• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಆಜಾದಿ ಅಮೃತ ಮಹೋತ್ಸವ: ರಾಷ್ಟ್ರದ ಅಭಿವೃದ್ಧಿಗೆ 10 ಅಂಶಗಳ ದಿಕ್ಸೂಚಿ ಫಿಕ್ಸ್ ಮಾಡಿದ ಮೋದಿ

cknewsnow desk by cknewsnow desk
August 15, 2021
in NATION, STATE
Reading Time: 2 mins read
0
ಆಜಾದಿ ಅಮೃತ ಮಹೋತ್ಸವ: ರಾಷ್ಟ್ರದ ಅಭಿವೃದ್ಧಿಗೆ 10 ಅಂಶಗಳ ದಿಕ್ಸೂಚಿ ಫಿಕ್ಸ್ ಮಾಡಿದ ಮೋದಿ

Photo: Narendra Modi @narendramodi

984
VIEWS
FacebookTwitterWhatsuplinkedinEmail

ನವದೆಹಲಿ: ಸ್ವಾತಂತ್ರ್ಯೋತ್ಸವದ ʼಆಜಾದಿ ಅಮೃತ ಮಹೋತ್ಸವʼದ ನಿಮಿತ್ತ ದೇಶ ರಾಜಧಾನಿ ನವದೆಹಲಿಯ ಕೆಂಪುಕೋಟೆ ಮೇಲೆ ಭಾನುವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು; ಭಾರತದ ಸರ್ವೋನ್ನತ ಅಭಿವೃದ್ಧಿಗೆ 10 ಅಂಶಗಳ ದಿಕ್ಸೂಚಿಯನ್ನು ಮಂಡಿಸಿದರು.

ಒಂದೆಡೆ ದೇಶ ಎದುರಿಸುತ್ತಿರುವ ಸವಾಲುಗಳನ್ನು ಜನರಿಗೆ ನೆನಪು ಮಾಡುತ್ತಲೇ, ಇನ್ನೊಂದೆಡೆ ಕೋವಿಡ್ಡೋತ್ತರ ಭಾರತವನ್ನು ಕಟ್ಟಲು ತಮ್ಮ ಕಸನುಗಳನ್ನು ಬಿಚ್ಚಿಟ್ಟ ಪ್ರಧಾನಿ, ಅವುಗಳನ್ನು ಸಾಕಾರ ಮಾಡುವ ಬಗೆಯನ್ನೂ ಲಾಲ್‌ಕಿಲಾ ಮೇಲಿನ ಭಾಷಣದಲ್ಲಿ ಸವಿಸ್ತಾರವಾಗಿ ಹೇಳಿದರು.

Addressing the nation from the Red Fort. Watch. https://t.co/wEX5viCIVs

— Narendra Modi (@narendramodi) August 15, 2021

ಹಾಗಾದರೆ; ಅವರು ಬಿಚ್ಚಿಟ್ಟ ದಿಕ್ಸೂಚಿಗಳೇನು? ಇಲ್ಲಿದೆ ವಿವರ:

1. 25 ವರ್ಷಗಳಲ್ಲಿ ನವ ಭಾರತ

ಮುಂಬರುವ 25 ವರ್ಷಗಳಲ್ಲಿ ನಮ್ಮ ದೇಶವು ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸಿಕೊಳ್ಳಲಿದೆ. ಆ ಹೊತ್ತಿಗೆ ಭಾರತದ ಜಗತ್ತಿನ ಅತಿ ಬೃಹತ್‌ ಶಕ್ತಿಯಾಗಿ ಹೊರಹೊಮ್ಮಬೇಕು. ಅಲ್ಲಿವರೆಗೂ ನಮಗೆ ವಿಶ್ರಾಂತಿ ಎಂಬುದೇ ಇರಬಾರದು. ನಮ್ಮ ಗುರಿ ಏನಿದ್ದರೂ ಭಾರತದ ನಿರ್ಮಾಣವೇ ಆಗಿರಬೇಕು ಹಾಗೂ ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಎನ್ನುವ ಕೆಚ್ಚೆದೆಯ ಗುರಿಯೊಂದಿಗೆ ಎಲ್ಲರೂ ಹೆಜ್ಜೆ ಹಾಕಬೇಕು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಎಂಬುದು ಈ ಪಯಣದಲ್ಲಿ ಮಹಳ ಮುಖ್ಯವಾಗುತ್ತದೆ.

2. ಸೈನಿಕ ಶಾಲೆಗಳಿಗೆ ಬಾಲಕಿಯರು

ನಮ್ಮ ಸೇನೆ ಪ್ರಬಲವಾಗಬೇಕು. ಪ್ರಗತಿಯ ಜತೆಜತೆಗೇ ಸೇನಾ ಶಕ್ತಿಯೂ ವೃದ್ಧಿಸಲೇಬೇಕು. ಎರಡೂವರೆ ವರ್ಷಗಳ ಹಿಂದೆ ಮಿಜೊರಂ ರಾಜ್ಯದಲ್ಲಿ ಸೈನಿಕ ಶಾಲೆಗಳಿಗೆ ಬಾಲಕಿಯರಿಗೆ ಪ್ರವೇಶ ನೀಡಿದ ವಿಷಯವನ್ನು ನಾವೆಲ್ಲರೂ ಗಮನಿಸಬೇಕು. ಅದೊಂದು ಕ್ರಾಂತಿಕಾರಕ ಹೆಜ್ಜೆ.  ನಾರಿ ಶಕ್ತಿಯ ಮೂಲಕವೂ ಸೇನೆಯನ್ನು ಶಕ್ತಿಶಾಲಿ ಮಾಡಬೇಕು, ಮಾಡೋಣ. ಇನ್ನು ಮುಂದೆ ದೇಶ ಎಲ್ಲಾ ಸೈನಿಕ ಶಾಲೆಗಳಲ್ಲೂ ಬಾಲಕಿಯರು ಮತ್ತು ಯುವತಿಯರಿಗೆ ಪ್ರವೇಶ ಅವಕಾಶ ಇರುತ್ತದೆ.

3. ಪ್ರಧಾನಿ ಗತಿಶಕ್ತಿ ಯೋಜನೆ

ರಾಷ್ಟ್ರದ ಅಭಿವೃದ್ಧಿಗೆ ಮೂಲಸೌಕರ್ಯ ಎನ್ನುವುದು ಬಹಳ ಮುಖ್ಯ. ಈ ಕ್ಷೇತ್ರವು ಬೆಳೆದಂತೆಲ್ಲ ದೇಶವೂ ಆರ್ಥಿಕವಾಗಿ ಶಕ್ತಿಶಾಲಿಯಾಗಿ  ಮುನ್ನಡೆಯುತ್ತದೆ. ಹೀಗಾಗಿ ಪ್ರಧಾನಿ ಗತಿಶಕ್ತಿ ಯೋಜನೆ ಪ್ರಾರಂಭಿಸುತ್ತೇವೆ. 100 ಲಕ್ಷ ಕೋಟಿ ರೂ. ವೆಚ್ಚದ ಮಹಾನ್‌ ರಾಷ್ಟ್ರೀಯ ಮೂಲಸೌಕರ್ಯ ಮಾಸ್ಟರ್ ಪ್ಲ್ಯಾನ್ ಇದಾಗಿದೆ. ಇನ್ನು ಇಪ್ಪತ್ತೈದು ವರ್ಷಗಳಲ್ಲಿ ಈ ಯೋಜನೆ ದೇಶದ ದಿಕ್ಕನ್ನೇ ಸಂಪೂರ್ಣವಾಗಿ ಬದಲಾವಣೆ ಮಾಡಲಿದೆ.

4. ರಾಷ್ಟ್ರೀಯ ಜಲಜನಕ ಮಿಷನ್

ಮುಂದಿನ ಇಪ್ಪತ್ತೈದು ವರ್ಷಗಳ ಒಳಗೆ ಕಾರ್ಯಕತ ಮಾಡಲೇಬೇಕಾದ ಗುರಿಗಳನ್ನು ನಾನು ಪ್ರಸ್ತಾಪ ಮಾಡುತ್ತಿದ್ದೇನೆ. ಹಸಿರು ಜಲಜನಕ​ (Hydrogen) ಕ್ಷೇತ್ರವನ್ನು ಎತ್ತರದ ಸಾಧನೆಯತ್ತ ಕೊಂಡೊಯ್ಯುವುದು ಅದರಲ್ಲಿ ಬಹಖಳ ಮಹತ್ತ್ವದ ಕಾರ್ಯಕ್ರಮ. ಅದಕ್ಕಾಗಿ ʼರಾಷ್ಟ್ರೀಯ ಜಲಜನಕ​ ಮಿಷನ್ʼ ಸ್ಥಾಪನೆಯ ಘೋಷಣೆ.

5. 2030ರ ವೇಳೆಗೆ ರೈಲ್ವೆಯಲ್ಲಿ ಮಾಲಿನ್ಯ ಶೂನ್ಯ

ಮುಂಬರುವ 2030ರ ವೇಳೆಗೆಲ್ಲ ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಶೂನ್ಯ ಮಾಲಿನ್ಯ ಸ್ಥಿತಿ ನಿರ್ಮಾಣ ಮಾಡಲು ಪ್ರಧಾನಿ ಶಪಥ ಮಾಡಿದರು. ಹೊಗೆ ರಹಿತವಾದ, ಶುದ್ಧ, ಶುಚಿಯಾದ ರೈಲ್ವೆ ರೂಪುಗೊಳ್ಳಲಿದ್ದು ಜಗತ್ತಿನಲ್ಲಿಯೇ ಮಾದರಿ ರೈಲ್ವೆ ವ್ಯವಸ್ಥೆಯಾಗಿ ಹೊರಹೊಮ್ಮಲಿದೆ.

6. ಡಿಜಿಟಲ್‌ ಮತ್ತು ಇ–ಕಾಮರ್ಸ್‌

ಡಿಜಿಟಲ್‌ ವ್ಯಹಾರದಲ್ಲಿ ಭಾರತ ಜಗತ್ತಿನಲ್ಲಿಯೇ ಅತಿ ವೇಗವಾಗಿ ಬದಲಾಗುತ್ತಿರುವ ದೇಶ. ಈಗಾಗಲೇ ಭಾರತ ಬಹುದೂರ ಸಾಗಿದೆ. ಇದನ್ನು ಮತ್ತಷ್ಟು ಎತ್ತರಕ್ಕೆ ಒಯ್ಯುವ ಉದ್ದೇಶದಿಂದ ಸರಕಾರವು ಇ–ಕಾಮರ್ಸ್‌ ಪ್ಲಾಟ್‌ಫಾರ್ಮ್‌ʼಗಳನ್ನು ಆರಂಭ ಮಾಡುತ್ತಿದೆ. ದೇಶದ ಗ್ರಾಮೀಣ ಭಾಗದ ಪ್ರತಿ ಮೂಲೆಯಲ್ಲಿರುವ ಕುಶಲ ಕರ್ಮಿಗಳಿಗೆ ಜಗತ್ತಿನ ಜತೆ ನೇರ ಸಂಪರ್ಕ ಕಲ್ಪಿಸಲು ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

7. 75 ವಂದೇ ಭಾರತ್ ರೈಲುಗಳು

ರೈಲ್ವೆ ಮುಂದಿನ ಕಾಲು ಶತಮಾನದಲ್ಲಿ ಅಗಾಧವಾಗಿ ಬದಲಾಗಲಿದೆ ಎನ್ನುವುದರಲ್ಲಿ ಯಾವುದೇ ಬದಲಾವಣೆ ಇಲ್ಲ. ದೇಶದ 75ನೇ ಸ್ವಾತಂತ್ರೋತ್ಸವವನ್ನು ಮುಂದಿನ 75 ವಾರಗಳ ಕಾಲ ಆಚರಣೆ ಮಾಡಲಿದ್ದೇವೆ. 2021ರ ಮಾರ್ಚ್‌ 12ರಿಂದ 2023ರ ಅಗಸ್ಟ್‌ 15ರವರೆಗೂ ಸ್ವಾತಂತ್ರ್ಯ ದಿಆಚರಣೆಯ ಅಮೃತ ಮಹೋತ್ಸವ ಮುಂದುವರಿಯಲಿದೆ. ಇದರ ಭಾಗವಾಗಿ 75 ವಂದೇ ಭಾರತ್ ರೈಲುಗಳು ಮುಂದಿನ 75 ವಾರಗಳಲ್ಲಿ ಭಾರತದ ವಿವಿಧ ಸ್ಥಳಗಳನ್ನು ಜೋಡಣೆ ಮಾಡುತ್ತವೆ.

8. ಒಟ್ಟಿಗೆ ನಡೆಯೋಣ, ಒಟ್ಟಿಗೆ ಸಾಧಿಸೋಣ

ಮುಂದಿನ ಇಪ್ಪತ್ತೈದು ವರ್ಷಗಳಲ್ಲಿ ಭಾರತದ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ನಾವೆಲ್ಲರೂ ಒಟ್ಟಿಗೆ ಸಾಗೋಣ ಮತ್ತು ಒಟ್ಟಿಗೇ ಶ್ರಮಿಸೋಣ. ಒಬ್ಬರಿಂದಲ್ಲ, ಎಲ್ಲರ ಪ್ರಯತ್ನದಿಂದ ಅದು ಸಾಕಾರವಾಗಲಿ. ಸಬ್‌ಕಾ ಸಾತ್‌ ಸಬ್‌ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ತತ್ತ್ವದಲ್ಲಿ ನಾವೆಲ್ಲ ನಂಬಿಕೆ ಇಟ್ಟು ನಡೆಯುತ್ತಿದ್ದೇವೆ. ಆದರೆ ಇವೆರಡೂ ಅಂಶಗಳ ಜತೆಗೆ ʼಸಬ್‌ಕಾ ಪ್ರಯಾಸ್‌ʼ ಎನ್ನುವುದು ಕೂಡ ಬಹಳ ಮುಖ್ಯ. ಈ ತತ್ತ್ವದಲ್ಲಿ ನಂಬಿಕೆ ಇಟ್ಟು ಎಲ್ಲರೂ ದೇಶ ಕಟ್ಟಲು ಕೆಲಸ ಮಾಡೋಣ

9. ಪೌಷ್ಠಿಕ ಆಹಾರ

ಭಾರತದ ಜನಸಂಖ್ಯೆ ಹೆಚ್ಚಾಗಿದೆ ನಿಜ, ಅದೇ ರೀತಿ ಆಹಾರದ ಬೇಡಿಕೆಯೂ ಇದೆ. ಅದಕ್ಕೆ ಅನುಗುಣವಾಗಿ ಕೃಷಿ ಉತ್ಪನ್ನಗಳ ಉತ್ಪಾದನೆ ಕ್ರಮಬದ್ಧವಾಗಿ ಹೆಚ್ಚಾಗಿ ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಸಿಗುವಂತೆ ಆಗಬೇಕು. 2024ರ ವೇಳೆ ಎಲ್ಲ ಕಡೆಗಳಲ್ಲೂ ಅತ್ಯುತ್ತಮ ಗುಣಮಟ್ಟದ ಅಕ್ಕಿ ಸಿಗುವಂತೆ ಮಾಡಲಾಗುವುದು.

10. ದುರ್ಬಲರಿಗೆ ನೆರವಿನ ಹಸ್ತ

ಶಿಕ್ಷಣವೂ ಸೇರಿದಂತೆ ಎಲ್ಲ ರಂಗಗಳಲ್ಲು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರ ಸಹಾಯ ಹಸ್ತ ಚಾಚುತ್ತದೆ. ಈಗಾಗಲೇ ವೈದ್ಯ ಕೋರ್ಸುಗಳ ಪ್ರವೇಶಕ್ಕೆ ಬಡವರು, ಆರ್ಥಿಕ ದುರ್ಬಲರಿಗೆ ಮೀಸಲು ಘೋಷಣೆ ಮಾಡಲಾಗಿದೆ. ಎಲ್ಲ ಹಂತಗಳಲ್ಲೂ ಇಂಥ ಜನರನ್ನು ಮೇಲೆತ್ತುವ ಪ್ರಯತ್ನವನ್ನು ಸರಕಾರ ಬದ್ಧತೆಯಿಂದ ಮಾಡುತ್ತದೆ.

India marks Amrit Mahotsav with a sense of gratitude to those who toiled for freedom and with a commitment to build a strong and prosperous India.

Here are glimpses from the Red Fort today. #IndiaIndependenceDay pic.twitter.com/y0i0FVKKFx

— Narendra Modi (@narendramodi) August 15, 2021
Tags: agust 15thazadi ka amrut mahotsavindaindia independence dayindia independence day2021lalkilaprime minister narendra modired fort
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಅರ್ಧರಾತ್ರಿಯಲ್ಲಿ ಬಂದ ಆಜಾದಿ; ಗುಡಿಬಂಡೆಯಲ್ಲಿ ರಾತ್ರಿ ಪಂಜಿನ ಮೆರವಣಿಗೆ

ಅರ್ಧರಾತ್ರಿಯಲ್ಲಿ ಬಂದ ಆಜಾದಿ; ಗುಡಿಬಂಡೆಯಲ್ಲಿ ರಾತ್ರಿ ಪಂಜಿನ ಮೆರವಣಿಗೆ

Leave a Reply Cancel reply

Your email address will not be published. Required fields are marked *

Recommended

ನಾನು ಸುಳ್ಳು ಹೇಳುತ್ತಿಲ್ಲ ಎಂದ ಡಿಕೆಶಿ

ನಾನು ಸುಳ್ಳು ಹೇಳುತ್ತಿಲ್ಲ ಎಂದ ಡಿಕೆಶಿ

4 years ago
ರಿಟೈರ್‌ಮೆಂಟ್‌ ಕೋರೊನಗೆ ಮಾತ್ರ, ಆಟಕ್ಕಲ್ಲಎಂದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು;  ಶಾಕ್‌ ಆಯಿತೆಂದ ಕೇಂದ್ರ ಕ್ರೀಡಾ  ಮಂತ್ರಿ

ರಿಟೈರ್‌ಮೆಂಟ್‌ ಕೋರೊನಗೆ ಮಾತ್ರ, ಆಟಕ್ಕಲ್ಲಎಂದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು; ಶಾಕ್‌ ಆಯಿತೆಂದ ಕೇಂದ್ರ ಕ್ರೀಡಾ ಮಂತ್ರಿ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ