• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮಣ್ಣಿನಮಗಳು ಶೋಭಾ ಕರಂದ್ಲಾಜೆ!

P K Channakrishna by P K Channakrishna
August 16, 2021
in NATION, STATE
Reading Time: 1 min read
0
ಮಣ್ಣಿನಮಗಳು ಶೋಭಾ ಕರಂದ್ಲಾಜೆ!
1k
VIEWS
FacebookTwitterWhatsuplinkedinEmail

ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ

ಮಂಡ್ಯ: ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಸ್ಥೈರ್ಯ ತುಂಬುವ ಸಲುವಾಗಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ವತಃ ತಾವೇ ಗದ್ದೆಗಿಳಿದು ಭತ್ತ ನಾಟಿ ಮಾಡಿದರಲ್ಲದೆ, ಭತ್ತ ನಾಟಿ ಮಾಡಲು ಬಳಸುವ ಯಂತ್ರವನ್ನೂ  ಚಾಲನೆ ಮಾಡಿ ಎಲ್ಲರ ಗಮನ ಸೆಳೆದರು.

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ನಿಮಿತ್ತ ಮಂಡ್ಯಕ್ಕೆ ಭೇಟಿ ನೀಡಿದ ಅವರು, ಜಿಲ್ಲೆಯ ಕೊಮ್ಮೆರಹಳ್ಳಿ ಗ್ರಾಮದಲ್ಲಿ ಸ್ಥಳೀಯ ಮಹಿಳೆಯರ ಜತೆಗೂಡಿ ಗದ್ದೆಗೆ ಇಳಿದೇಬಿಟ್ಟರಲ್ಲದೆ, ಭತ್ತದ ನಾಟಿಯನ್ನೂ ಮಾಡಿ ಸೈ ಎನಿಸಿಕೊಂಡರು. ಕೇಂದ್ರ ಸಚಿವೆ ಎಂಬುದನ್ನು ಮರೆತ ಶೋಭಾ ಹಳ್ಳಿಯ ಮಹಿಳೆಯರಿಗಿಂತ ತುಸು ವೇಗವಾಗಿಯೇ ಭತ್ತ ನಾಟಿ ಮಾಡಿದರು.

Some more pictures from today's my visit to paddy field in Sathanur of Mandya.

We must appreciate women's participate in active farming & their contributions in the field of agriculture.

These Women are real inspiration for all of us.#JanAashirwadYatra pic.twitter.com/QQozMCJTRS

— Shobha Karandlaje (Modi Ka Parivar) (@ShobhaBJP) August 16, 2021

ಬಳಿಕ ಮಾತನಾಡಿದ ಅವರು ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದು, ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆ ಯೋಜನೆಗಳನ್ನು ಕೊನೆಯ ರೈತರ ತನಕ ತಲುಪಿಸಲು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಶ್ರಮಿಸುವುದಾಗಿ ತಿಳಿಸಿದರು.

ಖಾದ್ಯ ತೈಲ, ಎಣ್ಣೆಯಲ್ಲಿ ನಾವು ಸ್ವಾವಲಂಬನೆ ಸಾಧಿಸಬೇಕಿದೆ. ಶೇ.70ರಷ್ಟು ಖಾದ್ಯ ತೈಲ ಬೇರೆ ದೇಶಗಳಿಂದ ಬರುತ್ತಿದೆ. ಟ್ರ್ಯಾಕ್ಟರ್, ಟಿಲ್ಲರ್ ಸಬ್ಸಿಡಿಯಲ್ಲಿ ನೀಡುವುದು, ಬಾಡಿಗೆಯಲ್ಲಿ ಯಂತ್ರೋಪಕರಣ ಒದಗಿಸುವುದು, ಕೃಷಿ ಸಿಂಚಾಯಿ ಯೋಜನೆಗೆ ವಿಶೇಷವಾದ ಅನುಕೂಲತೆ, ರಸಗೊಬ್ಬರಕ್ಕೆ ಸಬ್ಸಿಡಿ, ಖಾದ್ಯ ತೈಲವನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಮೂಲಕ ಸ್ವಾವಲಂಬನೆ ಸಾಧಿಸಲಾಗುವುದು.

ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ನಾಲ್ಕು ಸಚಿವರು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಹಳ ಅದ್ಭುತವಾದ ಸ್ವಾಗತವನ್ನು ಮಂಡ್ಯ ಮತ್ತು ಮದ್ದೂರಿನ ಜನರು ನನಗೆ ನೀಡಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ದೇಶದಾದ್ಯಂತ ಕೇಂದ್ರದ ನೂತನ ಸಚಿವರ ಜನಾಶೀರ್ವಾದ ಯಾತ್ರೆ ಆರಂಭವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಸಮುದಾಯ, ಮಹಿಳೆಯರಿಗೆ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟದಲ್ಲಿ ಆದ್ಯತೆ ಕೊಡಲಾಗಿದೆ ಎಂದ ಅವರು; ಅತ್ಯಂತ ಹಿಂದುಳಿದ ಪ್ರದೇಶದ ರೈತನ ಮಗಳಾದ ತಮಗೆ ಸಚಿವ ಸ್ಥಾನ ನೀಡಿದ್ದಕ್ಕಾಗಿ ಪ್ರಧಾನಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು.

ಮಂಡ್ಯದ ಸಕ್ಕರೆ- ಬೆಲ್ಲ ರಫ್ತು ಮಾಡಲು ಉತ್ತೇಜನ ಕೊಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಹಲವಾರು ದೇಶಗಳಲ್ಲಿ ಆಹಾರದ ಕೊರತೆ ಕಾಡಿತ್ತು. ಆದರೆ, ಭಾರತವು ಆಹಾರದ ಸಮಸ್ಯೆ ಎಸುರಿಸಲಿಲ್ಲ. ರೈತರ ಪರಿಶ್ರಮದ ಪರಿಣಾಮವಾಗಿ ಭಾರತದ ಎಲ್ಲರಿಗೂ ಆಹಾರ ಸಮಸ್ಯೆ ಕಾಡಲಿಲ್ಲ. ಎಲ್ಲರಿಗೂ ಆಹಾರ ಲಭಿಸಿದೆ ಎಂದು ವಿಶ್ಲೇಷಿಸಿದರು.

ರೈತರಿಗೆ ಹೆಚ್ಚು ಅನುಕೂಲ ಮಾಡುವ ಸಂಕಲ್ಪ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರದ್ದಾಗಿದೆ. 1,23,000 ಕೋಟಿ ರೂಪಾಯಿಯನ್ನು ಕೃಷಿ ಇಲಾಖೆಗೆ ಈ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾಗಿದೆ. ಸಂಶೋಧನೆ ಮತ್ತು ಶಿಕ್ಷಣಕ್ಕೆ 8,500 ಕೋಟಿ ರೂಪಾಯಿ ನೀಡಿದ್ದಾರೆ. ಇದು ರೈತರನ್ನು ಸಮರ್ಪಕವಾಗಿ ತಲುಪಲು ಪ್ರಯತ್ನಿಸುವುದಾಗಿ ಅವರು ತಿಳಿಸಿದರು.

ರೈತರ ಉನ್ನತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಜೊತೆಗೂಡಿ ಕೆಲಸ ಮಾಡುವುದಾಗಿ ಅವರು ತಿಳಿಸಿದರು. ಮಹಿಳೆಯರ ಜೊತೆ ಗದ್ದೆ ನಾಟಿ ಮಾಡಿದರು. ಪಡಿತರ ಕೇಂದ್ರಕ್ಕೂ ಭೇಟಿ ನೀಡಿ ಪಡಿತರ ಸಕಾಲದಲ್ಲಿ ಲಭಿಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು.

ರಾಜ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಗೌಡ, ಶಾಸಕ ಎಲ್.ನಾಗೇಂದ್ರ, ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್, ಜಿಲ್ಲಾ ಅಧ್ಯಕ್ಷ ಕೆ.ಜೆ.ವಿಜಯ ಕುಮಾರ್, ಮುಖಂಡರಾದ ಎ.ಮಂಜು. ಡಾ.ಸಿದ್ದರಾಮಯ್ಯ ಹಾಗೂ ಬಿಜೆಪಿ  ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Tags: bjpJan Aashirwad YatrakarnatakamandyaMinistry of Agriculture and Farmers WelfareShobha Karandlaje
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ