• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

4 ದಿನ ಮುನ್ನವೇ ರಾಜಿನಾಮೆ ಸುಳಿವು ನೀಡಲು ಕಾರಣವಾದ ಆ 8 ಕಾರಣ

P K Channakrishna by P K Channakrishna
July 27, 2021
in POLITICS, STATE
Reading Time: 2 mins read
0
ರಾಜ್ಯದಲ್ಲಿ 28,000 ಕೋಟಿ ರೂ. ಮೊತ್ತದ ಹೂಡಿಕೆಗೆ ಒಪ್ಪಂದ
1k
VIEWS
FacebookTwitterWhatsuplinkedinEmail

ಜುಲೈ 26ಕ್ಕೆ ರಾಜೀನಾಮೆ ನೀಡುವ ಸುಳಿವು ಕೊಟ್ಟ ಸಿಎಂ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಮೀನಾಮೇಷ ಎಣಿಸುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಪದತ್ಯಾಗದ ಸುಳಿವು ನೀಡಿದ್ದು ಏಕೆ?

ಗುರುವಾರ ಬೆಳಗ್ಗೆ ಈ ತಿಂಗಳ 26ಕ್ಕೆ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ ಎಂದು ಹೇಳಿದ ಸಿಎಂ ಅವರು, ಆ ದಿನವೇ ರಾಜಿನಾಮೆ ಕೊಡುವ ಸುಳಿವೂ ಕೊಟ್ಟರು. ಹಾಗಾದರೆ, ಇದಕ್ಕೆ ಕಾರಣವಾದ ಅಂಶಗಳು ಯಾವುವು?

ಕಾರಣ 1: ವರಿಷ್ಠರ ಜತೆ ಘರ್ಷಣೆ ಮಾಡಿಕೊಳ್ಳುವ ಉದ್ದೇಶ ಸ್ವತಃ ಮುಖ್ಯಮಂತ್ರಿ ಅವರಿಗಿಲ್ಲ. ಅದೇ ರೀತಿ ಯಡಿಯೂರಪ್ಪ ಅವರಿಗೆ ನೋವುಂಟು ಮಾಡುವುದು ಬಿಜೆಪಿ ಹೈಕಮಾಂಡ್‌ಗೂ ಇಲ್ಲ.

ಕಾರಣ 2: ವೀರಶೈವ ಲಿಂಗಾಯತ ಸಮುದಾಯವನ್ನು ಎದುರು ಹಾಕಿಕೊಳ್ಳುವುದು ಪಕ್ಷಕ್ಕೆ ಇಷ್ಟವಿಲ್ಲ. ಅದೇ ರೀತಿ, ಸಮುದಾಯದ ಹಿತವನ್ನು ಕಾಪಾಡುವುದಾಗಿ ಹೈಕಮಾಂಡ್‌ ಭರವಸೆ.

ಕಾರಣ 3: ನಾಯಕತ್ವ ಬದಲಾವಣೆ ನಂತರ ವೀರಶೈವ ಲಿಂಗಾಯತ ಸಮುದಾಯದಿಂದ ಎದುರಾಗುವ ಒತ್ತಡವನ್ನು ನಿಭಾಯಿಸುವ ಜವಾಬ್ದಾರಿಯನ್ನು ಸ್ವತಃ ಯಡಿಯೂರಪ್ಪ ಅವರಿಗೇ ಹೈಕಮಾಂಡ್‌ ಒಪ್ಪಿಸಿದೆ.

ಕಾರಣ 4: ಯಡಿಯೂರಪ್ಪ ಅವರ ಗೌರವಕ್ಕೆ ಯಾವ ಚ್ಯುತಿಯೂ ಇಲ್ಲ. ಅವರ ಬಗ್ಗೆ ಪಕ್ಷ ಹೊಂದಿರುವ ಗೌರವದಲ್ಲಿ ಯಾವ ಬದಲಾವಣೆಯೂ ಇಲ್ಲ ಹಾಗೂ ರಾಘವೇಂದ್ರ, ವಿಜಯೇಂದ್ರ ರಾಜಕೀಯ ಭವಿಷ್ಯಕ್ಕೆ ವರಿಷ್ಠರಿಂದ ಸ್ಪಷ್ಟ ಅಭಯ.

ಕಾರಣ 5: ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಮಾರ್ಗದರ್ಶನ ನೀಡುವ ಯಡಿಯೂರಪ್ಪ ಅವರ ಇಚ್ಛೆಗೆ ವರಿಷ್ಠರ ಒಪ್ಪಿಗೆ.

ಕಾರಣ 6: ಹೊಸ ನಾಯಕತ್ವದ ಬಗ್ಗೆ ಯಡಿಯೂರಪ್ಪ ಅವರಿಗೆ ವರಿಷ್ಠರ ಮನವರಿಕೆ, ಅದಕ್ಕೆ ಬಿಎಸ್‌ವೈ ಒಪ್ಪಿಗೆ. ಅವರು ಒಡ್ಡಿದ ಕೆಲ ಷರತ್ತುಗಳಿಗೆ ಹೈಕಮಾಂಡ್‌ ಸಮ್ಮತಿ.

ಕಾರಣ 7: ವರಿಷ್ಠರ ಆದೇಶ ಪಾಲಿಸೋಣ. ಯಾವ ಕಾರಣಕ್ಕೂ ದಿಲ್ಲಿ ನಾಯಕರ ಆದೇಶ ಧಿಕ್ಕರಿಸುವುದು ಬೇಡ. ಒಂದು ವೇಳೆ ಹಾಗೆ ಮಾಡಿದರೆ, ನಿಮ್ಮ ಜತೆ ಗುರುತಿಸಿಕೊಂಡಿರುವ ಎಲ್ಲ ನಾಯಕರು, ನಿಮ್ಮ ಮಕ್ಕಳು ರಾಜಕೀಯವಾಗಿ ಮೂಲೆಗುಂಪಾಗುತ್ತಾರೆ ಎಂದು ಆಪ್ತರು ನೀಡಿದ ಸಲಹೆಗೆ ಸಿಎಂ ಸಮ್ಮತಿ.

ಕಾರಣ 8: ಗೌರವಯುತ ನಿರ್ಗಮನದ ಅವಕಾಶ ಕೈಚೆಲ್ಲುವುದು ಬೇಡ. ನಿಮ್ಮ ಸಮಕ್ಷಮದಲ್ಲೇ ಹೊಸ ನಾಯಕನ ಹೆಸರು ಘೋಷಣೆ ಆಗುವಂತೆ ನೋಡಿಕೊಳ್ಳಿ ಎನ್ನುವ ಆಪ್ತರ ಸಲಹೆಯನ್ನು ಯಡಿಯೂರಪ್ಪ ಸ್ವೀಕರಿಸಿದ್ದಾರೆನ್ನಲಾಗಿದೆ.

ಇವಿಷ್ಟೂ ಯಡಿಯೂರಪ್ಪ ಪದತ್ಯಾಗದ ಸುಳಿವು ನೀಡಿದ್ದಕ್ಕೆ ಕಾರಣಗಳು ಎಂದು ಬಿಜೆಪಿಯ ವಿಶ್ವಸನೀಯ ಮೂಲಗಳು ತಿಳಿಸಿವೆ.

ಹಾಗಾದರೆ, ಗುರುವಾರ ಬೆಳಗ್ಗೆ ಸಿಎಂ ಅವರು ಹೇಳಿದ್ದೇನು? ಮುಂದೆ ಓದಿ…

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನನ್ನ ಮೇಲೆ ವಿಶೇಷ ಪ್ರೀತಿ, ಅಭಿಮಾನ, ಕಾಳಜಿ ಇಟ್ಟುಕೊಂಡಿದ್ದಾರೆ.

75 ವರ್ಷ ಮೀರಿದರೂ ಇಡೀ ದೇಶದಲ್ಲಿ ಯಾರಿಗೂ ಪಕ್ಷದಲ್ಲಿ ಅಧಿಕಾರ ನೀಡಿಲ್ಲ. ವರಿಷ್ಠರು ನನ್ನ ಬಗ್ಗೆ ವಿಶೇಷ ಅಭಿಮಾನ ತೋರಿಸಿ ನನಗೆ ಅಧಿಕಾರ ನೀಡಿದ್ದಾರೆ. ಜುಲೈ 26ಕ್ಕೆ ನಾನು ಮುಖ್ಯಮಂತ್ರಿಯಾಗಿ ಎರಡು ವರ್ಷ ಮುಗಿಯುತ್ತದೆ. ಈಗ ರಾಷ್ಟ್ರ ನಾಯಕರು ನೀಡಿದ ಸೂಚನೆ ಪಾಲಿಸುತ್ತೇನೆ. ಆ ಸಮಯ ಬಂದಿದೆ.‌

ಜುಲೈ 25ರಂದು ಹೈಕಮಾಂಡ್ ಯಾವ ಸಂದೇಶ ಕಳುಹಿಸುತ್ತದೋ ಅದನ್ನು ನಾನು ೨೬ರಂದು ಪಾಲಿಸುತ್ತೇನೆ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ.

ಬಿಜೆಪಿಯ ಕಾರ್ಯಕರ್ತರು, ಮುಖಂಡರು ಗೊಂದಲಕ್ಕೂ ಒಳಗಾಗಬಾರದು.‌ ಎಲ್ಲರೂ ನನಗೆ ಸಂಪೂರ್ಣ ಬೆಂಬಲ ನೀಡಬೇಕೆಂದು ಮನವಿ ಮಾಡುತ್ತೇನೆ.

ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಗೆ ನನ್ನ ಹೃದಯ ತುಂಬಿ ಬಂದಿದೆ. ಯಾರಿಗೂ ಲಭಿಸದ ಬೆಂಬಲ, ಆಶೀರ್ವಾದ ನನಗೆ ಸಿಕ್ಕಿದೆ.

ಮುಂದಿನ ದಿನಗಳಲ್ಲಿ ಪಕ್ಷವನ್ನು ಸದೃಢಗೊಳಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿ. ಪಕ್ಷದ ಹೈಕಮಾಂಡ್ ನನಗೆ ಯಾವ ಸೂಚನೆ ನೀಡಿದರೂ ಪಾಲಿಸುತ್ತೇನೆ. ನನ್ನ ಪರವಾಗಿ ಯಾರೂ ಸಹ ಹೇಳಿಕೆ ನೀಡುವುದು ಬೇಡ. ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಬಾರದು.

ಇಲ್ಲಿ ನನ್ನ ನಿರ್ಧಾರ ಎನ್ನುವುದೇನೂ ಇಲ್ಲ. ವರಿಷ್ಠರು ನೀಡುವ ಆದೇಶವನ್ನಷ್ಟೇ ಪಾಲಿಸುತ್ತೇನೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯೇ ನನ್ನ ಆದ್ಯತೆ.

26ಕ್ಕೆ ಹೊಸ ನಾಯಕನ ಎಂಟ್ರಿ

ಸ್ವತಃ ಮುಖ್ಯಮಂತ್ರಿಗಳ ಈ ಹೇಳಿಕೆಯೊಂದಿಗೆ ಬಿಜೆಪಿ ನಾಯಕತ್ವ ಬಿಕ್ಕಟ್ಟಿಗೆ ಕೊನೆಗೂ ತೆರೆ ಬೀಳುತ್ತಿದೆ. ಸೋಮವಾರ ಹೊಸ ನಾಯಕನ ಎಂಟ್ರಿ ಆಗುವ ಸಾಧ್ಯತೆ ನಿಶ್ಚಳವಾಗಿದೆ. ನಾಯಕತ್ವ ಸಂಬಂಧ ಉಂಟಾಗಿದ್ದ ಬಿಕ್ಕಟ್ಟು ಬಿಗಡಾಯಿಸಿ ವರಿಷ್ಠರೂ ಮಧ್ಯ ಪ್ರವೇಶ ಮಾಡಿದ್ದರು. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ರಾಜ್ಯಕ್ಕೆ ಬಂದು ಮುಖಂಡರು ಮತ್ತು ಶಾಸಕರ ಅಭಿಪ್ರಾಯ ಆಲಿಸಿದ್ದರು. ಅದಾದ ಮೇಲೆ ಅವರು ವರಿಷ್ಠರಿಗೆ ವರದಿ ನೀಡಿದ್ದರು.

ಇದಾದ ಮೇಲೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಜುಲೈ 16ರಂದು ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದರು. ಬಳಿಕ ರಾಜ್ಯಕ್ಕೆ ಹಿಂತಿರುಗಿದ್ದ ಸಿಎಂ ಅವರು ತಮ್ಮ ಆಪ್ತರ ಜತೆ ವ್ಯಾಪಕ ಸಮಾಲೋಚನೆ ನಡೆಸಿದ್ದರು.

ಮಠಾಧೀಶರ ಭಾರೀ ಬೆಂಬಲ

ಬಿಜೆಪಿ ವರಿಷ್ಠರು ಯಡಿಯೂರಪ್ಪ ರಾಜೀನಾಮೆ ಪಡೆಯುತ್ತಾರೆಂಬ ಮಾಹಿತಿ ಸಿಕ್ಕಿದ ಕೂಡಲೇ ವೀರಶೈವ ಲಿಂಗಾಯತ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬಹಿರಂಗವಾಗಿಯೇ ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದರು. ಸ್ವತಃ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರೇ ಸಿಎಂ ನಿವಾಸಕ್ಕೆ ಬಂದು, ಯಡಿಯೂರಪ್ಪ ಮುಂದಿನ ಎರಡು ವರ್ಷದ ಅಧಿಕಾರಾವಧಿ ಪೂರೈಸಲು ಅವಕಾಶ ನೀಡಬೇಕು ಎಂದು ಹೇಳಿದ್ದರು. ಕಳೆದ ಮೂರು ದಿನಗಳಿಂದ ಅನೇಕ ಸ್ವಾಮೀಜಿಗಳು ಸಿಎಂ ನಿವಾಸಕ್ಕೆ ಬಂದು ಬೆಂಬಲ ನೀಡುತ್ತಲೇ ಇದ್ದಾರೆ. ವಿಶೇಷವೆಂದರೆ, ಕ್ರೈಸ್ತ ಸಮುದಾಯ ಕೆಲ ಮುಖಂಡರೂ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡಿದ್ದಾರೆ.

ವಿರೋಧಿಗಳ ಬಣದಲ್ಲಿ ಹೈ ಜೋಶ್

ಯಡಿಯೂರಪ್ಪ ವಿರುದ್ಧ ಹೋರಾಟ ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ, ಅರವಿಂದ ಬೆಲ್ಲದ, ಎಚ್.‌ವಿಶ್ವನಾಥ್‌ ಹಾಗೂ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಬಣದಲ್ಲಿ ಸಿಎಂ ಹೇಳಿಕೆ ಮಿಂಚಿನ ಸಂಚಾರ ಉಂಟು ಮಾಡಿದೆ. ಆದರೆ, ಎಲ್ಲರೂ ಮುಗುಮ್ಮಾಗಿದ್ದು, ಮಧ್ಯಾಹ್ನದ ವರೆಗೂ ಯಾರೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕೆಲ ನಾಯಕರು ದಿಲ್ಲಿಗೆ ತೆರಳಿದ್ದು, ಇನ್ನು ಕೆಲವರು ಬೆಂಗಳೂರಿನಲ್ಲೇ ಇದ್ದಾರೆ.

Tags: bjpbjp politicsbs yediyurappachief ministerkarnataka politicsnew leaderreasons for resignationresignation
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಐಟಿಐ ಪಾಸಾದವರಿಗೆ ಒಳ್ಳೆಯ ಸುದ್ದಿ

ಐಟಿಐ ಪಾಸಾದವರಿಗೆ ಒಳ್ಳೆಯ ಸುದ್ದಿ

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ಕೋವಿಡ್‌ ಎರಡನೇ ಅಲೆ, ಒಕ್ಕಲಿಗರ ಸಂಘ ಚುನಾವಣೆ ಮೇಲೆ ವೈರಸ್‌ ಕರಿನೆರಳು; ಎಲೆಕ್ಷನ್‌ ಮುಂದೂಡಿಕೆ ಸಂಭವ

ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ಕೋವಿಡ್‌ ಎರಡನೇ ಅಲೆ, ಒಕ್ಕಲಿಗರ ಸಂಘ ಚುನಾವಣೆ ಮೇಲೆ ವೈರಸ್‌ ಕರಿನೆರಳು; ಎಲೆಕ್ಷನ್‌ ಮುಂದೂಡಿಕೆ ಸಂಭವ

4 years ago
ಗುಡಿಬಂಡೆಯಲ್ಲಿ ಆಲಿಕಲ್ಲು ಅಬ್ಬರ; ಬೆಳೆ ಪರಿಹಾರಕ್ಕೆ ರೈತರ ಆಗ್ರಹ

ಗುಡಿಬಂಡೆಯಲ್ಲಿ ಆಲಿಕಲ್ಲು ಅಬ್ಬರ; ಬೆಳೆ ಪರಿಹಾರಕ್ಕೆ ರೈತರ ಆಗ್ರಹ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ