• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹಳಬರು+ಹೊಸಬರು+ವಲಸಿಗರು=29 ಸಚಿವರ ಬೊಮ್ಮಾಯಿ ಸಂಪುಟ

P K Channakrishna by P K Channakrishna
August 4, 2021
in NATION, POLITICS, STATE
Reading Time: 2 mins read
0
ಹಳಬರು+ಹೊಸಬರು+ವಲಸಿಗರು=29 ಸಚಿವರ ಬೊಮ್ಮಾಯಿ ಸಂಪುಟ

29 ಸಚಿವರಲ್ಲಿ ಮೊದಲಿಗರಾಗಿ ಪ್ರಮಾಣ ಸ್ವೀಕಾರ ಮಾಡಿದ ಗೋವಿಂದ ಕಾರಜೋಳ.

1.1k
VIEWS
FacebookTwitterWhatsuplinkedinEmail

ಜಾತಿ ಲೆಕ್ಕಾಚಾರ, ಕೊನೆಗೂ ಕ್ಯಾಬಿನೆಟ್‌ ಸಾಕಾರ: ಅಧಿಕಾರ ಗೌಪ್ಯತೆ ಪ್ರಮಾಣ ಬೋಧಿಸಿದ ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌

ಚಿಕ್ಕಬಳ್ಳಾಪುರಕ್ಕೆ ಪ್ರಾತಿನಿಧ್ಯ; 20ನೆಯವರಾಗಿ ಪ್ರಮಾಣ ಸ್ವೀಕರಿಸಿದ ಸುಧಾಕರ್, 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಇಲ್ಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದ 29 ನೂತನ ಸಚಿವರು ಬುಧವಾರ ಪ್ರಮಾಣ ಸ್ವೀಕರಿಸಿದರು. ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಂಪುಟ ಬಲ ಇಂದು ಮೂವತ್ತಕ್ಕೆ ಏರಿದೆ.

ಇದರೊಂದಿಗೆ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರು ಪ್ರಮಾಣ ಸ್ವೀಕಾರ ಮಾಡಿದ 8 ದಿನಗಳ ನಂತರ ಅವರ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಅವರು ಹೊಸ ಸಚಿವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ಬೋಧಿಸಿದರು.

ಹಳಬರು, ಹೊಸಬರು ಹಾಗೂ ವಲಸಿಗರನ್ನು ಸಮತೋಲನ ಮಾಡಿಕೊಂಡಿರುವ ಈ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿಲ್ಲ. ಪ್ರಾದೇಶಿಕ, ಜಾತಿವಾರು ಲೆಕ್ಕದಲ್ಲಿ ಕ್ಯಾಬಿನೆಟ್‌ ಅನ್ನು ಬ್ಯಾಲೆನ್ಸ್‌ ಮಾಡಲಾಗಿದ್ದು; ಯಡಿಯೂರಪ್ಪ ಸಂಪುಟದಲ್ಲಿದ್ದ 23 ನಾಯಕರು ಬೊಮ್ಮಾಯಿ ಅವರ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಜಾತಿ ಲೆಕ್ಕದಲ್ಲಿ ನೋಡುವುದಾದರೆ; ಲಿಂಗಾಯಿತ-8, ಒಕ್ಕಲಿಗ-7, ಒಬಿಸಿ-7, ಪರಿಶಿಷ್ಟ ಜಾತಿ-3, ಪರಿಶಿಷ್ಟ ವರ್ಗ-1, ರೆಡ್ಡಿ-1, ಮಹಿಳೆ-1 ಹಾಗೂ ಬ್ರಾಹ್ಮಣ-2 ರಂತೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಇನ್ನು, ಬೆಂಗಳೂರು ನಗರಕ್ಕೆ ಸಂಬಂಧಿಸಿ ಒಟ್ಟು 7 ಶಾಸಕರು ಮಂತ್ರಿಗಳಾಗಿ ಪ್ರಮಾಣ ಮಾಡಿದರು.

ಎಂಟು ಹೊಸ ಸಚಿವರು

ಹೊಸಬರ ಕೋಟಾದಲ್ಲಿ ತೀರ್ಥಹಳ್ಳಿಯ ಅರಗ ಜ್ಞಾನೇಂದ್ರ, ಯಲಬುರಗಿಯ ಹಾಲಪ್ಪ ಆಚಾರ್‌, ನವಲಗುಂದ ಕ್ಷೇತ್ರದ ಶಂಕರ ಮುನೇನಕೊಪ್ಪ, ತಿಪಟೂರು ಶಾಸಕ ಬಿ.ಸಿ.ನಾಗೇಶ್, ಕಾರ್ಕಳದ ಸುನೀಲ್‌ ಕುಮಾರ್‌, ರಾಜರಾಜೇಶ್ವರಿ ನಗರದ ಮುನಿರತ್ನ (ಇವರು ವಲಸಿಗರು) ಅವರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು.

9 ವಲಸಿಗರೂ ಸೇರಿ 23 ಹಳಬರ ಪ್ರಮಾಣ

ಯಡಿಯೂರಪ್ಪ ಸಂಪುಟದಲ್ಲಿದ್ದ ಶಿವಮೊಗ್ಗ ನಗರದ ಕೆ.ಎಸ್.ಈಶ್ವರಪ್ಪ, ಪದ್ಮನಾಭ ನಗರದ ಆರ್.ಅಶೋಕ್, ಹಿರೇಕೇರೂರಿನ ಬಿ.ಸಿ.ಪಾಟೀಲ್, ಮಲ್ಲೇಶ್ವರದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮೊಳಕಾಲ್ಮೂರು ಕ್ಷೇತ್ರದ ಬಿ.ಶ್ರೀರಾಮುಲು, ಹುಕ್ಕೇರಿಯ ಉಮೇಶ್ ಕತ್ತಿ, ಯಶವಂತಪುರದ ಎಸ್.ಟಿ.ಸೋಮಶೇಖರ್, ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್, ಕೆ.ಆರ್.‌ಪುರದ ಭೈರತಿ‌ ಬಸವರಾಜ, ಬೀಳಗಿಯ ಮುರುಗೇಶ್ ನಿರಾಣಿ, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ನಿಪ್ಪಾಣಿಯ ಶಶಿಕಲಾ ಜೊಲ್ಲೆ, ಕೆ.‌ಆರ್.ಪೇಟೆಯ ಕೆ.ಸಿ.ನಾರಾಯಣ ಗೌಡ, ಮುಧೋಳದ ಗೋವಿಂದ ಕಾರಜೋಳ, ಎಂಎಲ್‌ಸಿ ಆಗಿರುವ ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮಿಲೇಔಟ್ʼನ ಕೆ.ಗೋಪಾಲಯ್ಯ, ಚಿಕ್ಕನಾಯಕನಹಳ್ಳಿಯ ಜೆ.ಸಿ.ಮಾಧುಸ್ವಾಮಿ, ಎಂಎಲ್‌ಸಿ ಆಗಿರುವ ದಕ್ಷಿಣ ಕನ್ನಡದ ಕೋಟಾ ಶ್ರೀನಿವಾಸ ಪೂಜಾರಿ, ಔರಾದ್‌ನ ಪ್ರಭು ಚೌವ್ಹಾಣ್, ಗೋವಿಂದರಾಜನಗರದ ವಿ.ಸೋಮಣ್ಣ, ಸುಳ್ಯದ ಎಸ್.ಅಂಗಾರ, ವಿಜಯನಗರದ ಆನಂದ್ ಸಿಂಗ್, ನರಗುಂದದ ಸಿ.ಸಿ‌.ಪಾಟೀಲ್ ಅವರುಗಳು ರಾಜ್ಯಪಾಲರಿಂದ ಪ್ರಮಾಣ ಸ್ವೀಕಾರ ಮಾಡಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸುಮಾರು 75 ನಿಮಿಷಗಳ ಕಾಲ ನಡೆದ ಈ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಡಾ ಉಮೇಶ್ ಜಾಧವ್ ಒಳಗೊಂಡಂತೆ ಗಣ್ಯಾತಿ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದು, ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

  • ನೂತನ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ ಡಾ.ಕೆ.ಸುಧಾಕರ್.

ಇವರ ಜತೆಗೆ, ರಾಜರಾಜೇಶ್ವರ ನಗರದ ಶಾಸಕ ಮುನಿರತ್ನ ಅವರು ಕೂಡ ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.

ಕಳೆದ ಸಂಪುಟದಲ್ಲಿ ಹನ್ನೊಂದು ವಲಸಿಗರಿಗೆ ಅವಕಾಶ ಸಿಕ್ಕಿತ್ತು. ಈ ಬಾರಿ ಮುನಿರತ್ನ ಸೇರಿ ಹತ್ತು ವಲಸಿಗರಿಗೆ ಜಾಗ ಸಿಕ್ಕಿದೆ. ಶ್ರೀಮಂತ ಪಾಟೀಲ್‌, ಆರ್.‌ಶಂಕರ್‌ ಹಾಗೂ ಮಹೇಶ್‌ ಕುಮಟಳ್ಳಿ, ಎಚ್.‌ವಿಶ್ವನಾಥ್‌ ಅವರಿಗೆ ಚಾನ್ಸ್‌ ಸಿಕ್ಕಿಲ್ಲ.

ಗಮನಾರ್ಹ ಅಂಶಗಳು

ಪ್ರಮಾಣ ವಚನ ಸ್ವೀಕರಿಸಲು ಆಗಮಿಸಿದ ಬಹುತೇಕ ಶಾಸಕರು ತಮ್ಮ ಕೊರಳಿಗೆ ಕೇಸರಿ ಅಂಗ ವಸ್ತ್ರವನ್ನು ತೊಟ್ಟಿದ್ದರು. ಬಂಜಾರ ಸಮುದಾಯದ ಆಕರ್ಷಕ ಉಡುಗೆ ತೊಟ್ಟ ಪ್ರಭು ಚವ್ಹಾಣ್ ಅವರು ತಮ್ಮ ಉಡುಗೆ-ತೊಡುಗೆಯಿಂದ ಎಲ್ಲರ ಗಮನ ಸೆಳೆದರು. ಶಶಿಕಲಾ ಅಣ್ಣಾ ಸಾಹೇಬ ಜೊಲ್ಲೆ ಅವರು ಏಕೈಕ ಮಹಿಳಾ ಸದಸ್ಯೆಯಾಗಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು.

ಎಲ್ಲಾ ಸಚಿವರೂ ಕನ್ನಡ ಭಾಷೆಯಲ್ಲಿಯೇ ಹಾಗೂ ದೇವರ ಹೆಸರಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ಒಂದು ವಿಶೇಷವಾದರೆ ಮುರುಗೇಶ್ ನಿರಾಣಿ ಹಾಗೂ ಶಂಕರ್ ಪಾಟೀಲ್ ಮುನೇನ ಕೊಪ್ಪ ಅವರು ದೇವರ ಜೊತೆಗೆ ರೈತರ ಹೆಸರು ಸೇರಿಸಿ ಪ್ರಮಾಣ ವಚನ ಸ್ವೀಕರಿಸಿದರು.

ಅರೆಬೈಲ್ ಶಿವರಾಂ ಹೆಬ್ಬಾರ್ ಹಾಗೂ ಶಶಿಕಲಾ ಜೊಲ್ಲೆ ಅವರು ದೇವರ ಜೊತೆಗೆ ಕ್ಷೇತ್ರದ ಜನರ ಹೆಸರಲ್ಲೂ ಪ್ರಮಾಣ ಮಾಡಿದರು. ಆನಂದ್ ಸಿಂಗ್ ಅವರು ವಿಜಯನಗರದ ಪಂಪ ವಿರೂಪಾಕ್ಷ ಮತ್ತು ತಾಯಿ ಭುವನೇಶ್ವರಿ ಹೆಸರಿನಲ್ಲಿ ಹಾಗೂ ಬಿ.ಸಿ. ಪಾಟೀಲ್ ಅವರು ಜಗಜ್ಯೋತಿ ಬಸವೇಶ್ವರ ಹಾಗೂ ರೈತರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರಭು ಚೌವ್ಹಾಣ್ ಅವರು ಗೋಮಾತೆ ಹಾಗೂ ಸಂತ ಸೇವಾಲಾಲ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ಸಚಿವರಿಗೂ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಹೂ-ಗುಚ್ಛ ನೀಡಿ ಖುದ್ದು ಅಭಿನಂದಿಸಿ ಶುಭ ಹಾರೈಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸಿದರು.

ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ @TCGEHLOT ರವರು ಇಂದು ಮುಖ್ಯಮಂತ್ರಿ ಶ್ರೀ @BSBommai ರವರ ನೇತೃತ್ವದ ಸಚಿವ ಸಂಪುಟದ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇಂದು ಮಧ್ಯಾಹ್ನ 2:15 ರಿಂದ ನಡೆಯಲಿರುವ ಈ ಕಾರ್ಯಕ್ರಮದ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಬಹುದು.https://t.co/WaQa0YYOr8

— CM of Karnataka (@CMofKarnataka) August 4, 2021

13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಇಲ್ಲ

ಕೋಲಾರ ಸೇರಿದಂತೆ ಮೈಸೂರು, ಕಲಬುರಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಬೊಮ್ಮಾಯಿ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ.


ರೆಬೆಲ್‌ ಲೀಡರುಗಳಿಗೆ ಸಿಗದ ಚಾನ್ಸ್; ಆರು ಮಾಜಿಗಳು ಸೇರಿ ವಿಜಯೇಂದ್ರಗೂ ಅವಕಾಶ ಇಲ್ಲ

ಯಡಿಯೂರಪ್ಪ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ, ಹಾಗೂ ಸಚಿವರಾಗಿದ್ದ ಎಸ್.ಸುರೇಶ್‌ ಕುಮಾರ್‌, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್‌, ಆರ್.ಶಂಕರ್‌ ಅವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗುವ ಅವಕಾಶ ತಪ್ಪಿದೆ.

ಎಲ್ಲಕ್ಕಿಂತ ಮಿಗಿಲಾಗಿ, ಯಡಿಯೂರಪ್ಪ ಅವರ ವಿರುದ್ಧ ಬಹಿರಂಗ ಬಂಡಾಯ ಸಾರಿದ್ದ ಸಿ.ಪಿ.ಯೋಗೇಶ್ವರ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ.‌ ಇವರ ಜತೆ, ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ್ದ, ಇನ್ನೇನು ಮುಖ್ಯಮಂತ್ರಿ ಆಗಿಯೇ ಬಿಟ್ಟರು ಎನ್ನಲಾಗಿದ್ದ ಧಾರವಾಡ ದಕ್ಷಿಣ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಮಂತ್ರಿಯಾಗಿಲ್ಲ.

ಇವರ ಜತೆ ರೆಬೆಲ್‌ ಲೀಡರ್‌ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೂ ಸಚಿವ ಸ್ಥಾನ ನಿರಾಕರಿಸಲಾಗಿದೆ. ಇವರೊಂದಿಗೆ, ಮಂತ್ರಿಯಾಗುತ್ತಾರೆ ಎನ್ನಲಾಗಿದ್ದ ಬಿ.ವೈ.ವಿಜಯೇಂದ್ರ ಅವರಿಗೆ ಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಮಾಜಿ ಮುಖ್ಯಮಂತ್ರಿ ಬೆನ್ನಿಗೆ ನಿಂತಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೂ ಮಂತ್ರಿಯಾಗುವ ಚಾನ್ಸ್‌ ದೊರೆತಿಲ್ಲ.

ಈ ಬೆಳವಣಿಗೆ ಬಿಜೆಪಿ ಪಾಳಯದಲ್ಲಿ ಮಾತ್ರವಲ್ಲದೆ, ರಾಜ್ಯ ರಾಜಕಾರಣದಲ್ಲೇ ಎಲ್ಲರಿಗೂ ಶಾಕ್‌ ನೀಡಿದೆ. ಮತ್ತೊಂದೆಡೆ, ಬಂಡಾಯ ಮತ್ತೆ ಭುಗಿಲೇಳುತ್ತಾ ಎನ್ನುವ ಆತಂಕವೂ ಉಂಟಾಗಿದೆ. ಬೆಳಗ್ಗೆ ವಿಮಾನ ನಿಲ್ದಾಣದಿಂದ ನಗರಕ್ಕೆ ವಾಪಸ್‌ ಬಂದ ಯೋಗೇಶ್ವರ ಅವರ ಮುಖದಲ್ಲಿ ಅತೃಪ್ತಿಯ ಬೇಗುದಿ ಕಂಡುಬಂದಿತು.


ನೂತನ ಸಚಿವರು


1.ಗೋವಿಂದ ಕಾರಜೋಳ: ಮುದೋಳ
2.ಕೆ.ಎಸ್.‌ಈಶ್ವರಪ್ಪ: ಶಿವಮೊಗ್ಗ ನಗರ
3.ಆರ್.ಅಶೋಕ: ಪದ್ಮನಾಭ ನಗರ
4.ಬಿ.ಶ್ರೀರಾಮುಲು: ತೀರ್ಥಹಳ್ಳಿ
5.ವಿ.ಸೋಮಣ್ಣ: ಗೋವಿಂದರಾಜ ನಗರ
6.ಉಮೇಶ್‌ ಕತ್ತಿ: ಹುಕ್ಕೇರಿ
7.ಎಸ್.ಅಂಗಾರ: ಸುಳ್ಯ
8.ಜೆ.ಸಿ.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
9.ಅರಗ ಜ್ಞಾನೇಂದ್ರ: ತೀರ್ಥಹಳ್ಳಿ
10.ಡಾ.ಸಿ.ಎನ್.‌ಅಶ್ವತ್ಥನಾರಾಯಣ: ಮಲ್ಲೇಶ್ವರ
11.ಸಿ.ಸಿ.ಪಾಟೀಲ್:‌ ನರಗುಂದ
12.ಆನಂದ್‌ ಸಿಂಗ್:‌ ಹೊಸಪೇಟೆ
13.ಕೋಟಾ ಶ್ರೀನಿವಾಸ ಪೂಜಾರಿ: ವಿಧಾನ ಪರಿಷತ್‌ ಸದಸ್ಯ
14.ಪ್ರಭು ಚೌಹಾಣ್:‌ ಔರಾದ್
15.ಮುರುಗೇಶ್‌ ನಿರಾಣಿ: ಬೀಳಗಿ‌
16.ಶಿವರಾಮ್‌ ಹೆಬ್ಬಾರ್‌: ಯಲ್ಲಾಪುರ
17.ಎಸ್.‌ಟಿ.ಸೋಮಶೇಖರ್:‌ ಯಶವಂತಪುರ
18.ಬಿ.ಸಿ.ಪಾಟೀಲ್:‌ ಹಿರೇಕೇರೂರು
19.ಭೈರತಿ ಬಸವರಾಜ: ಕೆಆರ್‌ ಪುರ
20.ಡಾ.ಕೆ.ಸುಧಾಕರ್:‌ ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ: ಮಹಾಲಕ್ಷ್ಮೀ ಲೇಔಟ್
‌22.ಶಶಿಕಲಾ ಜೊಲ್ಲೆಅಣ್ಣಾ ಸಾಹೇಬ್
23.ಎಂಟಿಬಿ ನಾಗರಾಜ್:‌ ವಿಧಾನ ಪರಿಷತ್‌ ಸದಸ್ಯ
24.ಡಾ.ಕೆ.ಸಿ.ನಾರಾಯಣ ಗೌಡ: ಕೆ.ಆರ್.‌ಪೇಟೆ
25.ಬಿ.ಸಿ.ನಾಗೇಶ್:‌ ತಿಪಟೂರು
26.ಸುನೀಲ್‌ ಕುಮಾರ್:‌ ಕಾರ್ಕಳ
27.ಹಾಲಪ್ಪ ಆಚಾರ್:‌ ಯಲಬುರ್ಗಾ
28.ಶಂಕರ ಪಾಟೀಲ್‌ ಮುನೇನಕೊಪ್ಪ: ನವಲಗುಂದ
29.ಮುನಿರತ್ನ: ರಾಜರಾಜೇಶ್ವರಿ ನಗರ

'ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವರುಗಳಿಗೆ ಹಾರ್ದಿಕ ಅಭಿನಂದನೆಗಳು. ಒಟ್ಟಾಗಿ, ಕರ್ನಾಟಕದ ಜನರ ಆಶೋತ್ತರಗಳು ಮತ್ತು ಪ್ರಧಾನಿ ಶ್ರೀ @narendramodi ರವರ ದೂರದೃಷ್ಟಿಗೆ ಅನುಗುಣವಾಗಿ ಅಭಿವೃದ್ಧಿ, ಬೆಳವಣಿಗೆ ಮತ್ತು ರಾಜ್ಯದಲ್ಲಿ ಸಮೃದ್ಧಿಯ ಹೊಸ ಯುಗವನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ': ಸಿಎಂ @BSBommai pic.twitter.com/g6p7JNHUT2

— CM of Karnataka (@CMofKarnataka) August 4, 2021
Tags: basavaraj bommaibjp governmentcabinetkarnatakanew ministers oath takingThawar Chand Gehlot
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ

ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 T ಸೂತ್ರ

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 T ಸೂತ್ರ

3 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ವಿಕ್ರಮ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಂಗೀತ ಎಲ್ಲವೂ ಒಬ್ಬರದೇ.. ಅವರೇ ಶ್ರೀಮನ್’ಸಿದ್ದರಾಮಣ್ಣ!!

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ