• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

SSLC ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ವಸಿದ್ಧತೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

cknewsnow desk by cknewsnow desk
July 15, 2021
in CHIKKABALLAPUR, NEWS IN USE
Reading Time: 1 min read
0
SSLC ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ವಸಿದ್ಧತೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ
984
VIEWS
FacebookTwitterWhatsuplinkedinEmail

ಪರೀಕ್ಷೆ ಹೇಗೆ ನಡೆಯುತ್ತದೆ? ಏನೆಲ್ಲ ವ್ಯವಸ್ಥೆ ಇರುತ್ತದೆ? ವಿದ್ಯಾರ್ಥಿ & ಪೋಷಕರೇ ಪರೀಕ್ಷೆಗೆ ಮುನ್ನ ಈ ವರದಿ ಓದಿ..

by M Krishnappa Chikkaballapura

ಚಿಕ್ಕಬಳ್ಳಾಪುರ: ಕೋವಿಡ್‌ ನಡುವೆಯೂ ಪ್ರಸಕ್ತ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ಜು.19 ಮತ್ತು 22ರಂದು ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ವಿದ್ಯಾರ್ಥಿಗಳು ಯಾವುದೇ ಭಯ, ಆತಂಕವಿಲ್ಲದೆ ನಿರಾಳವಾಗಿ ಬಂದು ಪರೀಕ್ಷೆ ಬರೆಯಲು ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್.‌ಲತಾ ಪರೀಕ್ಷೆಯ ಬಗ್ಗೆ ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಒಟ್ಟು 17,102 ವಿದ್ಯಾರ್ಥಿಗಳು ನೋದಾಯಿಸಿಕೊಂಡಿದ್ದು, ಇದರಲ್ಲಿ 15,855 ಮಂದಿ ರೆಗ್ಯೂಲರ್, 273 ಮಂದಿ ಪುನರಾವರ್ತಿತ, 872 ಮಂದಿ ಖಾಸಗಿ ವಿದ್ಯಾರ್ಥಿಗಳು ಇದ್ದಾರೆ. ಈ ಪೈಕಿ 73 ಮಂದಿ ವಿದ್ಯಾರ್ಥಿಗಳು ಹೊರ ಜಿಲ್ಲೆಯವರು. ರೆಗ್ಯೂಲರ್ ಅಭ್ಯರ್ಥಿಗಳ ಪೈಕಿ 8290 ಮಂದಿ ಬಾಲಕರು, 7595 ಮಂದಿ ಬಾಲಕಿಯರು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.

ಕಳೆದ ವರ್ಷ ಜಿಲ್ಲೆಯಾದ್ಯಂತ ಒಟ್ಟು 64 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಆದರೆ, ಈ ಬಾರಿ ಕೋವಿಡ್ ಹಾಗೂ ವಿದ್ಯಾರ್ಥಿಗಳ ಸುರಕ್ಷಿತೆಯ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 99 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 1,516 ಕೊಠಡಿಗಳನ್ನು ನಿಗದಿ ಮಾಡಿದ್ದು, ಒಂದು ಡೆಸ್ಕ್ʼಗೆ ಕೇವಲ ಬಬ್ಬರಂತೆ ಒಂದು ಕೊಠಡಿಯಲ್ಲಿ ಕೇವಲ 12 ಮಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಒಟ್ಟು 2456 ಮಂದಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, 1917 ಮಂದಿ ಕೊಠಡಿ ಮೇಲ್ವಿಚಾರಕರು, 99 ಮಂದಿ ಅಸೀನ ಜಾಗೃತ ದಳದ ಅಧಿಕಾರಿಗಳು ಮತ್ತು 198 ಸ್ಕೌಟ್ ಮತ್ತು ಗೈಡ್ಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಎನ್-95 ಮಾಸ್ಕ್ ಧರಿಸಲು ಸೂಚಿಸಲಾಗಿದೆ. ನಿಯೋಜನೆಗೊಂಡವರಲ್ಲಿ ಯಾರಿಗೂ ಕೊರೊನಾ ಲಕ್ಷಣಗಳು ಇಲ್ಲ. ಒಂದು ವೇಳೆ ಪರೀಕ್ಷೆ ಸಂದರ್ಭದಲ್ಲಿ ಕೊರೊನಾ ಕಂಡುಬಂದಲ್ಲಿ ಅವರಿಗೆ ಬದಲಾಗಿ ಮೀಸಲಿಟ್ಟಿರುವ ಶೇ.10ರಷ್ಟು ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲಾಗುವುದು.

ಜು.19ರಂದು ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಜು.22 ರಂದು ಪ್ರಥಮ ಭಾಷೆ, ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ವಿಷಯಗಳಿಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರಗೆ ಪರೀಕ್ಷೆ ನಡೆಯಲಿದೆ. ಆದರೆ, ಪರೀಕ್ಷಾ ಸಿಬ್ಬಂದಿ ಬೆಳಗ್ಗೆ 8.30 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಲಿದ್ದಾರೆ.

ವಿದ್ಯಾರ್ಥಿಗಳು ಬೆಳಗ್ಗೆ 8.30ರಿಂದಲೇ ಪರೀಕ್ಷಾ ಕೇಂದ್ರಕ್ಕೆ ಬಂದರೆ ಬಳಗೆ ಪ್ರವೇಶ ನೀಡಲಾಗುವುದು. ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಒಳಗೊಂಡಂತೆ ಒಂದೇ ಪ್ರಶ್ನೆಪತ್ರಿಕೆ ಇರುತ್ತದೆ. ಪ್ರತಿ ವಿಷಯದಲ್ಲಿ 40 ಪ್ರಶ್ನೆಗಳಿದ್ದು, ಮೂರು ವಿಷಯಗಳಿಂದ ಒಟ್ಟು 120 ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೆ ಒಂದು ಅಂಕದಂತೆ ಒಂದು ವಿಷಯಕ್ಕೆ 40 ಅಂಕಗಳು ಒಟ್ಟು 120 ಅಂಕಗಳು ಇರುತ್ತದೆ. ಎಲ್ಲಾ ಪ್ರಶ್ನೆಗಳು ಸಹ ಬಹು ಆಯ್ಕೆ ಪ್ರಶ್ನೆಗಳಾಗಿರುತ್ತವೆ. ಪರೀಕ್ಷೆಯಲ್ಲಿ ಉತ್ತರಿಸಲು ವಿಷಯವಾರು ಪೂರ್ವಮುದ್ರಿತ ಓ.ಎಂ.ಆರ್. ಶೀಟ್‌ಗಳಿರುತ್ತವೆ. ವಿದ್ಯಾರ್ಥಿಗಳು ಎ.ಬಿ.ಸಿ.ಡಿ. ಆಯ್ಕೆಗಳಲ್ಲಿ ಸರಿ ಉತ್ತರಕ್ಕೆ ಶೇಡ್ ಮಾಡುವ ಮೂಲಕ ಉತ್ತರಿಸುವುದು. ಭಾಷೆಗಳಿಗೂ ಸಹ ಇದೇ ರೀತಿಯ ಪ್ರಶ್ನೆಪತ್ರಿಕೆ ಮತ್ತು ಓ.ಎಂ.ಆರ್. ಶೀಟ್‌ಗಳನ್ನು ಒಳಗೊಂಡಿರುತ್ತದೆ. ಓ.ಎಂ.ಆರ್.ಗಳು ವಿಷಯವಾರು ಬೇರೆ ಬೇರೆ ಬಣ್ಣದವುಗಳಾಗಿರುತ್ತವೆ. ಪ್ರಥಮಭಾಷೆ ಮತ್ತು ಗಣಿತ-ಗುಲಾಬಿ ಬಣ್ಣ(Pink Color), ದ್ವಿತೀಯಭಾಷೆ ಮತ್ತು ವಿಜ್ಞಾನ-ಕಿತ್ತಲೆ ಬಣ್ಣ(Orange Color), ತೃತೀಯಭಾಷೆ ಮತ್ತು ಸಮಾಜ ವಿಜ್ಞಾನ- ಹಸಿರು ಬಣ್ಣ (Green Color) ಹಾಗೂ ಜಿ.ಟಿ.ಎಸ್. ವಿಷಯಗಳು- ನೀಲಿ ಬಣ್ಣ (Blue Color)ದಲ್ಲಿ ಇರಲಿದೆ.

200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್

ಪ್ರತಿ ಕೇಂದ್ರದಲ್ಲಿ ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೂ ಮುಂಚಿತವಾಗಿ ಮತ್ತು ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸರ್ ಮಾಡಿಸಲಾಗುವುದು. ನಗರ ಪ್ರದೇಶಗಳಲ್ಲಿ ನಗರಸಭೆ/ಪುರಸಭೆಯವರು ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಾಡಲಾಗುವುದು. ಪರೀಕ್ಷಾ ದಿನಗಳಂದು ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

ಪರೀಕ್ಷಾ ಕೇಂದ್ರಗಳ ಸಮೀಪದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸಲಾಗಿದೆ. ಪ್ರತಿ ತಾಲೂಕಿಗೆ ಒಂದರಂತೆ ಪ್ರತ್ಯೇಕವಾದ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಿದ್ದು, ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಸದರಿ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಆದರೆ, ಪ್ರಸ್ತುತ ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಯಾವುದೇ ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿರುವುದಿಲ್ಲ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿ ತಾಲ್ಲೂಕಿಗೆ ಒಂದರಂತೆ ಅಂಬುಲೆನ್ಸ್ ಅನ್ನು ಮುನ್ನೆಚ್ಚರಿಕೆಯಾಗಿ ಕಾಯ್ದಿರಿಸಲಾಗಿದೆ.

ಈಗಾಗಲೇ ಇಲಾಖಾ ವೆಬ್‌ಸೈಟ್‌ http://sslc.karnataka.gov.in)ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ 2 ಸೆಟ್‌ಗಳು ಮತ್ತು ಮಾದರಿ ಒ.ಎಂ.ಆರ್. ಶೀಟ್‌ಗಳನ್ನು ಪ್ರಕಟಿಸಲಾಗಿದೆ. ಹಾಗೂ ಶಾಲಾ ಶಿಕ್ಷಕರು ಸಹ ನೂತನ ಪರೀಕ್ಷಾ ಪದ್ಧತಿ ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನಮ್ಮ ಮಕ್ಕಳಿಗೆ ಈಗಾಗಲೇ ಪರಿಚಯಿಸಲಾಗಿದೆ. ಅಷ್ಟೆ ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಆರು ವಿಷಯಗಳಿಗೆ ಸಂಬಂಧಿಸಿದಂತೆ ಬಹು ಆಯ್ಕೆಯ ಆನ್‌ಲೈನ್ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ವಿದ್ಯಾರ್ಥಿಗಳೆಲ್ಲರೂ ಇದರಲ್ಲಿ ಭಾಗವಹಿಸಿ, ಉತ್ತಮ ಸಾಧನೆ ತೋರಿದ್ದಾರೆ.

ರೋಗ ಲಕ್ಷಣಗಳಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕಾಗಿಯೇ ಪ್ರತ್ಯೇಕ ಕೊಠಡಿಯನ್ನು ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸಿದ್ಧಪಡಿಸಲಾಗಿದೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ಹಾಗೂ ಕುಡಿಯುವ ನೀರಿನ ಬಾಟಲ್‌ನ್ನು ತರುವಂತೆ ಪೋಷಕರು ತಿಳಿಸಬೇಕು. ನೂತನ ಪರೀಕ್ಷಾ ಪದ್ಧತಿಯಂತೆ ಪರೀಕ್ಷೆಯು ನಿಶ್ಚಯವಾಗಿ ನಡೆಯಲಿದ್ದು, ಯಾವುದೇ ವಿದ್ಯಾರ್ಥಿಯೂ ಸಹ ಗೈರು ಹಾಜರಾಗದೇ ಪರೀಕ್ಷೆಗೆ ಹಾಜರಾಗಿ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಲು ಪೋಷಕರು ಕ್ರಮವಹಿಸಬೇಕು ಈ ಮೂಲಕ 2021ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮರೆಡ್ಡಿ, ಮಧ್ಯಾಹ್ನ ಉಪಹಾರ ಯೋಜನೆಯ ಜಿಲ್ಲಾ ಅಧಿಕಾರಿ ಶೈಲಾ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪರೀಕ್ಷಾ ಸಹಾಯವಾಣಿ

ಜು.19 ಮತ್ತು 22 ರಂದು ಜಿಲ್ಲೆಯ 99 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದು ವಿದ್ಯಾರ್ಥಿಗಳು ಯಾವುದೇ ಮಾಹಿತಿಗಾಗಿ ಈ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

*ಕೆ.ಎಂ ಜಯರಾಮರೆಡ್ಡಿ-ಉಪನಿರ್ದೇಶಕರು(ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 9448999333.
*ಶಿವಲಿಂಗಯ್ಯ-ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 9663320113.
*ಕೆ.ಎನ್.ಲಕ್ಷ್ಮೀಕಾಂತ-ವಿಷಯ ಪರಿವೀಕ್ಷಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 9900870999.
*ಕೃಷ್ಣಕುಮಾರಿ-ವಿಷಯ ಪರಿವೀಕ್ಷಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 9535626738.
*ಟಿ.ಎಸ್.ಜಮೀರ್ ಪಾಷಾ-ವಿಷಯ ಪರಿವೀಕ್ಷಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 9902718650.
*ಬಿ.ವಿ.ಶಿವಪ್ರಕಾಶ್-ವಿಷಯ ಪರಿವೀಕ್ಷಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 8618496796.
*ಅಂಜಿನಪ್ಪ-ವಿಷಯ ಪರಿವೀಕ್ಷಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ: 7892773118.

Tags: chikkaballapuracovid19karnataka fight back coronakarnataka primary educationsslc examination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
ರೂಪಾಂತರಗೊಂಡ ಕೊರೊನ ವೈರಸ್; ಹೊಸ ವರ್ಷಕ್ಕೆ ಮೂರು ದಿನ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಇಲ್ಲ

ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ; ಜುಲೈ 19ರಿಂದ ಹೊಸ ನಿಯಮ

Leave a Reply Cancel reply

Your email address will not be published. Required fields are marked *

Recommended

55 ಲಕ್ಷ ಸರಕಾರಿ ಶಾಲೆ ಮಕ್ಕಳಿಗೆ ರಾಗಿ ಮಾಲ್ಟ್

55 ಲಕ್ಷ ಸರಕಾರಿ ಶಾಲೆ ಮಕ್ಕಳಿಗೆ ರಾಗಿ ಮಾಲ್ಟ್

1 year ago
ಉನ್ನತ ಶಿಕ್ಷಣ ಸಚಿವರ ಉದಾರತೆ

ಉನ್ನತ ಶಿಕ್ಷಣ ಸಚಿವರ ಉದಾರತೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ