• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಾಜ್ಯದಲ್ಲಿ ನೀಗಲಿದೆ ಲಸಿಕೆ ಹಾಹಾಕಾರ, ಮೋದಿ ಕೊಟ್ಟರು ಪರಿಹಾರ: ಕುಣಿದು ಕುಪ್ಪಳಿಸಿದ ಯಡಿಯೂರಪ್ಪ ಸರಕಾರ

P K Channakrishna by P K Channakrishna
June 7, 2021
in NATION, NEWS & VIEWS, NEWS IN USE, STATE
Reading Time: 2 mins read
0
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?
914
VIEWS
FacebookTwitterWhatsuplinkedinEmail

ಜೂನ್ 21ರಿಂದಲೇ 18 ವರ್ಷ ಮೇಲ್ಪಟ್ಟ ದೇಶದ ಎಲ್ಲ ನಾಗರೀಕರಿಗೂ ಕೇಂದ್ರದಿಂದಲೇ ಉಚಿತ ವ್ಯಾಕ್ಸಿನ್

ನವದೆಹಲಿ/ಬೆಂಗಳೂರು: ಇದೇ ಜೂನ್‌ 21ರಿಂದ ದೇಶ ಪ್ರತಿಯೊಬ್ಬ ನಾಗರೀಕರಿಗೂ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಗ್ಗೆ ಇದ್ದ ಎಲ್ಲ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.

ಗುರುವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ಶತಮಾನದ ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಲಸಿಕೀಕರಣವೇ ಮಹಾಮದ್ದು. ಇದೊಂದೇ ಏಕೈಕ ಪರಿಹಾರ. ದೇಶದ 130 ಕೋಟಿ ಜನರಿಗೂ ತ್ವರಿತಗತಿಯಲ್ಲಿ ಲಸಿಕೆ ಕೊಡಲಾಗುವುದು ಎಂದು ಘೋಷಿಸಿದರು.

ಲಸಿಕೆ ತಯಾರಿಕೆ ಕಂಪನಿಗಳಿಂದ ಕೇಂದ್ರ ಸರಕಾರವೇ ನೇರವಾಗಿ ಲಸಿಕೆ ಖರೀದಿ ಮಾಡಿ, ಅದನ್ನು ಉಚಿತವಾಗಿ ಎಲ್ಲ ರಾಜ್ಯಗಳಿಗೂ ಹಂಚಿಕೆ ಮಾಡಲಿದೆ. ಅಲ್ಲದೆ, ಜೂನ್ 21ರಿಂದಲೇ ಲಸಿಕೆ ನೀಡಿಕೆ ಬಗ್ಗೆ ಪ್ರತ್ಯೇಕ ಎಸ್‌ಒಪಿಯನ್ನು ಜಾರಿಗೆ ತರಲಿದೆ ಎಂದು ಪಿಎಂ ಹೇಳಿದರು.

ಕಳೆದ ಹಲವು ದಿನಗಳಿಂದ ಲಸಿಕೆ ಕೊರತೆ ಎದುರಿಸುತ್ತ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಕರ್ನಾಟಕ ಸರಕಾರ ಮೋದಿ ಅವರ ಮಾತಿನಿಂದ ಕುಣಿದು ಕುಪ್ಪಳಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅವರ ಸಂಪುಟದ ಎಲ್ಲ ಸಚಿವರು, ಬಿಜೆಪಿ ನಾಯಕರು ಪ್ರಧಾನಿಯವರ ಫ್ರೀ ಲಸಿಕೆ ಆಫರ್‌ ಘೋಷಣೆಯನ್ನು ಭರ್ಜರಿಯಾಗಿ ಸ್ವಾಗತಿಸಿ ಅಭಿನಂದನೆ ಹೊಳೆಯನ್ನೇ ಹರಿಸುತ್ತಿದ್ದಾರೆ.

‘ಕೊರೋನಾ ಸಾಂಕ್ರಾಮಿಕದ ವಿರುದ್ಧ ದೇಶವು ಹೋರಾಡುತ್ತಿದ್ದು, ಇಂದು ಪ್ರಧಾನಿ ಮೋದಿ ಅವರು ಪ್ರಕಟಿಸಿರುವ ನಿರ್ಧಾರಗಳನ್ನು ಸ್ವಾಗತಿಸುತ್ತೇನೆ. ಕೇಂದ್ರೀಕೃತ ಉಚಿತ ಲಸಿಕೆ ವ್ಯವಸ್ಥೆಯಿಂದ ಲಸಿಕೆ ವಿತರಣೆಗೆ ಇನ್ನಷ್ಟು ವೇಗ ದೊರೆಯಲಿದೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ ಬಡವರ ಹಸಿವು ನೀಗಿಸಲಿದೆ ಎಂದು ಮುಖ್ಯಮಂತ್ರಿಗಳು ಟ್ವಿಟರ್‌ನಲ್ಲೇ ಹರ್ಷ ವ್ಯಕ್ತಪಡಿಸಿದ್ದಾರೆ.

'ಕೊರೋನಾ ಸಾಂಕ್ರಾಮಿಕದ ವಿರುದ್ಧ ದೇಶವು ಹೋರಾಡುತ್ತಿದ್ದು, ಇಂದು ಪ್ರಧಾನಿ ಶ್ರೀ @narendramodi ರವರು ಪ್ರಕಟಿಸಿರುವ ನಿರ್ಧಾರಗಳನ್ನು ಸ್ವಾಗತಿಸುತ್ತೇನೆ. ಕೇಂದ್ರೀಕೃತ ಉಚಿತ ಲಸಿಕೆ ವ್ಯವಸ್ಥೆಯಿಂದ ಲಸಿಕೆ ವಿತರಣೆಗೆ ಇನ್ನಷ್ಟು ವೇಗ ದೊರೆಯಲಿದೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ ಬಡವರ ಹಸಿವು ನೀಗಿಸಲಿದೆ' : ಸಿಎಂ @BSYBJP. https://t.co/Vyt4zB51uk

— CM of Karnataka (@CMofKarnataka) June 7, 2021

ಇನ್ನೊಂದೆಡೆ, ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಲಸಿಕೆ ಖರೀದಿಗೆ ಮುಂದಾಗಿದ್ದ ರಾಜ್ಯ ಸರಕಾರ ಇನ್ಮೇಲೆ ಲಸಿಕೆ ಖರೀದಿಗೆ ಬ್ರೇಕ್‌ ಹಾಕುವ ಸುಳಿವು ನೀಡಿದೆ. ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಕೋವಿಡ್‌ ಉಸ್ತುವಾರಿಯೂ ಆಗಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು, ಈ ಕ್ಷಣದಿಂದಲೇ ಲಸಿಕೆ ಖರೀದಿ ಬಗ್ಗೆ ಮರು ಪರಿಶೀಲನೆ ನಡೆಸುವ ಮಾತು ಹೇಳಿದ್ದಾರೆ.

ನರೇಂದ್ರ ಮೋದಿ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಎಲ್ಲ ರಾಜ್ಯಗಳಿಗೆ ಕೇಂದ್ರ ಸರಕಾರವೇ ವ್ಯಾಕ್ಸಿನ್‌ ಪೂರೈಕೆ ಮಾಡಲಿದೆ ಎಂದು ಘೋಷಣೆ ಮಾಡಿದ್ದಾರೆ. ಪ್ರಧಾನಿ ಅವರಿಗೆ ಅಭಿನಂದನೆಗಳು. ಇನ್ನು ಮುಂದೆ ರಾಜ್ಯವು ನೇರವಾಗಿ ಲಸಿಕೆ ಖರೀದಿ ಮಾಡಲ್ಲ. ಈಗಾಗಲೇ 3 ಕೋಟಿ ಲಸಿಕೆ ಖರೀದಿಗೆ ಆದೇಶ ನೀಡಲಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಇನ್ನೂ 2 ಕೋಟಿ ಲಸಿಕೆ ಪಡೆಯುವ ಬಗ್ಗೆ ಪ್ರಯತ್ನ ನಡೆದಿತ್ತು. ಈಗ ಎಲ್ಲವನ್ನೂ ಮರು ಪರಾಮರ್ಶೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಡಿಸಿಎಂ.

ಈ ತಿಂಗಳಲ್ಲಿಯೇ ಕೇಂದ್ರದಿಂದ 58 ಲಕ್ಷ‌ ಡೋಸ್‌ ಕೋವಿಡ್ ಲಸಿಕೆ ಬರಲಿದೆ. ಖಾಸಗಿ ಕ್ಷೇತ್ರದಿಂದಲೂ 20 ಲಕ್ಷ ಡೋಸ್‌ ಲಭ್ಯವಾಗುತ್ತಿದೆ. ಜೂನ್‌ ತಿಂಗಳೊಂದರಲ್ಲೇ ರಾಜ್ಯಕ್ಕೆ ಒಟ್ಟು 80 ಲಕ್ಷ ಡೋಸ್‌ ಲಸಿಕೆ ಸಿಗಲಿದೆ. ಈ ಲೆಕ್ಕದ ಪ್ರಕಾರ ಪ್ರತೀ ದಿನ 6 ಲಕ್ಷ ಜನರಿಗೆ ಲಸಿಕೆ ನೀಡಲು ಸಾಧ್ಯವಿದೆ. ಇದರೊಟ್ಟಿಗೆ ಕೇಂದ್ರವೂ ಲಸಿಕೆ ನೀಡಲಿದೆ. ಹೀಗಾಗಿ ನಮ್ಮಲ್ಲಿ ಉಂಟಾಗಿದ್ದ ಲಸಿಕೆ ಕೊರತೆ ಸಂಪೂರ್ಣ ನೀಗಲಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

ಅಲ್ಲಿಗೆ ರಾಜ್ಯದಲ್ಲಿ ಉಂಟಾಗಿದ್ದ ಲಸಿಕೆ ಹಾಹಾಕಾರಕ್ಕೆ ಪ್ರಧಾನಿ ಮೋದಿ ಪರಿಹಾರ ಸೂಚಿಸಿದಂತೆ ಆಗಿದ್ದು, ರಾಜ್ಯ ಸರಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಇನ್ನೆರಡು ವಾರಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ತಾಲೂಕು-ಜಿಲ್ಲಾ ಆಸ್ಪತ್ರೆಗಳಲ್ಲಿ ಭಾರೀ ಪ್ರಮಾಣದ ಲಸಿಕೆ ಅಭಿಯಾನಗಳು ಶುರುವಾಗಲಿವೆ. ಅಲ್ಲದೆ, ಮೈದಾನಗಳಲ್ಲಿ, ಕಾಲೇಜು ಕ್ಯಾಂಪಸ್‌ಗಳಲ್ಲಿ, ವಿವಿಗಳಲ್ಲಿ, ಖಾರ್ಖಾನೆಗಳಲ್ಲ.. ಸಾಧ್ಯವಾದಷ್ಟು ಕಡೆ ವ್ಯಾಕ್ಸಿನೇಷನ್‌ ಪರ್ವ ಆರಂಭವಾಗಲಿದೆ ಎಂದು ಉನ್ನತ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ.

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಲಸಿಕೆ ಒದಗಿಸಲು, ಕೊರೋನಾ ಸಂಕಷ್ಟದಲ್ಲಿ ನೆರವಾಗಲು ದೃಢ ಸಂಕಲ್ಪದಿಂದ ಪ್ರಧಾನಿ ಶ್ರೀ @narendramodi ಅವರ ನೇತೃತ್ವದಲ್ಲಿ ಶ್ರಮಿಸುತ್ತಿರುವ ನಮ್ಮೆಲ್ಲಾ ನಾಯಕರಿಗೆ, ಮುಂಚೂಣಿಯ ಕಾರ್ಯಕರ್ತರಿಗೆ ಕೃತಜ್ಞತೆಗಳು.#SevaHiSanghathan ಧ್ಯೇಯ ದೈನಂದಿನ ಜೀವನದಲ್ಲಿ ಪ್ರೇರಣೆಯಾಗಲಿ.#FreeVaccineForAll 🇮🇳 https://t.co/erlqdgtHE1

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) June 7, 2021

ಜಾಗತಿಕ ಟೆಂಡರ್‌ ರದ್ದಾಗಿತ್ತು

ಲಸಿಕೆ ಹಾಹಾಕಾರದ ನಡುವೆಯೇ ಜಾಗತಿಕ ಇ- ಟೆಂಡರ್‌ ಅರ್ಜಿ ಹಾಕಿಕೊಂಡಿದ್ದ ಎರಡು ಕಂಪನಿಗಳು ಕೈ ಎತ್ತಿದ್ದವು. ಸಕಾಲಕ್ಕೆ ಅಗತ್ಯ ದಾಖಲೆಗಳನ್ನು ನೀಡದ ಕಾರಣಕ್ಕೆ ರಾಜ್ಯ ಸರಕಾರವೇ ನೇರವಾಗಿ ತಯಾರಿಕಾ ಕಂಪನಿಗಳಿಂದಲೇ ಲಸಿಕೆ ಖರೀದಿಸಲು ಮುಂದಾಗಿತ್ತು. ಡಿಸಿಎಂ ಅಶ್ವತ್ಥನಾರಾಯಣ ಅವರು ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ ಮಾಡಲಾಗುವುದು ಎಂದು ಹೇಳಿದ್ದರು ಕೂಡ.

ಮೇ 15ರಂದು ಕರೆಯಲಾಗಿದ್ದ ಜಾಗತಿಕ ಟೆಂಡರ್‌ನಲ್ಲಿ ಮುಂಬಯಿ ಮೂಲದ ʼಬುಲಕ್‌ ಎಂಆರ್‌ಓ ಇಂಡಸ್ಟ್ರೀಯಲ್‌ ಸಪ್ಲೈʼ ಹಾಗೂ ಬೆಂಗಳೂರು ಮೂಲದ ʼತುಳಸಿ ಸಿಸ್ಟಮ್ಸ್‌ʼ ಕಂಪನಿಗಳು ಲಸಿಕೆ ಪೂರೈಕೆ ಮಾಡುವುದಾಗಿ ಮುಂದೆ ಬಂದು ಗ್ಲೋಬಲ್‌ ಟೆಂಡರ್‌ಗೆ ಅರ್ಜಿ ಹಾಕಿಕೊಂಡಿದ್ದವು. ಆದರೆ, ಹಣಕಾಸು ದಾಖಲೆಗಳೂ ಸೇರಿ ಮಹತ್ತ್ವದ ʼಪೂರೈಕೆ ಖಾತರಿʼ / ಲಸಿಕೆ ಬಗೆಗಿನ ʼತಾಂತ್ರಿಕ ದಾಖಲೆʼಗಳನ್ನು ಸಲ್ಲಿಸಲು ವಿಫಲವಾಗಿದ್ದವು. ರಷ್ಯಾ ಮೂಲದ ʼಸ್ಪಟ್ನಿಕ್‌ʼ ಲಸಿಕೆ ತಯಾರಿಸುವ ಮಾಸ್ಕೋದ ಗಮಲೆಯಾ ಸಂಸೋಧನಾ ಸಂಸ್ಥೆ ಜತೆ ಈ ಕಂಪನಿಗಳು ಮಾಡಿಕೊಂಡಿದ್ದ ಒಪ್ಪಂದದ ದಾಖಲೆಗಳನ್ನೂ ಸರಕಾರಕ್ಕೆ ಕೊಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರ ಮತ್ತಷ್ಟು‌ ತೀವ್ರ ಲಸಿಕೆ ಸಂಕಷ್ಟಕ್ಕೆ ಸಿಲುಕಿತ್ತು. ಹೆಚ್ಚುತ್ತಿದ್ದ ಬೇಡಿಕೆ ಪೂರೈಸಲಾಗದೆ ಲಸಿಕೆ ಸಿಗಬಹುದಾದ ಎಲ್ಲ ಕಂಪನಿಗಳ ಬಾಗಿಲನ್ನೂ ತಟ್ಟಿತ್ತು.

ಈ ಬಿಕ್ಕಟ್ಟುಗಳ ನಡುವೆ ಮೋದಿ ಅವರು ಎಲ್ಲ ರಾಜ್ಯಗಳೂ ಸೇರಿ ಕರ್ನಾಟಕಕ್ಕೂ ಸಿಹಿ ಸುದ್ದಿಯನ್ನೇ ನೀಡಿದ್ದಾರೆ. ಡಿಸೆಂಬರ್‌ ಒಳಗಾಗಿ ರಾಜ್ಯದ ಪ್ರತಿಯೊಬ್ಬ ನಾಗರೀಕನಿಗೂ ಲಸಿಕೆ ಕೊಡಲೇಬೆಂಬ ರಾಜ್ಯ ಸರಕಾರದ ಗುರಿಗೆ ಅವರು ಬಲ ತುಂಬಿದಂತೆ ಆಗಿದೆ.

The timely and prudent policy measures announced by PM @narendramodi will further speed up India's vaccination drive ensuring free & fair distribution of vaccine for all. The extension of PM Garib Kalyan Anna Yojana till Deepavali provides relief to 80 crore poor amidst pandemic.

— Dr Sudhakar K (Modi ka Parivar) (@DrSudhakar_) June 7, 2021

ಮುಂದುವರಿದು ಮೋದಿ ಹೇಳಿದ್ದೇನು?

ಸದ್ಯಕ್ಕೆ ನಮ್ಮ ದೇಶದಲ್ಲಿ ಅತ್ಯಂತ ವೇಗವಾಗಿ ಲಸಿಕೆಗಳು ತಯಾರಾಗುತ್ತಿವೆ ಎಂದಿರುವ ಮೋದಿ ಅವರು, ಇಡೀ ಜಗತ್ತೇ ನಮ್ಮನ್ನು ನೋಡಿ ನಿಬ್ಬೆರಗಾಗುತ್ತಿದೆ. ವಿಜ್ಞಾನಿಗಳು ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಂದಿದ್ದಾರೆ.

प्रधानमंत्री गरीब कल्याण अन्न योजना को अब दीपावली तक आगे बढ़ाया जाएगा। महामारी के इस समय में सरकार गरीब की हर जरूरत के साथ उसका साथी बनकर खड़ी है।

यानि नवंबर तक 80 करोड़ से अधिक देशवासियों को हर महीने तय मात्रा में मुफ्त अनाज उपलब्ध होगा। pic.twitter.com/Ospx5R80FT

— Narendra Modi (@narendramodi) June 7, 2021

ಇನ್ನು ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪ್ರಮಾಣದಲ್ಲಿ ಸೋಂಕು ತಗುಕುವ ಅಪಾವಿದೆ. ತಜ್ಞರು ಹೇಳಿದ್ದಾರೆ, ಹಾಗಂತ ಅವರ ಹೇಳಿಕೆಯಿಂದ ಜನರು ಆತಂಕಪಡುವುದು ಬೇಡ. ಈಗ ಮಕ್ಕಳಿಗಾಗಿ ವ್ಯಾಕ್ಸಿನ್ ತಯಾರಿಕೆ ಮಾಡಲಾಗುತ್ತಿದ್ದು, ಅದು ಪ್ರಯೋಗದ ಹಂತದಲ್ಲಿವೆ. ಮೂಗಿನಲ್ಲಿ ಸ್ಪ್ರೇ ಮಾಡುವ ಲಸಿಕೆಯನ್ನು ಸಂಶೋಧಿಸಲಾಗುತ್ತಿದೆ.

Tags: covid1demand for vaccinefree vaccinationindia fights coronakarnatakanarendra modivaccination
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ

ವೃತ್ತಿಪರ ಉನ್ನತ ಶಿಕ್ಷಣ ಪ್ರವೇಶಕ್ಕೆ CET ಅಂಕ ಮಾತ್ರ ಪರಿಗಣನೆ; ಅಗಸ್ಟ್ 28-29 & 30ಕ್ಕೆ ಪರೀಕ್ಷೆ

Leave a Reply Cancel reply

Your email address will not be published. Required fields are marked *

Recommended

ಮಂಜುನಾಥನೇ, ಕೋವಿಡ್ ಮಾರಿಯನ್ನು ಕೊನೆಗಾಣಿಸು..

ಮಂಜುನಾಥನೇ, ಕೋವಿಡ್ ಮಾರಿಯನ್ನು ಕೊನೆಗಾಣಿಸು..

5 years ago
HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?

ಗೃಹ ಇಲಾಖೆಯಲ್ಲಿ yst ಟ್ಯಾಕ್ಸ್ ದಂಧೆಕೋರರು; 250 ಕೋಟಿ ಕಲೆಕ್ಷನ್’ಗೆ ಬಿಡಿಎಗೆ ಟಾರ್ಗೆಟ್ ಫಿಕ್ಸ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ