• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಅಪ್ರಾಪ್ತ ಬಾಲಕಿಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶ, ಚಿತ್ರ ರವಾನೆ; ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಇಬ್ಬರ ವಿರುದ್ದ ಪೋಕ್ಸೋ ಕೇಸ್

cknewsnow desk by cknewsnow desk
July 19, 2021
in CHIKKABALLAPUR, CRIME, EDITORS'S PICKS
Reading Time: 1 min read
0
ಅಪ್ರಾಪ್ತ ಬಾಲಕಿಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶ, ಚಿತ್ರ ರವಾನೆ; ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಇಬ್ಬರ ವಿರುದ್ದ ಪೋಕ್ಸೋ ಕೇಸ್
1.8k
VIEWS
FacebookTwitterWhatsuplinkedinEmail

by GS Bharath Gudibande

ಗುಡಿಬಂಡೆ: ಅಪ್ರಾಪ್ತ ಬಾಲಕಿಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶ, ಚಿತ್ರಗಳನ್ನು ಕಳಿಸಿದ ಆರೋಪದ ಕಾರಣಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಆತನ ಸ್ನೇಹಿತನ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಕಮ್ಮಗುಟ್ಟಹಳ್ಳಿಯ ಗ್ರಾ.ಪಂ ಸದಸ್ಯ ಹಾಗೂ ರಾಮಪಟ್ನ ಗ್ರಾಮದ ನಿವಾಸಿ ಶ್ರೀನಿವಾಸ ಹಾಗೂ ಈತನ ಗೆಳೆಯನಾದ ರಾಮಪಟ್ನದ ನಿವಾಸಿ ಕೇಶವ ಎಂಬಿಬ್ಬರ ವಿರುದ್ಧ ಎಫ್‌ಐಆರ್‌ ಹಾಕಲಾಗಿದೆ. ಇತ್ತ ಕೇಸ್‌ ಆಗುತ್ತಿದ್ದಂತೆ ಇಬ್ಬರು ಆರೋಪಿಗಳು ಎಸ್ಕೇಪ್‌ ಆಗಿದ್ದಾರೆ.

ಇವರಿಬ್ಬರೂ ಬಾಲಕಿಯ ಮೊಬೈಲ್‌ಗೆ ಅಶ್ಲೀಲ ಸಂದೇಶ, ಫೋಟೋ ಮತ್ತು ವಾಯ್ಸ್ ಮೆಸೇಜ್ʼಗಳನ್ನು ಕಳುಹಿಸಿದ್ದರು ಎಂದು ಆರೋಪ ಮಾಡಲಾಗಿದೆ.

ಬಾಲಕಿಯ ತಾಯಿಯು ಮಗಳಿಗೆ ಆನ್‌ಲೈನ್ ತರಗತಿಗೆ ಉಪಯೋಗಿಸಲು ಮೊಬೈಲ್ ನೀಡಿದ್ದರು. ಆನ್‌ಲೈನ್ ತರಗತಿಗಳು ನಡೆಯುತ್ತಿರುವುದರಿಂದ ಬಾಲಕಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಈ ಮೊಬೈಲ್‌ಗೆ ಗ್ರಾಪಂ ಸದಸ್ಯ ಶ್ರೀನಿವಾಸ್ ಅಶ್ಲೀಲ ಸಂದೇಶ, ಫೋಟೋಗಳು ಹಾಗು ವಾಯ್ಸ್ ಮೆಸೇಜುಗಳನ್ನು ಕಳುಹಿಸಿದ್ದ ಎನ್ನಲಾಗಿದೆ.

ಆರೋಪಿ ಶ್ರೀನಿವಾಸ್‌

ಬಾಲಕಿ ಮೊಬೈಲ್‌ ಸಂಖ್ಯೆ ಆರೋಪಿಗಳಿಗೆ ಸಿಕ್ಕಿದ್ದು ಹೇಗೆ?

ಗ್ರಾಪಂ ಸದಸ್ಯ ಶ್ರೀನಿವಾಸ್ ಕೆನರಾಬ್ಯಾಂಕ್‌ನ ʼಬ್ಯಾಂಕ್ ಮಿತ್ರʼ ಕೆಲಸ ಸಹ ಮಾಡುತ್ತಿದ್ದ. ಅಪ್ರಾಪ್ತ ಬಾಲಕಿಯ ಖಾತೆಗೆ ಪ್ರೋತ್ಸಾಹ ಧನ ವರ್ಗಾವಣೆ ಆಗಿತ್ತು. ಆ ಹಣವನ್ನು ಡ್ರಾ ಮಾಡಲು ಬಾಲಕಿಯ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ.

ಇದಾದ ಮೇಲೆ ಅಪ್ರಾಪ್ತೆಗೆ ಕರೆ ಮಾಡಿ ಶ್ರೀನಿವಾಸ ಅಶ್ಲೀಲವಾಗಿ ಮಾತನಾಡುತ್ತಿದ್ದ. ಮದ್ಯಪಾನ ಮಾಡಿ ಹಲ್ಲೆ ಮಾಡಲು ಪ್ರಯತ್ನಪಟ್ಟಿದ್ದ. ಇದರಿಂದ ಆ ಬಾಲಕಿಯ ಆನ್‌ಲೈನ್‌ ತರಗತಿಗಳಿಗೆ ಬಹಳ ತೊಂದರೆಯಾಗುತ್ತಿತ್ತು. ಈತನಿಗೆ ಸಹಕಾರಿಯಾಗಿ ರಾಮಪಟ್ಟಣ ಗ್ರಾಮದ ಕೇಶವ ಎಂಬಾತ ಜುಲೈ 8ರಂದು ಸಂಜೆ 7ರಿಂದ 9 ಗಂಟೆ ಸಮಯದಲ್ಲಿ ಬಾಲಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ ಆರೋಪಿಸಲಾಗಿದೆ.

ಗ್ರಾಪಂ ಸದಸ್ಯ ಶ್ರೀನಿವಾಸ್ ಜುಲೈ 8ರ ರಾತ್ರಿ 10 ಗಂಟೆಗೆ ಪದೇಪದೆ ಬಾಲಕಿಯ ಮೊಬೈಲ್‌ಗೆ ಕರೆ ಮಾಡಿದ್ದಲ್ಲದೆ, ಆ ಮೊಬೈಲ್ ವಾಟ್ಸಾಪ್‌ಗೆ ಅಶ್ಲೀಲ ಮಾತುಗಳ ವಾಯ್ಸ್‌ ಮೆಸೇಜ್‌ ಹಾಗೂ ಫೊಟೋಗಳನ್ನು ಸೆಂಡ್‌ ಮಾಡಿರುತ್ತಾನೆ. ಜತೆಗೆ, ಜುಲೈ 9ರಂದು ಬೆಳಗ್ಗೆ 7 ಗಂಟೆ ಹೊತ್ತಿನಲ್ಲಿಯೂ ಅಶ್ಲೀಲವಾಗಿ ಮೆಸೇಜ್ ಮಾಡಿರುತ್ತಾನೆ ಎಂದು ಗೊತ್ತಾಗಿದೆ.

ಇದೀಗ ಪ್ರಕರಣ ಭಾನುವಾರದಂದು ಗುಡಿಬಂಡೆ ಠಾಣೆ ಮೆಟ್ಟಿಲೇರಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಮತ್ತು ಆತನ ಸ್ನೇಹಿತ ಕೇಶವ ವಿರುದ್ಧ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾಗುವ ಮುನ್ನವೇ ಆರೋಪಿಗಳ ಪರಾರಿಯಾಗಿದ್ದು, ಅವರ ಬಂಧನಕ್ಕೆ ಗುಡಿಬಂಡೆ ಪೊಲೀಸರು ಬಲೆ ಬೀಸಿದ್ದಾರೆ.


ಪೋಕ್ಸೋ ಕೇಸ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಆರೋಪಿ ಶ್ರೀನಿವಾಸ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ.

ಲಿಂಗರಾಜು, ಆರಕ್ಷಕ ವೃತ್ತ ನಿರೀಕ್ಷಕ, ಗುಡಿಬಂಡೆ
Tags: chikkaballapurachild abusecrimegudibandepocso casewhatsapp
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

Next Post
ಜನರಿಕ್‌ ಔಷಧಿಗಳೇಕೆ ಅಗ್ಗ?

ಜನರಿಕ್‌ ಔಷಧಿಗಳೇಕೆ ಅಗ್ಗ?

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

1 year ago
ಚಿಕ್ಕಬಳ್ಳಾಪುರ ಪೊಲೀಸ್: ಕಳುವು ಮಾಲು ಮಾಲೀಕರಿಗೆ ವಾಪಸ್

ಚಿಕ್ಕಬಳ್ಳಾಪುರ ಪೊಲೀಸ್: ಕಳುವು ಮಾಲು ಮಾಲೀಕರಿಗೆ ವಾಪಸ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ