• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಣ್ಣರ ಚಿಲಿಪಿಲಿ ಕಸಿದುಕೊಂಡ ಕೋವಿಡ್; ಮಕ್ಕಳಿಲ್ಲದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

cknewsnow desk by cknewsnow desk
August 13, 2021
in CHIKKABALLAPUR, STATE
Reading Time: 1 min read
0
ಚಿಣ್ಣರ ಚಿಲಿಪಿಲಿ ಕಸಿದುಕೊಂಡ ಕೋವಿಡ್; ಮಕ್ಕಳಿಲ್ಲದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಚಿಣ್ಣರು / ಸಂಗ್ರಹ ಚಿತ್ರ

1k
VIEWS
FacebookTwitterWhatsuplinkedinEmail

ಸ್ವಾತಂತ್ರ್ಯದಿನಾಚರಣೆಯ ಅಮೃತ ಮಹೋತ್ಸವದ ಮೇಲೆ ಸೋಂಕಿನ ಕರಿ ನೆರಳು

by GS Bharath Gudibande

ಗುಡಿಬಂಡೆ: ಸ್ವತಂತ್ರ್ಯ ಭಾರತದ ಇತಿಹಾಸದಲ್ಲೇ ಬಹದೊಡ್ಡ ಮೈಲುಗಲ್ಲಾಗಬೇಕಿದ್ದ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಮಂಕಾಗಿದೆ. ಮಕ್ಕಳ ಕಲರವದೊಂದಿಗೆ ಅಂಬರ ಮುಟ್ಟುವಂತೆ ಭಾರೀ ಸಂಭ್ರದಂತೆ ನಡೆಯಬೇಕಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ.

ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹಾನುಭಾವರ ಸ್ಮರಣೆ, ಅವರ ಹೋರಾಟದ ಕಥೆ, ದೇಶಭಕ್ತಿ ಗೀತೆ, ಸ್ವಾತಂತ್ರ್ಯದ ಸಂಭ್ರಮ ಚಿತ್ರಗಳು, ವೇಷಗಳು ಇತ್ಯಾದಿಗಳೆಲ್ಲ ಮೇಳೈಸಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಳೆಗಟ್ಟಬೇಕಾಗಿದ್ದ ಸ್ವಾತಂತ್ರೋತ್ಸವ ಮಾರಕ ವೈರಸ್‌ನಿಂದ ಕಳಾಹೀನಾವಾಗಿದ್ದು, ಸ್ವತಃ ಮಕ್ಕಳಿಗೂ ಬೇಸರ ಉಂಟು ಮಾಡಿದೆ.

ಪ್ರತೀ ವರ್ಷದ ಅಗಸ್ಟ್ 15 ಮಕ್ಕಳಿಗೆ ಮಾತ್ರವಲ್ಲ, ಇಡೀ ತಾಲೂಕಿನ ದೊಡ್ಡ ಹಬ್ಬವಾಗುತ್ತಿತ್ತು. ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಮಕ್ಕಳಲ್ಲಿ ದೇಶಭಕ್ತಿ ತುಂಬಿಸಿ, ಭಾವುಟ-ಬ್ಯಾಂಡ್‌ಗಳೊಂದಿಗೆ ಪಟ್ಟಣದ ಏಕೈಕ ಮುಖ್ಯರಸ್ತೆಯಲ್ಲಿ, ವಿವಿಧ ಶಾಲೆಗಳ ಆವರಣಗಳಲ್ಲಿ ನಡೆಯುತ್ತಿದ್ದ ಭಾವಪೂರ್ಣ ಸಂಭ್ರಮ ಈ ವರ್ಷ ಇರುವುದಿಲ್ಲ. ಅದರಲ್ಲೂ ಮುಖ್ಯರಸ್ತೆಯಲ್ಲಿ ಸಾಗುತ್ತಿದ್ದ ಪಥಸಂಚಲನ, ವಿದ್ಯಾರ್ಥಿಗಳಿ ಶಿಸ್ತಿನ ಹೆಜ್ಜೆಗಳ ಸಪ್ಪಳ, ಬ್ಯಾಂಡಿನ ಸದ್ದು, ಭಾರತ್‌ ಮಾತಾಕಿ ಜೈ ಎನ್ನುವ ಘೋಷಣೆ ಬಹುದೊಡ್ಡ ಆಕರ್ಷಣೆಯಾಗುತ್ತಿತ್ತು.

ಆದರೆ, ಈ ವರ್ಷದ 15ಕ್ಕೆ ಅಂಥ ಯಾವ ಸಂಭ್ರಮವೂ ಇರುವುದಿಲ್ಲ. ಕೋವಿಡ್ ಭಯದ ಕಾರಣ ಮಕ್ಕಳಿಲ್ಲದೆ ಕೇವಲ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮಾತ್ರ ಸ್ವಾತಂತ್ರ್ಯೋತ್ಸವ ಸೀಮಿತಗೊಳ್ಳುತ್ತಿರುವುದು ಪುಟಾಣಿಗಳಿಗೆ ನಿರಾಶೆ ಉಂಟು ಮಾಡಿದೆ. ತಾಲೂಕು ಆಡಳಿತ ಆಯೋಜಿಸುವ ಕಾರ್ಯಕ್ರಮವು ಕೇವಲ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಪಾಲ್ಗೊಳ್ಳುವಿಕೆಯಿಂದ ನಡೆಯಲಿದೆ.

  • ಸ್ವಾತಂತ್ರ್ಯ ದಿನದ ಸಂಭ್ರಮ / ಸಾಂದರ್ಭಿಕ ಚಿತ್ರ / by BNMK Photographs

ಕಾಣದಂತೆ ಮಾಯವಾದ ಸಂಭ್ರಮ

ರಾಷ್ಟ್ರೀಯ ಹಬ್ಬಗಳು ಅಂದರೆ ಮಕ್ಕಳಿಗೆ ಇನ್ನಿಲ್ಲದ ಸಂಭ್ರಮ. ಅಗಸ್ಟ್‌ 15 ಇನ್ನೂ ಒಂದು ವಾರವಿದೆ ಎನ್ನುವಷ್ಟರಲ್ಲಿ ತಮ್ಮ ಪೋಷಕರೊಂದಿಗೆ ಪಟ್ಟಣದ ಮುಖ್ಯರಸ್ತೆಯ ಅಂಗಡಿಗಳಿಗೆ ಲಗ್ಗೆ ಹಾಕುತ್ತಿದ್ದ ಚಿಣ್ಣರು ತಿರಂಗ, ಬಾವುಟದ ಬ್ಯಾಡ್ಜ್‌, ಮೂರು ಬಣ್ಣಗಳ ಕೈ ರಿಬ್ಬನ್‌, ಜಡೆ ರಿಬ್ಬನ್‌, ಕ್ಯಾಪ್‌ ಇತ್ಯಾದಿಗಳನ್ನು ಖರೀದಿಸುತ್ತಿದ್ದರು. ಆದರೆ, ಈ ಬಾರಿ ಅಂಥ ಯಾವ ದೃಶ್ಯವೂ ಕಂಡು ಬರುತ್ತಿಲ್ಲ. ಸೋಂಕಿನ ಭಯಕ್ಕೆ ಮಕ್ಕಳೂ ಬಜಾರಿನ ಕಡೆ ಮುಖ ಹಾಕುತ್ತಿಲ್ಲ, ಶಾಪಿಂಗ್‌ ಕಳಾಹೀನವಾಗಿದ್ದು, ಅಂಗಡಿಗಳ ಮಾಲೀಕರು ದಿಕ್ಕುತೋಚದಂತಾಗಿದ್ದಾರೆ.

ಕೋವಿಡ್ʼನಿಂದ ಈ ವರ್ಷ ಶಾಲೆ-ಕಾಲೇಜುಗಳು ಆರಂಭವಾಗಿಲ್ಲ. ಈ ತಿಂಗಳ 23ಕ್ಕೆ ಆರಂಭವಾಗುತ್ತವೆ ಎಂದು ಮುಖ್ಯಮಂತ್ರಿ ಹೇಳಿದ್ದಾರಾದರೂ, ಅದರ ಬಗ್ಗೆ ಇನ್ನೂ ಖಾತರಿ ಇಲ್ಲ. ಪ್ರತೀ ವರ್ಷ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಡುವೆ ಆಚರಿಸಲಾಗುತ್ತಿದ್ದ ಸ್ವಾತಂತ್ರ್ಯ ದಿನಾಚರಣೆ ಆಯಾ ಶಾಲಾ-ಕಾಲೇಜುಗಳಲ್ಲಿ ಸಿಬ್ಬಂದಿ ತಿರಂಗ ಹಾರಿಸಿ, ರಾಷ್ಟ್ರಗೀತೆ ಹಾಡುವುದಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಈಗಾಗಲೇ ಸರಕಾರ ಎಲ್ಲ ಜಿಲ್ಲೆಗಳಿಗೆ ಸ್ಪಷ್ಟ ಮಾರ್ಗಸೂಚಿ ನೀಡಿದೆ. ಯಾವುದೇ ಕಾರಣಕ್ಕೂ ಕೊವಿಡ್ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಶಿಕ್ಷಣ ಸಂಸ್ಥೆಗಳಿಗೆ, ತಾಲೂಕು ಮತ್ತು ಜಿಲ್ಲಾಡಳಿತಗಳಿಗೆ ತಾಕೀತು ಮಾಡಿದೆ.

ಜಿಲ್ಲಾಡಳಿತದ ನಿರ್ದೇಶನದಂತೆ, ತಾಲೂಕು ಆಡಳಿತ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ನಿರ್ದರಿಸಿದ್ದು, ಪಟ್ಟಣದ ಪ್ರೌಢಶಾಲೆ ಆವರಣದ ಕೊಠಡಿಯಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್‌ʼಗೆ ಸನ್ಮಾನ ಸೇರಿ ಇತರೆ ಕೆಲ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗಿದೆ ಎಂದು ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಸಿಬ್ಗತ್ ವುಲ್ಲಾ ಅವರು ತಿಳಿಸಿದರು.

ಶಾಲೆಗಳು ಇನ್ನು ಆರಂಭವಾಗದ ಕಾರಣ, ಸ್ನೇಹಿತರೆಲ್ಲ ಒಂದು ಕಡೆ ಸೇರಿ ಕಾರ್ಯಕ್ರಮ ವೀಕ್ಷಣೆ, ಬಾಷಣ, ಸಾಂಸ್ಕೃತಿಕ ಕಾರ್ಯಕ್ರಮ  ಸೇರಿದಂತೆ ಇತರೆ ಟೀವಿಯಲ್ಲಿ ಬರುವ ಕಾರ್ಯಕ್ರಮಗಳನ್ನು ನೋಡುತ್ತೇವೆ. ಈ ವರ್ಷ ನಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಾವೆಲ್ಲ ಪಾಲ್ಗೊಳ್ಳದೇ ಇರುವುದಕ್ಕೆ ಬೇಸರವಾಗಿದೆ.

ಸಾಯಿ ವಿವೇಕ್, ವಿದ್ಯಾರ್ಥಿ ಗುಡಿಬಂಡೆ

ಪ್ರತೀ ವರ್ಷ ಸ್ವಾತಂತ್ರ್ಯ ದಿನಾಚರಣೆ ಬರುತ್ತದೆ ಅಂದರೆ ಕಾರ್ಯಕ್ರಗಳಿಗೆ ಮಕ್ಕಳ ತಯಾರಿ, ತ್ರಿವರ್ಣ ಧ್ವಜ, ಟೋಪಿ, ಬ್ಯಾಂಡ್ ಹೀಗೆ ವ್ಯಾಪಾರವನ್ನು ಭರ್ಜರಿಯಾಗಿ ಮಾಡುತ್ತಿದ್ದರು, ಆದರೆ, ಈ ಭಾರಿ ಮಕ್ಕಳಿಲ್ಲದೆ ಕಾರ್ಯಕ್ರಮಕ್ಕೆ ಮೆರುಗು ಇಲ್ಲದಂತಾಗಿದೆ. ಕೋವಿಡ್‌ನಿಂದ ರಾಷ್ಟ್ರ ಹಬ್ಬದ ಸಡಗರಕ್ಕೂ ಅಡ್ಡಿಯಾಗಿದ್ದರೆ, ವ್ಯಾಪಾರಿಗಳ ಬದುಕಿಗೂ ಹೊಡೆತ ಬಿದ್ದಿದೆ.

ವೆಂಕಟೇಶ್, ಧರಣಿ ಸ್ಟೋರ್ಸ್ ಮಾಲೀಕ, ಗುಡಿಬಂಡೆ
Tags: 15 AugustchikkaballapuragudibandeIndian Independence DayIndian Independence Day 2021Indian national festivalkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ತಾಲೂಕು ಪಂಚಾಯಿತಿ ಜಾಗದ ಒತ್ತುವರಿಗೆ ಮುಂದಾಯಿತಾ ಪಟ್ಟಣ ಪಂಚಾಯಿತಿ

ತಾಲೂಕು ಪಂಚಾಯಿತಿ ಜಾಗದ ಒತ್ತುವರಿಗೆ ಮುಂದಾಯಿತಾ ಪಟ್ಟಣ ಪಂಚಾಯಿತಿ

Leave a Reply Cancel reply

Your email address will not be published. Required fields are marked *

Recommended

ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆ; ಇನ್ನಷ್ಟು ಚರ್ಚೆ ಅಗತ್ಯ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆ; ಇನ್ನಷ್ಟು ಚರ್ಚೆ ಅಗತ್ಯ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

5 years ago
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ