• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಕಾಲೇಜು ಉಪನ್ಯಾಸಕರ ವರ್ಗಾವಣೆ; 27ರಿಂದ ಸಾಮಾನ್ಯ ಅಭ್ಯರ್ಥಿಗಳ ಕೌನ್ಸೆಲಿಂಗ್‌

cknewsnow desk by cknewsnow desk
July 14, 2021
in NEWS IN USE, STATE
Reading Time: 1 min read
0
ತೆರಿಗೆ ಸಂಗ್ರಹದ ಲೆಕ್ಕ ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ: ಪೆಟ್ರೋಲ್,  ಡೀಸೆಲ್‌ನಿಂದ 15,861 ಕೋಟಿ ರೂ. ಟ್ಯಾಕ್ಸ್‌ ಕಲೆಕ್ಷನ್‌
942
VIEWS
FacebookTwitterWhatsuplinkedinEmail

ಜುಲೈ 16ರಂದು ತಾತ್ಕಾಲಿಕ ಆದ್ಯತಾ ಪಟ್ಟಿ ಪ್ರಕಟ; ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕರ ವರ್ಗಾವಣೆ  ಆರಂಭವಾಗಿದ್ದು,  ಜುಲೈ 16ರಂದು ಸಾಮಾನ್ಯ ಆಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜುಲೈ 27ರಿಂದ 3 ದಿನಗಳ ಕಾಲ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು.

ಈ ಬಗ್ಗೆ ಇಂದು ಹೇಳಿಕೆ ನೀಡಿರುವ ಅವರು, ಈ ವರ್ಗಾವಣೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿರುತ್ತದೆ. ಯಾವ ಹಸ್ತಕ್ಷೇಪಕ್ಕೂ ಅವಕಾಶ ಇರುವುದಿಲ್ಲ. ಗುಣಮಟ್ಟದ ಶಿಕ್ಷಣ ಕೊಡುವ ಬದ್ಧತೆ ಇಟ್ಟುಕೊಂಡು ಸರಕಾರ ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಿದೆ. ಬೋಧಕರು ತಮಗೆ ಸೂಕ್ತವೆನಿಸುವ ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಪಾರದರ್ಶಕ ಗಣಕೀಕೃತ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದರು.

ವರ್ಗಾವಣೆ ವೇಳಾಪಟ್ಟಿ

ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 14 ಆಗಿದ್ದು, ಜುಲೈ 16ರಂದು ಆದ್ಯತಾ ಪಟ್ಟಿ ಪ್ರಕಟಿಸಲಾಗುವುದು. ಜುಲೈ 20ರಂದು ವಿಶೇಷ ಪ್ರಕರಣಗಳ ಆದ್ಯತಾ ಪಟ್ಟಿ ಪ್ರಕಟವಾಗಲಿದೆ. ಜುಲೈ 22ರಂದು ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸಿಲಿಂಗ್ ಹಾಗೂ 27ರಿಂದ 29ರವರೆಗೆ ಸಾಮಾನ್ಯ ಅಭ್ಯರ್ಥಿಗಳ ಕೌನ್ಸಿಲಿಂಗ್‌ ನಡೆಯಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಮಾರ್ಗಸೂಚಿಯಲ್ಲಿ ಏನಿದೆ?

ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮ-2021 ಅನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಪ್ರಸ್ತುತ ರೂಪಿಸಿರುವ ವರ್ಗಾವಣೆ ನಿಯಮಗಳು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಐದು ವಲಯಗಳಲ್ಲಿ ವಿಂಗಡಿಸಿ ವಲಯಮುಕ್ತ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಬೆಂಗಳೂರು ಮಹಾನಗರ-ವಲಯ ಎ, ಎಲ್ಲಾ ಮಹಾನಗರ ಪಾಲಿಕೆಗಳನ್ನು ಹೊಂದಿರುವ ನಗರಗಳು (ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು)-ವಲಯ ಬಿ, ಜಿಲ್ಲಾ ಕೇಂದ್ರಗಳು ಹಾಗೂ ನಗರಸಭೆಗಳನ್ನು ಹೊಂದಿರುವ ನಗರಗಳು-ವಲಯ ಸಿ, ಎಲ್ಲಾ ತಾಲೂಕು ಕೇಂದ್ರಗಳು ಹಾಗೂ ಪುರಸಭೆಗಳನ್ನು ಹೊಂದಿರುವ ಪಟ್ಟಣಗಳು-ವಲಯ ಡಿ, ಹಾಗೂ ಉಳಿದ ಎಲ್ಲಾ ಪ್ರದೇಶಗಳು-ವಲಯ ಇ ಎಂದು ವಿಂಗಡಿಸಲಾಗಿದೆ.

ಪ್ರಸ್ತುತ ರೂಪಿಸಿರುವ ನಿಯಮಗಳಲ್ಲಿ ಬೋಧಕರ ಕಡ್ಡಾಯ ವರ್ಗಾವಣೆ ಪ್ರಮುಖ ಅಂಶವಾಗಿದ್ದು, ಒಂದೇ ವಲಯದ ಹಲವು ಕಾಲೇಜುಗಳಲ್ಲಿ ಕರ್ತವ್ಯ ಬೋಧಕರು ವಲಯದ ಜೇಷ್ಠತೆಯಲ್ಲಿ ಪದೇಪದೆ ವರ್ಗಾವಣೆಗೆ ಒಳಪಡುವುದನ್ನು ತಪ್ಪಿಸಲು, ಒಂದು ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿರುವ ಅವಧಿಯನ್ನು ಪರಿಗಣಿಸಿ, ಹೆಚ್ಚಿನ ಸೇವೆಯನ್ನು ಸಲ್ಲಿಸಿರುವ ಬೋಧಕರ ವಲಯವಾರು ಜೇಷ್ಠತಾ ಪಟ್ಟಿಯನ್ನು ಸಿದ್ದಪಡಿಸಿ ವೇಳಾಪಟ್ಟಿಯೊಂದಿಗೆ ವರ್ಗಾವಣೆ ಬಯಸುವ ಬೋಧಕರು ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್‌ ನೋಡಬಹುದು.

15% ಮಾತ್ರ ವರ್ಗಾವಣೆ

ವರ್ಗಾವಣೆ ನಿಯಮದ ಮತ್ತೊಂದು ಪ್ರಮುಖ ಅಂಶ ಎಂದರೆ; ಒಟ್ಟು ಬೋಧಕ ಹುದ್ದೆಗಳ ಪೈಕಿ ಶೇ.15ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಶೇ.9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಹಾಗೂ ಶೇ.6ರಷ್ಟು ವಿಶೇಷ ಪ್ರಕರಣಗಳಿಗೆ ಅಂದರೆ; ವಿಕಲಚೇತನರು, ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು, ವಿಧವೆಯರು, ಏಕ ಪೋಷಕರು, ವಿಚ್ಛೇಧಿತ ಮಹಿಳೆಯರು, ಪತಿ-ಪತ್ನಿ ಪ್ರಕರಣಗಳಿಗೆ ವಿಶೇಷ ಅವಕಾಶ ನಿಗದಿಪಡಿಸಲಾಗಿದೆ. ಅಲ್ಲದೆ, ಕೌನ್ಸೆಲಿಂಗ್‌ನಲ್ಲೂ ಇವರಿಗೆ ಆದ್ಯತೆ ನೀಡಲಾಗುವುದು.

ವಿಶೇಷ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಹ ಬೋಧಕರಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ನಿಯಮಾನುಸಾರ ದಾಖಲಾತಿಗಳ ಪರಿಶೀಲನೆಯ ನಂತರ ವರ್ಗಾವಣೆಯಲ್ಲಿ ನಿಯಮಗಳಲ್ಲಿ ನಿರ್ಬಂಧಿಸಿರುವ ಶೇ.6 ಮಿತಿಯೊಳಗೆ ವರ್ಗಾವಣೆ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು 2 ಹಂತಗಳಲ್ಲಿ ಕೈಗೊಳ್ಳಲಾಗುತ್ತದೆ.

ಎಲ್ಲಾ ವಲಯಗಳ ಬೋಧಕರಿಗೆ ಸಮಾನ ಅವಕಾಶ ನೀಡುವ ಸಲುವಾಗಿ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ಕ್ರಮವಾಗಿ ವಲಯ-ಬಿ ಯಿಂದ ಪ್ರಾರಂಭಿಸಿ, ನಂತರದಲ್ಲಿ ವಲಯ-ಸಿ, ವಲಯ-ಡಿ, ವಲಯ-ಇ ಮತ್ತು ವಲಯ-ಎ ಯಿಂದ ನಡೆಸಲಾಗುವುದು ಮತ್ತು ವಲಯ ಮುಕ್ತ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದ ಹಾಗೂ ಉಳಿಕೆ ರಾಜ್ಯ ವೃಂದದ ಬೋಧಕರ ಪ್ರತ್ಯೇಕ ವಲಯವಾರು ಪಟ್ಟಿಗಳನ್ನು ಪ್ರಕಟಿಸಿ, ಪಟ್ಟಿಗೆ ಸಂಬಂಧಿಸಿದಂತೆ ಬೋಧಕರಿಂದ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯವಿದ್ದಲ್ಲಿ ಆದ್ಯತಾ ಪಟ್ಟಿಯನ್ನು ಪರಿಷ್ಕರಿಸಿ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

Tags: college lecturerscollege teachers transfersdr cn ashwathnarayanhiger educationkarnataka education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸರಕಾರದ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಪಕ್ಷದ ಸಿದ್ದಾಂತ ಎಂದ ಡಿ.ಕೆ.ಶಿವಕುಮಾರ್

ಸರಕಾರದ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಪಕ್ಷದ ಸಿದ್ದಾಂತ ಎಂದ ಡಿ.ಕೆ.ಶಿವಕುಮಾರ್

Leave a Reply Cancel reply

Your email address will not be published. Required fields are marked *

Recommended

ಲಸಿಕೆ ಹಾಕಿಸಿಕೊಂಡವರೇ ಲಕ್ಕಿ!! ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಂಚೂಣಿ ಕಾರ್ಯಕರ್ತರು & ಆದ್ಯತಾ ಗುಂಪಿನ ಜನರಿಗೆ ವ್ಯಾಕ್ಸಿನೇಷನ್‌ ಆರಂಭ

ಲಸಿಕೆ ಹಾಕಿಸಿಕೊಂಡವರೇ ಲಕ್ಕಿ!! ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಂಚೂಣಿ ಕಾರ್ಯಕರ್ತರು & ಆದ್ಯತಾ ಗುಂಪಿನ ಜನರಿಗೆ ವ್ಯಾಕ್ಸಿನೇಷನ್‌ ಆರಂಭ

4 years ago
ಒಂದು ದೇಶ-ಒಂದು ಚುನಾವಣೆ: ಅಸೆಂಬ್ಲಿಯಲ್ಲಿ ಅಂಗಿ ಬಿಚ್ಚಿದ ಕಾಂಗ್ರೆಸ್‌ ಪಕ್ಷದ ಶಾಸಕ; ಫುಲ್‌ ಗರಂ ಆದ ಸ್ಪೀಕರ್‌, ಬಜೆಟ್‌ ಅಧಿವೇಶನದ ಮೊದಲ ದಿನವೇ ತೀವ್ರ ಗದ್ದಲ-ಕಾಂಗ್ರೆಸ್‌ ಧರಣಿ

ಒಂದು ದೇಶ-ಒಂದು ಚುನಾವಣೆ: ಅಸೆಂಬ್ಲಿಯಲ್ಲಿ ಅಂಗಿ ಬಿಚ್ಚಿದ ಕಾಂಗ್ರೆಸ್‌ ಪಕ್ಷದ ಶಾಸಕ; ಫುಲ್‌ ಗರಂ ಆದ ಸ್ಪೀಕರ್‌, ಬಜೆಟ್‌ ಅಧಿವೇಶನದ ಮೊದಲ ದಿನವೇ ತೀವ್ರ ಗದ್ದಲ-ಕಾಂಗ್ರೆಸ್‌ ಧರಣಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ