• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

cknewsnow desk by cknewsnow desk
July 2, 2021
in STATE
Reading Time: 1 min read
0
ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
947
VIEWS
FacebookTwitterWhatsuplinkedinEmail


ರಾಜ್ಯವನ್ನು ಹಾಡಿ ಹೊಗಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಜೈವಿಕ ನಾವೀನ್ಯತೆ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಬಹು ಮುಖ್ಯ ಪಾತ್ರವಹಿಸಿದೆ ಮತ್ತು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಭಾರತದ ಏಕೈಕ ರಾಜ್ಯವಾಗಿದ್ದು, ಕರ್ನಾಟಕ ಭಾರತದ ಬಯೋಟೆಕ್ನಾಲಜಿಯ ರಾಜಧಾನಿಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಶುಕ್ರವಾರ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬೆಂಗಳೂರು ಹೆಲಿಕ್ಸ್ ಬಯೋಟೆಕ್ನಾಲಜಿ ಪಾರ್ಕ್‍ನ್ನು ವೀಕ್ಷಿಸಿದ ನಂತರ ಕರ್ನಾಟಕದ ಬಯೋಟೆಕ್ನಾಲಜಿ ಕ್ಷೇತ್ರದ ಉದ್ಯಮಿಗಳು ಹಾಗೂ ನವೋದ್ಯಮಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಭಾಗಗಳಲ್ಲಿ ಸ್ಥಾಪಿಸಲಾಗಿರುವ ಬಯೋಟೆಕ್ನಾಲಜಿ ಉದ್ಯಮಗಳು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಹೆಸರನ್ನು ತಂದುಕೊಟ್ಟಿವೆ ಎಂದು ಕೊಂಡಾಡಿದರು.

ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಬಯೋಟೆಕ್ನಾಲಜಿ ಕ್ಷೇತ್ರ ಭವಿಷ್ಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನನಗಿದೆ. ಈ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಸಕಲ ಸೌಲಭ್ಯಗಳನ್ನು ನೀಡಲು ಉತ್ಸುಕವಾಗಿದೆ ಎಂದು ತಿಳಿಸಿದರು.

ನವೋದ್ಯಮದ ಕ್ಷೇತ್ರಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ರೀತಿಯ ಸೌಲಭ್ಯಗಳನ್ನು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಆರ್ಥಿಕ ವ್ಯವಸ್ಥೆಯನ್ನು ಸದೃಡಗೊಳಿಸಬಲ್ಲ ಕ್ಷೇತ್ರಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯವು ಕಳೆದ ಎರಡು ದಶಕಗಳಿಂದ ಬಯೋಟೆಕ್ನಾಲಜಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಲ್ಲಿನ ಸರ್ಕಾರಿ ಸಹಭಾಗಿತ್ವದೊಂದಿಗೆ ಖಾಸಗಿ ಸಂಸ್ಥೆಗಳ ನಿರ್ವಹಣೆ ಮತ್ತು ಅದರೊಂದಿಗೆ ಶಿಕ್ಷಣ ಕ್ಷೇತ್ರವನ್ನು ಸಹ ಕೊಂಡುಯ್ಯುತ್ತಿರುವುದು ಭವಿಷ್ಯದ ವಿಜ್ಞಾನಿಗಳನ್ನು ರೂಪಿಸುವ ಕಾರ್ಯ ಸಹ ನಡೆಯುತ್ತಿರುವುದು ಉತ್ತಮ ಬೆಳವಣಿಗೆ.

ನಿರ್ಮಲಾ ಸೀತಾರಾಮನ್

ಇಂತಹ ಬೇಟಿಗಳು ಹಾಗೂ ಸಂವಾದಗಳು ಸರ್ಕಾರ ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಸಹಾಯಕವಾಗುತ್ತವೆ. ಇಂದಿನ ಸಂವಾದದಲ್ಲಿ ಚರ್ಚಿಸಲಾದ ವಿಷಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದ್ದು, ಅವುಗಳೆಲ್ಲವನ್ನು ತಾವೇ ಖುದ್ದಾಗಿ ಪರಿಶೀಲಿಸಿ ಮುಂದಿನ ಅಗತ್ಯ ಕ್ರಮಕ್ಕಾಗಿ ಅಗತ್ಯ ಬಿದ್ದಲ್ಲಿ ಉದ್ಯಮಿಗಳನ್ನು ದೆಹಲಿಗೆ ಕರೆಸಿಕೊಂಡು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಸಂವಾದದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತದ ಬಯೋಟೆಕ್ನಾಲಜಿ ಆರ್ಥಿಕತೆಯಲ್ಲಿ ಕರ್ನಾಟಕ ಒಂದು ಪ್ರಮುಖ ರಾಜ್ಯವಾಗಿದ್ದು, 2025ರ ವೇಳೆಗೆ ಶೇಕಡ 19ರ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ ಯೋಜನೆಗೆ ಕರ್ನಾಟಕ ಸರ್ಕಾರ ಸ್ಥಳೀಯ ಉದ್ಯಮಿಗಳಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು, ಇಲ್ಲಿನ ಅನೇಕ ಖಾಸಗಿ ಸಂಸ್ಥೆಗಳು ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮನ್ನಣೆಗಳಿಸಿವೆ. ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಕರ್ನಾಟಕ – 2030 ಯೋಜನೆಯನ್ನು ಸಿದ್ಧಪಡಿಸಲಾಗಿದ್ದು, ಅನೇಕ ಗುರಿಗಳನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಕೇಂದ್ರ ವಿತ್ತ ಸಚಿವಾಲಯದ ಸರ್ಕಾರದ ಕಾರ್ಯದರ್ಶಿ ತರುಣ್ ಬಜಾಜ್ ಅವರು ಮಾತನಾಡಿ, ಇಂದಿನ ಸಂವಾದದಲ್ಲಿ ನಡೆದ ವಿಷಯಗಳ ಕುರಿತು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು. ಇಂತಹ ಬೇಟಿ ಹಾಗೂ ಸಂವಾದಗಳು ಸರ್ಕಾರದ ಯೋಜನೆಗಳನ್ನು ರೂಪಿಸುವಲ್ಲಿ ಸಹಾಯಕವಾಗುತ್ತವೆ. ಉದ್ಯಮಿಗಳು ತಮ್ಮ ಯಾವುದೇ ಸಲಹೆ ಸೂಚನೆ ಹಾಗೂ ಪ್ರಶ್ನೆಗಳಿಗೆ ನೇರವಾಗಿ ತಮ್ಮನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಐಟಿ-ಬಿಟಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಅವರು ಮಾತನಾಡಿ, ಅಂತರರಾಷ್ಟ್ರೀಯ ಮಟ್ಟದ ಬಯೋಟೆಕ್ನಾಲಜಿ ಪಾರ್ಕ್ ಸ್ಥಾಪಿಸುವಲ್ಲಿ ಹಾಗೂ ರಾಜ್ಯದ ಇತರೆ ನಗರಗಳಿಗೆ ಸಹ ಅದನ್ನು ವಿಸ್ತರಿಸುವಲ್ಲಿ ರಾಜ್ಯ ಸರ್ಕಾರ ಕಳೆದ ಎರಡು ದಶಕಗಳಿಂದ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.

ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮನ್ನಣೆ ಗಳಿಸಿರುವ ಖ್ಯಾತ ಮಹಿಳಾ ಉದ್ಯಮಿ ಡಾ. ಕಿರಣ್ ಮಜುಂದಾರ್ ಶಾ ಅವರು ಸೇರಿದಂತೆ ಅನೇಕ ಉದ್ಯಮಿಗಳು ತಮ್ಮ ಕ್ಷೇತ್ರದ ಸಮಸ್ಯೆ ಹಾಗೂ ಭವಿಷ್ಯದ ಕುರಿತು ಸಂವಾದದಲ್ಲಿ ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯ ಐಟಿ-ಬಿಟಿಯ ವ್ಯವಸ್ಥಾಪಕ ನಿರ್ದೇಶಕರಾದ ಮೀನಾ ನಾಗರಾಜ್ ಅವರು ಸ್ವಾಗತ ಕೋರಿದರು. ಸಂವಾದ ಆರಂಭವಾಗುವ ಮುನ್ನಾ ಕೇಂದ್ರ ಸಚಿವೆ ಹಾಗೂ ಅಧಿಕಾರಿಗಳ ತಂಡ ರಾಜ್ಯ ಸರ್ಕಾರದ ಬೆಂಗಳೂರು ಜೈವಿಕ ನಾವೀನ್ಯತೆ ಕೇಂದ್ರ ಸೇರಿದಂತೆ ಹಲವು ಸಂಸ್ಥೆಗಳಿಗೆ ಬೇಟಿ ನೀಡಿ ವೀಕ್ಷಿಸಿದರು.

Tags: bio innovation centerbio technologydr cn ashwathnarayanfinance minister of indiaitbtkarnatakanirmala sitharaman
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Recommended

ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕ ಗ್ಯಾರಂಟಿ ಜಾಹೀರಾತು; ಸಿದ್ದು ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ

ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕ ಗ್ಯಾರಂಟಿ ಜಾಹೀರಾತು; ಸಿದ್ದು ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ

1 year ago
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ವಿಧಾನಪರಿಷತ್‌ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ; ಜೆಡಿಎಸ್‌ನಿಂದ ಬಂದ ಪುಟ್ಟಣಗೆ ಹೊಡೆಯುತ್ತಾ ಜಾಕ್‌ಪಾಟ್?

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ