• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಬಿಜೆಪಿ ಹೈಕಮಾಂಡ್‌ ಕಿವಿಗೆ ಬಾಂಬ್‌ನಂತೆ ಬಿದ್ದ 20,000 ಕೋಟಿ ರೂ. ನೀರಾವರಿ ಟೆಂಡರ್‌

P K Channakrishna by P K Channakrishna
June 17, 2021
in POLITICS, STATE
Reading Time: 1 min read
0
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು
913
VIEWS
FacebookTwitterWhatsuplinkedinEmail

ಬಳ್ಳಾರಿ ಜಿಂದಾಲ್‌ ಭೂಮಿ ಪರಭಾರೆ ಕೇಸಿನಲ್ಲಿ ವರಿಷ್ಠರಿಗೂ ಹಣ ಹೋಗುವುದಿತ್ತಾ? I ಅಡಗೂರು ವಿಶ್ವನಾಥ್‌ ಹಚ್ಚಿದ ಕಿಡಿಗೆ ಬಿಜೆಪಿಯಲ್ಲಿ ಬೆಂಕಿಯಂಥ ಸ್ಥಿತಿ

ಬೆಂಗಳೂರು: ಬೃಹತ್‌ ನೀರಾವರಿ ಇಲಾಖೆಯಲ್ಲಿ 20,000 ಕೋಟಿ ರೂ. ಟೆಂಡರ್‌ ವ್ಯವಹಾರವನ್ನು ಹಣಕಾಸು ಇಲಾಖೆ ಕ್ಲಿಯರೆನ್ಸ್‌ ಇಲ್ಲದೆ ಅಂತಿಮಗೊಳಿಸಲಾಗಿದೆ. ಇದರಲ್ಲಿ 10% ಕಿಕ್‌ಬ್ಯಾಕ್‌ ವ್ಯವಹಾರವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ನೇರ ಪಾತ್ರವಿದೆ ಎಂದು ಬಿಜೆಪಿ ಹಿರಿಯ ನಾಯಕ ಹೆಚ್.ವಿಶ್ವನಾಥ್‌ ಮಾಡಿರುವ ಆರೋಪ ಗುರುವಾರ ಕತ್ತಲಾಗುವ ಮುನ್ನವೇ ಹೈಕಮಾಂಡ್‌ ಕಿವಿಗೆ ಬಿದ್ದಿದೆ.

ಅಲ್ಲದೆ, ಬಳ್ಳಾರಿಯಲ್ಲಿ ಜಿಂದಾಲ್‌ಗೆ 3,600 ಎಕರೆ ಪ್ರದೇಶವನ್ನು ಪರಭಾರೆ ಮಾಡುವುದರಲ್ಲೂ ಭರ್ತಿ ಭ್ರಷ್ಟಾಚಾರ ನಡೆದಿದೆ. ಹೈಕಮಾಂಡ್‌ಗೆ ಹಣ ನೀಡಬೇಕು ಎಂದು ಹೇಳುವ ಮೂಲಕ ಇಲ್ಲಿನ ಗಲೀಜನ್ನು ವರಿಷ್ಠರಿಗೂ ಮೆತ್ತಿಸುವ ಕೆಲಸ ನಡೆಯುತ್ತಿದೆ ಎಂದು ವಿಶ್ವನಾಥ್‌ ಹೇಳಿರುವ ಮಾತು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಅರುಣ್‌ ಸಿಂಗ್‌ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಶಾಸಕರ ಅಭಿಪ್ರಾಯ ಆಲಿಸುತ್ತಿದ್ದ ಸಮಯದಲ್ಲೇ ವಿಶ್ವನಾಥ್‌ ಸಿಡಿಸಿದ ಬಾಂಬ್‌ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ಹಳ್ಳಿಹಕ್ಕಿ ಹೇಳಿಕೆಗಳು ಭಿನ್ನಮತೀಯರ ಗುಂಪಿಗೆ ದೊಡ್ಡ ಲೀಡ್‌ ಕೊಟ್ಟಿದ್ದರೆ ಅತ್ತ ಸಿಎಂ ನಿಷ್ಠರ ಪಾಳೆಯದಲ್ಲಿ ಆತಂಕ ಉಂಟಾಗಿದೆ. ಜತೆಗೆ, ಮುಖ್ಯಮಂತ್ರಿ ನಿಷ್ಠರ ಗುಂಪಿನ ರೇಣುಕಾಚಾರ್ಯ ಹಾಗೂ ಎಸ್.ಆರ್.‌ವಿಶ್ವನಾಥ್‌ ವಿರುದ್ಧ ʼಕೆಲ ಶಬ್ದʼಗಳನ್ನು ಬಳಸಿ ಹಳ್ಳಿಹಕ್ಕಿ ಹರಿಹಾಯ್ದಿರುವುದು ಸ್ವತಃ ಮುಖ್ಯಮಂತ್ರಿಗೂ ತೀವ್ರ ಮುಜುಗರ ಉಂಟು ಮಾಡಿದೆ.

ಇಷ್ಟಕ್ಕೂ ವಿಶ್ವನಾಥ್‌ ಹೇಳಿದ್ದೇನು?

“ಜೆಡಿಎಸ್‌ನಲ್ಲಿ ಇದ್ದ ಕೆಟ್ಟ ಪರಿಸ್ಥಿತಿ ಈಗ ಬಿಜೆಪಿಯಲ್ಲೂ ಇದೆ. ಅಲ್ಲಿಂದ ಇಲ್ಲಿ ಬಂದರೆ, ಇಲ್ಲಿಯೂ ಅದೇ ಕುಟುಂಬ ರಾಜಕಾರಣ ಮನೆ ಮಾಡಿದೆ. ಕರ್ನಾಟಕದ ಬಿಜೆಪಿ ಘಟಕ ನರೇಂದ್ರ ಮೋದಿ ಸಾಧನೆ, ಕೆಲಸಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇವರಿಗೆಲ್ಲ ʼವ್ಯವಹಾರವೇʼ ಮುಖ್ಯವಾಗಿಬಿಟ್ಟಿದೆ. ಇನ್ನು ಯಡಿಯೂರಪ್ಪ ಅವರಿಗೆ ವಯಸ್ಸು ಸಹಕರಿಸುತ್ತಿಲ್ಲ. ಆಡಳಿತದಲ್ಲಿ ಸಿಎಂ ಕುಟುಂಬದ ಹಸ್ತಕ್ಷೇಪ ಅತಿಯಾಗಿದೆ. ಲಂಚಗುಳಿತನ, ಭ್ರಷ್ಟಾಚಾರ ಮಿತಿ ಮೀರಿಬಿಟ್ಟಿದೆ. ಮುಖ್ಯವಾಗಿ ವಿಜಯೇಂದ್ರ ಹಸ್ತಕ್ಷೇಪದಿಂದ ಎಲ್ಲರಿಗೂ ಕಷ್ಟವಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ 20,000 ಕೋಟಿ ರೂ. ಟೆಂಡರ್‌ ಫೈನಲ್‌ ಮಾಡಲಾಗಿದೆ. ಈ ಟೆಂಡರ್‌ಗೆ ಹಣಕಾಸು ಇಲಾಖೆ ಒಪ್ಪಿಗೆಯನ್ನೇ ನೀಡಿಲ್ಲ. ಅಧಿಕಾರಿಗಗಳನ್ನು ಕಡೆಗಣಿಸಲಾಗಿದೆ. ಇದೆಲ್ಲದರ ಹಿಂದೆ ವಿಜಯೇಂದ್ರ ಇದ್ದಾರೆ. 10% ಕಮೀಷನ್‌ ವ್ಯವಹಾರವಿದೆ. ಹೈಕಮಾಂಡ್‌ಗೂ ಹಣ ನೀಡಬೇಕೆಂದು ಇವರೆಲ್ಲ ಹೇಳಿಕೊಂಡು ಓಡಾಡುತ್ತಿದ್ದಾರೆ. ಇದರಿಂದ ವರಿಷ್ಠರಿಗೂ ಕೆಟ್ಟ ಹೆಸರು ಬರುತ್ತಿದೆ” ಎಂದು ವಿಶ್ವನಾಥ್‌ ಹೇಳಿದ್ದಾರೆ.

ಇದೇ ವಿಷಯವನ್ನು ಅರುಣ್‌ ಸಿಂಗ್‌ಗೂ ನೇರವಾಗಿ ಹೇಳಿದ್ದೇನೆ ಎಂದ ಅವರು ಮಾಧ್ಯಮಗಳ ಮುಂದೆಯೂ ವಿವರವಾಗಿ ಮಾತನಾಡಿದರು.

ಯಡಿಯೂರಪ್ಪ ಅವರನ್ನು ಬದಲಿಸಿ

ವೀರಶೈವ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ವಿಶ್ವನಾಥ್ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೂವರು ಶಾಸಕರಿದ್ದಾರೆ. ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್. ಈ ಮೂವರಲ್ಲಿ ಯಾರನ್ನಾದರೂ ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದರು.

ಯಡಿಯೂರಪ್ಪನವರಿಗೆ ಮೊದಲಿದ್ದ ಶಕ್ತಿ, ಸ್ಪಿರಿಟ್, ಆರೋಗ್ಯ ಈಗ ಇಲ್ಲ. ಹೀಗಾಗಿ ಕಾಮನ್ ಸೆನ್ಸ್ ಇರುವ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ಇನ್ನು, ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡುತ್ತಿರುವ ಮಠಾಧೀಶರು ಬಸವ ತತ್ತ್ವವನ್ನು ಮರೆಯಬಾರದು ಎಂದರು.

ಸ್ವಲ್ಪ ಮೆತ್ತಗಾದರಾ ಸೈನಿಕ

ಯೋಗೇಶ್ವರ್‌ ಉಸ್ತುವಾರಿ ಅರುಣ್‌ ಸಿಂಗ್‌ ಮುಂದೆ ಇದ್ದದ್ದೆಲ್ಲವನ್ನೂ ಬಿಚ್ಚಿಟ್ಟರು ಎಂದು ಅವರ ಆಪ್ತರೊಬ್ಬರು ಸಿಕೆನ್ಯೂಸ್‌ ನೌ ಜತೆ ಮಾತನಾಡುತ್ತಾ ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳ ಸರಕಾರ ಇದೆ. ರಾಮನಗರ ಜಿಲ್ಲೆಯಲ್ಲೂ ಅದರಲ್ಲೂ ಚನ್ನಪಟ್ಟಣ ಕ್ಷೇತ್ರದಲ್ಲಿ ನಾನು ಹೇಳಿದ ಕೆಲಸಗಳು ಆಗುತ್ತಿಲ್ಲ. ಆದರೆ ಜೆಡಿಎಸ್‌ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳುವ ಕೆಲಸಗಳೆಲ್ಲ ಆಗುತ್ತಿವೆ” ಎಂದು ದೂರಿದರು.

ಈ ಮಾತು ಕೇಳುತ್ತಿದ್ದಂತೆ, “ಹೇ ಸಚ್ಛಾ ಹೈ ಕ್ಯಾ” ಎಂದು ತಿರುಗಾ ಯೋಗಿಯನ್ನೇ ಪ್ರಶ್ನೆ ಮಾಡಿದ್ದಾರೆ. ಯೋಗಿ, ತಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ವಿಷಯಗಳನ್ನು ಬಿಡಿಸಿ ಬಿಡಿಸಿ ಹೇಳಿದ್ದಾರೆ ಎನ್ನಲಾಗಿದೆ.

ಫೋನ್‌ ಕದ್ದಾಲಿಕೆ ಬಾಂಬ್

ಉಳಿದಂತೆ ಭಿನ್ನರು ಸ್ಫೋಟಿಸಿದ ಇನ್ನೊಂದು ಭಾರೀ ಬಾಂಬ್‌ ಎಂದರೆ ಮೊಬೈಲ್‌ ಕರೆ ಕದ್ದಾಲಿಕೆ. ಭುನ್ನಮತೀಯರ ಗ್ಯಾಂಗ್‌ ಲೀಡರ್‌ ಎಂದೇ ಗುರುತಿಸಿಕೊಂಡಿರುವ ಅರವಿಂದ ಬೆಲ್ಲದ್‌ ತಮ್ಮ ಫೋನ್‌ ಕರೆಗಳ ಕದ್ದಾಲಿಕೆ ಆಗುತ್ತಿದೆ. ಪಕ್ಷದಲ್ಲಿಯೇ ಈ ಬಗ್ಗೆ ನನ್ನ ವಿರುದ್ಧ ದೊಡ್ಡ ಷಡ್ಯಂತ್ರ್ಯ ನಡೆಯುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.‌

ಈ ಹಿಂದಿನ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕೂಡ ಫೋನ್‌ ಕದ್ದಾಲಿಕೆ ಆರೋಪ ಬಂದು ದೊಡ್ಡ ಗದ್ದಲವಾಗಿತ್ತು. ಈಗ ಸ್ವಪಕ್ಷೀಯರಿಂದಲೇ ಸಿಎಂ ವಿರುದ್ಧ ಈ ಗಂಭೀರ ಆರೋಪ ಬಂದಿದೆ. ಜತೆಗೆ, ನನ್ನನ್ನು ಯಾರೋ ಅಪರಿಚಿತರು ಫಾಲೋ ಮಾಡುತ್ತಿದ್ದಾರೆಂದು ಬೆಲ್ಲದ್‌ ಅವರು ಕಾಣದ ವ್ಯಕ್ತಿಗಳತ್ತ ಬೆರಳು ತೋರಿಸಿದ್ದಾರೆ.

ಇವತ್ತಿನ ಮತ್ತೊಂದು ಮಹತ್ತ್ವದ ಬೆಳವಣಿಗೆ ಎಂದರೆ ನಿಗದಿಯಾಗದ್ದ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಅರುಣ್‌ ಸಿಂಗ್‌ ಭೇಟಿ ರದ್ದಾಗಿದೆ. ಬಿಜೆಪಿ ಮೂಲಗಳ ಪ್ರಕಾರ ಯತ್ನಾಳ್‌ ಭೇಟಿಗೆ ಸಿಂಗ್‌ ನಿರಾಕರಿಸಿದ್ದಾರೆ ಎನ್ನಲಾಗಿದೆ. ಹಿಂದೆ ಇದೇ ಯತ್ನಾಳ್‌ ಅವರು ಅರುಣ್‌ ಸಿಂಗ್‌ ವಿರುದ್ಧ ಹರಿಹಾಯ್ದಿದ್ದರು. ಸಿಂಗ್‌ ಮುಖ್ಯಮಂತ್ರಿಗೆ ಫೇವರ್‌ ಮಾಡುತ್ತಿದ್ದಾರೆಂದು ದೂರಿದ್ದರು. ಬಹುಶಃ ಈ ಭೇಟಿ ಕ್ಯಾನ್ಸಲ್‌ಗೆ ಹಳೆಯ ಜಿದ್ದು ಕಾರಣ ಎನ್ನಬಹುದು.

ಫೈನಲಿ, ಇವತ್ತು 10 ಶಾಸಕರನ್ನಷ್ಟೇ ಭೇಟಿಯಾಗಿದ್ದಾರೆ. ನಾಳೆ ಅಬ್ಬಾ ಎಂದರೂ 20 ಶಾಸಕರ ಅಭಿಪ್ರಾಯ ಕೇಳಬಹುದು. ಇದು ಪಕ್ಕಾ ಕಾಟಾಚಾರದ ಮಾತುಕತೆ ಎನ್ನುವುದು ಯಾರಿಗಾದರೂ ಅನಿಸುತ್ತದೆ ಎನ್ನುವುದು ವಿರೋಧಿ ಬಣದ ಗೊಣಗಾಟ. ಶುಕ್ರವಾರ ಸಂಜೆ ದಿಲ್ಲಿ ಫ್ಲೈಟ್‌ ಹತ್ತುವ ಮುನ್ನ ಅವರು ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನೂ ನಡೆಸಲಿದ್ದಾರೆ.

ಇದೆಲ್ಲ ಏನೇ ಇದ್ದರೂ ಹೈಕಮಾಂಡ್‌ ಈಗ ಬೆಚ್ಚಿಬಿದ್ದಿರುವುದು 20,000 ಕೋಟಿ ರೂ. ಟೆಂಡರ್‌ ಹಾಗೂ ಜಿಂದಾಲ್‌ಗೆ ಪರಭಾರೆ ಮಾಡುವ ಜಮೀನು, ಈ ಬಾಬ್ತುಗಳಿಂದ ಬರುವ 10% ಕಮೀಷನ್‌ನಲ್ಲಿ ವರಿಷ್ಠರಿಗೂ ಪಾಲಿದೆ ಎನ್ನುವ ಅನುಮಾನ. ಕಳಂಕ ಇದೀಗ ಬಿಜೆಪಿ ಹೈಕಮಾಂಡ್‌ಗೂ ಅಂಟಿಕೊಂಡಿದೆ.

Tags: Arun singhbjpbjp politicsbs yediyurappa by vijayendraH Vishwanathirrigation tenderkarnataka
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

Recommended

ಕೈಗಾರಿಕೆ ಸಚಿವರೇ ಜೈಲಿಗೆ ಹೋದರೂ ಪಾಠ ಕಲಿಯದ ಬಿಜೆಪಿ!!

ಕೈಗಾರಿಕೆ ಸಚಿವರೇ ಜೈಲಿಗೆ ಹೋದರೂ ಪಾಠ ಕಲಿಯದ ಬಿಜೆಪಿ!!

3 years ago
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

ದೇಶವೆಂದರೆ ಮಣ್ಣಲ್ಲ, ಮನುಷ್ಯರು; ಹಿಂದೂ ಸಂಘಟನೆಗಳಿಗೆ ಚಾಟಿ ಬೀಸಿದ ಹೆಚ್‌ಡಿಕೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ