• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜುಲೈ- ಆಗಸ್ಟ್ ತಿಂಗಳು ಕೌಶಲ್ಯ ಮಾಸ: ಡಿಸಿಎಂ ಘೋಷಣೆ

cknewsnow desk by cknewsnow desk
July 14, 2021
in STATE
Reading Time: 1 min read
0
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ
940
VIEWS
FacebookTwitterWhatsuplinkedinEmail

5,000 ಕೋಟಿ ರೂ. ವೆಚ್ಚದಲ್ಲಿ 150 ಸರಕಾರಿ ಐಟಿಐ ಸಂಸ್ಥೆಗಳ ಪುನಶ್ಚೇತನ; ಪಿಎಂ, ಸಿಎಂ ಕೌಶಲ್ಯ ವಿಕಾಸ ಯೋಜನೆ ಅಡಿ 9,437 ಯುವಕರಿಗೆ ಉದ್ಯೋಗ

ಬೆಂಗಳೂರು: ಅಂತಾರಾಷ್ಟ್ರೀಯ ಯುವ ಕೌಶಲ್ಯ ದಿನ ನಿಮಿತ್ತ ನಾಳೆ (ಗುರುವಾರ) ರಾಜ್ಯವ್ಯಾಪಿ ಒಂದು ತಿಂಗಳ ಕಾಲ ʼಕೌಶಲ್ಯ ಮಾಸʼಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತಾ ಖಾತೆ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ʼಅಂತಾರಾಷ್ಟ್ರೀಯ ಕೌಶಲ್ಯ ದಿನʼ ನಿಮಿತ್ತ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಸರಕಾರ ಕ್ರಮ ವಹಿಸಿದೆ ಎಂದರು.

ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಹತ್ತು ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ (ಸಿ.ಎಂ.ಕೆ.ಕೆ.ವೈ) ಅಡಿಯಲ್ಲಿ ರಾಜ್ಯದ ನಿರುದ್ಯೋಗಿ ಯುವಜನರಿಗೆ ಅಲ್ಪಾವಧಿ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, 2019ರ ಜುಲೈನಿಂದ ಈವರೆಗೆ 1,19,045 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 57,833 ಅಭ್ಯರ್ಥಿಗಳ ತರಬೇತಿ ಪೂರ್ಣಗೊಂಡಿದ್ದು, 7,876 ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಸಿಕ್ಕಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ (ಪಿ.ಎಂ.ಕೆ.ವಿ.ವೈ) ಅಡಿಯಲ್ಲಿಯೂ ರಾಜ್ಯದಲ್ಲಿ ಒಟ್ಟು 25,000 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 16,375 ಅಭ್ಯರ್ಥಿಗಳು ತರಬೇತಿ ಪೂರ್ಣಗೊಳಿಸಿದ್ದಾರೆ. 1,561 ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಹಾಗೂ ಜೀವನೋಪಾಯ ಒದಗಿಸಲಾಗಿದೆ ಎಂದು ಡಿಸಿಎಂ ಹೇಳಿದರು.

ಇದನ್ನು ಮತ್ತೂ ಪರಿಣಾಮಕಾರಿಯಾಗಿ ಮುಂದುವರಿಸುವ ಸಲುವಾಗಿ ಕೌಶಲ್ಯತೆ ಮತ್ತು ಉತ್ತಮ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಕೌಶಲ್ಯ ಮಾಸದ ಅಭಿಯಾನ ಕೈಗೊಳ್ಳಲಾಗಿದೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಇವೆರಡೂ ಪೂರಕವಾಗಿರುವ ಕಾರಣಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

150 ಐಟಿಐಗಳಿಗೆ ಪುನಶ್ಚೇತನ

ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ಎಲ್ಲ ಕ್ಷೇತ್ರಗಳಿಗೂ ಒದಗಿಸುವ ಉದ್ದೇಶದಿಂದ ರಾಜ್ಯದ 150 ಸರಕಾರಿ ಐಟಿಐ ಸಂಸ್ಥೆಗಳನ್ನೂ 5,000 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಿ ಮೇಲ್ದರ್ಜೆಗೇರಿಸಲು ʼಉದ್ಯೋಗʼ ಎನ್ನುವ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.

ಈ ಉದ್ದೇಶಕ್ಕಾಗಿ ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್‌ ಸೇರಿ ಇಪ್ಪತ್ತು ಖಾಸಗಿ ಕಂಪನಿಗಳ ಜತೆ ರಾಜ್ಯ ಸರಕಾರ ಒಪ್ಪಂದ ಮಾಡಿಕೊಂಡಿದೆ. ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಸೇರಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಹಳ ಹಿಂದೆಯೇ ಸ್ಥಾಪನೆಗೊಂಡ ಐಟಿಐ ಸಂಸ್ಥೆಗಳು ರಾಜ್ಯದ ವಿವಿಧ ಅಭಿವೃದ್ಧಿಪರ ಕ್ಷೇತ್ರಗಳಿಗೆ ಮಾನವ ಸಂಪನ್ಮೂಲವನ್ನು ಒದಗಿಸುತ್ತಿವೆ ನಿಜ. ಆದರೆ, ಅಲ್ಲಿಂದ ಹಳೆಯ ಪಠ್ಯ ಓದಿದ ಪ್ರತಿಭೆಗಳು ಹೊರಬರುತ್ತಿವೆ. ಹೀಗಾಗಿ ಪ್ರಸಕ್ತ ಕಾಲದ ಜಾಗತಿಕ ಕೈಗಾರಿಕಾ ಅಗತ್ಯಗಳು ಹಾಗೂ ಕೃಷಿ, ಕೈಗಾರಿಕೆ, ಸೇವೆ, ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ನುರಿತ ಮಾನವ ಸಂಪನ್ಮೂಲವನ್ನು ಒದಗಿಸಲು ಇಷ್ಟೂ ಐಟಿಐಗಳಿಗೆ ಕಾಯಕಲ್ಪ ನೀಡಲಾಗುವುದು ಎಂದು ಅವರು ಹೇಳಿದರು.

ಐಟಿಐಗಳಲ್ಲಿ 150 ಹೊಸ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು ಹಾಗೂ 75 ಹಳೆಯ ಲ್ಯಾಬ್‌ಗಳಿದ್ದು, ಅವುಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇನ್ನು 75 ಕಡೆ ಲ್ಯಾಬ್‌ಗಳು ಇಲ್ಲ, ಅಂಥ ಕಡೆ ಲ್ಯಾಬ್‌ಗಳನ್ನು ಸ್ಥಾಪನೆ ಮಾಡಲಾಗುವುದು. ಎಂದು ಡಿಸಿಎಂ ಮಾಹಿತಿ ನೀಡಿದರು.

ರಾಷ್ಟ್ರೀಯ ಕುಶಲತೆಯ ಮಾನದಂಡಕ್ಕೆ ಅನುಗುಣವಾಗಿ 4.0 ಸೂಚ್ಯಂಕಕ್ಕೆ ಅನುಸಂಧಾನ ಮಾಡುವ ನಿಟ್ಟಿನಲ್ಲಿ ಐಟಿಐಗಳನ್ನು ಸರ್ವ ರೀತಿಯಲ್ಲೂ ಅಭಿವೃದ್ಧಿಪಡಿಸಲಾಗುವುದು. ಈ ಗುರಿ ಈಡೇರಿಕೆಗೆ ಟಾಟಾ ಟೆಕ್ನಾಲಜೀಸ್‌ ಸೇರಿ ಇಪ್ಪತ್ತು ಖಾಸಗಿ ಕಂಪನಿಗಳ ಸರಕಾರ ಒಪ್ಪಂದ ಮಾಡಿಕೊಂಡಿದೆ ಎಂದು ಡಿಸಿಎಂ ಹೇಳಿದರು.

ತರಬೇತಿ ಒಪ್ಪಂದಗಳು

ಐಟಿಐ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವವರಿಗೆ ಉದ್ಯೋಗ ಕಾಯಂ ಎಂಬ ಮಾತನ್ನು ಸರಕಾರ ಸತ್ಯ ಮಾಡಲಿದೆ. ಅದೇ ರೀತಿ ಕೌಶಲ್ಯ ತರಬೇತಿಗೂ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರ ದೊಡ್ಡ ದೊಡ್ಡ ಕೈಗಾರಿಕೆಗಳ ಜತೆ ಕೈಜೋಡಿಸಿ ತರಬೇತಿ ಕೊಡಿಸಲಾಗುವುದು. ಇದಕ್ಕೆ ಸಂಬಂಧಿಸಿ ನಾಳೆ (ಗುರುವಾರ) ಹತ್ತಾರು ಕಂಪನಿಗಳ ಜತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಪ್ಪಂದಗಳು ಏರ್ಪಡಲಿವೆ ಎಂದು ಅವರು ತಿಳಿಸಿದರು.

ಉದ್ಯೋಗ ಮೇಳ

ಕೋವಿಡ್‌ ಹಿನ್ನೆಲೆಯಲ್ಲಿ ಆನ್‌ಲೈನ್‌ ಜಾಬ್‌ ಮೇಳಗಳನ್ನು ವರ್ಷವಿಡೀ ಮಾಡಲು ನಿಶ್ಚಯ ಮಾಡಲಾಗಿದೆ. ಈ ಮೂಲಕ ನಿರಂತರವಾಗಿ ಉದ್ಯೋಗಾವಶಗಳನ್ನು ಸೃಷ್ಟಿ ಮಾಡಲಾಗುತ್ತದೆ. ಇದಕ್ಕೂ ಸಿಎಂ ಅವರು ಚಾಲನೆ ನೀಡಲಿದ್ದಾರೆ ಎಂದು ಇದೇ ವೇಳೆ ಡಿಸಿಎಂ ತಿಳಿಸಿದರು.

ರಾಜ್ಯದಲ್ಲಿ ಹೊಸದಾಗಿ ಇನ್ನೂ ನಾಲ್ಕು ಜಿಟಿಟಿಸಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜಿಟಿಡಟಿಸಿಗಳ ಸಂಖ್ಯೆಯನ್ನು 30ಕ್ಕೆ ಏರಿಸಲು ನಿರ್ಧರಿಸಲಾಗಿದೆ ಎಂದರು ಅವರು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆ, ನಿಗಮಗಳನ್ನು ಒಂದೇ ಸೂರಿನಡಿ ತರುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮತ್ತು ಯುವಜನತೆಗೆ ಇಲಾಖೆಗೆ ಸಂಬಂಧಿಸಿದ ಮಾಹಿತಿ, ಒಂದೇ ಕಚೇರಿಯಲ್ಲಿ ಲಭ್ಯವಾಗುವಂತೆ ರಾಮನಗರ ಜಿಲ್ಲೆಯ ರಾಮನಗರದಲ್ಲಿ ಸ್ಕಿಲ್ ಹಬ್ ಪ್ರಾರಂಭಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.
‌
ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್‌, ಉದ್ಯೋಗ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಹರೀಶ್‌, ಕೌಶಲ್ಯ ಕರ್ನಾಟಕದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಜೀವನೋಪಾಯ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕಿ ಮಂಜುಶ್ರೀ, ಜಿಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಮುಂತಾದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: dr cn ashwathnarayanindiakarnatakakhoushalya masaskillworld skill day 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಶ್ರೀ ಶಿರಡಿ ಸಾಯಿಬಾಬಾ ದರ್ಶನ ಪಡೆದ ಸಿದ್ದರಾಮಯ್ಯ, ಮೊಯಿಲಿ

ಶ್ರೀ ಶಿರಡಿ ಸಾಯಿಬಾಬಾ ದರ್ಶನ ಪಡೆದ ಸಿದ್ದರಾಮಯ್ಯ, ಮೊಯಿಲಿ

Leave a Reply Cancel reply

Your email address will not be published. Required fields are marked *

Recommended

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

2 years ago
ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ