• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋವಿಡ್‌ ಅಟ್ಟಹಾಸದಲ್ಲೂ ಹಳ್ಳಿಮಕ್ಕಳ ಮೊಗದಲ್ಲಿ ಮೂಡಿತು ಮಂದಹಾಸ!!

P K Channakrishna by P K Channakrishna
June 23, 2021
in CHIKKABALLAPUR, EDITORS'S PICKS
Reading Time: 2 mins read
0
ಕೋವಿಡ್‌ ಅಟ್ಟಹಾಸದಲ್ಲೂ ಹಳ್ಳಿಮಕ್ಕಳ ಮೊಗದಲ್ಲಿ ಮೂಡಿತು ಮಂದಹಾಸ!!
918
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಬಳಿಯ ಮರಸನಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಇಸ್ಕಾನ್-ಅಕ್ಷಯ ಪಾತ್ರೆಯಿಂದ ಹ್ಯಾಪಿನೇಸ್ ಕಿಟ್ ವಿತರಣೆ

ಚಿಕ್ಕಬಳ್ಳಾಪುರ: ಈಗಾಗಲೇ ರಾಜ್ಯದಲ್ಲಿ ಅನ್ನ ದಾಸೋಹದಲ್ಲಿ ಹೆಸರು ಮಾಡಿರುವ ಇಸ್ಕಾನ್ ಸಂಸ್ಥೆ ಅಕ್ಷಯ ಪಾತ್ರೆ ವತಿಯಿಂದ ತಾಲೂಕಿನ ಮರಸನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಹ್ಯಾಪಿನೇಸ್ ಕಿಟ್ʼಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಅಕ್ಷಯ ಪಾತ್ರೆ ಸಂಸ್ಥೆ ಮುಖ್ಯಸ್ಥ ಗುಣಾಕರ ರಾಮದಾಸ್‌ ಮತ್ತಿತರರು ಮಕ್ಕಳಿಗೆ ಹ್ಯಾಪಿನೇಸ್ ಕಿಟ್ʼಗಳನ್ನು ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಲತಾ ಅವರು, “ಕೋವಿಡ್‌ ಸಂಕಷ್ಟದ ಅವಧಿಯಲ್ಲಿ ಸರಕಾರೇತರ ಸಂಸ್ಥೆಗಳು ಬಡ ಮಕ್ಕಳಿಗೆ ನಾನಾ ರೀತಿಯ ಶಿಕ್ಷಣ ಪರಿಕರಗಳನ್ನು, ಆಹಾರ ಧಾನ್ಯಗಳುಳ್ಳ ಕಿಟ್‌ಗಳನ್ನು ನೀಡುತ್ತಿವೆ. ಇಸ್ಕಾನ್ ಸಂಸ್ಥೆಯ ಈ ಕಾಳಜಿ ನಿಜಕ್ಕೂ ಶ್ಲಾಘನೀಯ ಎಂದರು.

ಸೋಂಕಿನ ಸಂದರ್ಭದಲ್ಲಿ ಮಕ್ಕಳ ಪೋಷಕರು ಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ವೇಳೆಯಲ್ಲಿ ಖಾಸಗಿ ಸಂಸ್ಥೆಗಳು ಸಹಾಯಹಸ್ತ ಚಾಚುತ್ತಿವೆ. ಇದರಿಂದ ಮಕ್ಕಳಲ್ಲಿ ಓದಿನ ಬಗ್ಗೆ ಆಸಕ್ತಿ ಹೆಚ್ಚುತ್ತಿದ್ದು, ಪೋಷಕರಲ್ಲಿ ಧನ್ಯತಾ ಭಾವ ಮೂಡಿದೆ ಎಂದು ಲತಾ ಅವರು ಹೇಳಿದರು.

ಖಾಸಗಿ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಮಕ್ಕಳ ಒಳತಿಗೆ ಹೆಚ್ಚು ಗಮನ ಹರಿಸಬೇಕು. ಆ ಮೂಲಕ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದ ಅವರು, ಪತ್ರಕರ್ತ ಮರಸನಹಳ್ಳಿ ರವಿಕುಮಾರ್ ಕಾಳಜಿಯಿಂದಾಗಿ ಇಂದು 100ಕ್ಕೂ ಹೆಚ್ಚು ಮಕ್ಕಳಿಗೆ ಈ ಕಿಟ್ ಸಿಕ್ಕಂತಾಗಿದೆ ಎಂದರು  ಜಿಲ್ಲಾಧಿಕಾರಿಗಳು.

ಗ್ರಾಮೀಣ ಭಾಗದ ಮಕ್ಕಳಿಗೆ ಓದುವ ಹಂಬಲ ಹೆಚ್ಚಾಗಿರುತ್ತದೆ. ಆದರೆ, ಅವರಿಗೆ ಸೌಲಭ್ಯಗಳ ಕೊರತೆ ಇರುತ್ತದೆ. ಇಸ್ಕಾನ್‌ನಂಥ ಸಂಸ್ಥೆಗಳು ಮುಂದೆ ಬಂದು ಇಂಥ ಮಕ್ಕಳಿಗೆ ನೆರವಾಗುತ್ತಿರುವುದು ಸಂತೋಷದ ಸಂಗತಿ. ಇನ್ನಷ್ಟು ಜನ ಇಸ್ಕಾನ್‌ನಿಂದ ಪ್ರೇರಣೆ ಪಡೆದು ಹಳ್ಳಿಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಬೇಕು.

-ಆರ್.ಲತಾ / ಜಿಲ್ಲಾಧಿಕಾರಿ

ಅಕ್ಷಯ ಪಾತ್ರೆ ಮುಖ್ಯಸ್ಥ ಗುಣಾಕರ ರಾಮದಾಸ್ ಅವರು ಮಾತನಾಡಿ, “ಬಯಲು ಸೀಮೆಯ ಈ ಭಾಗದಲ್ಲಿ,  ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನೀಡುತ್ತಿರುವ ಹ್ಯಾಪಿನೇಸ್ ‌ಕಿಟ್ʼಗಳನ್ನು ಸದ್ಬಳಕೆಯಾಗಲಿ. ಯಾವುದೇ ಮಗು ಶಿಕ್ಷಣದಿಂದ ಹೊರಗುಳಿಯಬಾರದು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲರೂ ಪೌಷ್ಠಿಕ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ” ಎಂದರು.

ಕೋವಿಡ್‌ನಿಂದ ಎಲ್ಲ ಕಡೆ ಶಿಕ್ಷಣ ವ್ಯವಸ್ಥೆಗೆ ತೊಂದರೆ ಆಗಿದೆ. ಹೀಗಾಗಿ ಅಕ್ಷಯ ಪಾತ್ರೆ ವತಿಯಿಂದ ಹ್ಯಾಪಿನೆಸ್‌ ಕಿಟ್‌ಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಮಕ್ಕಳು ಈ ಕಿಟ್‌ನಲ್ಲಿರುವ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ವ್ಯಾಸಂಗ ಮಾಡಲಿ.

-ಗುಣಾಕರ ರಾಮದಾಸ್ / ಇಸ್ಕಾನ್‌ನ ಅಕ್ಷಯ ಪಾತ್ರೆ ಮುಖ್ಯಸ್ಥರು

ಇದೇ ವೇಳೆ ಪತ್ರಕರ್ತ ಮರಸನಹಳ್ಳಿ ವಿ.ರವಿಕುಮಾರ್ ಅವರು ಗುಣಾಕರ ರಾಮದಾಸ್ ಹಾಗೂ ಜಿಲ್ಲಾಧಿಕಾರಿ ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಇನ್ನಿತರೆ ಗಣ್ಯರನ್ನು ಗೌರವಿಸಿದರು.

ಮರಸನಹಳ್ಳಿಯಲ್ಲಿ ‌ನಡೆದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಹರ್ಷವರ್ಧನ್, ಶಿಕ್ಷಣ ಇಸ್ಕಾನ್ ಸಂಸ್ಥೆಯ ಪ್ರೇಮ್ ಜಿತ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ ವೆಂಕಟೇಶ್, ಸದಸ್ಯರಾದ ಬಾಬು, ವೆಂಕಟಾಚಲಪತಿ, ಸರಕಾರಿ ನೌಕರರ ಸಂಘದ ಸುನಿಲ್ ಪಿ.ಆರ್., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ನಾಗರಾಜಪ್ಪ, ಪ್ರಧಾನ ಕಾರ್ಯದರ್ಶಿ ಟಿ.ವಿ.ಶ್ರೀನಿವಾಸ್, ಖಜಾಂಚಿ ವಿಷ್ಣುವರ್ಧನ, ಕಾರ್ಯಕಾರಿ ಸಮಿತಿ ಹಾಗೂ ಮಾಧ್ಯಮ ವಕ್ತಾರ ಅಮರ್, ಸಿ.ಆರ್.ಪಿ.ವೆಂಕಟೇಶ್ ಸೇರಿದಂತೆ ಗ್ರಾಮದ ಇನ್ನಿತರೆ ಮುಖ‌ಂಡರು ಉಪಸ್ಥಿತರಿದ್ದರು.

Tags: chikkaballapuracovid19educationgovernment schoolhappiness kits for kidsiskconmarasanahallischool children
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ, ಕೂಡಲೇ ಅಡುಗೆ ಎಣ್ಣೆ ದರ ನಿಯಂತ್ರಿಸಿ ಎಂದು ಪಿಎಂ, ಸಿಎಂ, ಆಹಾರ ಸಚಿವರಿಗೆ ಪತ್ರ ಬರೆದ ಸಂಸದ ಡಿ.ಕೆ ಸುರೇಶ್

ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದ ಸಂಸದ ಡಿ.ಕೆ.ಸುರೇಶ್

Leave a Reply Cancel reply

Your email address will not be published. Required fields are marked *

Recommended

ಸ್ಥಳೀಯವಾಗಿ ಆಗುವ ತಪ್ಪುಗಳಿಂದ ಸರಕಾರಕ್ಕೆ ಮುಜಗರ; ಕರ್ತವ್ಯ ನಿರ್ವಹಿಸದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಎಚ್ಚರಿಸಿದ ಡಾ.ಕೆ.ಸುಧಾಕರ್

ಸ್ಥಳೀಯವಾಗಿ ಆಗುವ ತಪ್ಪುಗಳಿಂದ ಸರಕಾರಕ್ಕೆ ಮುಜಗರ; ಕರ್ತವ್ಯ ನಿರ್ವಹಿಸದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಎಚ್ಚರಿಸಿದ ಡಾ.ಕೆ.ಸುಧಾಕರ್

4 years ago
ರಾಷ್ಟ್ರೀಯ ಶಿಕ್ಷಣ ನೀತಿ; ಕರ್ನಾಟಕದ ವೇಗಕ್ಕೆ ಬೆರಗಾದ ಡಾ.ಕಸ್ತೂರಿ ರಂಗನ್‌, ದೆಹಲಿಯಲ್ಲಿ ನೀತಿ ಪ್ರಕಟಕ್ಕೆ ಮುನ್ನವೇ ರಾಜ್ಯದಲ್ಲಿ ಟಾಸ್ಕ್‌ಪೋರ್ಸ್‌ ರಚನೆಯಾಗಿತ್ತು!

ರಾಷ್ಟ್ರೀಯ ಶಿಕ್ಷಣ ನೀತಿ; ಕರ್ನಾಟಕದ ವೇಗಕ್ಕೆ ಬೆರಗಾದ ಡಾ.ಕಸ್ತೂರಿ ರಂಗನ್‌, ದೆಹಲಿಯಲ್ಲಿ ನೀತಿ ಪ್ರಕಟಕ್ಕೆ ಮುನ್ನವೇ ರಾಜ್ಯದಲ್ಲಿ ಟಾಸ್ಕ್‌ಪೋರ್ಸ್‌ ರಚನೆಯಾಗಿತ್ತು!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ