• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಎಚ್.ಎಸ್.‌ದೊರೆಸ್ವಾಮಿ: ಶೋಷಿತರ ದನಿ, ಹೋರಾಟಗಾರರ ಮಾರ್ಗದರ್ಶಿ, ಯುವಜನರಿಗೆ ದಾರಿದೀಪವಾಗಿದ್ದ ಅದಮ್ಯ ಚೇತನ

cknewsnow desk by cknewsnow desk
May 31, 2021
in CKPLUS, STATE
Reading Time: 2 mins read
0
ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ 104  ವರ್ಷದ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ
925
VIEWS
FacebookTwitterWhatsuplinkedinEmail

ಮೇ 26ರಂದು ತಮ್ಮ ನೂರಾನಾಲ್ಕು ವರ್ಷಗಳ ಪರಿಪೂರ್ಣ ಮತ್ತು ಆದರ್ಶಮಯ ಸ್ಫೂರ್ತಿದಾಯಕ ಬದುಕಿಗೆ ವಿದಾಯ ಹೇಳಿದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಜತೆಗಿನ ತಮ್ಮ ಒಡನಾಟವನ್ನು ಇಲ್ಲಿ ಸ್ಮರಿಸಿದ್ದಾರೆ ಸುಪ್ರೀಂ ಕೋರ್ಟ್‌ನ ಗೌರವಾನ್ವಿತ ವಿಶ್ರಾಂತ ನ್ಯಾಯಮೂರ್ತಿಗಳಾದ ಜಸ್ಟೀಸ್ ವಿ. ಗೋಪಾಲ ಗೌಡ‌ ಅವರು.


ಎಚ್.ಎಸ್.‌ದೊರೆಸ್ವಾಮಿ ಅವರು ಶತಾಯುಷಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಸರಳತೆ, ನಮ್ರತೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದರಲ್ಲದೆ, ಸಮಾಜಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು.

ಅವರ ಅಗಲಿಕೆ ದೇಶಕ್ಕಾದ ಬಹುದೊಡ್ಡ ನಷ್ಟ. ಯಾವಾಗಲೂ ಜನರ ಪರವಾಗಿಯೇ ಇದ್ದರು ಅವರು. ಈಗ ನಮ್ಮ ಜತೆಯಲ್ಲಿ ಭೌತಿಕವಾಗಿ ಇಲ್ಲದಿರಬಹುದು. ಆದರೆ, ತಮ್ಮ ಚಿಂತನೆಗಳು, ಆದರ್ಶಗಳು ಹಾಗೂ ಇನ್ನೂ ಮಾಡಬೇಕಿರುವ ಕೆಲಸಗಳ ಮೂಲಕ ಇಡೀ ದೇಶದ ಜನರೆಲ್ಲರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ತಮ್ಮ ಜೀವನಪೂರ್ತಿ ಸಮಾಜದ ಹಿಂದುಳಿದ ವರ್ಗದ ಜನರ ಪರವಾಗಿ ಹೋರಾಟ ನಡೆಸಿದರಲ್ಲದೆ, ಶೋಷಿತ ಸಮುದಾಯಗಳ ದನಿಯಾಗಿದ್ದರು.

ಅಲ್ಲದೆ, ಸಮಾಜದ ಹಿಂದುಳಿದ ಜನರ ಪರವಾಗಿದ್ದುಕೊಂಡೇ ಅವರೆಲ್ಲರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆ ತಂದುಕೊಡಲು ಅವಿರತ ಹೋರಾಟ ನಡೆಸಿದರು. ಸಮಾಜದಲ್ಲಿ ತುಳಿತಕ್ಕೆ ಒಳಗಾಗಿದ್ದ ಶೋಷಿತ ಜನರಿಗೆ ಸಮಾನತೆಯನ್ನು ತಂದುಕೊಡುವುದು ಅವರ ಕನಸಾಗಿತ್ತು.

ರಾಷ್ಟ್ರಪಿತ ಮಹಾತ್ಮ ಗಾಂದೀಜಿ ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ದೊರೆಸ್ವಾಮಿ ಅವರು ಕಾರ್ಯ ನಿರ್ವಹಿಸಿದ್ದರು. ಸ್ವಾತಂತ್ರ್ಯ ಚಳವಳಿ ಕಾಲದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದರು ಮತ್ತೂ ತುರ್ತುಪರಿಸ್ಥಿತಿ ಕಾಲದಲ್ಲೂ ಇಂದಿರಾ ಗಾಂಧಿ ಅವರ ಸರ್ವಾಧಿಕಾರಿ ನೀತಿಯನ್ನು ಪ್ರಶ್ನಿಸಿ ಪುನಾ ಜೈಲು ಪಾಲಾಗಿದ್ದರು.

ಅಲ್ಲದೇ, ದೊರೆಸ್ವಾಮಿ ಅವರ ತತ್ತ್ವಾದರ್ಶಗಳು ಯುವಕರು, ರೈತರು, ಕೃಷಿ ಕಾರ್ಮಿಕರು, ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು, ಬುದ್ಧಿಜೀವಿಗಳು, ಬರಹಗಾರರು ಹಾಗೂ ಸಮಾಜದಲ್ಲಿನ ತುಳಿತಕ್ಕೆ ಒಳಗಾದ ಜನರಿಗೆ ದಾರಿ ದೀಪವಾಗಿದ್ದವು.

ದೊರೆಸ್ವಾಮಿ ಅವರು ಯಾವಾಗಲೂ ಸರಕಾರಗಳ ಜನವಿರೋಧಿ ನೀತಿಗಳನ್ನು ಪ್ರಶ್ನೆ ಮಾಡುತ್ತಿದ್ದರು. ಜನರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ದನಿ ಎತ್ತುತ್ತಿದ್ದದ್ದನ್ನು ಮತ್ತೂ ಅವರಿಗೆ ಎಚ್ಚರಿಕೆ, ಮಾರ್ಗದರ್ಶನ ನೀಡುತ್ತಿದ್ದದ್ದನ್ನು ಸ್ವತಃ ನಾನೇ ಕಣ್ಣಾರೆ ಕಂಡಿದ್ದೇನೆ.

ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗಳಿಂದ ಉತ್ತಮ ಆಡಳಿತವನ್ನು ಪಡೆಯಲು ಅವರು ತಮ್ಮ ಜೀವನದುದ್ದಕ್ಕೂ ಪಟ್ಟುಬಿಡದೆ ಎಲ್ಲಾ ಹೋರಾಟಗಾರರಿಗೆ ಪ್ರೇರಣೆ ಮತ್ತು ಶಕ್ತಿಯನ್ನು ತುಂಬುತ್ತಿದ್ದರು.

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಸೇವೆಯಿಂದ ನಿವೃತ್ತಿಯಾದ ಮೇಲೆ ನಿರಂತರವಾಗಿ ನಾನು ಅವರ ಸಂಪರ್ಕದಲ್ಲಿದ್ದೆ. ಅನೇಕ ಸಲ ಅವರನ್ನು ಭೇಟಿಯಾಗಿ ತುಂಬಾ ಹೊತ್ತು ಜನರ ಸಮಸ್ಯೆಗಳು, ಪ್ರಚಲಿತ ವಿಷಯಗಳು, ಜ್ವಲಂತ ಸಮಸ್ಯೆಗಳ ಬಗ್ಗೆ ಬಹಳಷ್ಟು ಹೊತ್ತು ಮಾತನಾಡುತ್ತಿದ್ದೆ. ಅಲ್ಲದೇ ಅವರ ಆರೋಗ್ಯವನ್ನೂ ವಿಚಾರಿಸಿಕೊಳ್ಳುತ್ತಿದ್ದೆ. ಕೆಲ ಪಟ್ಟಭದ್ರ ಹಿತಾಸಕ್ತಿಯುಳ್ಳ ರಾಜಕಾರಣಿಗಳು ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟವನ್ನು ಶಂಕಿಸುವ ಅಥವಾ ಅಪಮಾನಿಸುವ ರೀತಿಯಲ್ಲಿ ಮಾತನಾಡಿದಾಗ ನಾನು ಖಂಡಿಸಿದ್ದೆ ಕೂಡ.

ಅವರ 104ನೇ ಜನ್ಮದಿನದಂದು ಅವರ ಹಿತೈಷಿಗಳು, ಅಭಿಮಾನಿಗಳು ಒಂದು ವೆಬಿನಾರ್‌ ಆಯೋಜನೆ ಮಾಡಿದ್ದರು. ಆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುವ ಅವಕಾಶ ನನಗೆ ಸಿಕ್ಕಿತ್ತು. ಅವರು ಇನ್ನಷ್ಟು ದೀರ್ಘಕಾಲ ನಮ್ಮ ದೇಶದ ಜನರಿಗೆ ಮಾರ್ಗದರ್ಶನ ನೀಡಲಿ ಎಂದು ಪ್ರಾರ್ಥಿಸಿದ್ದೆ.

ಅವರು ರಾಷ್ಟ್ರದ ಜನರಿಗೆ, ವಿಶೇಷವಾಗಿ ಯುವಕರಿಗೆ, ಸಾಮಾಜಿಕ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತಾ ದೀರ್ಘಕಾಲ ಆರೋಗ್ಯಕರವಾಗಿ ಮತ್ತು ದೃಢವಾಗಿರುತ್ತಿದ್ದರು. ನಾನು ಹಂಚಿಕೊಳ್ಳಲು ಬಯಸಿದ ಸವಿನೆನಪು ಇದಾಗಿದೆ.

ಅವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಜನಪರ ಸರಕಾರವನ್ನು ತರಲು ಮತ್ತು ದೇಶದ ಜನರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಸಾಧಿಸಲು ಯುವಕರು, ವಿದ್ಯಾರ್ಥಿಗಳು ಮತ್ತು ಜನರಪರ ಗುಂಪುಗಳ ಆಂದೋಲನವನ್ನು ಸಶಕ್ತವಾಗಿ ಕಟ್ಟಲು ಬಹುವಾಗಿ ಶ್ರಮಿಸಿದರು.

ಅವರ ಅಗಲಿಕೆಗೆ ಸಮಾಜದ ಶೋಷಿತ ಸಮುದಾಯವು ಅರ್ಥಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತದೆ. ಅವರಿಗೆ ನಮ್ಮೆಲ್ಲರ ಹೃದಯಪೂರ್ವಕ ನಮನಗಳನ್ನು ಸಲ್ಲಿಸುತ್ತಾ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.


  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ 104 ವರ್ಷದ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

Tags: freedom fighterindiaIndian independence movementjustice v gopala gowdakarnatakaobituary to hs doreswamy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ತಾಂತ್ರಿಕ ಸಲಹಾ ಸಮಿತಿ 15 ಪುಟಗಳ ವರದಿ: ಲಾಕ್‌ಡೌನ್‌ ಬಗ್ಗೆ ನಾಳೆ ಸಂಪುಟ ನಿರ್ಧಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

ಜೆಡಿಎಸ್ ನಲ್ಲಿ ನಾನೇ ಒರಿಜಿನಲ್ ಎಂದಿದ್ದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

1 year ago
ಬೊಮ್ಮಾಯಿ ಸರಕಾರಕ್ಕೆ ತಿಂಗಳು

ಬೊಮ್ಮಾಯಿ ಸರಕಾರಕ್ಕೆ ತಿಂಗಳು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ