• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಶಾಲೆ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ: ಗಂಭೀರವಾಗಿ ಪರಿಶೀಲನೆ ಮಾಡಲಿದೆ ಸರಕಾರ

cknewsnow desk by cknewsnow desk
June 22, 2021
in COVID-19, STATE
Reading Time: 2 mins read
0
ಶಾಲೆ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ  ಸಮಿತಿ: ಗಂಭೀರವಾಗಿ ಪರಿಶೀಲನೆ ಮಾಡಲಿದೆ ಸರಕಾರ
925
VIEWS
FacebookTwitterWhatsuplinkedinEmail

ಸಮ, ಬೆಸ ಮಾದರಿಯಲ್ಲಿ ತರಗತಿ ನಡೆಸಲು ಶಿಫಾರಸು: ಮೂರನೇ ಅಲೆ ಬಗ್ಗೆಯೂ ಎಚ್ಚರಿಕೆ ಕೊಟ್ಟ ತಜ್ಞರು

Lead photo: CkPhotography ಸಿಕೆಪಿ@ckphotographi

ಬೆಂಗಳೂರು: ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಆರಂಭಿಸುವುದಕ್ಕೆ ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರು, ವೈದ್ಯರ ಉನ್ನತ ಸಮಿತಿ ಸಲಹೆ ನೀಡಿದೆ.

ಕೊರೊನಾ ಎರಡನೇ ಅಲೆ ಮುಗಿದು ಮೂರನೇ ಅಲೆ ಅಪ್ಪಳಿಸಲು ಸಜ್ಜಾಗಿದೆ ಎನ್ನುವ ಸಂದರ್ಭದಲ್ಲಿಯೇ ಶಾಲೆಗಳನ್ನು ಶುರು ಮಾಡಲು ಈ ಸಮಿತಿ ಶಿಫಾರಸು ಮಾಡುವುದು ಬಹಳ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದರು.

ಮುಖ್ಯಮಂತ್ರಿ @BSYBJP ರವರು ಇಂದು ಕೋವಿಡ್-19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಸಮಿತಿಯು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತು. (1/2)#KarnatakaFightsCorona #Unite2FightCorona pic.twitter.com/J7NmMXtsxB

— CM of Karnataka (@CMofKarnataka) June 22, 2021

ತಜ್ಞರ ವರದಿಯ ಶಿಫಾರಸು

  • ಸಮ, ಬೆಸ ಮಾದರಿಯಲ್ಲಿ ಶಾಲಾ ತರಗತಿಗಳನ್ನು ಆರಂಭಿಸುವುದಕ್ಕೆ ಸಲಹೆ ನೀಡಿರುವ ತಜ್ಞರು, ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸುವುದು.
  • ಎರಡನೇ ಹಂತದಲ್ಲಿ 7ರಿಂದ 10ನೇ ತರಗತಿ, ಮೂರನೇ ಹಂತದಲ್ಲಿ 5ರಿಂದ 7ನೇ ತರಗತಿ ಆರಂಭಿಸಬೇಕು.
  • ಮಕ್ಕಳಿಗೆ ಮಾಸ್ಕ್ ಕಡ್ಡಾಯ. ಸರಕಾರವೇ ಮಾಸ್ಕ್ ನೀಡಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
  • ಕಡ್ಡಾಯವಾಗಿ ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು. ಶಾಲಾ ಆವರಣಕ್ಕೆ ಅನ್ಯರಿಗೆ ಪ್ರವೇಶ ನಿರ್ಬಂಧಿಸಬೇಕು. ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರಬೇಕು.
  • ವಾರಕ್ಕೊಮ್ಮೆ ಸ್ಥಳೀಯ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳಿಗೆ ಸರಕಾರವೇ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.
  • ಕೊರೊನಾ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ ಆವರಣ, ಸುತ್ತಮುತ್ತ ತಿನಿಸು ಮಾರಾಟವನ್ನು ನಿಷೇಧಿಸಬೇಕು.
  • ಪೋಷಕರು ಸಮ್ಮತಿಸಿದರೆ ಮಕ್ಕಳನ್ನ ಶಾಲೆಗೆ ಕರೆತರುವುದು ಬೇಡ. ಮಕ್ಕಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ.
  • ಆನ್‌ಲೈನ್ ಮತ್ತು ಆಫ್‌ಲೈನ್ ಎರಡು ಮಾದರಿಯ ಕಲಿಕೆಗೆ ಅವಕಾಶ ನೀಡಬಹುದು.
  • ಮಕ್ಕಳಿಗೆ ಸರಕಾರದಿಂದ ಪೌಷ್ಟಿಕ ಆಹಾರ ನೀಡಬೇಕು ಹಾಗೂ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡಿಸಬೇಕು. ಊಟವನ್ನ ಸ್ಥಳೀಯ ಮಟ್ಟದಲ್ಲೇ ನೀಡಬೇಕು.
  • ಶಾಲೆಗಳಲ್ಲಿ ದೈಹಿಕ ಅಂತರಕ್ಕೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಒಬ್ಬರ ವಸ್ತುಗಳು ಒಬ್ಬರು ಮುಟ್ಟದಂತೆ ನಿಗಾ ವಹಿಸಬೇಕು.
  • ದಿನದಲ್ಲಿ 2ರಿಂದ 3 ಗಂಟೆ ಮಾತ್ರ ತರಗತಿ ನಡೆಯಬೇಕು.
  • 12ರಿಂದ 18 ವರ್ಷದ ಮಕ್ಕಳಿಗೆ ಆದಷ್ಟು ಬೇಗ ಲಸಿಕೆ ನೀಡುವುದಕ್ಕೆ ಅನುಮೋದನೆ ಕೊಡುವುದು ಉತ್ತಮ.
  • ಶಿಫಾರಸು ಮಾಡಿರುವ ಎಲ್ಲ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇಲ್ಲದಿದ್ದರೆ ಮಕ್ಕಳಿಗೆ ಹೆಚ್ಚು ಅಪಾಯ ತಪ್ಪಿದ್ದಲ್ಲ.
  • ರಾಜ್ಯದಲ್ಲಿ 18 ವರ್ಷದೊಳಗಿನ 2.38 ಕೋಟಿ ಮಕ್ಕಳಿದ್ದು, ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಸೋಂಕು ಹರಡುತ್ತದೆ. ಮೂರನೇ ಅಲೆಯಲ್ಲಿ 3.40 ಲಕ್ಷ ಮಕ್ಕಳಿಗೆ ಸೋಂಕು ಹರಡುತ್ತದೆ ಎಂದು ಅಂದಾಜಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
  • *ಸುಮಾರು 6,801 ಐಸಿಯು, ಹೆಚ್​ಡಿಯು, ವೆಂಟಿಲೇಟರ್ ಬೆಡ್ 23,804 ಸಾಮಾನ್ಯ ಬೆಡ್‌ಗಳು ಬೇಕಾಗಬಹುದು. ಕೊವಿಡ್ ಕೇರ್ ಸೆಂಟರ್‌ಗಳಲ್ಲಿ 43,000 ಬೆಡ್ ಅಗತ್ಯವಿದೆ ಎಂದು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಒತ್ತಿ ಹೇಳಿದೆ.

ಶಾಲೆ ಪುನಾರಂಭದ ಬಗ್ಗೆ ಏನೂ ಹೇಳಲಾಗದು: ಡಾ.ದೇವಿಶೆಟ್ಟಿ

ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ವರಿಯಲ್ಲಿ ಕೆಲ ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಆದರೆ, ಆ ಬಗ್ಗೆ ಬಹಿರಂಗವಾಗಿ ಹೇಳಲಾರೆ. ಮುಖ್ಯಮಂತ್ರಿಗಳೇ ಮಾಹಿತಿ ನೀಡಲಿದ್ದಾರೆ ಎಂದು ಸಮಿತಿ ಅಧ್ಯಕ್ಷ ಡಾ.ದೇವಿಶೆಟ್ಟಿ ಮಾಧ್ಯಮಗಳ ಮುಂದೆ ಹೇಳಿದರು.

Tags: covid19dr devi shettykarnatakakarnataka fights coronaprimary educationschools reopenthird wave
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜಮೀರ್‌ಗೆ ಖಡಕ್‌ ವಾರ್ನಿಂಗ್‌! ಹೈಕಮಾಂಡ್‌ ಪಕ್ಷದ ನಿಷ್ಠರ ಪರ ಇರುತ್ತದೆ ಎಂದು ರಾಜ್ಯಕ್ಕೆ ಸಂದೇಶ ರವಾನಿಸಿದ ಸುರ್ಜೇವಾಲ

ಜಮೀರ್‌ಗೆ ಖಡಕ್‌ ವಾರ್ನಿಂಗ್‌! ಹೈಕಮಾಂಡ್‌ ಪಕ್ಷದ ನಿಷ್ಠರ ಪರ ಇರುತ್ತದೆ ಎಂದು ರಾಜ್ಯಕ್ಕೆ ಸಂದೇಶ ರವಾನಿಸಿದ ಸುರ್ಜೇವಾಲ

Leave a Reply Cancel reply

Your email address will not be published. Required fields are marked *

Recommended

ಗ್ರಾಮಗಳತ್ತ ನಡೆದ ಜಿಲ್ಲಾಡಳಿತ; ಐದು ತಾಲ್ಲೂಕುಗಳ ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕ್ರಮ

ಗ್ರಾಮಗಳತ್ತ ನಡೆದ ಜಿಲ್ಲಾಡಳಿತ; ಐದು ತಾಲ್ಲೂಕುಗಳ ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕ್ರಮ

4 years ago
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಬಿಜೆಪಿ ಸರಕಾರ ಕಡು ಭ್ರಷ್ಟ ಸರಕಾರ: ಸಿದ್ದರಾಮಯ್ಯ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ