• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ವೀರ ಸೈನಿಕ ತಂದ ಚಿನ್ನ; ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬಂಗಾರ

cknewsnow desk by cknewsnow desk
August 13, 2021
in NATION, WORLD
Reading Time: 2 mins read
0
ವೀರ ಸೈನಿಕ ತಂದ ಚಿನ್ನ; ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬಂಗಾರ
1k
VIEWS
FacebookTwitterWhatsuplinkedinEmail

ಜಾವೆಲಿನ್ ಥ್ರೋನಲ್ಲಿ ಸ್ವರ್ಣ ಪದಕ ಗೆದ್ದ ನೀರಜ್ ಚೋಪ್ರಾ

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಶನಿವಾರದಂದು ಸುವರ್ಣ ಇತಿಹಾಸ ಬರೆಯಿತು.

ಜಾವಲಿನ್‌ ಪಟು ಹಾಗೂ ನಮ್ಮ ಹೆಮ್ಮೆಯ ಸೇನೆಯಲ್ಲಿ ಸುಬೇದಾರ್‌ ಆಗಿರುವ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆದ್ದಿದ್ದು, ಜಾವಲಿನ್‌ ಥ್ರೋ ಫೈನಲ್‌ ಸ್ಪರ್ಧೆಯಲ್ಲಿ 85.30 ಮೀಟರ್ ಎಸೆದು ಬಂಗಾರದ ಪದಕ ಗೆದ್ದುಕೊಂಡು ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದರು.

ಭಾರತದ ಮಟ್ಟಿಗೆ ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಸ್ವಾತಂತ್ರ್ಯ ಬಂದ ನಂತರ ಬಳಿಕ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅಥ್ಲೀಟಿಕ್ಸ್‌ ವಿಭಾಗದಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದು ಕೊಟ್ಟ ಹಿರಿಮೆಗೆ ನೀರಜ್‌ ಚೋಪ್ರಾ ಪಾತ್ರರಾಗಿದ್ದಾರೆ.

A special day for @Neeraj_Chopra1 and a special day for @WeAreTeamIndia! 🥇

It's a first gold medal at #Tokyo2020 and a first ever athletics gold for #IND pic.twitter.com/qF4BIXSK93

— The Olympic Games (@Olympics) August 7, 2021

ICONIC. #IND pic.twitter.com/2kbYByNGOn

— The Olympic Games (@Olympics) August 7, 2021

HISTORY. MADE.

Neeraj Chopra of #IND takes #gold in the #Athletics men’s javelin final on his Olympic debut!

He is the first Indian to win an athletics medal and only the second to win an individual medal!@WorldAthletics | #StrongerTogether | #Tokyo2020 | @WeAreTeamIndia pic.twitter.com/zBtzHNqPBE

— The Olympic Games (@Olympics) August 7, 2021

ಚೋಪ್ರಾ ಗೆಲುವಿನ ಹಾದಿ ರೋಚಕವಾಗಿತ್ತು. ಮೊದಲ ಪ್ರಯತ್ನದಲ್ಲಿ ಅವರು 87.03 ಮೀಟರ್‌ ದೂರ ಎಸೆದು ಪ್ರಥಮ ಸುತ್ತಿನಲ್ಲೇ ಮೊದಲಿಗರಾಗಿ ಹೊರಹೊಮ್ಮಿದರಲ್ಲದೆ, ಜರ್ಮನಿಯ ಜೂಲಿಯನ್ ವೇಬರ್ ಅವರು 85.30 ಮೀಟರ್ ದೂರ ಎಸೆಯುವ ಮೂಲಕ ದ್ವಿತೀಯ ಸ್ಥಾನಕ್ಕಷ ಬಂದು ನಿಂತರು.

ವಿಶೇಷವೆಂದರೆ, ಪ್ರಥಮ ಸುತ್ತಿನಲ್ಲಿ ಯಾವ ಜಾವಲಿನ್‌ ಪಟು ಕೂಡ 85 ಮೀಟರ್‌ಗಿಂತ ಹೆಚ್ಚು ದೂರ ಜಾವಲಿನ್ ಎಸೆಯಲು ಸಾಧ್ಯವಾಗಲಿಲ್ಲ. ಅಲ್ಲಿಯೇ ನೀರಜ್‌ ತಮ್ಮ ಶಕ್ತಿ ಏನೆಂಬುದನ್ನು ತೋರಿಸಿಕೊಂಡಿದ್ದರು.

ಎರಡನೇ ಪ್ರಯತ್ನದಲ್ಲೂ ನೀರಜ್‌ ಮತ್ತಷ್ಟು ಬಲವಾಗಿ ಜಾವೆಲಿನ್‌ ಥ್ರೋ ಮಾಡಿದರು. ಈ ಪ್ರಯತ್ನದಲ್ಲಿ ಅವರು 87.58 ಮೀಟರ್ ದೂರ ಜಾವಲಿನ್ ಎಸೆದರು. ಉಳಿದಂತೆ ಈ ಪ್ರಯತ್ನದಲ್ಲಿ ವೇಬರ್‌ 77.90 ಮೀಟರ್ ದೂರವಷ್ಟೇ ಎಸೆದು ಹಿಂದೆ ಬಿದ್ದರು.

ಮೂರನೇ ಪ್ರಯತ್ನಕ್ಕೆ ಬರುವಷ್ಟರಲ್ಲಿ ನೀರಜ್‌ ಕೊಂಚ ಧಣಿದಂತೆ ಕಂಡುಬಂದರೂ ಈ ಪ್ರಯತ್ನದಲ್ಲಿ ಅವರು 76.79 ಮೀಟರ್ ದೂರವಷ್ಟೇ ಎಸೆಯಲು ಶಕ್ತರಾದರು. ಇದು ಹೀಗಿದ್ದರೆ, ಜರ್ಮನಿಯ ಜಾವೆಲಿನ್‌ ಪಟು ವೆಬರ್‌ರನ್ನು ಹಿಂದಿಕ್ಕಿದ ಜೆಕ್ ರಿಪಬ್ಲಿಕ್‌ನ ವಿಜೆಲ್ವ್ ವೆಸ್ಲೇ 85.44 ಮೀಟರ್‌ ದೂರ ಎಸೆಯುವ ಮೂಲಕ ಅಚ್ಚರಿಯ ರೀತಿಯಲ್ಲಿ ಎರಡನೇ ಸ್ಥಾನಕ್ಕೇರಿದರು.

ನಾಲ್ಕನೇ ಪ್ರಯತ್ನಕ್ಕೆ ಬರುವಷ್ಟರಲ್ಲಿ ಇನ್ನಷ್ಟು ಹಿಂದೆ ಬಿದ್ದಂತೆ ಕಂಡ ನೀರಜ್‌ ಗೆರೆ ದಾಟಿಬಿಟ್ಟು ಪೌಲ್‌ ಮಾಡಿಕೊಂಡರಲ್ಲೆ, ಅಂತಿಮ ಸುತ್ತಿನಲ್ಲಿ 80 ಮೀಟರ್ ಮೀರಲು ಅವರಿಗೆ ಆಗಲಿಲ್ಲ.

ಗಮನಾರ್ಹ ಅಂಶವೆಂದರೆ, ಜಾವೆಲಿನ್‌ ಥ್ರೋ ವಿಭಾಗದಲ್ಲಿ ಜಗತ್ತಿನ ನಂ.1 ಸ್ಥಾನದಲ್ಲಿದ್ದ  ಜೊಹಾನಸ್‌ ವೆಟ್ಟರ್ ಅವರು ಫೈನಲ್‌ 8ರ ಪಟ್ಟಿಗೇ ಬರಲು ಶಾಧ್ಯವಾಗಲೇ ಇಲ್ಲ.

ವೈಯಕ್ತಿಕ 96.29 ಮೀಟರ್ ದೂರ ಎಸೆದು ದಾಖಲೆ ಮಾಡಿದ್ದ ಅವರು, ನೀರಸ ಪ್ರದರ್ಶನ ತೋರಿದರು.

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ ವಿಭಾಗದಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್‌ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಮಹೋನ್ನತ ಸಾಧನೆಯನ್ನು ನೀರಜ್‌ ಮಾಡಿದ್ದಾರೆ.

Unprecedented win by Neeraj Chopra!Your javelin gold breaks barriers and creates history. You bring home first ever track and field medal to India in your first Olympics. Your feat will inspire our youth. India is elated! Heartiest congratulations!

— President of India (@rashtrapatibhvn) August 7, 2021

History has been scripted at Tokyo! What @Neeraj_chopra1 has achieved today will be remembered forever. The young Neeraj has done exceptionally well. He played with remarkable passion and showed unparalleled grit. Congratulations to him for winning the Gold. #Tokyo2020 https://t.co/2NcGgJvfMS

— Narendra Modi (@narendramodi) August 7, 2021

ನಮ್ಮ ಸೈನಿಕ, ನಮ್ಮ ಹೆಮ್ಮೆ

ನೀರಜ್ ಚೋಪ್ರಾ ಜನಿಸಿದ್ದು ಡಿಸೆಂಬರ್ 24, 1997ರಂದು. ಹರಿಯಾಣ ಪಾಣಿಪತ್ ನಗರದ ಖಂದ್ರಾ ಎಂಬ ಹಳ್ಳಿ ಇವರ ಜನ್ಮಸ್ಥಳ. ಶಿಕ್ಷಣ ಪಡೆದಿದ್ದು ಚಂಡೀಗಡದ ಡಿಎವಿ ಕಾಲೇಜಿನಲ್ಲಿ. ಬಳಿಕ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೂನಿಯರ್ ಕಮೀಷನ್ಡ್ ಆಫೀಸರ್) ಆಗಿ ಸೇನೆಗೆ ಸೇರಿದ ಅವರು, ಈಗ ಸುಬೇದಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನು, ನೀರಜ್ ಚೋಪ್ರಾ ಅವರು 2016ರ ದಕ್ಷಿಣ ಏಷ್ಯನ್ ಕ್ರೀಡಾಕೂಟದಲ್ಲಿ 82.23 ಮೀ. ಜಾವೆಲಿನ್ ಎಸೆದು ಚಿನ್ನದ ಪದಕ ಪಡೆಯುವುದರೊಂದಿಗೆ ಭಾರತದ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿಸಿದ್ದರು. ಜತೆಗೆ; ಪೋಲೆಂಡ್ ದೇಶದಲ್ಲಿ ನಡೆದ 2016ರ ಐಎಎಎಫ್ ಕಿರಿಯರ ವಿಶ್ವ ಕ್ರೀಡಾಕೂಟ ಚಾಂಪಿಯನ್ ಶಿಪ್‌ʼನಲ್ಲಿಯೂ ಚಿನ್ನದ ಪದಕ ಗೆದ್ದಿದ್ದರು. ಅವರು ವಿಶ್ವ ಜೂನಿಯರ್ ದಾಖಲೆಯನ್ನು ಕೂಡ ಮಾಡಿದ್ದರು.

2017ರ ಏಷ್ಯನ್ ಅಥ್ಲೇಟಿಕ್ ಚಾಂಪಿಯನ್ ಶಿಪ್‌ನಲ್ಲಿ ನೀರಜ್ ಅವರು 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದರು. 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 86.47 ಮೀ. ಜಾವೆಲಿನ್ ಎಸೆದು ಹೊಸ ದಾಖ ಸ್ಥಾಪಿಸಿದ್ದರು. ಇದರೊಂದಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬಂಗಾರದ ಪದಕ ಗೆದ್ದ ಮೊದಲಿಗರಾಗಿ ಜಾವೆಲಿನ್ ಎಸೆತ ವಿಭಾಗದಲ್ಲಿ ಗುರುತಿಸಿಕೊಂಡರು.

2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದರು. ಪ್ರಸ್ತುತ ಇವರು ಉವ್ ಹೋನ್ ಅವರಿಂದ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. 2018ರ ಅಗಸ್ಟ್ 27ರಂದು ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ನೀರಜ್ 88.06 ಮೀ. ಜಾವೆಲಿನ್ ಎಸೆತದೊಂದಿಗೆ ಪುರುಷರ ಜಾವೆಲಿನ್ ಎಸೆತ ವಿಭಾಗದಲ್ಲಿ ಸ್ವರ್ಣ ಪದಕ ಗೆಲ್ಲುವುದರೊಂದಿಗೆ ಅವರ ವೈಯಕ್ತಿಕ ಉತ್ತಮ ದಾಖಲೆಯನ್ನೂ ಮಾಡಿದ್ದರು.

ಫಿನ್‌ಲ್ಯಾಂಡ್‌ ಲ್ಯಾಪಿನ್ಲಾಟಿಯಲ್ಲಿ ನಡೆದ “ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದರು. ಜಾವೆಲಿನ್ ಥ್ರೋ ಫೈನಲ್‌ನಲ್ಲಿ ನೀರಜ್ ಚೋಪ್ರಾ 87.58 ಮೀಟರ್ ಅತ್ಯುತ್ತಮ ಎಸೆತದಲ್ಲಿ ಮೇಲುಗೈ ಸಾಧಿಸಿ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ಚಿನ್ನ ಗೆದ್ದರು.

ಸ್ವರ್ಣ ಪದಕ

2018ರ ಏಷ್ಯನ್ ಕ್ರೀಡಾಕೂಟ: ಇಂಡೋನೇಷ್ಯಾದ ಜಕಾರ್ತ
2018ರ ಕಾಮನ್ ವೆಲ್ತ್ ಕ್ರೀಡಾಕೂಟ: ಗೋಲ್ಡ್ ಕೋಸ್ಟ್
2017ರ ಏಷ್ಯನ್ ಚಾಂಪಿಯನ್ ಶಿಪ್ಸ್: ಭುವನೇಶ್ವರ
2016ರ ಸೌತ್ ಏಷ್ಯನ್ ಕ್ರೀಡಾಕೂಟ ಗುವಾಹಾಟಿ/ಶಿಲ್ಲಾಂಗ್:
2016ರ ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ಸ್ ಬೈಡ್ಗೊಸ್ಜ್
2020 ಒಲಿಂಪಿಕ್ಸ್ ಕ್ರೀಡಾಕೂಟ:‌ ಟೋಕಿಯೋ

  • ಮಾಹಿತಿ ಕೃಪೆ: ವಿಕಿಪೀಡಿಯಾ
Tags: athleticsgold medalistindiaNeeraj chopraOlympics 2021Tokyo olympics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಮೊದಲ ದಿನವೇ ಆದೇಶಕ್ಕೆ ಸಹಿ ಹಾಕಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಮೊದಲ ದಿನವೇ ಆದೇಶಕ್ಕೆ ಸಹಿ ಹಾಕಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Leave a Reply Cancel reply

Your email address will not be published. Required fields are marked *

Recommended

ಪ್ರಭಾಸ್‌ ಜತೆ ಪ್ರಶಾಂತ್‌ ನೀಲ್‌ ಪಿಕ್ಚರ್;‌ ಟಾಲಿವುಡ್‌ನಿಂದ ನ್ಯೂಸ್‌ ಪ್ಲ್ಯಾಷ್

ಪ್ರಭಾಸ್‌ ಜತೆ ಪ್ರಶಾಂತ್‌ ನೀಲ್‌ ಪಿಕ್ಚರ್;‌ ಟಾಲಿವುಡ್‌ನಿಂದ ನ್ಯೂಸ್‌ ಪ್ಲ್ಯಾಷ್

4 years ago
ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ