ಗುಡಿಬಂಡೆ: ಸರ್ಕಾರದ ಆದೇಶದಂತೆ ಎಂಟು ಮಂದಿಯನ್ನು ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಅಧಿಕಾರೇತರ ಸದಸ್ಯರನ್ನಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಇವರೆಲ್ಲರನ್ನೂ ಆಯ್ಕೆ ಮಾಡಿದ್ದಾರೆ. ಇವರಲ್ಲಿ ಒಬ್ಬರು ಪರಿಶಿಷ್ಟ ಜಾತಿ, ಒಬ್ಬರು ಪರಿಶಿಷ್ಟ ಪಂಗಡ ಮತ್ತು ಒಬ್ಬರು ಮಹಿಳೆ ಸೇರಿ ಒಟ್ಟು 8 ಜನರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಆಯ್ಕೆಯಾದ ಸದಸ್ಯರ ವಿವರ
- ಕೆ.ಎನ್.ನವೀನ್
- ಮುನ್ನಾ
- ಆದಿನಾರಾಯಣಪ್ಪ
- ಕೃಷ್ಣೇಗೌಡ
- ನಿರ್ಮಲಮ್ಮ
- ಕೆ.ಟಿ.ನಂಜುಂಡಪ್ಪ
- ನಯಾಜ್
- ನಂಜುಂಡಪ್ಪ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ 8 ಜನರನ್ನು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಿದ್ದಾರೆ. ಅವರ ಮಾರ್ಗದರ್ಶನದಂತೆ ನಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಮಾಡುತ್ತೇವೆ.
ಕೆ.ಎನ್.ನವೀನ್ ಕುಮಾರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ, ಗುಡಿಬಂಡೆ