವಾಮಿ ಒಂದು ತಿಂಗಳ ಮುಂಚೆಯೇ ಸಲಹೆ ಕೊಟ್ಟಿದ್ದರು. ಆದರೆ ಆಗ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಹಳ್ಳಿಗಳಲ್ಲೂ ಸೋಂಕು ಹೆಚ್ಚುತ್ತಿದೆ. ಹೀಗಾಗಿ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ ಎಂದು ಅವರು ಒತ್ತಾಯ ಮಾಡಿದರು.

ಡಿಸಿಎಂ ಅಶ್ವತ್ಥನಾರಾಯಣ ಅವರು ನಮ್ಮ ಜಿಲ್ಲೆಗೂ ವೆಂಟಿಲೇಟರ್, ಔಷಧಿ ಎಲ್ಲಾ ಕಳಿಸಿದ್ದಾರೆ.
ಸರಕಾರ ಏನು ಮಾಡಿಲ್ಲ ಅಂತ ನಾನು ಹೇಳೊದಿಲ್ಲ. ಆದರೆ ಇನ್ನು ಸಾಕಷ್ಟು ಕೆಲಸ ಮಾಡುವ ಅವಶ್ಯಕತೆ ಇದೆ ಎಂದಷ್ಟೇ ಹೇಳಬಲ್ಲೆ. ಅರಸೀಕೆರೆ ತಾಲೂಕಿನಲ್ಲಿ ಸೋಂಕಿತರೊಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ 4 ಲಕ್ಷ ಖರ್ಚಾಗಿದೆ ಅದೇ ಮನೆಯಲ್ಲಿ ತಾಯಿ, ಹೆಂಡತಿ, ತಂದೆಗೂ ಸೋಂಕು ಬಂದಿದೆ. ನಾನೇ ಮೆಡಿಕಲ್ ಅಧಿಕಾರಿಗಳಿಗೆ ಕರೆ ಮಾಡಿ ಕ್ರಮ ವಹಿಸಲು ಸೂಚನೆ ನೀಡಿದೆ ಎಂದರು ಅವರು.

ಪುತ್ರನ ಕೃಷಿಭೂಮಿ ನೋಡಲು ಬಂದ ಅಪ್ಪ

ರಾಮನಗರದ ಕೇತಗಾನಹಳ್ಳಿಯಲ್ಲಿ ನಾನು ಅತೀವ ಪ್ರೀತಿ, ಮಮತೆಯಿಂದ ಸೃಷ್ಟಿ ಮಾಡಿಕೊಂಡಿರುವ ‘ಕೃಷಿಭೂಮಿ’ಗೆ ಇಂದು (ಮೇ ೨೪) ನಾಡಿನ ಮಣ್ಣಿನ ಮಗ, ರೈತರ ನಾಯಕ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಆಗಮಿಸಿದ್ದರು. ಹಸಿರಿನಿಂದ ಕಂಗೊಳಿಸುತ್ತಾ, ಸಂಭ್ರಮಿಸುತ್ತಿರುವ ನನ್ನ ತೋಟವನ್ನು ಕಂಡು ‘ರೈತನ ಮಗ’ ದೇವೇಗೌಡರು ಅಷ್ಟೇ ಸಂಭ್ರಮ ಪಟ್ಟರು. ದೇವೇಗೌಡರು, ತಾಯಿ ಚನ್ನಮ್ಮರಿಗೆ ಇಂದು 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ದಂಪತಿ ಈ ಶುಭ ದಿನ ನನ್ನ ಪ್ರೀತಿಯ ತೋಟಕ್ಕೆ ಆಗಮಿಸಿದ್ದು, ಕಲ್ಪವೃಕ್ಷವಾದ ತೆಂಗಿನ ಸಸಿ ನೆಟ್ಟಿದ್ದು ಅವರ ಮಗನಾದ ನನ್ನನ್ನು ಭಾವಪರವಶನಾಗುವಂತೆ ಮಾಡಿತು. ಈ ಅಪರೂಪದ ಸನ್ನಿವೇಶ ಸೃಷ್ಟಿಸಿದ ದೇವರಿಗೆ ನನ್ನ ನಮನಗಳು. ದೇವೇಗೌಡ ದಂಪತಿಗೆ ಶುಭಾಶಯಗಳು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಲ್ಲ ಜಾಲತಾಣದಲ್ಲಿ ಬರೆದುಕೊಂದಿದ್ದಾರೆ.

Tags: covid19five states electionhd deve gowda channamma marriage anniversaryhd devegowdahd kumaraswamyjdskarnatakanarendra modinikilkumar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ

ಚಿಕ್ಕಬಳ್ಳಾಪುರದಲ್ಲಿ ಶ್ರೀ ಆದಿಚುಂಚನಗಿರಿ ಮಠದಿಂದ ಕೋವಿಡ್‌ ಕೇರ್;‌ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಸೇವೆಗೆ ಮುಕ್ತ

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದು ಹೇಳಿಕೆ; ಬ್ಲ್ಯಾಕ್’ಮೇಲ್ ರಾಜಕಾರಣ ಎಂದ ಹೆಚ್.ಡಿ.ಕುಮಾರಸ್ವಾಮಿ

1 year ago
ಜೆಡಿಎಸ್’ನಿಂದ ಜನತಾ ಜಲಧಾರೆ

ಜೆಡಿಎಸ್’ನಿಂದ ಜನತಾ ಜಲಧಾರೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ