• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಾಯಭಾರಿ ಹಿಂದಕ್ಕೆ; ಭಾರತದ ಮುಂದಿನ ಹೆಜ್ಜೆ ಏನು?

P K Channakrishna by P K Channakrishna
August 17, 2021
in NATION, WORLD
Reading Time: 1 min read
0
ಯೋಗ ಸಂತಸದ ಜೀವನ ಮಾರ್ಗ ತೋರುತ್ತದೆ, ಸಾಮೂಹಿಕ ಆರೋಗ್ಯದಲ್ಲಿ ಧನಾತ್ಮಕ ಪಾತ್ರ ವಹಿಸುತ್ತದೆ ಎಂದ ನರೇಂದ್ರ ಮೋದಿ
949
VIEWS
FacebookTwitterWhatsuplinkedinEmail

ನವದೆಹಲಿ/ಕಾಬೂಲ್: ತಾಲಿಬಾನ್‌ಗಳ ಎಂಟ್ರಿಯೊಂದಿಗೆ ದಿಕ್ಕೆಟ್ಟಿರುವ ಆಪ್ಘಾನಿಸ್ತಾನದಿಂದ ಭಾರತೀಯ ರಾಯಭಾರ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಅಷ್ಟೇ ಅಲ್ಲದೆ, ರಾಯಭಾರಿಯನ್ನೂ ವಾಪಸ್‌ ಕರೆಸುಕೊಂಡಿದೆ. ಹಾಗಾದರೆ, ಭಾರತದ ಮುಂದಿನ ಹೆಜ್ಜೆ ಏನು?

ಎಲ್ಲ ಸಿಬ್ಬಂದಿಯನ್ನು ಸುರಕ್ಷಿತವಾಗಿ ಏರ್‌ಲಿಫ್ಟ್‌ ಮಾಡಲಾಗಿದ್ದು, 120ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊತ್ತ ಭಾರತೀಯ ಯುದ್ಧ ವಿಮಾನ ಗುಜರಾತ್‌ನ ಜಾಮ್‌ ನಗರದ ವಾಯುನೆಲೆಯಲ್ಲಿ ಲ್ಯಾಂಡ್ ಆಗಿದೆ.

ಕಾಬೂಲ್ ನಗರವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಕೂಡಲೇ ಎಚ್ಚೆತ್ತ ಕೇಂದ್ರ ಸರಕಾರವು ಕೂಡಲೇ ಕಾಬೂಲ್‌, ಕಂದಹಾರ್‌, ಜಲಲಾಬಾದ್‌ ಮುಂತಾದ ಕಡೆ ಇದ್ದ ರಾಯಭಾರ ಸಿಬ್ಬಂದಿಯನ್ನು ತೆರವು ಮಾಡಲಾಗಿದ್ದು, ಅವರೆಲ್ಲರೂ ಈಗ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ.

ಭಾರತೀಯ ವಾಯುಪಡೆಯ ಸಿ-17ವಿಮಾನ ಜಾಮ್‌ ನಗರದ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಎಲ್ಲ ಸಿಬ್ಬಂದಿ ರೋಮಾಂಚನಗೊಂಡರು. ವಿಮಾನದಿಂದ ಇಳಿದು ಹೊರ ಬರುತ್ತಿದ್ದಂತೆಯೇ ಭಾರತ್‌ ಮಾತಾಕೀ ಜೈ, ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗಿದರು. ವಾಯುನೆಲೆಯಲ್ಲೇ ಎಲ್ಲ ರಾಯಭಾರ ಸಿಬ್ಬಂದಿಯ ಆರೋಗ್ಯವನ್ನೂ ತಪಾಸಣೆ ಮಾಡಲಾಗಿದೆ.

ಆಪ್ಘಾನಿಸ್ತಾನದಿಂದ ಎರಡು ವಿಮಾನಗಳಲ್ಲಿ ಭಾರತೀಯ ಅಧಿಕಾರಿಗಳು ವಾಪಸ್‌ ಆಗಿದ್ದು, ಅಲ್ಲಿಗೆ ಆ ದೇಶದಲ್ಲಿದ್ದ ಎಲ್ಲ ಅಧಿಕಾರಿಗಳು ತಾಯ್ನಾಡಿಗೆ ಮರಳಿದ್ದಾರೆಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದನ್ ಬಗ್ಚಿ ಅವರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದು, ಸದ್ಯದ ಅಪ್ಘಾನಿಸ್ತಾನದ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲವನ್ನೂ ಅವಲೋಕನ ಮಾಡಿ ರಾಯಭಾರಿಯನ್ನೂ ಭಾರತ ವಾಪಸ್‌ ಕರೆಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಾಗಾದರೆ, ಆಫ್ಘಾನಿಸ್ತಾನದ ಬಗ್ಗೆ ಭಾರತದ ಮುಂದಿನ ಹೆಜ್ಜೆ ಏನು? ಎಂಬುದೇ ಈಗ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ.

ರಾಯಭಾರ ಕಚೇರಿಯನ್ನು ಮುಚ್ಚಿದ ಮಾತ್ರಕ್ಕೆ ಆ ದೇಶದ ಜತೆ ಎಲ್ಲವನ್ನೂ ಕಡಿದುಕೊಂಡ ಹಾಗಲ್ಲ ಎಂದು ಕಾಬೂಲ್‌ನಲ್ಲಿದ್ದ ಭಾರತದ ರಾಯಭಾರಿ ರುದ್ರೇಂದ್ರ ಟಂಡನ್ ಹೇಳಿದ್ದು, ಹೊಸ ಆಡಳಿತದ ಜತೆ ನಮ್ಮ ಮಾತುಕತೆಯನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಇಡೀ ಜಾಗತಿಕ ಸಮುದಾಯ ತಾಲಿಬಾಣಿಗಳನ್ನು ಸಂಶಯದ ದೃಷ್ಟಿಯಲ್ಲಿ ನೋಡುತ್ತಿದ್ದರೆ, ಚೀನಾ, ರಷ್ಯ, ಇರಾನ್ ಮತ್ತು ಪಾಕಿಸ್ತಾನದಂಥ ಕೆಲ ದೇಶಗಳು ವಿರುದ್ಧ ದಿಕ್ಕಿನಲ್ಲಿವೆ. ಇದು ಭಾರತದ ಕಳವಳಕ್ಕೆ ಕಾರಣವಾಗಿದೆ. ಸದ್ಯದ ಆಫ್ಘಾನಿಸ್ತಾನದ ಸ್ಥಿತಿಯಲ್ಲಿ ಅಮೆರಿಕ ಪರವಾಗಿ ನಿಲ್ಲಬೇಕೋ ಅಥವಾ ರಷ್ಯ-ಚೀನಾದ ನಿಲುವಿಗೆ ಹೊಂದಿಕೊಳ್ಳಬೇಕೋ ಎಂಬ ಸಂದಿಗ್ಧದಲ್ಲಿದೆ. ಬಹುಶಃ ಒಂದು ವಾರದವರೆಗೆ ಪರಿಸ್ಥಿತಿಯನ್ನು ಅವಲೋಕನ ಮಾಡಿ ಕೇಂದ್ರ ಸರಕಾರ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

ವರದಿ ನೀಡಿದ್ದ ರಾಯಭಾರಿ

ನಿನ್ನೆ ಬೆಳಗ್ಗೆಯಿಂದಲೇ ಕಾಬೂಲ್‌ನಲ್ಲಿ ನಡೆದ ಘಟನಾವಳಿಗಳ ಬಗ್ಗೆ ಭಾರತಕ್ಕೆ ಸಮಗ್ರ ಮಾಹಿತಿ ನೀಡಿದ್ದ ಅಲ್ಲಿನ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್, ಆ ದೇಶದ ಅಧ್ಯಕ್ಷ ಅಶ್ರಫ್‌ ಘನಿ ದೇಶದಿಂದ ಪಲಾಯನ ಮಾಡಿದ ನಂತರ ಉಂಟಾದ ಕ್ಷೋಭೆಯ ಬಗ್ಗೆಯೂ ವರದಿ ನೀಡಿದರು. ಇದಲ್ಲದೆ, ಪಾಕಿಸ್ತಾನ, ಚೀನಾ ಮತ್ತು ಇರಾನ್‌ ಕುಮ್ಮಕ್ಕಿನಿಂದ ದೇಶದ ವಿವಿಧ ಜೈಲುಗಳಲ್ಲಿ ಇದ್ದ ಉಗ್ರರನ್ನು ಬಿಡುಗಡೆ ಮಾಡಿದ ಮೇಲೆ ಉಂಟಾಗಿರುವ ಆತಂಕದ ಬಗ್ಗೆಯೂ ಅವರು ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದ್ದರು.

  • Kabul city / Courtesy: Wikipedia

ಈ ಎಲ್ಲ ಅಂಶಗಳನ್ನು ಪರಿಶೀಲನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿದೇಶಾಂಗ ಸಚಿವ ಜೈ ಶಂಕರ್‌ ಹಾಗೂ ಗೃಹ ಸಚಿವ ಅಮಿತ್‌ ಶಾ ಜತೆ ಚರ್ಚೆ ನಡೆಸಿ ಆ ದೇಶದಿಂದ ರಾಯಭಾರಿಯನ್ನೇ ವಾಪಸ್‌ ಕಡೆಸಿಕೊಳ್ಳಲು ನಿರ್ಧರಿಸಿದರು ಎಂಬುದಾಗಿ ಉನ್ನತ ಮೂಲಗಳು ತಿಳಿಸಿವೆ.

ತಾಲಿಬಾನಿಗಳ ಮೇಲೆ ಅಮೆರಿಕ ನಿಗಾ

ಆಪ್ಘಾನಿಸ್ತಾನದಿಂದ ತನ್ನ ಸೇನಾಪಡೆಯನ್ನು ವಾಪಸ್‌ ಕರೆಸಿಕೊಂಡ ನಂತರ ಆ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತೀವ್ರ ನಿಗಾ ಇಟ್ಟಿರುವ ಅಮರಿಕ, ಕಾಬೂಲ್‌ನಲ್ಲಿ ನಡೆಯುತ್ತಿರುವ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದೆ ಎಂದು ಜಾಗತಿಕ ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರವೂ ಆಪ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲ ಘಟನೆಗಳನ್ನು ಅಮೆರಿಕ ವಿದೇಶಾಂಗ ಇಲಾಖೆ ಹಾಗೂ ರಕ್ಷಣಾ ಕಚೇರಿ ಪೆಂಟಗನ್‌ ಜಂಟಿಯಾಗಿ ಅವಲೋಕನ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಸೈನಿಕರನ್ನು ವಾಪಸ್‌ ಕರೆಸಿಕೊಂಡು ಅಮೆರಿಕ ರಕ್ಷಣಾತ್ಮಕ ಆಟವಾಡುತ್ತಿದೆಯಾ ಅಥವಾ ಇನ್ನೇನಾದರೂ ಹೊಸ ತಂತ್ರಗಾರಿಕೆ ಹೂಡಿದೆಯಾ ಎನ್ನುವ ಅನುಮಾನ ಸ್ವತಃ ತಾಲಿಬಾನ್‌ ಹಾಗೂ ಆ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿರುವ ದೇಶಗಳನ್ನು ಕಾಡುತ್ತಿದೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ನಂತರ ಅಧ್ಯಕ್ಷ ಬೈಡನ್‌, ಆಪ್ಘಾನ್‌ ಪರಿಸ್ಥಿತಿಯ ಬಗ್ಗೆ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್, ರಕ್ಷಣಾ ಕಾರ್ಯದರ್ಶಿ ಲಿಯೋಡ್‌ ಆಸ್ಟಿನ್‌, ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್‌ ಜತೆ ಮಹತ್ವದ ಮಾತುಕತೆ ನಡಸಿದ್ದಾರೆ.

Tags: AfghanistanamericaindiaKabul cityprime minister naredra moditaliban
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪರಸ್ಪರ ಅವಿಸ್ವಾಸ ಗೊತ್ತುವಳಿ ಮಂಡಿಸಿಕೊಂಡು ಸೋತು ಗೆದ್ದ ಬಾಗೇಪಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ-ಉಪಾಧ್ಯಕ್ಷ

ಪರಸ್ಪರ ಅವಿಸ್ವಾಸ ಗೊತ್ತುವಳಿ ಮಂಡಿಸಿಕೊಂಡು ಸೋತು ಗೆದ್ದ ಬಾಗೇಪಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ-ಉಪಾಧ್ಯಕ್ಷ

Leave a Reply Cancel reply

Your email address will not be published. Required fields are marked *

Recommended

ಜಕ್ಕೂರು ಏರೋಡ್ರಂನಲ್ಲಿ ಬಾಡಿಗೆ ನೀಡದ ಅಗ್ನಿ ಏರೋಸ್ಪೋರ್ಟ್ ಅಕಾಡೆಮಿ ಆಸ್ತಿ ಮುಟ್ಟುಗೋಲು

ಜಕ್ಕೂರು ಏರೋಡ್ರಂನಲ್ಲಿ ಬಾಡಿಗೆ ನೀಡದ ಅಗ್ನಿ ಏರೋಸ್ಪೋರ್ಟ್ ಅಕಾಡೆಮಿ ಆಸ್ತಿ ಮುಟ್ಟುಗೋಲು

5 years ago
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಮುಂದಿನ ವರ್ಷ NEP ರದ್ದು

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ