• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

1 ಕೋಟಿ ಆರ್ಥಿಕ ಅವಕಾಶಗಳ ಸೃಷ್ಟಿಗೆ ʼಮಿಷನ್‌ ಯುವ ಸಮೃದ್ಧಿʼ

cknewsnow desk by cknewsnow desk
July 15, 2021
in STATE
Reading Time: 1 min read
0
1 ಕೋಟಿ ಆರ್ಥಿಕ ಅವಕಾಶಗಳ ಸೃಷ್ಟಿಗೆ ʼಮಿಷನ್‌ ಯುವ ಸಮೃದ್ಧಿʼ
951
VIEWS
FacebookTwitterWhatsuplinkedinEmail

ವಿಶ್ವ ಕೌಶಲ್ಯದಿನ-2021 ಆಚರಣೆಯಲ್ಲಿ ಡಿಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೌಶಲ್ಯತೆಗೆ ಅಗ್ರಮಾನ್ಯತೆ ನೀಡಿ ಕೌಶಲ್ಯ ಮತ್ತು ಉದ್ಯಮಶೀಲತೆ ವಲಯದಲ್ಲಿ  ಒಂದು ಕೋಟಿ ಆರ್ಥಿಕ ಅವಕಾಶಗಳನ್ನು ಸೃಷ್ಟಿ ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಗುರುವಾರ ಬೆಳಗ್ಗೆ ನಡೆದ ʼವಿಶ್ವ ಕೌಶಲ್ಯ ದಿನಾಚರಣೆʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಡೀ ದೇಶದಲ್ಲಿಯೇ ಇದೊಂದು ಕ್ರಾಂತಿಕಾರಕ ಉಪಕ್ರಮ. ಈಗಾಗಲೇ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದ್ದು, ಶೀಘ್ರವೇ ಕಾರ್ಯಪಡೆ ಈ ಬಗ್ಗೆ ವರದಿಯನ್ನು ನೀಡಲಿದೆ” ಎಂದರು.

ಕೋವಿಡ್‌-19 ಕಾರಣದಿಂದ ರಾಜ್ಯದ ಆರ್ಥಿಕ ಅವಕಾಶ, ಉದ್ಯೋಗ ಸೇರಿದಂತೆ ಹಲವಾರು ರೀತಿಯ ಜೀವನೋಪಾಯ ಸರಪಳಿಗಳ ಮೇಲೆ ಮಾರಕ ಪರಿಣಾಮ ಬೀರಿದೆ. ಇದಕ್ಕೆ ಚೇತರಿಕೆ ನೀಡಲು ʼಮಿಷನ್‌ ಯುವ ಸಮೃದ್ಧಿʼ ಹೆಸರಿನಲ್ಲಿ ಆರ್ಥಿಕ ಅವಕಾಶ ಸೃಷ್ಟಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, 8 ಜಿಲ್ಲೆಗಳಲ್ಲಿ ಪೈಲಟ್‌ ಪ್ರಾಜೆಕ್ಟ್‌ ಆಗಿ ಜಾರಿ ಮಾಡಲು ನಿಶ್ಚಿಯಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಈ ನಿಟ್ಟಿನಲ್ಲಿ ಜುಲೈ-ಅಗಸ್ಟ್‌ ತಿಂಗಳಿನಲ್ಲಿ ʼಕೌಶಲ್ಯಮಾಸʼವನ್ನು ಆಚರಿಸಲಾಗುತ್ತಿದೆ. ಅಗಸ್ಟ್‌ 21ರಂದು ʼವಿಶ್ವ ಉದ್ಯಮಶೀಲತಾ ದಿನʼವನ್ನು ಆಚರಣೆ ಮಾಡಲಾಗುತ್ತಿದ್ದು, ಅಲ್ಲಿಯವರೆಗೂ ಕೌಶಲ್ಯಮಾಸವನ್ನು ಆಚರಿಸಲಾಗುವುದು ಎಂದು ಡಿಸಿಎಂ ಹೇಳಿದರು.

ಐಟಿಐಗಳಿಗೆ ಮರುಜನ್ಮ

ರಾಜ್ಯದಲ್ಲಿ ಬಹು ಹಿಂದೆಯೇ ಸ್ಥಾಪನೆಯಾದ 150 ಐಟಿಐ ಸಂಸ್ಥೆಗಳು ಯಾವುದೇ ರೀತಿ ಅಭಿವೃದ್ಧಿ ಇಲ್ಲದೇ ನೆನೆಗುದಿಗೆ ಬಿದ್ದಿವೆ. ಇದೀಗ ಸರಕಾರ ಮತ್ತು ಟಾಟಾ ಟೆಕ್ನಾಲಜೀಸ್‌ ನೇತೃತದ ಖಾಸಗಿ ಸಹಭಾಗಿತ್ವದಲ್ಲಿ ಇಷ್ಟೂ ಐಟಿಐಗಳನ್ನು ಆಮೂಲಾಗ್ರವಾಗಿ ಅತ್ಯಾಧುನಿಕವಾಗಿ ಅಭಿಪಡಿಸಲಾಗುತ್ತಿದೆ. ಈ ಯೋಜನೆಗೆ ಸರ್ಕಾರ 800 ಕೋಟಿ ರೂ. ನೀಡುತ್ತಿದ್ದು, ಖಾಸಗಿ ಕ್ಷೇತ್ರವು 4,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಿದೆ ಎಂದು ಡಿಸಿಎಂ ನುಡಿದರು.

ಇನ್ನೂ 4 ಹೊಸ ಜಿಟಿಡಿಸಿ

ರಾಜ್ಯದಲ್ಲಿ ಸದ್ಯಕ್ಕೆ 24 ಜಿಟಿಡಿಸಿಗಳಿದ್ದು, ಇನ್ನೂ ನಾಲ್ಕು ಹೊಸ ಜಿಟಿಡಿಸಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದ ಉಪ ಮುಖ್ಯಮಂತ್ರಿಗಳು, ಕರ್ನಾಟಕ-ಜರ್ಮನಿ ತಾಂತ್ರಿಕ ಸಂಸ್ಥೆಗಳು ರಾಜ್ಯದಲ್ಲಿ ಸದ್ಯಕ್ಕೆ 5 ಇವೆ. ಇನ್ನು ಎರಡು ಹೊಸ ಸಂಸ್ಥೆಗಳನ್ನು ಸ್ಥಾಪನೆ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಒಟ್ಟಾರೆಯಾಗಿ ಕೈಗಾರಿಕೆ ವಲಯದ ಬೇಡಿಕೆಗೆ ತಕ್ಕಂತೆ ಉದ್ಯೋಗ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಯಾವುದೇ ಕೌಶಲ್ಯ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದರೂ ಉದ್ಯೋಗ ಖಚಿತವಾಗಿ ಸಿಗುವಂತೆ ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

ಈವರೆಗೆ ಎಲ್ಲರೂ ವೈಟ್‌ ಕಾಲರ್‌ ಉದ್ಯೋಗವೇ ಬೇಕೆನ್ನುತ್ತಿದ್ದರು. ಇನ್ನು ಮುಂದೆ ಬ್ಲೂ ಕಾಲರ್‌ ಉದ್ಯೋಗವೂ ಬೇಕು ಎನ್ನುವಂತೆ ಸರಕಾರ ಪರಿಣಾಮಕಾರಿಯಾಗಿ ಕಾರ್ಯಕ್ರಮ ರೂಪಿಸುತ್ತಿದೆ ಎಂದು ಅವರು ಹೇಳಿದರು.

8 ಒಪ್ಪಂದಗಳಿಗೆ ಅಂಕಿತ

ರಾಜ್ಯವ್ಯಾಪಿ ಯುವಜನರಲ್ಲಿ ಅತ್ಯುತ್ತಮ ದರ್ಜೆಯ ಕುಶಲತೆಯನ್ನು ಹೆಚ್ಚಿಸಿ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಖಾಸಗಿ ಕ್ಷೇತ್ರದ ನಡುವೆ ಎಂಟು ಒಪ್ಪಂದಗಳಿಗೆ ಇದೇ ಕಾರ್ಯಕ್ರಮದಲ್ಲಿ ಸಹಿ ಹಾಕಲಾಯಿತು. ಒಪ್ಪಂದಗಳ ವಿವರ ಹೀಗಿದೆ;

ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಆಟೋಮ್ಯಾಟೀವ್‌ ಕ್ಷೇತ್ರಕ್ಕೆ ಸಂಬಂಧಿಸಿದ ತರಬೇತಿ ಕೋರ್ಸುಗಳನ್ನು ಆಯ್ದ ಐಟಿಐಗಳಲ್ಲಿ ಪ್ರಾರಂಭಿಸಲು ಟೊಯೊಟಾ ಮೋಟಾರ್ಸ್ ಜತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕೌಶಲ್ಯ ಕರ್ನಾಟಕ ಯೋಜನೆಯಲ್ಲಿ ಯುವಕರಿಗೆ ತರಬೇತಿ ನೀಡಲು ವಿಪ್ರೋ, ಜಿಇ, ನಾರಾಯಣ ಹೃದಯಾಲಯ, ಸೆನ್‌ಸೆರಾ ಟೆಕ್ನಾಲಜೀಸ್‌, ಎಲಿಸಿಯಾ (ELCIA), ಇಎಸ್‌ಡಿಎಂ, ಕ್ಲಸ್ಟರ್‌, ಆದಿತ್ಯ ಬಿರ್ಲಾ ಗ್ರೂಪ್‌, ಹೋಮ್‌ ಲೇನ್‌ ಜತೆ ಒಪ್ಪಂದಕ್ಕೆ ಅಂಕಿತ ಹಾಕಲಾಯಿತು.

ಯುವಜನರಿಗೆ ಮಾಸ್ಟರ್‌ ಕ್ಯಾಮ್‌ ಡಿಸೈನ್‌ ಸಾಫ್ಟ್‌ವೇರ್‌ನಲ್ಲಿ ತರಬೇತಿ ನೀಡಲು ಕರ್ನಾಟಕ ಜರ್ಮನ್‌ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ (KGTTI)  ಹಾಗೂ ಆಟೋ ಡೆಸ್ಕ್‌ ಕಂಪನಿ ಜತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಚಿತ್ರದುರ್ಗ, ಚಳ್ಳಕೆರೆ, ಕೊಪ್ಪಳ, ಯಾದಗಿರಿಯಲ್ಲಿ ನೂತನ ನಿರ್ಮಿಸಲಾಗಿರುವ ಜಿಟಿಡಿಸಿ ಕೇಂದ್ರಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೊಮೊ ಕೋರ್ಸುಗಳನ್ನು ಆರಂಭಿಸಲು ಇದೇ ಸಂದರ್ಭದಲ್ಲಿ ಎಐಸಿಟಿಇ ಯಿಂದ ಅನುಮೋದನೆ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತಾ ಇಲಾಖೆಗಳ ಚಟುವಟಿಕೆಗಳ ವಿಡಿಯೋ, ಇಲಾಖೆಗಳ ಪ್ರಚಾರ ಸಾಮಗ್ರಿ, ವಲಸೆ ಕಾರ್ಮಿಕರ ಹ್ಯಾಂಡ್‌ ಬುಕ್‌ ಮತ್ತು ಟೂಲ್‌ ಕಿಟ್‌ ಹಾಗೂ 150 ಐಟಿಐಗಳನ್ನು ಉನ್ನತೀಕರಣಗೊಳಿಸುವ ʼಉದ್ಯೋಗʼ ಎಂಬ ಹೆಸರಿನ ಕೈಪಿಡಿಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸ್ಕಿಲ್‌ ಕನೆಕ್ಟ್‌ ಪೋರ್ಟಲ್‌ ಅನ್ನು ಲೋಕಾರ್ಪಣೆ ಮಾಡಿದರು.

ವಿಶ್ವ ಯುವಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟನೆ ಮಾಡಿದರು. ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್‌ ಶೆಟ್ಟಿ, ಟಯೋಟಾ ಕಿರ್ಲೋಸ್ಕರ್‌ ಹಿರಿಯ ಉಪಾಧ್ಯಕ್ಷ ಸುದೀಪ್‌ ದಲ್ವಿ ಸೇರಿದಂತೆ ವಿವಿಧ ಖಾಸಗಿ ಕಂಪನಿಗಳ ಮುಖ್ಯಸ್ಥರು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.  ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್‌, ಜೀವನೋಪಾಯ ಇಲಾಖೆಯ ನಿರ್ದೇಶಕಿ ಮಂಜುಶ್ರೀ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕ ಡಾ.ಹರೀಶ್‌ ಕುಮಾರ್‌, ಜಿಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಹೆಚ್.‌ರಾಘವೇಂದ್ರ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್‌ ಗೌಡ, ಸಿಡಾಕ್‌ ನಿರ್ದೇಶಕ ಡಾ.ವೀರಣ್ಣ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Tags: dr cn ashwathnarayankarnatakamission yuva samrudhione crore economic opportunitiesworld skill day 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ

ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

Recommended

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

5 years ago
ಮಂಡಿ ಗೂಂಡಾಗಳ ಜತೆ ರಾಜಿ; ರೈತನಿಗೆ ಲಕ್ಷ-ಲಕ್ಷ ರೇಟ್‌ ಫಿಕ್ಸ್ ಮಾಡಿಸಿದ್ದ ರಾಜಕಾರಣಿ ಸಂಬಂಧಿ!!

ಮಂಡಿ ಗೂಂಡಾಗಳ ಜತೆ ರಾಜಿ; ರೈತನಿಗೆ ಲಕ್ಷ-ಲಕ್ಷ ರೇಟ್‌ ಫಿಕ್ಸ್ ಮಾಡಿಸಿದ್ದ ರಾಜಕಾರಣಿ ಸಂಬಂಧಿ!!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ