• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ವಿಜ್ಞಾನ ವಿಷಯಗಳ ಬಗ್ಗೆ ಬರೆದ ಸುಧೀಂದ್ರ ಹಾಲ್ದೊಡ್ಡೇರಿ

cknewsnow desk by cknewsnow desk
July 2, 2021
in GUEST COLUMN, STATE
Reading Time: 1 min read
0
ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ವಿಜ್ಞಾನ ವಿಷಯಗಳ ಬಗ್ಗೆ ಬರೆದ ಸುಧೀಂದ್ರ ಹಾಲ್ದೊಡ್ಡೇರಿ
977
VIEWS
FacebookTwitterWhatsuplinkedinEmail

20 ವರ್ಷಗಳ ಕಾಲ ಸುಧೀಂದ್ರ ಹಾಲ್ದೊಡ್ಡೇರಿ ಅವರೊಂದಿಗೆ ಕೆಲಸ ಮಾಡಿದ, ಆತ್ಮೀಯ ಒಡನಾಟ ಹೊಂದಿದ್ದ ಕನ್ನಡದ ಕಟ್ಟಾಳು ರಾ.ನಂ.ಚಂದ್ರಶೇಖರ ಅವರು ಶುಕ್ರವಾರ (ಜುಲೈ 2) ಅಗಲಿದ ತಮ್ಮ ಚಿರಕಾಲದ ಗೆಳೆಯನನ್ನು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

ರಾ.ನಂ.ಚಂದ್ರಶೇಖರ

ಕನ್ನಡದ ಪ್ರಸಿದ್ಧ ವಿಜ್ಞಾನ ಲೇಖಕ ʼಸುಧೀಂದ್ರ ಹಾಲ್ದೊಡ್ಡೇರಿʼ ಎಂದೇ ಪ್ರಸಿದ್ಧರಾಗಿದ್ದ ಎಚ್.ಎನ್. ಸುಧೀಂದ್ರ ಪತ್ರಕರ್ತರಾಗಿ ದೊಡ್ಡ ಹೆಸರಾಗಿದ್ದ ಎಚ್.ಆರ್.ನಾಗೇಶರಾವ್ (ಸುದ್ದಿಮನೆ ನಾಗೇಶರಾವ್)-ಎಚ್.ಎನ್.ಪ್ರೇಮಾ ದಂಪತಿಯ ಹಿರಿಯ ಪುತ್ರ. ಮದ್ರಾಸಿನ ಐ.ಐ.ಟಿ.ಯಿಂದ ಥರ್ಮಲ್ ಟರ್ಬೋ ಮೆಷಿನ್ಸ್ ವಿಷಯದಲ್ಲಿ ಎಂ.ಟೆಕ್. ಪದವಿಗಳನ್ನು ಪಡೆದಿದ್ದ ಸುಧೀಂದ್ರ ಅವರು ವಿಜ್ಞಾನಿಯಾಗಿ, ವಿಜ್ಞಾನ ಬರಹಗಾರರಾಗಿ ಕನ್ನಡ ನಾಡು-ನುಡಿಗೆ ನೀಡಿದ ಕಾಣಿಕೆ ಅನನ್ಯ-ಅಪೂರ್ವ.

ವೃತ್ತಿಯಿಂದ ವಿಜ್ಞಾನಿಯಾಗಿದ್ದ ಸುಧೀಂದ್ರ ಹಾಲ್ದೊಡ್ಡೇರಿ ಅವರು, ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು. ವಿಜ್ಞಾನ ಬರಹಗಾರರಾಗಿ 2001ರಿಂದ ʼವಿಜಯ ಕರ್ನಾಟಕ’ದಲ್ಲಿ ಸತತವಾಗಿ 18 ವರ್ಷ ವಿಜ್ಞಾನ-ತಂತ್ರಜ್ಞಾನದ ಬಗ್ಗೆ ಬರೆದ ʼನೆಟ್ ನೋಟ’ ಅಂಕಣ ಭಾರತೀಯ ಭಾಷೆಗಳಲ್ಲಿ ಅಳಿಸಲಾಗದ ದಾಖಲೆ. 2500ಕ್ಕೂ ಹೆಚ್ಚಿನ ಸಂಖ್ಯೆಯ ವಿಜ್ಞಾನ ಲೇಖನಗಳನ್ನು ಕನ್ನಡದ ಬಹುತೇಕ ಎಲ್ಲ ಪತ್ರಿಕೆ/ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದ ಸುಧೀಂದ್ರ ಅವರು ಬಹುದೊಡ್ಡ ವಿಜ್ಞಾನಿಯಾಗಿದ್ದರು. ʼಡೆಕ್ಕನ್ ಹೆರಾಲ್ಡ್’ ಪತ್ರಿಕೆ ಸೇರಿದಂತೆ ಕೆಲವು ವೃತ್ತಿ ಸಂಬಂಧಿತ ಟ್ರೇಡ್ ಮ್ಯಾಗಝಿನ್‍ಗಳಿಗೆ ತಂತ್ರಜ್ಞಾನ ವಿಷಯಗಳ ಬಗ್ಗೆ ಇಂಗ್ಲಿಷ್‍ನಲ್ಲೂ ಲೇಖನಗಳನ್ನು ಬರೆದಿದ್ದಾರೆ. ʼಇಂಟರ್‍ನೆಟ್ ಎಂಬ ಮಾಯಾಜಾಲ’, ʼಬೆಳಕಿಂಡಿ’, ʼಮಕ್ಕಳಿಗಾಗಿ ಕಂಪ್ಯೂಟರ್ʼ, `ಕಂಪ್ಯೂಟರ್ ಎಲ್ಲಿಂದ ಎಲ್ಲಿಯವರೆಗೆ’, ʼಸದ್ದು, ಸಂಶೋಧನೆ ನಡೆಯುತ್ತಿದೆ!’, ʼಬಾಹ್ಯಾಕಾಶ ವೆಂಬ ಬೆರಗಿನಂಗಳ’ ಪುಸ್ತಕಗಳನ್ನು ರಚಿಸಿದ್ದಾರೆ. ಇಷ್ಟೆಲ್ಲ ಬರೆದ ಅವರು ಬಹು ಪ್ರತಿಷ್ಠಿತ ರಕ್ಷಣಾ ಸಂಸ್ಥೆ ಡಿಆರ್‌ಡಿಒದಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದರು.

ತಮ್ಮ ವೃತ್ತಿಜೀವನವನ್ನು ಆರಂಭಿಸಿದ್ದು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದಲ್ಲಿ ವೈಜ್ಞಾನಿಕ ಸಹಾಯಕರಾಗಿ (1985-86). ಆ ಎರಡು ವರ್ಷಗಳ ಅವಧಿಯಲ್ಲಿ ಅವರು ಪೃಥ್ವಿ ಕ್ಷಿಪಣಿಯ ರಾಕೆಟ್ ಮೋಟಾರ್ ಕೇಸಿಂಗ್‍ನ ಸಾಮರ್ಥ್ಯ ವಿಶ್ಲೇಷಣಾ ವಿಷಯದಲ್ಲಿ ಕೆಲಸ ಮಾಡಿದ್ದರು. ಕೇಂದ್ರ ಸರ್ಕಾರದ ʼರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ’ಯ (ಡಿ.ಆರ್.ಡಿ.ಒ.) ವಿಜ್ಞಾನಿಯಾಗಿ 1986ರಲ್ಲಿ ಆಯ್ಕೆಯಾದಾಗ ಅವರು ನೇಮಕಗೊಂಡಿದ್ದು ಎಚ್.ಎ.ಎಲ್.ನ ಸಿ.ಆರ್.ಇ. ಕಚೇರಿಗೆ. ಎಚ್‌ಎಎಲ್‍ನಲ್ಲಿ ಅವರು ವಿಮಾನಗಳ ತಯಾರಿಕೆಗೆ ಸಂಬಂಧಿಸಿದ ಹಲವು ನೆಲೆಗಳಲ್ಲಿ ಕೆಲಸ ಮಾಡಿದ್ದರು. ಹೆಲಿಕಾಪ್ಟರ್ ವಿಭಾಗದ ಚೀತಾ, ಚೇತಕ್ ಹೆಲಿಕಾಪ್ಟರ್‌ಗಳು ಸಿಯಾಚಿನ್ ಸೇರಿದಂತೆ ಅತಿ ಎತ್ತರದ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವಾಗಿನ ಸಮಸ್ಯೆಗಳ ನಿವಾರಣೆಗೆಂದು ವಾಯುಪಡೆ ರೂಪಿಸಿದ್ದ ತಾಂತ್ರಿಕ ತನಿಖಾ ಸಮಿತಿಯ ಸದಸ್ಯರಾಗಿ ದೊಡ್ಡ ಕೊಡುಗೆ ನೀಡಿದ್ದರು. ಜತೆಗೆ ʼಸ್ವದೇಶಿ ಜೆಟ್ ಟ್ರೇನರ್ ವಿಮಾನ’, ʼಹಾಕ್ ಅಡ್ವಾನ್ಸ್‍ಡ್ ಜೆಟ್ ಟ್ರೇನರ್ ವಿಮಾನ’, `ಹಿಂದೂಸ್ತಾನ್ ಟರ್ಬೋ ಟ್ರೇನರ್ ವಿಮಾನ’ಗಳ ವಾಯುಪಡೆಯ ತಾಂತ್ರಿಕ ಪರಿಶೀಲನಾ ಸಮಿತಿಗಳ ಸದಸ್ಯರಾಗಿದ್ದರು. 2008ರಲ್ಲಿ ಎಚ್.ಎ.ಎಲ್‍ನ ಎ.ಆರ್.ಡಿ.ಸಿ. ವಿಭಾಗದಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ಇಂಧನ ಪೂರೈಕೆ ವ್ಯವಸ್ಥೆ ಮತ್ತು ಪ್ರೊಪಲ್ಷನ್ ಸಮೂಹದ ಮುಖ್ಯಸ್ಥರಾಗಿ ಎಲ್.ಸಿ.ಎ. ಮತ್ತು ಐ.ಜೆ.ಟಿ. ವಿಮಾನಗಳ ಯಾಂತ್ರಿಕ ವ್ಯವಸ್ಥೆಗಳ ವಿನ್ಯಾಸ, ಮೊದಲ ಮಾದರಿ ತಯಾರಿಕೆ, ವಿಮಾನ/ಎಂಜಿನ್‍ಗಳಲ್ಲಿ ಅಳವಡಿಕೆ, ಪರೀಕ್ಷೆ, ಹಾರಾಟ ದೃಢೀಕರಣ ಕಾರ್ಯಗಳ ಜವಾಬ್ದಾರಿ ವಹಿಸಿಕೊಂಡಿದ್ದರು. ಎಚ್.ಎ.ಎಲ್ ತಯಾರಿಸಿದ ಹಲವು ಯುದ್ಧ ವಿಮಾನಗಳ ಪ್ರಮಾಣೀಕರಣಕ್ಕೆ ಅಗತ್ಯವಾದ ಪರೀಕ್ಷೆಗಳನ್ನು ಆಯೋಜಿಸುವುದರಲ್ಲೂ ತಮ್ಮ ಕಾಣಿಕೆ ನೀಡಿದ್ದಾರೆ.

ಸ್ವಯಂ ನಿವೃತ್ತಿ ಪಡೆದ ನಂತರ ಜೈನ್ ಹಾಗೂ ಅಲಯನ್ಸ್ ವಿಶ್ವವಿದ್ಯಾಲಯಗಳಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥರಾಗಿ ಇವರು ಕೆಲಸ ಮಾಡಿದರು. ನಂತರ ‘ಕ್ವೆಸ್ಟ್ ಗ್ಲೋಬಲ್ ಎಂಜಿನಿಯರಿಂಗ್’ ಕಂಪನಿಯ ರೋಲ್ಸ್-ರಾಯ್ಸ್ ಆಫ್-ಶೋರ್ ಡೆವಲಪ್‍ಮೆಂಟ್ ಸೆಂಟರ್‌ನಲ್ಲಿ ಸಲಹೆಗಾರರಾಗಿಯೂ ಕೆಲಸ ಮಾಡಿದ್ದರು. ಹಲವು ಖಾಸಗಿ ವೈಮಾಂತರಿಕ್ಷ ಕಂಪನಿಗಳಿಗೆ ಸಲಹೆಗಾರರಾಗಿದ್ದಾರೆ. ವೃತ್ತಿ ಸಂಬಂಧಿತ ಕಾರ್ಯಗಳಿಗಾಗಿ ಎರಡು ಬಾರಿ ಅಮೆರಿಕ, ಒಮ್ಮೆ ಬ್ರೆಜಿಲ್, ರಷ್ಯ ಹಾಗೂ ಜರ್ಮನಿ ದೇಶಗಳಿಗೆ ಭೇಟಿ ಇತ್ತಿದ್ದಾರೆ. ದೇಶದ ಆಯಕಟ್ಟಿನ ವಾಯುನೆಲೆಗಳಲ್ಲಿ ವಿಮಾನ / ಹೆಲಿಕಾಪ್ಟರ್ ಪರೀಕ್ಷಾರ್ಥ ಕಾರ್ಯಗಳಲ್ಲಿ ಪಾಲ್ಗೊಂಡಿದ್ದರು.

ವೃತ್ತಿ-ಪ್ರವೃತ್ತಿ ಎರಡರಲ್ಲೂ ಮಾನ್ಯತೆ ಪಡೆದ ಸಾಧಕ

ವೈಮಾನಿಕ ಕ್ಷೇತ್ರದಲ್ಲಿನ ಅವರ ಕೊಡುಗೆಗೆ 1999ರಲ್ಲಿ ʼಡಿ.ಆರ್.ಡಿ.ಒ. ಪುರಸ್ಕಾರ’, 2002ರ ‘ರಾಷ್ಟ್ರೀಯ ವಿಜ್ಞಾನ ದಿನದ ಪದಕ’, 2004 ಮತ್ತು 2005ರಲ್ಲಿ ಸತತವಾಗಿ `ಡಿ.ಆರ್.ಡಿ.ಒ. ಉತ್ತಮ ಕಾರ್ಯಪಡೆ ಪ್ರಶಸ್ತಿ’ಗಳನ್ನು ಪಡೆದಿದ್ದರು.

ವಿಜ್ಞಾನ ಸಾರಸ್ವತ ಲೋಕಕ್ಕೆ ಅವರು ನೀಡಿರುವ ಕೊಡುಗೆಗಾಗಿ ʼಕನ್ನಡ ವಿಜ್ಞಾನ ಪರಿಷತ್ತು ರಜತೋತ್ಸವ ಪ್ರಶಸ್ತಿ, ಕರ್ನಾಟಕ ಸರ್ಕಾರದ ʼವಿಷನ್ ಗ್ರೂಪ್ ಆನ್ ಸೈನ್ಸ್ ಅಂಡ್ ಟೆಕ್ನಾಲಜಿ’ಯ ಶ್ರೇಷ್ಠ ವಿಜ್ಞಾನ ಸಂವಹನಾಕಾರ ಪ್ರಶಸ್ತಿ’ ಹಾಗೂ ʼಕರ್ನಾಟಕ ಕಾರ್ಮಿಕ ಲೋಕ’ದ ಪುರಸ್ಕಾರಗಳು ದೊರೆತಿವೆ. ಅವರ ಕಣ್ಮರೆಯಾದ ದಿನ ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಅನುಪಮ ನಿರಂಜನ ಹೆಸರಿನಲ್ಲಿ ನೀಡುವ ʼಅತ್ಯತ್ತಮ ವಿಜ್ಞಾನ ಲೇಖಕʼ ಪ್ರಶಸ್ತಿ ಬಂದಿದೆ.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕ್ಯಾಡೆಮಿಯ ಸದಸ್ಯರಾಗಿ ಸುಧೀಂದ್ರ ಅವರು ಅನೇಕ ವಿಶ್ವವಿದ್ಯಾಲಯ ಹಾಗೂ ಶೈಕ್ಷಣಿಕ ಸಂಸ್ಥೆಗಳ ಅಕ್ಯಾಡೆಮಿಕ್ ಕೌನ್ಸಿಲ್ ಮತ್ತು ʼಬೋರ್ಡ್ ಆಫ್ ಸ್ಟಡೀಸ್’ನ ಸದಸ್ಯರಾಗಿ, ಶಾಲಾ-ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಗಳನ್ನು ನೀಡುವುದರ ಜತೆಗೆ ಆಕಾಶವಾಣಿ, ಎಫ್.ಎಂ.ರೇಡಿಯೊ, ದೂರದರ್ಶನ, ಖಾಸಗಿ ಟಿವಿ ಚಾನೆಲ್‍ಗಳ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅವರು ಸಲ್ಲಿಸಿದ ಸೇವೆ ಸಾರ್ಥಕವಾದ್ದು.

ಸುಧೀಂದ್ರ ಅವರ ಕುಟುಂಬದಲ್ಲಿ ಎಲ್ಲರೂ ಕಲಾಪ್ರೇಮಿಗಳು. ತಂದೆ ನಾಗೇಶರಾಯರು ಪತ್ರಕರ್ತರು, ಹಾಸ್ಯ ಲೇಖಕರು ತಾಯಿ ಪ್ರೇಮಾ ಹಾಗೂ ಮಡದಿ ಎಂ.ವಿ.ಸೌಮ್ಯ ಸುಮಾ ರಂಗೋಲಿ, ಚಿತ್ತಾರಗಳಲ್ಲಿ ಪರಿಣಿತರು, ಕಿರಿಯ ಮಗಳು ಮಾಧುರ್ಯ ಸುಧೀಂದ್ರ ಚಿತ್ರಕಲೆ, ಪೇಂಟಿಂಗ್ ಹಾಗೂ ಕಾರ್ಟೂನ್‍ಗಳ ರಚನೆಯಲ್ಲಿ ಆಸಕ್ತರು. ಇತ್ತ ಹಿರಿಯ ಮಗಳು ಮೇಘನಾ ಸುಧೀಂದ್ರ ಬರಹಗಾರಳಾಗಿ-ಅಂಕಣಕಾರಳಾಗಿ ಗುರುತಿಸಿಕೊಂಡಿದ್ದಾರೆ. ʼಜಯನಗರದ ಹುಡುಗಿ’ ಇತರೆ ಪುಸ್ತಕಗಳು ಈಗಾಗಲೇ ಪ್ರಕಟವಾಗಿದೆ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
ವಿಜ್ಞಾನವೆಂದರೆ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ವೃತ್ತಿಯಷ್ಟೇ ಆಗಿರಲಿಲ್ಲ; ಬದುಕು, ಬದ್ಧತೆ ಎಲ್ಲವೂ ಆಗಿತ್ತು

Lead photo courtesy: WhatsApp group

Tags: deffence scientistdrdohalkannada-writernalSciencesudhindra haldodderisudhindra haldodderi passes away
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಾಗೇಪಲ್ಲಿ: ಸರಕಾರಿ ಶಾಲೆಯಲ್ಲಿ ಒಂದನೇ ಕ್ಲಾಸ್ ಇಂಗ್ಲೀಷ್ ಮಾಧ್ಯಮಕ್ಕೆ ಚಾಲನೆ

ಬಾಗೇಪಲ್ಲಿ: ಸರಕಾರಿ ಶಾಲೆಯಲ್ಲಿ ಒಂದನೇ ಕ್ಲಾಸ್ ಇಂಗ್ಲೀಷ್ ಮಾಧ್ಯಮಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

Recommended

ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

4 years ago
ವೇಲುಪಿಳ್ಳೈ ಪ್ರಭಾಕರನ್ ಎಂಬ ಚಾಣಾಕ್ಷ ಹೋರಾಟಗಾರನೋ, ಭಯೋತ್ಪಾದಕನೋ ಅಥವಾ ತಮಿಳರ ಹೀರೋ; ಹಾಗಾದರೆ ಯಾರು?

ವೇಲುಪಿಳ್ಳೈ ಪ್ರಭಾಕರನ್ ಎಂಬ ಚಾಣಾಕ್ಷ ಹೋರಾಟಗಾರನೋ, ಭಯೋತ್ಪಾದಕನೋ ಅಥವಾ ತಮಿಳರ ಹೀರೋ; ಹಾಗಾದರೆ ಯಾರು?

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ