• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ: ಸಚಿವ ಸುರೇಶ್ ಕುಮಾರ್

cknewsnow desk by cknewsnow desk
July 20, 2021
in STATE
Reading Time: 2 mins read
0
ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ: ಸಚಿವ ಸುರೇಶ್ ಕುಮಾರ್
940
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಬಾರಿಯ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಿಯುಸಿ ಉತ್ತೀರ್ಣರಾಗುವ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಪದವಿ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲು ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳಿಗೆ ಅವಕಾಶ ಕಲ್ಪಿಸಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೂ ಸಹ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ವೈಜ್ಞಾನಿಕ ಆಧಾರದಲ್ಲಿ ಫಲಿತಾಂಶ ಘೋಷಣೆ

ಈಗ ಪಾಸಾಗುತ್ತಿರುವ ಎಲ್ಲ ಮಕ್ಕಳು ಕಳೆದ ವರ್ಷ ಮೊದಲ ಪಿಯುಸಿ ತರಗತಿಗಳನ್ನು ಪರೀಕ್ಷೆಯ ಮೂಲಕ ಉತ್ತೀರ್ಣರಾಗಿದ್ದು, ಆ ಅಂಕಗಳು ಮತ್ತು ಅವರ 10ನೇ ತರಗತಿ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶಗಳನ್ನು ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

2019-20ನೇ ಸಾಲಿನಲ್ಲಿ ನಡೆದ ಮೊದಲ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಅವರ ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲೆ ಈ ಬಾರಿಯ ದ್ವಿತೀಯ ಪಿಯುಸಿ ಅಂಕಗಳನ್ನು ನಿರ್ಧರಿಸಲಾಯಿತು. ಆ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ. ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ ಪ್ರಕಟಣೆ ಮೂಲಕ ಕ್ರಮ ವಹಿಸಲಾಗಿದೆ ಎಂದು ಸಚಿವರು ಹೇಳಿದರು.

ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದೂ ಸಚಿವರು ಹೇಳಿದರು.

ಎಸ್ಸೆಸ್ಸೆಲ್ಸಿ ಅಥವಾ ಇತರೆ ಮಂಡಳಿಗಳ 10ನೇ ತರಗತಿಯಲ್ಲಿ ಪಡೆದ ವಿಷಯವಾರು ಅಂಕಗಳಲ್ಲಿ ಶೇ.45ರಷ್ಟು ಅಂಕಗಳು, ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಶೇ.45ರಷ್ಟು ಅಂಕಗಳು, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಚುಟುವಟಿಕೆಗಳಿಗೆ ಶೇ.10ರಷ್ಟು ಅಂಕಗಳು ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5 ಅಂಕಗಳನ್ನು ಸಿದ್ಧಪಡಿಸಿ ಫಲಿತಾಂಶವನ್ನು ನಿರ್ಣಯಿಸಲಾಗಿದೆ ಎಂದು ಸುರೇಶ್ ಕುಮಾರ್ ಫಲಿತಾಂಶ ಘೋಷಣೆಯ ವಿವರಗಳನ್ನು ನೀಡಿದರು.

ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳೂ ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಅವರು ಹೇಳಿದರು.

ನಾವು ಘೋಷಿಸಿದಂತೆ ನಿಗದಿತ ಅವಧಿಯಲ್ಲೇ ಫಲಿತಾಂಶ ಪ್ರಕಟಿಸಿದ್ದೇವೆ. ಸಿಬಿಎಸ್‍ಇ ನವರಿಗಿಂತ ಬೇಗ ಫಲಿತಾಂಶ ಘೋಷಿಸಬೇಕೆಂಬುದು ನಮ್ಮ ಮಕ್ಕಳ ಇಚ್ಛೆಯಾಗಿತ್ತು ಎಂದು ಸಚಿವರು ಹೇಳಿದರು.

ಪುನರಾವರ್ತಿತ ಅಭ್ಯರ್ಥಿಗಳ ತೇರ್ಗಡೆ

ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲಾಗುತ್ತಿದೆ. ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ.5ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಈ ವರ್ಷದ ಪಿಯುಸಿ ಪರೀಕ್ಷಾ ಫಲಿತಾಂಶ ವಿವರ

ಒಟ್ಟು ವಿದ್ಯಾರ್ಥಿಗಳು 666497, ಬಾಲಕರು – 335138, ಬಾಲಕಿಯರು- 331359. ಹೊಸ ವಿದ್ಯಾರ್ಥಿಗಳು – 590153, ಪುನರಾವರ್ತಿತ ವಿದ್ಯಾರ್ಥಿಗಳು- 76344. ವಾಣಿಜ್ಯ ವಿಭಾಗ- 251686, ವಿಜ್ಞಾನ ವಿಭಾಗ- 219777, ಕಲಾ ವಿಭಾಗ- 195034 ವಿದ್ಯಾರ್ಥಿಗಳಿದ್ದಾರೆ.

5,18,903 ನಗರ ಅಭ್ಯರ್ಥಿಗಳಿದ್ದರೆ, 1,47,594 ಗ್ರಾಮೀಣ ಅಭ್ಯರ್ಥಿಗಳಿದ್ದಾರೆ. ಒಟ್ಟು ಅಭ್ಯಥಿ೵ಗಳಲ್ಲಿ 4,50,706 ವಿದ್ಯಾರ್ಥಿಗಳು ಮೊದಲ ಶ್ರೇಣಿ ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದರೆ, 1,47,055 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 68,729 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

1428 ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, ಅದರಲ್ಲಿ 84 ಮಂದಿ ಉನ್ನತ ಶ್ರೇಣಿ, 603 ಪ್ರಥಮ ಶ್ರೇಣಿ, 459 ಮಂದಿ ದ್ವಿತೀಯ ಶ್ರೇಣಿ ಮತ್ತು 310 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಕನ್ನಡ ಮಾಧ್ಯಮದ 2,75,599 ಮಕ್ಕಳು ಕನ್ನಡ ಮಾಧ್ಯಮ ಮತ್ತು 3,90,898 ಅಭ್ಯರ್ಥಿಗಳು ಇಂಗ್ಲಿಷ್ ಮಾಧ್ಯಮಕ್ಕೆ ಸೇರಿದವರು.

600ಕ್ಕೆ 600 ಅಂಕಗಳ ಫಲಿತಾಂಶ ಪಡೆದ ಮಕ್ಕಳು

ರಾಜ್ಯದ ಎಲ್ಲ 32 ಶೈಕ್ಷಣಿಕ ಜಿಲ್ಲೆಗಳ ಹಲವಾರು ಪದವಿ ಪೂರ್ವ ಕಾಲೇಜುಗಳ ಮಕ್ಕಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 2239 ಫ್ರೆಶ್ ವಿದ್ಯಾರ್ಥಿಗಳು ಪೂರ್ಣ ಅಂಕ ದಾಖಲಿಸಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 445, ಬೆಂಗಳೂರು ದಕ್ಷಿಣ-302, ಬೆಂಗಳೂರು ಉತ್ತರ-261, ಉಡುಪಿ-149, ಕೊಡಗು-04, ರಾಯಚೂರು/ಚಿಕ್ಕೋಡಿ-07, ಚಾಮರಾಜನಗರ-03, ಯಾದಗಿರಿ ಜಿಲ್ಲೆ-02 ಮಕ್ಕಳು ಪೂಣ೵ ಅಂಕಗಳನ್ನು ಗಳಿಸಿದ್ದಾರೆ.

ಆಗಸ್ಟ್‍ನಲ್ಲಿ ವಾರ್ಷಿಕ ಪರೀಕ್ಷೆ

ಈ ಬಾರಿಯ ದ್ವಿತೀಯ ಪಿಯು ಫಲಿತಾಂಶವನ್ನು ಒಪ್ಪಿಕೊಳ್ಳಲು ಇಲ್ಲವೇ ತಿರಸ್ಕರಿಸಲು ಈ ಬಾರಿಯ ಪರೀಕ್ಷೆಗೆ ನೊಂದಾಯಿಸಿದ್ದ ಫ್ರೆಷರ್ಸ್ ಮತ್ತು ರಿಪೀಟರ್ಸ್ ಅಭ್ಯ‌ರ್ಥಿಗಳಿಗೆ ಅವಕಾಶವಿದ್ದು, ವಾರ್ಷಿಕ ಪರೀಕ್ಷೆಗೆ ಹಾಜರಾಗಲು ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು.

ಅದರಂತೆ ಈ ಬಾರಿಯ ಪರೀಕ್ಷೆಗೆ ನೊಂದಾಯಿಸಿ ಪರೀಕ್ಷೆಗೆ ಹಾಜರಾಗಿ ಈ ಫಲಿತಾಂಶ ತಿರಸ್ಕರಿಸುವ ಹೊಸ ವಿದ್ಯಾರ್ಥಿಗಳಿಗೆ (ಫ್ರೆಷರ್ಸ್) ಮತ್ತು ಪುನರಾವರ್ತಿತ (ರಿಪೀಟರ್ಸ್) ಅಭ್ಯ‌ರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ಎರಡು ವರ್ಗದ ಅಭ್ಯರ್ಥಿಗಳು ಫಲಿತಾಂಶ ತಿರಸ್ಕರಿಸಿ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಜುಲೈ 30ರಂದು ಕೊನೆಯ ದಿನವಾಗಿದೆ.

ಹಾಗೆಯೇ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಖಾಸಗಿ (ಪ್ರೈವೇಟ್) ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಬೇಕಿದೆ. ಈ ಖಾಸಗಿ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ನೊಂದಾಯಿಸಿಕೊಂಡಿರುವುದರಿಂದ ಅವರು ಮತ್ತೆ ಪರೀಕ್ಷೆಗೆ ನೊಂದಾಯಿಸಬೇಕಾದ ಅಗತ್ಯವಿಲ್ಲ.

ಈ ಮೂರು ವರ್ಗದ ಅಭ್ಯರ್ಥಿಗಳಿಗೆ ಆಗಸ್ಟ್ ತಿಂಗಳ ಉತ್ತರಾರ್ಧದಲ್ಲಿ ಪರೀಕ್ಷೆ ನಡೆಸಲಾಗುವುದು. ಆಗಸ್ಟ್‍ನಲ್ಲಿ ನಡೆಯುವ ಪರೀಕ್ಷೆ ಸಹ ವಾರ್ಷಿಕ ಪರೀಕ್ಷೆಯೇ ಆಗಿರುತ್ತದೆ. ಈ ಬಾರಿಯ ಫಲಿತಾಂಶ ತಿರಸ್ಕರಿಸಿ ಆಗಸ್ಟ್‍ನಲ್ಲಿ ಪರೀಕ್ಷೆಗೆ ಹಾಜರಾಗುವ ಫ್ರೆಷರ್ ಅಭ್ಯರ್ಥಿಗಳನ್ನು ಫ್ರೆಷರ್ ಎಂದೇ ಪರಿಗಣಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರೆಗೆ ನಡೆಯಲಿವೆ ಎಂದು ಸಚಿವರು ಪರೀಕ್ಷೆಯ ವಿವರಗಳನ್ನು ಒದಗಿಸಿದರು.

ಯಾರೂ ಅಧೀರರಾಗಬಾರದು

ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಬಂದ ನಂತರ ತನಗೆ ಕಡಿಮೆ ಅಂಕಗಳು ಬರಬಹುದೆಂದು ಹೊಸನಗರ ಜಿಲ್ಲೆಯ ರಿಪ್ಪನ್‍ಪೇಟೆಯ ವಿದ್ಯಾರ್ಥಿನಿ ಕೆಂಚನಾಲ ಚೇತನ ಆತ್ಮಹತ್ಯೆಗೆ ಯತ್ನ ಮಾಡಿದ್ದನ್ನು ಪ್ರಸ್ತಾಪಿಸಿದ ಸಚಿವರು, ಯಾರೂ ಅಧೀರರಾಗಬಾರದು. ಜೀವನದಲ್ಲಿ ಇದೇ ಮೊದಲ ಪರೀಕ್ಷೆಯಲ್ಲ, ಅನೇಕ ಕಷ್ಟನಷ್ಟಗಳು, ಪರೀಕ್ಷೆಗಳು ಎದುರಾಗಲಿವೆ. ಎಲ್ಲದನ್ನೂ ಧೈರ್ಯದಿಂದ ಎದುರಿಸಬೇಕು. ಹಾಗಾಗಿ ಯಾವೊಬ್ಬ ಮಕ್ಕಳು ಪರೀಕ್ಷಾ ಫಲಿತಾಂಶದಿಂದ ಎದೆಗುಂದಬಾರದು. ಪೋಷಕರೂ ಸಹ ಮಕ್ಕಳಿಗೆ ಧೈರ್ಯ ಹೇಳಲು ಮುಂದಾಗಬೇಕು ಎಂದು ಎಂದು ಸುರೇಶ್ ಕುಮಾರ್ ಮನವಿ ಮಾಡಿದರು. ಚೇತಾನ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಗುರುವಾರದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿ ಚೆನ್ನಾಗಿ ಬರೆಯಬೇಕೆಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳನ್ನು ಸಚಿವರು ಅಭಿನಂದಿಸಿದರು. ಸಚಿವರು ಫಲಿತಾಂಶ ಘೋಷಿಸಲು ಆರಂಭಿಸುತ್ತಿದ್ದಂತೆಯೇ ಪಿಯು ಮಂಡಳಿಯ ಸ್ಯಾಟ್ಸ್ ಪೋಟ೵ಲ್‍ನಲ್ಲಿ ನೊಂದಾಯಿಸಿದ್ದ ಎಲ್ಲ ಅಭ್ಯರ್ಥಿಗಳಿಗೂ ಅವರ ನೊಂದಾಯಿತ ದೂರವಾಣಿ ಸಂಖ್ಯೆಗೆ ಫಲಿತಾಂಶಗಳು ರವಾನೆಯಾದವು.

762 ಮಕ್ಕಳು ಈ ಬಾರಿ ಪರೀಕ್ಷೆಗೆ ಹಾಜರಾಗಬಹುದು

ಈ ಬಾರಿಯ ದ್ವಿತೀಯ ಪಿಯುಸಿ ತರಗತಿಗಳಿಗೆ ನೊಂದಾಯಿಸಿದ್ದರೂ ಪಿಯುಸಿ ಪರೀಕ್ಷೆಗೆ ನೊಂದಾಯಿಸದೇ ಇದ್ದ 762 ಮಕ್ಕಳು ಆಗಸ್ಟ್‌ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಗೆ ನೊಂದಾಯಿಸಿಕೊಂಡು ಹಾಜರಾಗಬಹುದು ಎಂದು ಸಚಿವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮತ್ತು ಪಿಯು ಇಲಾಖೆ ನಿರ್ದೇಶಕಿ ಆರ್.ಸ್ನೇಹಲ್ ಭಾಗವಹಿಸಿದ್ದರು.

Tags: 2nd puc results2021covid19educationkarnatakaminister s suresh kumarpuc resultsecond puc
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆ ಆಸ್ಪತ್ರೆಗೆ ಆಸ್ಟ್ರೇಲಿಯಾದಿಂದ ಬಂದ 5 ಆಮ್ಲಜನಕ ಸಾಂದ್ರಕ ಹಸ್ತಾಂತರ

ಗುಡಿಬಂಡೆ ಆಸ್ಪತ್ರೆಗೆ ಆಸ್ಟ್ರೇಲಿಯಾದಿಂದ ಬಂದ 5 ಆಮ್ಲಜನಕ ಸಾಂದ್ರಕ ಹಸ್ತಾಂತರ

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಎಸ್‌ಜೆಪಿ ಕಾಲೇಜ್ ಕ್ಯಾಂಪಸ್ ಇನ್ನು ಮುಂದೆ ‘ನಾಲ್ವಡಿ ಕ್ಯಾಂಪಸ್’; ಮಾರ್ಚ್‌ 2ರಂದು ಎಂಜಿನಿಯರಿಂಗ್‌ ಸಂಶೋಧನೆ &  ಅಭಿವೃದ್ಧಿ ನೀತಿ ಪ್ರಕಟ

ಬೆಂಗಳೂರು ಎಸ್‌ಜೆಪಿ ಕಾಲೇಜ್ ಕ್ಯಾಂಪಸ್ ಇನ್ನು ಮುಂದೆ ‘ನಾಲ್ವಡಿ ಕ್ಯಾಂಪಸ್’; ಮಾರ್ಚ್‌ 2ರಂದು ಎಂಜಿನಿಯರಿಂಗ್‌ ಸಂಶೋಧನೆ & ಅಭಿವೃದ್ಧಿ ನೀತಿ ಪ್ರಕಟ

4 years ago
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ಸ್ಫೋಟಕ್ಕೆ ಟ್ವಿಸ್ಟ್;‌ ಗುಡಿಬಂಡೆ ಇನಸ್ಪೆಕ್ಟರ್‌, ಸಬ್‌ ಇನಸ್ಪೆಕ್ಟರ್‌ ಇಬ್ಬರನ್ನು ಸಸ್ಪೆಂಡ್‌ ಮಾಡಿ ಕೈತೊಳೆದುಕೊಂಡಿತಾ ಸರಕಾರ? ಹಾಗಾದರೆ ಉಳಿದವರು..??

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ