• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ

cknewsnow desk by cknewsnow desk
August 4, 2021
in CRIME
Reading Time: 1 min read
0
ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ
938
VIEWS
FacebookTwitterWhatsuplinkedinEmail

ಮೈಸೂರು: ಜಿಲ್ಲೆಯ ನಂಜನಗೂಡು ಮಕ್ಕಳ ಮಾರಾಟ ಜಾಲ ಪ್ರಕರಣ ಸಂಬಂಧ ಮಹಿಳೆಯರಿಬ್ಬರನ್ನು ಬಂದಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚೇತನ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಸ್ಪಿ ಅವರು, ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಒಂದು ಮಗು ಮಾರಾಟದ ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಹಲವು ಮಕ್ಕಳ ಮಾರಾಟದ ಸುಳಿವು ಲಭಿಸಿತ್ತು. ಪ್ರಕರಣದಲ್ಲಿ ಆರೋಪಿಗಳ ಜಾಲದ ಪತ್ತೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಅವರ ಸೂಚನೆಯಂತೆ ಅಪರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ನಂಜನಗೂಡು ಉಪವಿಭಾಗ ಡಿಎಸ್ಪಿ ಗೋವಿಂದರಾಜು ಅವರ ಮಾರ್ಗದರ್ಶನದಲ್ಲಿ ನಂಜನಗೂಡು ವೃತ್ತ ಸಿ.ಪಿ.ಐ ಲಕ್ಷ್ಮೀಕಾಂತ್ ಕೆ ತಳವಾರ್, ನಂಜನಗೂಡು ಪಟ್ಟಣ ಪಿ.ಎಸ್.ಐ ವಿಜಯ್‍ರಾಜ್, ಪಿಎಸ್‍ಐ ಚೆಲುವಯ್ಯ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡದವರು ಈ ಪ್ರಕರಣ ಸಂಬಂಧ ನಂಜನಗೂಡು ಪಟ್ಟಣದ ಆರ್.ಪಿ. ರಸ್ತೆ 3ನೇ ಕ್ರಾಸ್ ವಾಸಿ ಗೃಹಿಣಿ ಶ್ರೀಮತಿ (60) ಹಾಗೂ ಶ್ರೀಲಕ್ಷ್ಮಿ (31) ಅವರುಗಳನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಚೇತನ್ ತಿಳಿಸಿದರು.

ವಿಚಾರಣೆ ಸಮಯದಲ್ಲಿ ಇವರುಗಳು ಜ್ಯೋತಿ ಎಂಬುವವರ ಗಂಡು ಮಗುವನ್ನು ಹೊಳೇನರಸೀಪುರ ತಾಲೂಕು ಉದ್ದೂರು ಹೊಸಳ್ಳಿಯ ಯಶೋದಮ್ಮ ಅವರಿಗೆ ಹಣಕ್ಕಾಗಿ ಮಾರಾಟ ಮಾಡಿದ್ದು ತಿಳಿದು ಬಂದಿದೆ. ನಂತರ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈ ಆರೋಪಿಗಳು ಮಂಜುಳಾ ಅವರಿಗೆ ಜನಿಸಿದ ಹೆಣ್ಣು ಮಗುವನ್ನು ಕೊಳ್ಳೇಗಾಲ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಚೈತ್ರಾ ಅವರಿಗೆ ಮಾರಾಟ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಮಕ್ಕಳನ್ನು ಮೈಸೂರಿನ ಬಾಪೂಜಿ ಮಕ್ಕಳ ಆರೈಕೆ ಕೇಂದ್ರದಲ್ಲಿರಿಸಲಾಗಿದೆ.

ಆರೋಪಿತರು ಮಕ್ಕಳಿಲ್ಲದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಡತನದಲ್ಲಿರುವ ಗರ್ಭಿಣಿಯವರನ್ನು ಪರಿಚಯ ಮಾಡಿಕೊಂಡು ಪೂರ್ವ ನಿಯೋಜಿತವಾಗಿ ಮಕ್ಕಳಿಲ್ಲದವರಿಗೆ ಮಗುವನ್ನು ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಎಸ್.ಎಲ್.ಇ.ಎಸ್ ಆಸ್ಪತ್ರೆಯಲ್ಲಿ ಗರ್ಭಿಣಿಯ ಹೆಸರಿಗೆ ಬದಲಾಗಿ ಮಕ್ಕಳನ್ನು ಪಡೆಯುವವರ ಹೆಸರಿಗೆ ಆಸ್ಪತ್ರೆಯ ದಾಖಲೆಗಳನ್ನು ಸೃಷ್ಟಿಸಿರುವುದು ಸಹ ತನಿಖೆಯಲ್ಲಿ ಕಂಡು ಬಂದಿದೆ ಎಂದು ಎಸ್ಪಿ ಅವರು ತಿಳಿಸಿದರು.

ಈ ಪ್ರಕರಣವನ್ನು ಭೇದಿಸುವಲ್ಲಿ ಭಾಗಿಯಾಗಿದ್ದ ನಂಜನಗೂಡು ವೃತ್ತ ಸಿ.ಪಿ.ಐ ಲಕ್ಷ್ಮೀಕಾಂತ್ ಕೆ. ತಳವಾರ್, ನಂಜನಗೂಡು ಪಟ್ಟಣ ಪಿ.ಎಸ್.ಐ ವಿಜಯ್‍ರಾಜ್, ಪಿಎಸ್‍ಐ ಚೆಲುವರಾಜು, ಎ.ಎಸ್.ಐ ಅಫೀಜುಲ್ಲಾ ಷರೀಫ್, ಅಜ್ಜಯ್ಯ , ಸುಶೀಲ್ ಕುಮಾರ್, ಸುನಿತಾ, ನಳಿನಾಕ್ಷಿ ಅವರುಗಳ ಕಾರ್ಯವನ್ನು ಎಸ್ಪಿ ಚೇತನ್ ಅವರು ಶ್ಲಾಘಿಸಿದರು.

Tags: crimekarnatakakids theft gangkids theft rocketmysorenanjangud
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

by cknewsnow desk
May 17, 2024
0

ಹೊಸ ಬಾಂಬ್‌ ಸ್ಫೋಟಿಸಿದ ವಕೀಲ ಬಿಜೆಪಿ ನಾಯಕ ದೇವರಾಜೇಗೌಡ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೋಲ್ಕತಾ ಗಲ್ಲಿಯ ಮನೆಯೊಂದರಲ್ಲಿ ಅಡಗಿದ್ದರು

by cknewsnow desk
April 12, 2024
0

ರಾಜ್ಯ ರಾಜ್ಯಗಳನ್ನು ದಾಟಿ ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದರು

ಮಹಿಳೆಯರ ಸುರಕ್ಷತೆ ಕಾರಣ; ಒಂದೆರಡು ದಿನದಲ್ಲೇ ರಾಜ್ಯದಲ್ಲಿ ಆಸಿಡ್ ನಿಷೇಧ

ಮಹಿಳೆಯರ ಸುರಕ್ಷತೆ ಕಾರಣ; ಒಂದೆರಡು ದಿನದಲ್ಲೇ ರಾಜ್ಯದಲ್ಲಿ ಆಸಿಡ್ ನಿಷೇಧ

by cknewsnow desk
March 7, 2024
0

ಎಲ್ಲರ ಕೈಗೂ ಸುಲಭವಾಗಿ ಸಿಗದಂತೆ ಕ್ರಮ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಡಿಯಾ ಶಾಖೆಯಲ್ಲಿ ದರೋಡೆಗೆ ಶೌಚಾಲಯದಿಂದ ಕನ್ನ ಕೊರೆದ ಖದೀಮರು

ಸ್ಟೇಟ್‌ ಬ್ಯಾಂಕ್‌ ಆಫ್‌ ಇಡಿಯಾ ಶಾಖೆಯಲ್ಲಿ ದರೋಡೆಗೆ ಶೌಚಾಲಯದಿಂದ ಕನ್ನ ಕೊರೆದ ಖದೀಮರು

by cknewsnow desk
March 7, 2024
0

ಲಾಕರ್‌ ಒಡೆಯಲು ವಿಫಲ ಯತ್ನ

Next Post
ಹಳಬರು+ಹೊಸಬರು+ವಲಸಿಗರು=29 ಸಚಿವರ ಬೊಮ್ಮಾಯಿ ಸಂಪುಟ

ಚಿಕ್ಕಬಳ್ಳಾಪುರಕ್ಕೆ ಡಾ.ಕೆ.ಸುಧಾಕರ್, ಕೋಲಾರಕ್ಕೆ ಮುನಿರತ್ನ ಉಸ್ತುವಾರಿ & ಅಶೋಕ್‌ಗೆ ಬೆಂಗಳೂರು ನಗರ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿಗೆ ಹೊಸ ವಲಯ ಅರಣ್ಯಾಧಿಕಾರಿ

ಬಾಗೇಪಲ್ಲಿಗೆ ಹೊಸ ವಲಯ ಅರಣ್ಯಾಧಿಕಾರಿ

4 years ago
ಗುಡಿಬಂಡೆ: ಪತಿಗೆ ಊಟ ಒಯ್ಯುವ ಸಮಯಕ್ಕೇ ಹೊಂಚು ಹಾಕಿ ಮನೆಯಲ್ಲಿ ಹಣ, ಚಿನ್ನ ದೋಚಿದ ಕಳ್ಳರು

ಗುಡಿಬಂಡೆ: ಪತಿಗೆ ಊಟ ಒಯ್ಯುವ ಸಮಯಕ್ಕೇ ಹೊಂಚು ಹಾಕಿ ಮನೆಯಲ್ಲಿ ಹಣ, ಚಿನ್ನ ದೋಚಿದ ಕಳ್ಳರು

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ