• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

3ನೇ ಅಲೆ ನಿಯಂತ್ರಣ: ಜನರಿಗೆ ಡಾ.ಮಂಜುನಾಥ್‌ ಹೇಳಿದ್ದೇನು?

cknewsnow desk by cknewsnow desk
August 16, 2021
in COVID-19, STATE
Reading Time: 1 min read
0
3ನೇ ಅಲೆ ನಿಯಂತ್ರಣ:  ಜನರಿಗೆ ಡಾ.ಮಂಜುನಾಥ್‌ ಹೇಳಿದ್ದೇನು?
956
VIEWS
FacebookTwitterWhatsuplinkedinEmail

ಸರಕಾರದ ಮೇಲೆ ಅವಲಂಬನೆ ಬೇಡ; ಹಬ್ಬದ ದಿನಗಳಲ್ಲಿ ಮಾರ್ಗಸೂಚಿ ಪಾಲಿಸಿ

ಬೆಂಗಳೂರು: ಎಲ್ಲದಕ್ಕೂ ಸರಕಾರದ ಮೇಲೆ ಅವಲಂಬಿತರಾಗದೆ, ಈ ಬಾರಿ ಕೊರೊನ ಮೂರನೇ ಅಲೆಯನ್ನು ನಿಯಂತ್ರಿಸುವ ಮಹತ್ವದ ಜವಾಬ್ದಾರಿ ಜನರ ಮೇಲೆ ಇದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು ಹಾಗೂ ಕಾರ್ಯಪಡೆಯ ಸದಸ್ಯರಾದ ಡಾ. ಸಿ.ಎನ್.ಮಂಜುನಾಥ್ ಜನರಿಗೆ ಸಲಹೆ ಮಾಡಿದರು.

ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಕರೋನಾ ಕಾರ್ಯಪಡೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಕೊರೊನಾ ಮೂರನೇ ಅಲೆ ಈಗಾಗಲೇ ಯಾವಾಗ ಬರುತ್ತದೆ ಎಂದು ಎಲ್ಲರ ಮನಸಲ್ಲಿ ಕಾಡುತ್ತಿದೆ. ಆದರೆ ಇದನ್ನು ನಿರ್ಧರಿಸುವುದು ನಾವಲ್ಲ ಅಥವಾ ತಜ್ಞ ವೈದ್ಯರಲ್ಲ, ಅದು ಜನರ ಮೇಲೆಯೇ ನಿಂತಿದೆ ಎಂದು ಕಿವಿಮಾತು ಹೇಳಿದರು.

ಜನತೆ ಎಷ್ಟು ಮುಂಜಾಗ್ರತೆ ಕ್ರಮಗಳನ್ನು ವಹಿಸಿ ಸರಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಾರೋ ಅಷ್ಟು ನಮಗೆ ಕೊರೊನಾ ದಿಂದ ಸುರಕ್ಷತೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸರಕಾರ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಬ್ಬಹರಿದಿನಗಳಂದು ಜನರು ಗುಂಪುಗೂಡುವುದು ಮತ್ತು ಊರಿಗೆ ತೆರಳುವುದು ಸೂಕ್ತವಲ್ಲ . ಇನ್ನೂ ಕನಿಷ್ಠ ಪಕ್ಷ 6ತಿಂಗಳಾದರೂ ನಾವು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಕೈಗಳನ್ನು ತೊಳೆಯುವುದು ಸ್ಯಾನಿಟೈಸರ್ ಬಳಸುವುದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಸಲಹೆ ಕೊಟ್ಟರು.

ರಾಜ್ಯ ಸರ್ಕಾರ ಕೂಡ ಹೆಚ್ಚಿನ ಒತ್ತುಕೊಟ್ಟು ನಿಯಂತ್ರಣಕ್ಕೆ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿದೆ ಆದರೆ ಇದಕ್ಕೆ ಜನರ ಸ್ಪಂದನೆ ಅತ್ಯಗತ್ಯ ಇದಿಲ್ಲದಿದ್ದರೆ ಏನೂ ಪ್ರಯೋಜನವಿಲ್ಲ ಎಂದು ಎಚ್ಚರಿಸಿದರು .

ಮನುಷ್ಯತ್ವ ಮಾನವೀಯತೆ ಬೆಳೆಸಿಕೊಳ್ಳುವುದು ಇಂದಿನ ಅಗತ್ಯತೆಗಳಲ್ಲಿ ಒಂದಾಗಿದೆ. ಮೊದಲನೇ ‌ಕೊರೊನಾ ಸಂದರ್ಭದಲ್ಲಿ ವೈದ್ಯರು ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು ಪೊಲೀಸರು ಪೌರಕಾರ್ಮಿಕರು ಸೇರಿದಂತೆ ಅನೇಕ ಸೇವೆಯನ್ನು ನಾವು ಮರೆಯುವಂತಿಲ್ಲ ಪ್ರಶಂಸೆ ವ್ಯಕ್ತಪಡಿಸಿದರು. ‌

ಕೊರೊನಾ ಪರೀಕ್ಷೆ ಲಸಿಕೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಾಕಷ್ಟು ಒಳ್ಳೆಯ ಕೆಲಸವನ್ನೇ ಮಾಡಿದೆ .ಮೂರನೇ ಅಲೆಯ ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಕೂಡ ಎಚ್ಚರಿಕೆಯಿಂದ ಇರಬೇಕು ಮತ್ತು ಮುಂಜಾಗ್ರತಾ ಕ್ರಮ ವಹಿಸಬೇಕು.ಲಸಿಕೆ ತೆಗೆದುಕೊಂಡ ನಂತರವೂ ಕೊವಿಡ್ ಬರಬಹುದು. ಆದರೆ ಅದು ಬಾಧಿಸುವ ಪ್ರಮಾಣ ಮಾತ್ರ ಕಡಿಮೆಯಾಗಲಿದೆ ಯಾರಿಗೂ ಕೂಡ ಅಪನಂಬಿಕೆ ಅಂಜಿಕೆ ಇರಬಾರದು.

ಡಾ. ಸಿ.ಎನ್.ಮಂಜುನಾಥ್

ಮನುಷ್ಯನಾಗಿ ಹುಟ್ಟಿದ ಮೇಲೆ ನಾವು ಎರಡು ಆಯ್ಕೆ ಮಾಡಿಕೊಳ್ಳುತ್ತೇವೆ.ಒಂದು ನಾವು ಗಳಿಸುವುದು. ವ್ಯಯ ಮಾಡುವುದು ಇದನ್ನು ಬಿಟ್ಟು ನಾವು ಉಸುರಿ ನಿಲ್ಲಿಸಿದಾಗ ಏನನ್ನೂ ಹೊತ್ತುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಮಾತನಾಡಿ,ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸಂಕಷ್ಟದ ಸಂದರ್ಭದಲ್ಲಿ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಿದೆ.ಅದರಂತೆ ವೈದ್ಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತರು ಕೊರೊನಾ ವಾರಿಯರ್ಸ್ʼಗಳ ಅವಿರತ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ರಾಜ್ಯ ಸರಕಾರ ಕೊವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ .ಸಮಾಜದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯವಿದೆ ಅದೇ ರೀತಿ ಕೊರೋನಾ ವನ್ನು ದೂರ ಮಾಡುವ ಶಕ್ತಿ ಜನಸಾಮಾನ್ಯರಿಗಿದೆ ಎಂದು ಹೇಳಿದರು.
ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರಿಸ್ ಮಾತನಾಡಿ,ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಕೇವಲ ‌ಒಂದು‌ಧರ್ಮದ ಸ್ವಾಮೀಜಿ ಎಂದು ನಾನು ಹೇಳಲಾರೆ ಅವರ ಎಲ್ಲರ ಮನದಲ್ಲಿ ಮನಸ್ಸಲ್ಲಿ ನೆಲೆಸಿದ್ದಾರೆ ಶ್ರೀಮಠದಿಂದ ಕೊರೊನಾ ಸಂದರ್ಭದಲ್ಲಿ ಮಾನವೀಯತೆಯ ಸೇವಾ ಕಾರ್ಯವನ್ನು ಮಾತಿನಲ್ಲಿ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ಬಣ್ಣಿಸಿದರು.

ವೈದ್ಯರು ತಮ್ಮ ಕಾಯಕವನ್ನು ಪ್ರೀತಿಸಬೇಕು ಆಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯ ಶ್ಲಾಘನೀಯವಾಗಿದ್ದು ಸರ್ಕಾರಕ್ಕೆ ಮಾರ್ಗದರ್ಶನ ಜೊತೆಗೆ ಮಾನವೀಯ ನೆಲೆಯಲ್ಲಿ ಎಲ್ಲರಿಗೂ ಆರೋಗ್ಯ ಸೇವೆಯನ್ನು ಒದಗಿಸುವ ಮಹತ್ತರವಾದ ಕಾರ್ಯ ಮಾಡಿದೆ ಎಂದು ಹೇಳಿದರು.

Tags: adichunchanagiri muttcoronacovid19karnataka fights coronasri nirmalanandanatha swamijithird wave
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಣ್ಣಿನಮಗಳು ಶೋಭಾ ಕರಂದ್ಲಾಜೆ!

ಮಣ್ಣಿನಮಗಳು ಶೋಭಾ ಕರಂದ್ಲಾಜೆ!

Leave a Reply Cancel reply

Your email address will not be published. Required fields are marked *

Recommended

ಲಾಕ್ ಡೌನ್ ಇಲ್ಲ

ನದಿ ಜೋಡಣೆ: ಕೇಂದ್ರಕ್ಕೆ ಬೊಮ್ಮಾಯಿ ಸ್ಪಷ್ಟಪಡಿಸಿದ್ದೇನು?

3 years ago
ಕೊನೆಗೂ ಚಿಕ್ಕಬಳ್ಳಾಪುರಕ್ಕೆ ಟಿಕೆಟ್‌ ಗಿಟ್ಟಿಸಿದ ಡಾ.ಕೆ.ಸುಧಾಕರ್

ಕೊನೆಗೂ ಚಿಕ್ಕಬಳ್ಳಾಪುರಕ್ಕೆ ಟಿಕೆಟ್‌ ಗಿಟ್ಟಿಸಿದ ಡಾ.ಕೆ.ಸುಧಾಕರ್

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ