• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಭ್ರಷ್ಟಾಚಾರ, ಪಕ್ಷಾಂತರ, ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರಕಾರ ರಚನೆ: ಸುರ್ಜೆವಾಲ

cknewsnow desk by cknewsnow desk
July 30, 2021
in STATE
Reading Time: 1 min read
0
ಭ್ರಷ್ಟಾಚಾರ, ಪಕ್ಷಾಂತರ, ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರಕಾರ ರಚನೆ: ಸುರ್ಜೆವಾಲ
945
VIEWS
FacebookTwitterWhatsuplinkedinEmail

ಹುಬ್ಬಳ್ಳಿ: ‘ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರವು ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆ ಮೂಲಕ ರಚನೆಯಾಗಿದೆ. ಇಂತಹ ಸರ್ಕಾರದಿಂದ ಜನಪರ ಕಾರ್ಯಕ್ರಮಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಟೀಕಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದ್ದಿಷ್ಟು;

‘ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ. ಇಡೀ ದೇಶ ಹಾಗೂ ವಿಶ್ವ, ಮೋದಿ ಸರ್ಕಾರ ಹೇಗೆ ಗೂಢಚಾರಿಗಳನ್ನು ಬಳಸಿಕೊಂಡು ಹೇಗೆ ಚುನಾಯಿತ ಸರ್ಕಾರವನ್ನು ಕೆಡವಿದೆ ಎಂಬುದನ್ನು ನೋಡಿದೆ. ಇಂತಹ ಸರ್ಕಾರ ಜನಪರ ಕೆಲಸ ಮಾಡಲು ಅಸಾಧ್ಯ. ಹೀಗಾಗಿ 2 ವರ್ಷಗಳ ಅವಧಿಯಲ್ಲಿ ಕೇವಲ ಭ್ರಷ್ಟಾಚಾರಗಳೇ ನಡೆದಿವೆ. ಇದೇ ಮೊದಲ ಬಾರಿಗೆ ಭ್ರಷ್ಟಾಚಾರವನ್ನು ಆರ್ಟಿಜಿಎಸ್ ಮೂಲಕ ನಡೆಸಿರುವುದನ್ನು ನೋಡಿದ್ದೇವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಕಾರ್ಯವನ್ನು ಶ್ಲಾಘಿಸುತ್ತೇನೆ. ದೇಶದಲ್ಲೇ ಅತಿ ದೊಡ್ಡ ಸರ್ಕಾರೇತರ ಆರೋಗ್ಯ ಸೇವೆ ಆರೋಗ್ಯ ಹಸ್ತವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ದೇಶದಲ್ಲಿ ಜನ ಆಕ್ಸಿಜನ್ ಇಲ್ಲದೆ ಸಾಯುತ್ತಿರುವಾಗ ಸರ್ಕಾರ ನೆರವಾಗದೇ ಕೈಚೆಲ್ಲಿ ಕೂತಿತ್ತು. ಈ ಸಮಯದಲ್ಲಿ ಜನರಿಗೆ ಆಕ್ಸಿಜನ್, ರೆಮಡಿಸಿವಿರ್ ಔಷಧಿ ಪೂರೈಸಿದ್ದು ಕಾಂಗ್ರೆಸ್ ನಾಯಕರು. ಆಸ್ಪತ್ರೆಗಳು ಹೆಚ್ಚಿನ ಸುಲಿಗೆ ಮಾಡುವಾಗ ನಮ್ಮ ನಾಯಕರು ತಮ್ಮ ಆಸ್ಪತ್ರೆಗಳಲ್ಲಿ ಕಡಿಮೆ ಮೊತ್ತಕ್ಕೆ ಚಿಕಿತ್ಸೆ ನೀಡಿದರು.

ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ

ಬಿಜೆಪಿಯು ಹಿಂದುಳಿದ ವರ್ಗಗಳ, ಬಡವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ವಿರೋಧಿಗಳು. ಬಿಜೆಪಿ ಈ ವರ್ಗಗಳ ಕಲ್ಯಾಣಕ್ಕೆ ಯಾವುದೇ ಕಾರ್ಯಯೋಜನೆ ತಂದಿಲ್ಲ. ಆದರೆ ಈಗ ಪ್ರಧಾನಿಗಳು ಟ್ವಿಟರ್ ಮೂಲಕ ಸುಳ್ಳು ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು 1952ರಲ್ಲಿ ಶೇ.2ರಷ್ಟಿಂದ ಆರಂಭ ಮಾಡಲಾಯಿತು. ನಂತರ 1981ರಿಂದ ಶೇ.10ರಷ್ಟು ಮೀಸಲಾತಿ ನೀಡಲಾಯಿತು. ನಂತರ ಕಾಂಗ್ರೆಸ್ ಸರ್ಕಾರ ಮಂಡಲ್ ಸಮಿತಿ ರಚಿಸಿತು. 1995-96 ರಲ್ಲಿ ಶೇ.27 ರಷ್ಟು ಮೀಸಲಾತಿ ನೀಡಿದೆವು. ಪಂಡಿತ್ ನೆಹರೂ, ವಲ್ಲಭಬಾಯ್ ಪಟೇಲ್, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ತಂದಿದ್ದರು. ಈ ಮೀಸಲಾತಿ ವೈದ್ಯಕೀಯ ಶಿಕ್ಷಣಕ್ಕೆ ಅನ್ವಯವಾಗಿರಲಿಲ್ಲ. 2007ರಲ್ಲಿ ಮನಮೋಹನ್ ಸಿಂಗ್ ಹಾಗೂ ಶ್ರೀಮತಿ ಸೋನಿಯಾ ಗಾಂಧಿ ಅವರು ಈ ಬಗ್ಗೆ ನಿರ್ಧಾರ ಕೈಗೊಂಡು, ಹಿಂದುಳಿದ ವರ್ಗಗಳಿಗೆ ಕಡ್ಡಾಯವಾಗಿ ಎಲ್ಲ ಕೇಂದ್ರ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕು ಎಂದು ಕಾನೂನು ಜಾರಿಗೆ ತಂದರು. ಪ್ರಧಾನಿ ಮೋದಿ ಅವರು 2014 ರ ಚುನಾವಣೆಯಲ್ಲಿ ತಮ್ಮ ಸಮುದಾಯವನ್ನು ಚುನಾವಣೆಗೂ ಮುನ್ನ ಹಿಂದುಳಿದ ವರ್ಗ ಎಂದು ಮಾಡಿ ತಾನು ಹಿಂದುಳಿದ ವರ್ಗದವನು ಎಂದು ಹೇಳಿಕೊಂಡರು. 7 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಲಿಲ್ಲ. ನಂತರ ಸೋನಿಯಾ ಗಾಂಧಿ ಅವರು ಪ್ರಧಾನ ಮಂತ್ರಿಗಳಿಗೆ ಜುಲೈ 3, 2020 ರಂದು ಪತ್ರ ಬರೆದು ಈ ವರ್ಗದವರಿಗೆ ಮೀಸಲಾತಿ ನೀಡಿ, ಅದು ಸಂವಿಧಾನಬದ್ಧವಾಗಿದೆ ಎಂದು ಹೇಳಿದ್ದರು. ಪ್ರಧಾನಮಂತ್ರಿಗಳು ಇದಕ್ಕೆ ಪ್ರತ್ಯುತ್ತರ ನೀಡಲಿಲ್ಲ.

27 ಜುಲೈ 2020 ರಲ್ಲಿ ಹಾಗೂ ನಂತರ ವಿದ್ಯಾರ್ಥಿಯೊಬ್ಬಳು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿ, ಕೇಂದ್ರ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುವುದನ್ನು ಪ್ರಶ್ನಿಸಿದರು. ನಂತರ ಕೋರ್ಟ್ ಈ ಮೀಸಲಾತಿಯನ್ನು ಜಾರಿಗೊಳಿಸುವಂತೆ ಆದೇಶ ನೀಡಿತು. ನಂತರ ಕಾಂಗ್ರೆಸ್ ಹಾಗೂ ಡಿಎಂಕೆ ನ್ಯಾಯಾಂಗ ನಿಂದನೆ ಅರ್ಜಿ ಹಾಕಿದರು. ಈಗ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ಪಾರಾಗಲು ಆ ಮೀಸಲಾತಿಯನ್ನು ಜಾರಿಗೊಳಿಸುತ್ತಿದೆ. ಇದು ಬಿಜೆಪಿಯ ಸುಳ್ಳಿನ ಪ್ರಚಾರಕ್ಕೆ ಸಾಕ್ಷಿ.

ಅಸ್ಸಾಂ-ಮಿಜೋರಾಮ್ ಸಂಘರ್ಷಕ್ಕೆ ಅಮಿತ್ ಶಾ ವೈಫಲ್ಯ ಕಾರಣ

ಅಸ್ಸಾಂ ಹಾಗೂ ಮಿಜೋರಾಮ್ ನಡುವಣ ಸಂಘರ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ. ಎರಡೂ ರಾಜ್ಯಗಳಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಅಧಿಕಾರದಲ್ಲಿದೆ. ಗೃಹ ಸಚಿವರು 10-12 ದಿನಗಳ ಹಿಂದಷ್ಟೇ ಇಲ್ಲಿಗೆ ಭೇಟಿ ನೀಡಿದ್ದರು ಹಾಗೂ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದರು. ಆದರೂ ಎರಡೂ ರಾಜ್ಯಗಳ ಪೊಲೀಸರು ಪರಸ್ಪರ ಗುಂಡು ಹಾರಿಸಿಕೊಳ್ಲುವಂತೆ ಮಾಡಿದ್ದು ಯಾಕೆ? 73 ನರ್ಷಗಳ ಸ್ವತಂತ್ರ ಭಾರತದಲ್ಲಿ ಇಂತಹ ಘಟನೆ ಎಂದಾದರೂ ನಡೆದಿತ್ತಾ? ನಾವು ಶತ್ರು ರಾಷ್ಟ್ರಗಳ ಜತೆ ಸೆಣೆಸಾಡಬೇಕಾ? ಅಥವಾ ನಮ್ಮ ದೇಶದ ಸಹೋದರರ ಜತೆ ಸೆಣೆಸಾಡಬೇಕಾ? ಕಾಂಗ್ರೆಸ್ ನೇತೃತ್ವದ ಯುಪಿಎ ಹಾಗೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ನಡುವಣ ವ್ಯತ್ಯಾಸ ಇದೇ. ಇದು ಗೃಹ ಸಚಿವರು ಹಾಗೂ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ವೈಫಲ್ಯ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಜನರ ಪ್ರಾಣ ಒತ್ತೆ ಇಟ್ಟು ಈ ಸಮರ ಸಾರುತ್ತಿದ್ದಾರಾ? ಇವರ ವಿರುದ್ಧ ಜೆ.ಪಿ ನಡ್ಡಾ ಅವರಾಗಲಿ, ಪ್ರಧಾನಿ ಅವರಾಗಲಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಬಿಜೆಪಿಯವರು ದೇಶವನ್ನು ಮುನ್ನಡೆಸುವ ರೀತಿ ಇದೇನಾ? ಅಮಿತ್ ಶಾರಂತೆ ದೇಶದ ಯಾವುದೇ ಗೃಹ ಸಚಿವರು ಈ ರೀತಿ ವಿಫಲರಾಗಿರಲಿಲ್ಲ. ಅವರು ಕೇವಲ ಕದ್ದಾಲಿಕೆಯಲ್ಲೇ ಸಮಯ ಕಳೆಯುತ್ತಿದ್ದಾರೆ.

Tags: bjpCongresscorruptionpegasus spywarephone tappingRandeep Surjewala
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮನೆ ಬಾಗಿಲಿಗೇ ಬಂದ ಕಂದಾಯ ಇಲಾಖೆ

ಮನೆ ಬಾಗಿಲಿಗೇ ಬಂದ ಕಂದಾಯ ಇಲಾಖೆ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ