• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ವೈದ್ಯೋ ನಾರಾಯಣೋ ಹರಿಃ

cknewsnow desk by cknewsnow desk
July 1, 2021
in GUEST COLUMN
Reading Time: 1 min read
0
ವೈದ್ಯೋ ನಾರಾಯಣೋ ಹರಿಃ
1k
VIEWS
FacebookTwitterWhatsuplinkedinEmail

ಕೋವಿಡ್‌ ಸಂಕಷ್ಟ ಕಾಲದಲ್ಲಿ ವೈರಸ್‌ ವಿರುದ್ಧ ಜೀವದ ಹಂಗು ತೊರೆದು ಹೋರಾಡುತ್ತಿರುವ ಎಲ್ಲ ವೈದ್ಯರಿಗೂ ಪ್ರಣಾಮಗಳು

ಇಂದು ರಾಷ್ಟ್ರೀಯ ವೈದ್ಯರ ದಿನ. ತನ್ನಿಮಿತ್ತ ಸಮಸ್ತ ವೈದ್ಯಲೋಕಕ್ಕೆ ಅಕ್ಷರ ನಮನ ಸಲ್ಲಿಸಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.‌


ಕೊರೋನಾ ಕಾರಣದಿಂದ ಇಡೀ ಜಗತ್ತೇ ಕಂಗಾಲಾಗಿರುವ ಈ ಸಂದರ್ಭದಲ್ಲಿ ಎಲ್ಲರ ಪಾಲಿಗೂ ದೇವತಾ ಸ್ವರೂಪಿಗಳಾದವರು ವೈದ್ಯರು.

ವೈರಸ್ ವಿರುದ್ಧ ಸಮರ ಸಾರಲು, ಅನೇಕ ತಿಂಗಳಿನಿಂದ ಇಲ್ಲಿಯವರೆಗೂ ವೈದ್ಯರು, ಆರೋಗ್ಯ ಸಹಾಯಕರು, ಟೆಕ್ನಿಶಿಯನ್ಸ್‌, ಆಶಾ ಕಾರ್ಯಕರ್ತರು ಒಂದೇ ಒಂದು ದಿನವೂ ರಜೆ ಮಾಡದೇ ಸಾರ್ವಜನಿಕರ ಅಮೂಲ್ಯ ಜೀವನ ಉಳಿಸಲು ತಮ್ಮ ಜೀವನ ಮುಡಿಪಿಟ್ಟು ಶ್ರಮಿಸುತ್ತಿದ್ದಾರೆ.

ವೈದ್ಯ ಸಮೂಹವು ತಮ್ಮ ಹಿಂದಿರುವ ಕುಟುಂಬದ ಹಿತಾಸಕ್ತಿ ಕಡೆಗಣಿಸಿ, ಜೀವದ ಹಂಗು ತೊರೆದು ಸೋಂಕಿತರನ್ನು ಉಪಚರಿಸುತ್ತಿರುವುದು ನಿಜಕ್ಕೂ ಪುಣ್ಯದ ಕೆಲಸ. ಈ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ವೈದ್ಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ನಮ್ಮ ಆರೋಗ್ಯವನ್ನು ಉತ್ತಮಗೊಳಿಸಿ, ನಮ್ಮನ್ನು ಆರೈಕೆ ಮಾಡುವ ವೈದ್ಯರುಗಳೇ ದೈವ ಶಕ್ತಿಯನ್ನು ಪಡೆದುಕೊಂಡು ನಮ್ಮ ಕಣ್ಣೆದುರಿಗೆ ನಿಲ್ಲುವ ದೇವರು ಎಂದು ಹೇಳಬಹುದು.

ರಾಷ್ಟ್ರೀಯ ವೈದ್ಯರ ದಿನವಾದ ಇಂದು ವೈದ್ಯರಿಗೆ ಹಾಗೂ ವೈದ್ಯ ಸಮುದಾಯಕ್ಕೆ ಧನ್ಯವಾದ ಹೇಳುವ ಸುಸಂದರ್ಭದ ದಿನವಿಂದು ಎನ್ನಬಹದು.

ಏನಿದು ರಾಷ್ಟ್ರೀಯ ವೈದ್ಯರ ದಿನ?

ಹಿರಿಯ ವೈದ್ಯರೂ ಹಾಗೂ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಡಾ.ಬಿಧಾನ್‌ಚಂದ್ರ ರಾಯ್ ಅವರ ಜನ್ಮ ಮತ್ತು ಮರಣ ವಾರ್ಷಿಕೋತ್ಸವವು ಒಂದೇ ದಿನ ಬರುತ್ತದೆ. ಅಂದರೆ ಜುಲೈ 1, 1882 ರಂದು ಅವರು ಜನಿಸಿ, ಅದೇ ದಿನ ಅಂದರೆ; 1962ರ ಜುಲೈ ೧ರಂದು ಅವರು ನಿಧನರಾಗುತ್ತಾರೆ. ಈ ದಿನ ನಮ್ಮ ಜೀವನದಲ್ಲಿ ವೈದ್ಯರ ಮೌಲ್ಯವನ್ನು ಎತ್ತಿ ತೋರಿಸಲು ಮತ್ತು ಡಾ.ಬಿಧಾನ್ ಚಂದ್ರ ರಾಯ್ ಅವರಿಗೆ ಗೌರವ ಸಲ್ಲಿಸಲು 1991ರಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಕೇಂದ್ರ ಸರ್ಕಾರವು ಮಾನ್ಯತೆ ನೀಡಿ ಪ್ರತಿವರ್ಷ ಜುಲೈ 1ರಂದು ಆಚರಿಸಲು ನಿರ್ಧರಿಸಿತು.

ಡಾ.ಬಿಧಾನ್‌ಚಂದ್ರ ರಾಯ್

ಡಾ.ಬಿಧಾನ್‌ಚಂದ್ರ ರಾಯ್ ಅವರು ಅತ್ಯಂತ ಗೌರವಾನ್ವಿತ ವೈದ್ಯ ಮತ್ತು ಸ್ವಾತಂತ್ರ್ಯ ಹೋರಾಟಗಾರರೂ ಆಗಿದ್ದರು. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಕೂಡ ಆಗಿದ್ದರು. 1948ರಿಂದ 1962ರ ತನಕ ಸುಮಾರು 14 ವರ್ಷ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ಪಶ್ಚಿಮ ಬಂಗಾಳದ ಶ್ರೇಷ್ಠ ವಾಸ್ತುಶಿಲ್ಪಿ ಎಂದೂ ಪರಿಗಣಿಸಲಾಗುತ್ತದೆ. ಆ ರಾಜ್ಯದ ಐದು ನಗರಗಳನ್ನೂ ಅವರು ಸ್ಥಾಪಿಸಿದರು. ಅವುಗಳೆಂದರೆ ದುರ್ಗಾಪುರ, ಬಿಧನ್ನನಗರ, ಅಶೋಕ ನಗರ, ಕಲ್ಯಾಣಿ ಮತ್ತು ಹಬ್ರಾ. ಅವರು ಬ್ರಹ್ಮಸಮಾಜದ ಸದಸ್ಯರೂ ಆಗಿದ್ದರು. ಕೊಲ್ಕತಾದ ವೈದ್ಯಕೀಯ ಕಾಲೇಜಿನಲ್ಲಿ ಅವರು ಕೊಲ್ಕತ್ತಾ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿದ್ದರು. ಅವರ ನೆನಪಿಗಾಗಿ ಕೇಂದ್ರ ಸರ್ಕಾರವೂ ಒಂದು ಪ್ರಶಸ್ತಿ ಸ್ಥಾಪಿಸಿತ್ತು. 1928ರಲ್ಲಿ ಅವರು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸ್ಥಾಪನೆಯಲ್ಲಿ ಮತ್ತು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫೆಬ್ರವರಿ 4, 1961 ರಂದು ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಭಾರತರತ್ನʼ ನೀಡಿ ಗೌರವಿಸಲಾಯಿತು.

ಜಗತ್ತಿನ ಇತರೆ ದೇಶಗಳಲ್ಲಿ

ವಿವಿಧ ದೇಶಗಳಲ್ಲಿ ವೈದ್ಯರ ದಿನವನ್ನು ವಿವಿಧ ದಿನಾಂಕಗಳಲ್ಲಿ ಆಚರಿಸಲಾಗುತ್ತದೆ. ಮೊದಲ ಬಾರಿಗೆ ವೈದ್ಯರ ದಿನವನ್ನು 30 ಮಾರ್ಚ್ 1933ರಲ್ಲಿ ಯುಎಸ್ ರಾಜ್ಯ ಜಾರ್ಜಿಯಾದಲ್ಲಿ ಆಚರಿಸಲಾಯಿತು. ವೈದ್ಯರಿಗೆ ಕಾರ್ಡ್ ಕಳುಹಿಸುವ ಮೂಲಕ ಮತ್ತು ಅಗಲಿರುವ ವೈದ್ಯರ ಸಮಾಧಿಯ ಮೇಲೆ ಹೂವುಗಳನ್ನು ಇರಿಸುವ ಮೂಲಕ ಈ ದಿನವನ್ನು ಆಚರಿಸಲಾಗುತ್ತದೆ. ಅದೇ ದಿನ ಆಸ್ಟ್ರೇಲಿಯಾದಲ್ಲಿ ಆಚರಣೆ ಮಾಡಲಾಗುತ್ತದೆ. ಕುವೈತ್‌ನಲ್ಲಿ ಮಾರ್ಚ್ 3ರಂದು, ಬ್ರೆಝಿಲ್‌ನಲ್ಲಿ ಅಕ್ಟೋಬರ್ 18, ಕೆನಡಾದಲ್ಲಿ ಮೇ 1ರಂದು, ಅದೇ ತಿಂಗಳು 4ರಂದು ನೇಪಾಳದಲ್ಲಿ, ಕ್ಯೂಬಾದಲ್ಲಿ ಡಿಸೆಂಬರ್ 3ರಂದು ಮತ್ತು ಆಗಸ್ಟ್ 23ರಂದು ಇರಾನ್‌ ದೇಶದಲ್ಲಿ ಆಚರಿಸಲಾಗುತ್ತದೆ.

2021ರ ರಾಷ್ಟ್ರೀಯ ವೈದ್ಯರ ದಿನಾಚರಣೆ ಥೀಮ್

ಪ್ರತಿ ವರ್ಷವೂ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಹೊಸ ಹೊಸ ವಿಷಯಗಳ ಆಧಾರದ ಮೇಲೆ ಆಚರಿಸಲಾಗುತ್ತದೆ. 2021ರ ರಾಷ್ಟ್ರೀಯ ವೈದ್ಯರ ದಿನಾಚರಣೆಯ ವಿಷಯವೆಂದರೆ “”ವೈದ್ಯರು ಮತ್ತು ಕುಟುಂಬದೊಂದಿಗೆ ಭವಿಷ್ಯವನ್ನು ನಿರ್ಮಿಸುವುದು”. ಈ ಥೀಮ್ ಅನ್ನು ಪ್ರತಿ ವರ್ಷ ಭಾರತೀಯ ವೈದ್ಯಕೀಯ ಸಂಘವು ಘೋಷಿಸುತ್ತದೆ.

2021ರ ವೈದ್ಯರ ದಿನವನ್ನು ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ದ್ವಿತೀಯಕ ಆರೈಕೆ ಸೌಲಭ್ಯಗಳಲ್ಲಿ ಕೆಲಸ ಮಾಡುವ ಅಸಂಖ್ಯಾತ ವೈದ್ಯರಿಗೆ ಹಾಗೂ ವಿಶೇಷ COVID ಚಿಕಿತ್ಸಾ ಕೇಂದ್ರಗಳಲ್ಲಿ ಸಮರ್ಪಿಸಲಾಗಿದೆ. ಈ ಬಾರಿ ಪ್ರತಿಯೊಂದು ಪ್ರಯತ್ನವೂ ಒಂದು, ಎಲ್ಲಿದ್ದರೂ ಎಣಿಕೆ ಮಾಡುತ್ತದೆ. ಸಕಾರಾತ್ಮಕ ಕ್ರಮದಿಂದ ಮರಣ ಪ್ರಮಾಣವನ್ನು ನಾಟಕೀಯವಾಗಿ ಕಡಿಮೆ ಮಾಡಲು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದೆ.

ತಮ್ಮ ಅನುಕೂಲತೆಯನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗೆ ಹೆಚ್ಚು ಕಾಲವನ್ನು ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ. ವೈದ್ಯರ ನಿಷ್ಠ, ಶ್ರಮ ಹಾಗೂ ನಿಸ್ವಾರ್ಥ ಭಾವದಿಂದ ನೀಡುವ ಆರೈಕೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಅವರು ತೋರುವ ಸೇವೆ ಹಾಗೂ ಚಿಕಿತ್ಸೆಯು ರೋಗಿಗೆ ಮರುಜನ್ಮವನ್ನು ನೀಡುತ್ತದೆ.

“ವೈದ್ಯೋ ನಾರಾಯಣೋ ಹರಿಃ” ಎಂಬ ಮಾತು ಕೊರೊನಾ ಕಾಲ ಘಟ್ಟದಲ್ಲಿ ಅಕ್ಷರಶಃ ಸಾಬೀತಾಗಿದೆ. ಕಿಲ್ಲರ್‌ ಕೊರೊನಾದಿಂದ ದೇಶವಾಸಿಗಳ ಅಮೂಲ್ಯ ಜೀವ ರಕ್ಷಿಸಲು ವೈದ್ಯ ಲೋಕ ಟೊಂಕ ಕಟ್ಟಿ ನಿಂತಿದೆ. ಕೋವಿಡ್-19 ಸೋಂಕಿನ ಹಾವಳಿಯ ಈ ಸಮಯದಲ್ಲಿ ವೈದ್ಯಲೋಕದ ಪರಿಶ್ರಮ ಅಪಾರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ರೋಗದ ಆತಂಕದ ನಡುವೆಯೂ ಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾದದ್ದು. ಜನರ ಆರೋಗ್ಯ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರತಿಯೊಬ್ಬ ವೈದ್ಯರಿಗೂ ರಾಷ್ಟ್ರೀಯ ವೈದ್ಯ ದಿನಾಚರಣೆಯ ಶುಭಾಶಯಗಳು.

Bidhan Chandra Roy photo courtesy: Wikipedia & Life


ಡಾ.ಗುರುಪ್ರಸಾದ ಹವಲ್ದಾರ್

ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: Bidhan Chandra RoycoronadoctorHealthindianational doctors day 2021World
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಚಿಕ್ಕಬಳ್ಳಾಪುರ-ಕೋಲಾರ ಕೆರೆಗಳಿಗೆ ಹರಿಸುವ ತ್ಯಾಜ್ಯ ನೀರು 3ನೇ ಹಂತದ ಶುದ್ಧೀಕರಣ

ಚಿಕ್ಕಬಳ್ಳಾಪುರ-ಕೋಲಾರ ಕೆರೆಗಳಿಗೆ ಹರಿಸುವ ತ್ಯಾಜ್ಯ ನೀರು 3ನೇ ಹಂತದ ಶುದ್ಧೀಕರಣ

Leave a Reply Cancel reply

Your email address will not be published. Required fields are marked *

Recommended

ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ

ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ

5 years ago
ಅಭಿವೃದ್ಧಿಯತ್ತ ಭಾರತದ ಮಿಂಚಿನ ಓಟ; ಭಯದಿಂದ ಚಡಪಡಿಸುತ್ತಿದೆಯಾ ಚೀನಾ

ಅಭಿವೃದ್ಧಿಯತ್ತ ಭಾರತದ ಮಿಂಚಿನ ಓಟ; ಭಯದಿಂದ ಚಡಪಡಿಸುತ್ತಿದೆಯಾ ಚೀನಾ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ