• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

P K Channakrishna by P K Channakrishna
July 29, 2021
in POLITICS, STATE
Reading Time: 1 min read
0
ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ
1k
VIEWS
FacebookTwitterWhatsuplinkedinEmail

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಯಾರಿರಬೇಕು? ಯಾರಿರಬಾರದು? ಎಂಬುದನ್ನು ಸಂಘ ಪರಿವಾರ ನಿರ್ಧರಿಸಲಿದೆ.

ಸಂಘದ ಉನ್ನತ ನಾಯಕರಲ್ಲಿ ಒಬ್ಬರಾದ ಮುಕುಂದ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಕೇಶವ ಕೃಪದಲ್ಲಿ ನಡೆದ ಸಭೆಯಲ್ಲಿ 30 ನೂತನ ಸಚಿವರ ಹೆಸರುಗಳ ಪಟ್ಟಿಯನ್ನು ಸಿದ್ಧಪಡಿಸಿ ವರಿಷ್ಠರಿಗೆ ರವಾನೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಯಡಿಯೂರಪ್ಪ ಸಂಪುಟದಲ್ಲಿ ಆರೋಪದ ಸುಳಿಗೆ ಸಿಲುಕಿ ಬೇರೆ-ಬೇರೆ ಬಾನಗಡಿ ಮಾಡಿಕೊಂಡಿದ್ದವರೆಲ್ಲರನ್ನೂ ದೂರವಿಡಲಾಗಿದ್ದು, ಸಂಘ ಪರಿವಾರ ಮತ್ತು ಪಕ್ಷದ ಸಂಘಟನೆಗೆ ಒತ್ತು ನೀಡುವವರಿಗೆ ಮಾತ್ರ ಅವಕಾಶ ದೊರೆತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಹಿರಿಯರು ಮತ್ತು ಯುವಕರಿಗೆ ಸಮನಾದ ಅವಕಾಶವನ್ನು ಮಂತ್ರಿಮಂಡಲದಲ್ಲಿ ಕಲ್ಪಿಸಲಾಗುತ್ತಿದ್ದು, ಜಿಲ್ಲೆ ಮತ್ತು ಜಾತಿಗಳಿಗೂ ಪ್ರಾತಿನಿಧ್ಯ ಕೊಟ್ಟಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಬಿಜೆಪಿ ಸರಕಾರ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಸತತವಾಗಿ ಸಚಿವರಾಗಿರುವವರನ್ನು ಬೊಮ್ಮಾಯಿ ಸರಕಾರದಿಂದ ದೂರವಿಟ್ಟು, ಅವರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಲು ಸಂಘ ಮನಸ್ಸು ಮಾಡಿದೆ.

ಸಚಿವಾಕಾಂಕ್ಷಿಗಳಲ್ಲಿ ನಡುಕ ಹುಟ್ಟಿಸುವ ಈ ಬೆಳವಣಿಗೆಗೆ ಮುನ್ನವೇ ಜಗದೀಶ್‌ ಶೆಟ್ಟರ್‌ ಅವಂಥ ಹಿರಿಯರು ಹೊಸ ಸಂಪುಟದಿಂದ ಸ್ವ ಇಚ್ಛೆಯಿಂದ ದೂರಲು ನಿರ್ಧರಿಸಿದ್ದು, ಶೆಟ್ಟರ್‌ ದಾರಿಯಲ್ಲೇ ಮತ್ತಷ್ಟು ನಾಯಕರು ಹೆಜ್ಜೆ ಹಾಕುವ ಸಾಧ್ಯತೆ ದಟ್ಟವಾಗಿದೆ.

ವಲಸಿಗರಿಗೆ ಇಕ್ಕಟ್ಟು

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲು ಕಾರಣರಾದ ಕಾಂಗ್ರೆಸ್-ಜೆಡಿಎಸ್‌ನಿಂದ ಹೊರಬಂದು ಸಚಿವರಾದವರಲ್ಲಿ ಕೆಲವರಿಗೆ ಹೊಸ ಸಂಪುಟದಲ್ಲಿ ಕೊಕ್ ನೀಡುವುದು ಫೈನಲ್‌ ಆಗಿದೆ. ಅದರಲ್ಲಿ 7 ವಲಸಿಗರ ಮೇಲೆ ಭ್ರಷ್ಟಾಚಾರ ಆರೋಪಗಳಿದ್ದು. ಅವರಿಗೆ ಬೊಮ್ಮಾಯಿ ಕ್ಯಾಬಿನೆಟ್ಟಿನಲ್ಲಿ ಅವಕಾಶ ಇಲ್ಲ ಎನ್ನುವುದು ಗೊತ್ತಾಗಿದೆ. ಇವರ ಪಟ್ಟಿ ಈಗಾಗಲೇ ವರಿಷ್ಠರ ಕೈ ಸೇರಿದೆ.

ಅಲ್ಲದೆ, ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಕಂಡಿರುವ ಮಂತ್ರಿಗಳಿಗೂ ಸಂಪುಟಕ್ಕೆ ಅವಕಾಶವಿಲ್ಲ. ಜತೆಗೆ, ಭೂ ಮಾಫಿಯಾದಲ್ಲಿ ಪಾಲುದಾರರಾಗಿರುವವರಿಗೂ ಈ ಸರಕಾರದಲ್ಲಿ ಅಧಿಕಾರ ಸಿಗುವುದು ಅನುಮಾನ. ಮುಂದಿನ ಚುನಾವಣೆ ಹಾಗೂ ಪಕ್ಷವನ್ನು ತಳಮಟ್ಟದಲ್ಲಿ ಬಲವಾಗಿ ಕಟ್ಟುವ ಉದ್ದೇಶದಿಂದ ಕ್ಲೀನ್‌ ಇಮೇಜ್‌ ಉಳ್ಳವರನ್ನೇ ಸಂಪುಟಕ್ಕೆ ಸೇರಿಸಲು ಸಂಘ ಸಲಹೆ ಮಾಡಿದೆ ಎಂದು ತಿಳಿದುಬಂದಿದೆ.

ಜತೆಗೆ; ಕಾಂಗ್ರೆಸ್ ಹಾಗೂ ಜೆಡಿಎಸ್‌ ಜತೆ ಒಳ ಒಪ್ಪಂದ ಮಾಡಿಕೊಂಡು ಯಡಿಯೂರಪ್ಪ ಸರಕಾರದಲ್ಲಿ ಹೊಂದಾಣಿಕೆ ಆಡಳಿತ ನಡೆಸಿದ ಮಾಜಿ ಮಂತ್ರಿ ಮಹೋದಯರಿಗೆ ಅವಕಾಶ ಅನುಮಾನ. ಇದಲ್ಲದೆ; ಬಿಜಿನೆಸ್‌, ಕೈಗಾರಿಕೆ, ಗಣಿಗಾರಿಕೆ, ಕಲ್ಲು ಗಣಿಗಾರಿಕೆ, ಕಂಪನಿಗಳು ಸೇರಿದಂತೆ ಸ್ವಹಿತಾಸಕ್ತಿ ಉಳ್ಳವರನ್ನು ಆದಷ್ಟೂ ಸಂಪುಟದಿಂದ ದೂರ ಇಡಬೇಕೆಂದು ಸಂಘ ಪರಿವಾರ ಸಲಹೆ ಕೊಟ್ಟಿದೆ ಎನ್ನಲಾಗಿದೆ. ಎರಡು ವರ್ಷ ಸಚಿವರಾಗಿ ಗೂಟದ ಕಾರುಗಳಲ್ಲಿ ಸವಾರಿ ಮಾಡಿದವರು ಪಕ್ಷಕ್ಕೆಷ್ಟು ಕೆಲಸ ಮಾಡಿದ್ದಾರೆ ಎಂಬ ಮೌಲ್ಯಮಾಪನವೂ ನಡೆದಿದ್ದು, ಅದರಲ್ಲಿ ಬಹಳಷ್ಟು ಮಾಜಿ ಸಚಿವರು ಫೇಲಾಗಿದ್ದಾರೆ ಎಂದು ಗೊತ್ತಾಗಿದೆ.

ಗುರುವಾರದ ಸಭೆಯಲ್ಲಿ ಮುಕುಂದ್ ಅಲ್ಲದೆ, ಸಂಘದ ಹಿರಿಯರಾದ ತಿಪ್ಪೇಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್ ಸೇರಿದಂತೆ ಏಳು ಮಂದಿ ಪ್ರಮುಖರು ಇದ್ದರೆಂದು ಖಚಿತ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ.

ಈ ಸಭೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೇಶವಶಿಲ್ಪಕ್ಕೆ  ಕರೆಸಿಕೊಂಡು, ಅವರ ಜತೆಯೂ ಈ ಸಂಬಂಧ ಚರ್ಚಿಸಿ  ವರಿಷ್ಠರಿಗೆ ಪಟ್ಟಿ ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸಂಘದ ಪಟ್ಟಿಗೆ ವರಿಷ್ಠರು ಒಪ್ಪಿಗೆಯ ಮುದ್ರೆ ಒತ್ತುವ ಸಾಧ್ಯತೆಯೇ ಹೆಚ್ಚು.

ಸಂಘ ಪರಿವಾರದ ನಿರ್ಧಾರ ಗೊತ್ತಾಗುತ್ತಿದ್ದಂತೆ ಹಿಂದಿನ ಸರಕಾರಗಳಲ್ಲಿ ಸತತವಾಗಿ ಮಂತ್ರಿಯಾಗಿದ್ದ ಆರ್. ಅಶೋಕ್, ಸಿ.ಪಿ.ಯೋಗೇಶ್ವರ್ ಸೇರಿ ಕೆಲ ಸಚಿವಾಕಾಂಕ್ಷಿಗಳು ದೀಢಿರನೆ ದಿಲ್ಲಿಗೆ ಹಾರಿದ್ದಾರೆ. ಮತ್ತೊಂದಡೆ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಡಿಸಿಎಂ ಅಥವಾ ಮಂತ್ರಿಗಿರಿ ಕೊಟ್ಟರೆ ಕೆಲಸ ಮಾಡುತ್ತೇನೆ. ಇಲ್ಲದಿದ್ದರೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈ ಭೇಟಿ ಸಂದರ್ಭದಲ್ಲೇ ಮಂತ್ರಿಮಂಡಲ ರಚನೆಗೆ ಸಂಬಂಧಿಸಿದಂತೆ ವರಿಷ್ಠರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಇಂದು ನೆರೆ ಪೀಡಿತ ಪ್ರದೇಶಗಳಿಗೆ ತೆರಳುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಈ ಸಂಬಂಧ 30 ನಿಮಿಷ ಕಾಲ ಮುಖಾಮುಖಿ ಚರ್ಚೆ ನಡೆಸಿದರು.

Tags: amit shabasavaraj bommai cabinetbs yediyurappajp naddakarnataka cabinet. bjpnarendra modirss
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆಯಲ್ಲೊಬ್ಬರು ಆಮ್‌ಆದ್ಮಿಗಳ ಡಾಕ್ಟರ್!‌ ಸೋಂಕಿತರಿಗೆ ವೈದ್ಯಕೀಯ ಆರೈಕೆ ಜತೆಗೆ ಆತ್ಮಸ್ಥೈರ್ಯದ ಪಾಠ

ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆ ನೂತನ ಆರೋಗ್ಯ ರಕ್ಷಾ ಸಮಿತಿ ಸದಸ್ಯರು

Leave a Reply Cancel reply

Your email address will not be published. Required fields are marked *

Recommended

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದ ಹೆಚ್.ಡಿ.ಕುಮಾರಸ್ವಾಮಿ

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದ ಹೆಚ್.ಡಿ.ಕುಮಾರಸ್ವಾಮಿ

3 years ago
ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ