• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ವೆಂಟಿಲೇಟರ್‌ ಮೇಲೆ ನಿಸ್ತೇಜವಾಗಿ ಮಲಗಿದ್ದ ಸಂಚಾರಿ ವಿಜಯ್‌ ತಲೆ ಸವರಿ ಬಿಕ್ಕಳಿಸಿದ ಜಗ್ಗೇಶ್‌ I ಬಿಕ್ಕಿಬಿಕ್ಕಿ ಅತ್ತ ನೀನಾಸಂ I ಗದ್ಗದಿತರಾದ ಡಿಸಿಎಂ

cknewsnow desk by cknewsnow desk
June 14, 2021
in ET CINEMA, STATE
Reading Time: 2 mins read
0
ವೆಂಟಿಲೇಟರ್‌ ಮೇಲೆ ನಿಸ್ತೇಜವಾಗಿ ಮಲಗಿದ್ದ ಸಂಚಾರಿ ವಿಜಯ್‌ ತಲೆ ಸವರಿ ಬಿಕ್ಕಳಿಸಿದ ಜಗ್ಗೇಶ್‌ I ಬಿಕ್ಕಿಬಿಕ್ಕಿ ಅತ್ತ ನೀನಾಸಂ I   ಗದ್ಗದಿತರಾದ ಡಿಸಿಎಂ
917
VIEWS
FacebookTwitterWhatsuplinkedinEmail

ವಿಜಯ್‌ ಮಿದುಳು ನಿಷ್ಕ್ರಿಯ I ಕನ್ನಡ ಚಿತ್ರರಂಗದ ಸಹಜ ನಟನ ಅಂಗಾಂಗ ದಾನ I ಚಿತ್ರರಂಗ ಆಘಾತ‌ I ನಿಧನ ಪ್ರಕಟಣೆ ಇಲ್ಲ

ಬೆಂಗಳೂರು: ಶನಿವಾರ ರಾತ್ರಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬನ್ನೇರುಘಟ್ಟ ರಸ್ತೆಯ ಸಾಗರ್‌ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಅವರ ಅಂಗಾಂಗಳನ್ನು ದಾನ ಮಾಡಲಾಗಿದೆ.

ವೆಂಟಿಲೇಟರ್‌ ಮೇಲೆ ಚಿಕಿತ್ಸೆ ಪಡೆಯುತ್ತ ಜೀವನ್ಮರಣ ಹೋರಾಟ ನಡೆಸುತ್ತಿರುವ ವಿಜಯ್‌ ಅವರ ಅಂಗಾಂಗಳನ್ನು ದಾನ ಮಾಡುವ ನಿರ್ಧಾರವನ್ನು ಅವರ ಕುಟುಂಬ ಸದಸ್ಯರು ಕೈಗೊಂಡಿದ್ದು, ಸದ್ಯಕ್ಕೆ ಅಪೊಲೋ ವೈದ್ಯರೂ ಈ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅವರನ್ನು ಉಳಿಸಿಕೊಳ್ಳಲು ಆಸ್ಪತ್ರೆ ವೈದ್ಯರು ನಡೆಸಿದ ಸರ್ವ ಪ್ರಯತ್ನಗಳು ಫಲಕಾರಿಯಾಗಿಲ್ಲ. ಹೀಗಾಗಿ ಕುಟುಂಬ ಸದಸ್ಯರು ಈ ನಿರ್ಧಾರ ಕಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಮಿದುಳು ಸಂಪೂರ್ಣ ನಿಷ್ಕ್ರಿಯ

ವಿಜಯ್‌ ಅವರ ಮಿದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು, ರಕ್ತದೊತ್ತಡ ನಿಯಂತ್ರಣಕ್ಕೆ ಬಂದಿಲ್ಲ. ಭಾನುವಾರ ತಡರಾತ್ರಿ ಅವರಿಗೆ ಹೃದಯಾಘಾತವೂ ಆಗಿದೆ ಎಂಯ ಮಾಹಿತಿಯನ್ನು ವೈದ್ಯರು ನೀಡಿದ್ದಾರೆ.

ಅಂಗಾಂಗ ದಾನ ಪ್ರಕ್ರಿಯೆ ಮುಗಿಯಲು ಇನ್ನೂ ಕೆಲ ಗಂಟೆಗಳೇ ಬೇಕಾಗಿದ್ದು, ಅದುವರೆಗೂ ಅವರ ನಿಧನ ವಾರ್ತೆಯನ್ನು ಪ್ರಟಿಸಲಾಗದು ಎಂದು ಆಸ್ಪತ್ರೆ ಮೂಲಗಳು ಇವೆ.

ಅಂಗಾಂಗಗಳನ್ನು ತೆಗೆಯುವ ಮುನ್ನ ಆಸ್ಪತ್ರೆಯು ವಿಜಯ್‌ ಅವರ ಕುಟುಂಬ ಸದಸ್ಯರು ಹಾಗೂ ಸರಕಾರದ ಅನುಮತಿ ಪಡೆಯಬೇಕಾಗುತ್ತಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಆಸ್ಪತ್ರೆಯಲ್ಲಿ ಈ ಕುರಿತ ಪ್ರಕ್ರಿಯೆಗಳು ಆರಂಭವಾಗಿದ್ದವು.

ವಿಜಯ್‌ ಚಿಕಿತ್ಸಾ ವೆಚ್ಚ ಭರಿಸಿದ ಡಿಸಿಎಂ

ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮುಂದೆ ಬಂದಿದ್ದಾರೆ.

ಇಂದು ಬೆಳಗ್ಗೆಯೇ ವಿಜಯ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದರು.

ವಿಜಯ್‌ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ. ಬಳಿಕ ಅವರು ಆಸ್ಪತ್ರೆಗೂ ಭೇಟಿ ನೀಡಿ ವೈದ್ಯರ ಬಳಿ ಮಾಹಿತಿ ಪಡೆದರು. ಅಲ್ಲದೆ, ಆಸ್ಪತ್ರೆಯಲ್ಲಿದ್ದ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

  • ನಾನು ಅವನಲ್ಲ…ಅವಳು ಚಿತ್ರದಲ್ಲಿ ಸಂಚಾರಿ ವಿಜಯ್

ಹಬ್ಬಿದ ಸಾವಿನ ಸುದ್ದಿ

ಇನ್ನೊಂದೆಡೆ, ಸಾಮಾಜಿಕ ಜಾಲ ತಾಣಗಳಲ್ಲಿ ಸಂಚಾರಿ ವಿಜಯ್‌ ನಿಧನರಾಗಿದ್ದಾರೆಂಬ ಸ್ಟೇಟಸ್‌ ಹಾಕಲಾಗಿದೆ. ಅಲ್ಲದೆ, ಬಹಳಷ್ಟು ಸಚಿವರು ವಿಜಯ್ ನಿಧನಕ್ಕೆ ಸಂತಾಪ ಎಂಬ ಸುದ್ದಿಗಳನ್ನು ಆಗಲೇ ಕಳಿಸಿದ್ದಾರೆ. ಅಷ್ಟೇ ಅಲ್ಲದೆ, ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು ಕೂಡ ಸಂಚಾರಿ ವಿಜಯ್‌ ನಿಧನಕ್ಕೆ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ. ಆದರೆ, ಅಂಗಾಂಗ ದಾನದ ಪ್ರಕ್ರಿಯೆ ಮುಗಿಯುವ ತನಕ ಈ ಬಗ್ಗೆ ಪ್ರಕಟಣೆ ಇಲ್ಲವೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ್ದ ಡಿಸಿಎಂ ಅಶ್ವತ್ಥನಾರಾಯಣ ಅವರು ವೆಂಟಿಲೇಟರ್‌ ಮೇಲೆ ವಿಜಯ್‌ ಉಸಿರಾಡುತ್ತಿದ್ದರು ಎಂದು ತಿಳಿಸಿದರು. ಹಿರಿಯ ನಟ ಜಗ್ಗೇಶ್‌ ಕೂಡ ಇದೇ ಮಾತನ್ನು ಹೇಳಿದರು. ವೆಂಟಿಲೇಟರ್‌ ಮೇಲೆ ಮಲಗಿದ್ದ ವಿಜಯ್‌ ಅವರನ್ನು ಕಂಡು ಜಗ್ಗೇಶ್‌ ಬಿಕ್ಕಳಿಸಿದರು. ಇನ್ನು ನಟ ನೀನಾಸಂ ಸತೀಶ್‌ ಬಿಕ್ಕಿಬಿಕ್ಕಿ ಅತ್ತರು. ಡಿಸಿಎಂ ಕೂಡ ತೀವ್ರ ಗದ್ಗದಿತರಾದರು ಎಂದು ಗೊತ್ತಾಗಿದೆ.

Tags: Appolo hospitalkannada cinema actororgan donationsamchari-vijay
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕುಲಪತಿ ಆಗಬೇಕಾದರೆ ಶುದ್ಧ ಚಾರಿತ್ರ್ಯ, ಸಂಸ್ಕಾರ ಇರಬೇಕು; ಅಪವಾದ ಇರುವವರಿಗೆ ಅವಕಾಶ ಇಲ್ಲ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಕುಲಪತಿ ಆಗಬೇಕಾದರೆ ಶುದ್ಧ ಚಾರಿತ್ರ್ಯ, ಸಂಸ್ಕಾರ ಇರಬೇಕು; ಅಪವಾದ ಇರುವವರಿಗೆ ಅವಕಾಶ ಇಲ್ಲ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

2 weeks ago
ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ