• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಇದು ತೇಲುವ ಚಿನ್ನ!!

cknewsnow desk by cknewsnow desk
August 12, 2021
in CRIME, STATE
Reading Time: 1 min read
0
ಇದು ತೇಲುವ ಚಿನ್ನ!!
1.2k
VIEWS
FacebookTwitterWhatsuplinkedinEmail

80 ಕೆಜಿ ತಿಮಿಂಗಿಲ ವಾಂತಿ ಬೆಲೆ 80 ಕೋಟಿ ರೂ.ಗಳಿಗೂ ಹೆಚ್ಚು; ಸಿಸಿಬಿ ಬಲೆಗೆ ಬಿದ್ದ ಖತರ್ನಾಕ್‌ ಗ್ಯಾಂಗ್

ಬೆಂಗಳೂರು: ತೇಲುವ ಚಿನ್ನ ಎಂದೇ ಹೆಸರಾಗಿರುವ ತಿಮಿಂಗಿಲದ ವಾಂತಿಯ ಗಟ್ಟಿಗೆ ಭಾರೀ ಬೇಡಿಕೆ ಇದ್ದು, ಈ ಡಿಮಾಂಡನ್ನೇ ಲಾಭ ಮಾಡಿಕೊಳ್ಳಲು ಹೊಂಚು ಹಾಕುತ್ತಿರುವ ಕೆಲವರು ಇದನ್ನೇ ದೊಡ್ಡ ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ.

ನಿಷೇಧಿತ ತಿಮಿಂಗಿಲದ ವಾಂತಿಯ ಗಟ್ಟಿ ಅಥವಾ ಅಂಬರ್‌ ಗ್ರೀಸ್‌ ಮಾರಾಟ ಮಾಡುತ್ತಿದ್ದ ಖತರ್ನಾಕ್‌ ಜಾಲವೊಂದನ್ನು ಬೇಧಿಸಿರುವ ನಗರದ ಸಿಸಿಬಿ ಪೊಲೀಸರು, ಸುಮಾರು 80 ಕೋಟಿ ರೂ.ಗಳಿಗೂ ಹೆಚ್ಚು ಬೆಲೆ ಬಾಳುವ 80 ಕೆಜಿಯಷ್ಟು ಅಂಬರ್‌ ಗ್ರೀಸ್‌ ಅನ್ನು ವಶಪಡಿಸಿಕೊಂಡಿದ್ದಾರೆ.

Unique catch by CCB..80 Kgs of Ambergris (also called Floating Gold) seized worth Rs 80 cr!! is product of Sperm Whales..was intended to be smuggled out of Ind..is in high demand in Intl market..5 arrested..@CPBlr @BlrCityPolice pic.twitter.com/rrNflAjPkj

— Sandeep Patil IPS (@ips_patil) August 10, 2021

ಅಲ್ಲದೆ, ಕೃತ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಿ 80 ಕೆಜಿಯಷ್ಟು ಅಂಬರ್‌ ಗ್ರೀಸ್‌, ಬ್ರಿಟೀಷ್‌ ಈಸ್ಟ್‌ ಇಂಡಿಯಾ ಕಂಪನಿಯ ಎರಡು ತಾಮ್ರದ ರೆಡ್‌ ಮರ್ಕ್ಯೂರಿ ಬಾಟಲ್‌ಗಳು, 1818ರಲ್ಲಿ ತಯಾರಾಗಿದ್ದು ಎನ್ನಲಾದ ಈಸ್ಟ್‌ ಇಂಡಿಯಾ ಕಂಪನಿಯ ಸ್ಟೀಮ್‌ ಫ್ಯಾನ್‌ ಅನ್ನು ವಶಪಡಿಸಿಕೊಂಡು ಬಾಗಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.‌

ಅಪರಾಧ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಮತ್ತು ಉಪ ಪೊಲೀಸ್‌ ಆಯಕ್ತ ಕೆ.ಪಿ.ರವಿಕುಮಾರ್‌ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್‌ ಆಯುಕ್ತ ಎನ್.‌ಹನುಮಂತರಾಯ, ಇನಸ್ಪೆಕ್ಟರ್‌ ಶಿವಪ್ರಸಾದ್‌, ಸಿಬ್ಬಂದಿಯಾದ ಅನಂತಕೃಷ್ಣ, ನಾಗರಾಜ್‌, ಶ್ರೀನಿವಾಸ್‌, ವಿನೋದ್‌ ಭಾಗಿಯಾಗಿದ್ದರು.

  • ವೀರ್ಯ ತಿಮಿಂಗಿಲ

ಏನಿದು ಅಂಬರ್‌ ಗ್ರೀಸ್?

ಅಂಬರ್‌ ಗ್ರೀಸ್‌ ಪದಾರ್ಥಕ್ಕೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು ಸುಗಂಧ ದ್ರವ್ಯ, ಲೈಂಗಿಕ ಶಕ್ತಿ ವೃದ್ಧಿಸುವ ಪದಾರ್ಥಗಳ ತಯಾರಿಕೆಯಲ್ಲಿ ಬಳಸಿಕೊಳ್ಳಲಾಗುತ್ತದೆ. ಕಲ್ಲಿನಾಕಾರದಲ್ಲಿರುವ ಹೊಳೆಯುವ ಈ ಪದಾರ್ಥವೂ ಒಂದು ಕೆಜಿ ಒಂದು ಕೊಟೀ ಬೆಲೆ ಬಾಳುತ್ತದೆ ಎಂದು ಹೇಳಲಾಗುತ್ತದೆ.

ಕೆಲ ದಿನಗಳ ಹೊಂದೆ ಮುರುಡೇಶ್ವರ ಕಡಲ ಕಿನಾರೆಯಲ್ಲಿ ಮೀನುಗಾರನೊಬ್ಬನಿಗೆ ಅಂಬರ್‌ ಸ್ರೀಸ್‌ ಸಿಕ್ಕಿತ್ತು. ನಂತರ ಅದನ್ನು ಹೊನ್ನಾವರದ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿತ್ತು. ಅದನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದ್ದ ತಜ್ಞರು ಅಂಬರ್‌ ಗ್ರೀಸ್‌ ಎಂದು ಗುರುತಿಸಿದ್ದರು. ಸಾಮಾನ್ಯವಾಗಿ ಇದನ್ನು ಇಂಗ್ಲೀಷ್‌ನಲ್ಲಿ ಅಂಬರ್‌ ಗ್ರೀಸ್ (ವೈಜ್ಞಾನಿಕ ಹೆಸರೂ ಹೌದು) ಎಂದು, ಕನ್ನಡದಲ್ಲಿ ತಿಮಿಂಗಿಲ ವಾಂತಿ ಎಂದು ಕರೆಯಲಾಗುತ್ತದೆ. ತಿಮಿಂಗಿಲವು ತಾನು ಸೇವಿಸಿದ ಆಹಾರ ಜೀರ್ಣವಾಗದೇ ಹೊರಕ್ಕೆ ಹಾಕಿದಾಗ ಹೊರಬರುವ ದ್ರವಮಿಶ್ರಿತ ಘನ ವಸ್ತುವಿಗೆ ಅಂಬರ್‌ ಗ್ರೀಸ್ ಇಲ್ಲವೇ ತಿಮಿಂಗಿಲ ವಾಂತಿ ಎಂದು ಕರೆಯಲಾಗುತ್ತದೆ.

ಅಂಬರ್‌ ಗ್ರೀಸ್‌ಗಾಗಿ ತಿಮಿಂಗಿಲಗಳನ್ನು ಕೊಲ್ಲಲಾಗುತ್ತಿರುವ ಕಾರಣಕ್ಕೆ ಅನೇಕ ದೇಶಗಳಲ್ಲಿ ಈ ಪದಾರ್ಥವನ್ನು ಕೊಳ್ಳುವುದು, ಮಾರಾಟ ಮಾಡುವದನ್ನು ನಿಷೇಧ ಮಾಡಲಾಗಿದೆ. ಅದರಲ್ಲೂ ವೀರ್ಯ ತಿಮಿಂಗಿಲಗಳನ್ನು ಭಾರೀ ಪ್ರಮಾಣದಲ್ಲಿ ಕೊಲ್ಲಲಾಗುತ್ತಿತ್ತು. ಅವುಗಳ ತೈಲ, ಬೆನ್ನುಮೂಳೆ ಹಾಗೂ ಅಂಬರ್‌ ಗ್ರೀಸ್‌ಗಾಗಿ ಸಾವಿರಾರು ತಿಮಿಂಗಿಲಗಳ ಹತ್ಯೆ ಮಾಡಲಾಗಿದೆ. ಈ ಕಾರಣಕ್ಕೆ ಜಗತ್ತಿನ ಅನೇಕ ದೇಶಗಳಲ್ಲಿ ತಿಮಿಂಗಿಲಗಳನ್ನು ಕೊಲ್ಲುವುದು ಹಾಗೂ ಅಂಬರ್‌ ಗ್ರೀಸ್‌ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

Tags: Ambergrisbangaloreccbillegal salekarnatakapoliceSperm whale
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ

Leave a Reply Cancel reply

Your email address will not be published. Required fields are marked *

Recommended

ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

ಅಧಿಕ ರಕ್ತದೊತ್ತಡದ ಕಾರಣಕ್ಕೆ ಹೈದರಾಬಾದ್‌ನ ಅಪೊಲೋ ಆಸ್ಪತ್ರೆಗೆ ಸೇರಿದ ಸೂಪರ್‌ಸ್ಟಾರ್‌ ರಜನೀಕಾಂತ್‌; ಡಿ. 31ರಂದು ಪಕ್ಷದ ಹೆಸರು ಘೋಷಣೆ ಅನುಮಾನ

4 years ago
ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

ಮಾಡು ಇಲ್ಲವೇ ಮಡಿ ಎನ್ನುವ ಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್; 2021 ಹೋರಾಟದ ವರ್ಷೆಂದು ಘೋಷಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ