• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರವಾಗಿದೆ, ಜಾರಿ ಮಾಡಿ ಎಂದ ಕವಿ ಚನ್ನವೀರ ಕಣವಿ

P K Channakrishna by P K Channakrishna
August 21, 2021
in STATE
Reading Time: 2 mins read
0
ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರವಾಗಿದೆ, ಜಾರಿ ಮಾಡಿ ಎಂದ ಕವಿ ಚನ್ನವೀರ ಕಣವಿ
952
VIEWS
FacebookTwitterWhatsuplinkedinEmail

ಶಿಕ್ಷಣ ನೀತಿಯನ್ನು ಬೆಂಬಲಿಸಿದ ಧಾರವಾಡದ ಸಾಹಿತ್ಯ ವಲಯ

ಧಾರವಾಡ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಸಂಬಂಧ ಧಾರವಾಡದಲ್ಲಿ ಇಂದು ಬೆಳಗ್ಗೆಯಿಂದ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ; ಸಂಜೆ ಬೆಂಗಳೂರಿಗೆ ಹೊರಡುವ ಮುನ್ನ ಹಿರಿಯ ಕವಿ ಚನ್ನವೀರ ಕಣವಿ ಅವರನ್ನು ಭೇಟಿಯಾದರು.

ಧಾರವಾಡದ ಕಲ್ಯಾಣನಗರದಲ್ಲಿನ ಕಣವಿ ಅವರ ನಿವಾಸಕ್ಕೆ ತೆರಳಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅವರಿಗೆ ವಿವರಿಸಿದರು.

ಸಚಿವರು ಹೇಳಿದ್ದೆಲ್ಲವನ್ನೂ ಸಾವಕಾಶವಾಗಿ ಕೇಳಿಸಿಕೊಂಡ ಕಣವಿಯವರು, “ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರವಾಗಿದೆ. ಉತ್ತಮವಾಗಿ ಜಾರಿಗೆ ಬರಲಿ. ಆದರೆ, ಕನ್ನಡಕ್ಕೆ ಹಾಗೂ ಮಾತೃಭಾಷೆ ಶಿಕ್ಷಣಕ್ಕೆ ಎಲ್ಲೂ ಧಕ್ಕೆ ಆಗದಂತೆ ಜಾರಿ ಆಗಲಿ” ಎಂದು ಹೇಳಿದರು.

ಕನ್ನಡ ಕಲಿಕೆಗೆ ಧಕ್ಕೆ ಅಥವಾ ಅಪಾಯ ಇಲ್ಲ. ಒಂದು ವರ್ಷಕ್ಕೆ ಬದಲಾಗಿ ಎರಡು ವರ್ಷ ಮಾತೃಭಾಷೆ ಕಲಿಕೆಯನ್ನು ಕಡ್ಡಾಯ ಮಾಡಿರುವ ಅಂಶವನ್ನು ಗಮನಕ್ಕೆ ತಂದಾಗ ಕಣವಿ ಅವರು ಬಹಳ ಸಂತಸ ವ್ಯಕ್ತಪಡಿಸಿದರು. ಇದರಿಂದ ಕನ್ನಡಕ್ಕೆ ಬಹಳ ಒಳ್ಳೆಯದಾಗುತ್ತದೆ ಎಂದರು.

“ಒಳ್ಳೆಯದಾಗಲಿ, ಶಿಕ್ಷಣ ನೀತಿ ಜಾರಿಗೆ ಬಂದು ಎಲ್ಲರಿಗೂ ಉತ್ತಮ ಶಿಕ್ಷಣ ಸಿಗಲಿ. ಇದಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ” ಎಂದು ಸಚಿವರಿಗೆ ಹೇಳಿದರು.

ಹತ್ತು ವರ್ಷಕ್ಕೊಮ್ಮೆ ಶಿಕ್ಷಣ ನೀತಿ ಬದಲಾಗಲಿ

ಇದಕ್ಕೂ ಮೊದಲು ಶಿಕ್ಷಣ ನೀತಿ ಜಾರಿ ಬಗ್ಗೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಧಾರವಾಡದ ಸಾಹಿತ್ಯ ವಲಯದ ಪ್ರಮುಖರ ಜತೆ ಮಹತ್ವದ ಸಂವಾದ ನಡೆಸಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಸಾಹಿತಿಗಳಿಗೆ ವಿವರಿಸಿದ ಸಚಿವರು, ಅವರಲ್ಲಿದ್ದ ಸಂಶಯಗಳನ್ನು ನಿವಾರಿಸಿದರು. ಅಲ್ಲದೆ, ಶಿಕ್ಷಣ ನೀತಿಯಲ್ಲಿರುವ ಕ್ರಾಂತಿಕಾರಕ ಅಂಶಗಳ ಬಗ್ಗೆ ಇದೇ ವೇಳೆ ಸಾಹಿತಿಗಳು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ವರ್ಷದಿಂದಲೇ ಜಾರಿ ಆಗುತ್ತಿರುವ ಈ ನೀತಿಯಲ್ಲಿ ಮಾತೃಭಾಷಾ ಕಲಿಕೆಗೆ ಇರುವ ಮಹತ್ವವನ್ನು ಸಾಹಿತಿಗಳಿಗೆ ಮನವರಿಕೆ ಮಾಡಿಕೊಟ್ಟ ಸಚಿವರು; ಬಹುಶಿಸ್ತೀಯ ಹಾಗೂ ಬಹು ಆಯ್ಕೆಯ ಕಲಿಕೆಯಿಂದ ಆಗುವ ಬದಲಾವಣೆಗಳ ಬಗ್ಗೆಯೂ ವಿವರವಾಗಿ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶೈಕ್ಷಣಿಕ ವ್ಯವಸ್ಥೆ ಉನ್ನತೀಕರಿಸುವ ಹಾಗೂ ವಿದ್ಯಾರ್ಥಿಗಳ ಹಿತವನ್ನು ಎತ್ತಿಹಿಡಿಯುವ ಧ್ಯೇಯವೊಂದನ್ನು ಹೊರತುಪಡಿಸಿ ಬೇರಾವ ಅಜೆಂಡಾವು ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿದ ಸಚಿವರು, ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರತಿ ಸಾಹಿತಿ ಅಭಿಪ್ರಾಯವನ್ನು ಆಲಿಸಿದರು.

https://twitter.com/drashwathcn/status/1429038411021635587

ಎರಡು ವರ್ಷ ಮಾತೃಭಾಷೆ ಕಲಿಕೆ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿ ವಿದ್ಯಾರ್ಥಿ ಒಂದಲ್ಲ ಎರಡು ವರ್ಷ ತನ್ನ ಮಾತೃಭಾಷೆಯಲ್ಲಿ ಕಡ್ಡಾಯವಾಗಿ ಕಲಿಯಬೇಕು. ಈ ಮೂಲಕ ಮಾತೃಭಾಷಾ ಕಲಿಕೆಗೆ ಅತ್ಯುನ್ನತ ಮಹತ್ವ ಕೊಡಲಾಗುತ್ತದೆ. ಇಷ್ಟೇ ಅಲ್ಲದೆ, ಕನ್ನಡ ಭಾಷೆಯಲ್ಲೇ ತಾಂತ್ರಿಕ ಶಿಕ್ಷಣ ನೀಡುತ್ತಿದ್ದೇವೆ. ಇದರಲ್ಲಿ ಕಲಿತವರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣ ನೀಡುವಲ್ಲಿ ರಿಯಾಯಿತಿ ಇಲ್ಲವೇ ಮೀಸಲು ಕೊಡಲಾಗುವುದು ಎಂದು ಸಚಿವರು ಹೇಳಿದರು.

ಸ್ಥಳೀಯ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಕೊಡಬೇಕಾದರೆ ಬಂಡವಾಳ ಹೆಚ್ಚು ಹೂಡಬೇಕು. ಇದಕ್ಕೆ ತಂತ್ರಜ್ಞಾನದ ನೆರವು ಬೇಕು. ಕೋಡಿಂಗ್ ಮತ್ತಿತರರ ಕೆಲಸ ಆಗಬೇಕಾಗುತ್ತದೆ. ಇದಕ್ಕೂ ಅವಕಾಶ ಕಲ್ಪಿಸುವ ವ್ಯವಸ್ಥೆ ಆಗಲಿದೆ ಎಂದರು.

ಹತ್ತು ವರ್ಷಕ್ಕೊಮ್ಮೆ ಶಿಕ್ಷಣ ನೀತಿ ಬದಲಾಗಲಿ

ಸಂವಾದದಲ್ಲಿ ಮಾತನಾಡಿ ಲೇಖಕಿ ಮಾಲತಿ ಪಟ್ಟಣಶೆಟ್ಟಿ ಅವರು, ಶಿಕ್ಷಣ ನೀತಿ ಕನಿಷ್ಠ ಹತ್ತು ವರ್ಷಕ್ಕಾದರೂ ಬದಲಾಗಬೇಕು. 35 ವರ್ಷದವರೆಗೂ ನೀತಿ ಬದಲಾಗಿಲ್ಲ‌ ಎನ್ನುವ ಊಹೆ ಮಾಡಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಆಗಾಗ್ಗೆ ಆಗಬೇಕು ಎಂದರು.

ಮಾಲತಿ ಪಟ್ಟಣಶೆಟ್ಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬದಲಾವಣೆಯ ತಳಹದಿಯ ಮೇಲೆಯೇ ಹೊಸ ಶಿಕ್ಷಣ ನೀತಿಯನ್ನು ತರಲಾಗಿದೆ. ಅಗತ್ಯಬಿದ್ದಾಗ ಬದಲಾವಣೆ ಮಾಡಿಕೊಳ್ಳುವ ಎಲ್ಲ ಸಾಧ್ಯತೆಗಳನ್ನು ಮುಕ್ತವಾಗಿ ಇರಿಸಲಾಗಿದೆ. ಇನ್ನು ಮುಂದೆ ಶಿಕ್ಷಣ ನೀತಿ ಬದಲಾವಣೆಗೆ ದಶಕಗಳ ಕಾಲ ಕಾಯುತ್ತಾ ಕೂರಬೇಕಿಲ್ಲ ಎಂದರು.

ಮುಖ್ಯವಾಗಿ ಈ ಶಿಕ್ಷಣ ನೀತಿಯಲ್ಲಿ ಉದ್ಯೋಗ ಕೌಶಲ್ಯದ ತರಬೇತಿ ಪಠ್ಯದ ಕ್ರಮ ಅಳವಡಿಸಲಾಗಿದೆ. ಅಧ್ಯಯನ ಮತ್ತು ಸಂಶೋಧನೆಗೆ ಬಹಳ ಅವಕಾಶ ಇದೆ. ಭವಿಷ್ಯದ ದಿನಗಳಲ್ಲಿ ಉನ್ನತ ಶಿಕ್ಷಣ ಹಾಗೂ ಸಂಶೋಧನೆಗಾಗಿ ವಿದೇಶಕ್ಕೆ ಹೋಗುವವರ ಸಂಖ್ಯೆ ಕಡಿಮೆಯಾಗಲಿದೆ. ಮುಖ್ಯವಾಗಿ ಪದವಿ, ಪಿಜಿ‌ ಮಟ್ಟದಲ್ಲೇ ಸಂಶೋಧನೆಗೆ ಒತ್ತು‌ ಕೊಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಮೌಲ್ಯಮಾಪನ, ಸಾಮರ್ಥ್ಯದ ಬಗ್ಗೆ ನಿಗಾ

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸಾಹಿತಿ ಪ್ರೊ ಹರ್ಷ ಡಂಬಳ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ಬೋಧಕರ ಸಾಮರ್ಥ್ಯ ಮತ್ತು ಮೌಲ್ಯಮಾಪನದ ಬಗ್ಗೆ ನಿರಂತರ ನಿಗಾ ಇಡುವ ವ್ಯವಸ್ಥೆ ಸಾಧ್ಯವೇ ಎಂದು ಡಂಬಳ ಅವರು ಪ್ರಶ್ನೆ ಮಾಡಿದರು.

ಈ ಬಗ್ಗೆ ಉತ್ತರ ನೀಡಿದ ಸಚಿವರು; ಬೋಧಕರ ಮೌಲ್ಯಮಾಪನ ಎನ್ನುವುದು ನಿರಂತರವಾಗಿ ಆಗುತ್ತದೆ. ಗುಣಮಟ್ಟಕ್ಕೆ ತಕ್ಕಂತೆ ಅವರು ಅಪ್ಡೇಟ್ ಆಗಲೇಬೇಕು. ಜತೆಗೆ, ಅವರು ಶಿಕ್ಷಣ ನೀತಿಯಲ್ಲಿ ನಿಗಧಿ ಮಾಡಿರುವ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಈ ಬಗ್ಗೆ ಯಾವುದೇ ರಾಜಿ ಇಲ್ಲ. ಇದಲ್ಲದೆ, ಶಿಕ್ಷಣ ವ್ಯವಸ್ಥೆಯ ನಿರ್ವಹಣೆ ಹಾಗೂ ಸರಕಾರಿ ವ್ಯವಸ್ಥೆಯಲೂ ಆಮೂಲಾಗ್ರ ಸುಧಾರಣೆ ತರಲಾಗುತ್ತಿದೆ ಎಂದರು.

ಪ್ರೊ ಪ್ರಕಾಶ ಗರೂಡ ಅವರು ಮಾತನಾಡಿ, ಶಿಕ್ಷಣಕ್ಕೆ ರಾಜ್ಯದ ಒಟ್ಟು ದೇಶಿಯ ಉತ್ಪನ್ನದಲ್ಲಿ 6% ಮೀಸಲಿಡಬೇಕು ಎಂದು ಶಿಕ್ಷಣ ನೀತಿ ಹೇಳುತ್ತದೆ. ಆದರೆ, ಅಷ್ಟು ಮೊತ್ತದ ಹಣಕಾಸು ಮೀಸಲಿಡಲು ಸಾಧ್ಯವೇ? ಈಗ ತುಂಬಾ ಕಡಿಮೆ ಹಣವನ್ನು ಶಿಕ್ಷಣಕ್ಕೆ ಒದಗಿಸಲಾಗುತ್ತಿದೆ ಎಂದರು.

ಈ ಪ್ರಶ್ನೆಗೆ ಉತ್ತರ ನೀಡಿದ ಉನ್ನತ ಶಿಕ್ಷಣ ಸಚಿವರು; ಈಗಾಗಲೇ ಈ ವಿಷಯವನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಬಜೆಟ್ ಸಭೆಗಳಲ್ಲೂ ಚರ್ಚೆ ನಡೆಸಲಾಗಿ ಹೆಚ್ಚು ಅನುದಾನ ಕೇಳಲಾಗಿದೆ. ಹೊಸ ಶಿಕ್ಷಣ ನೀತಿ ಜಾರಿ ನಂತರ ಸಂಪನ್ಮೂಲದ ಅಗತ್ಯ ಹೆಚ್ಚಿರುತ್ತದೆ. ಈ ಬಗ್ಗೆ ನಾನು ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡುತ್ತೇನೆ ಎಂದರು.

ಸಮುದಾಯದ ಸಹಭಾಗಿತ್ವ ಬೇಕೆಂದ ಸಚಿವರು

ಸಾಮಾನ್ಯವಾಗಿ ಒಮ್ಮೆ ಶಿಕ್ಷಣ ನೀತಿ ಬದಲಾಗುತ್ತದೆ ಎಂದರೆ ಅದಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಹಕಾರ ಬೇಕಾಗುತ್ತದೆ. ಉತ್ತಮ ಶಿಕ್ಷಣ ಎನ್ನುವುದು ವೈಯಕ್ತಿಕವಾಗಿ ಎಲ್ಲರಿಗೂ ಬೇಕು. ಅದೇ ಇಡೀ ಸಮಾಜದ ದೃಷ್ಟಿಕೋನ ಬಂದಾಗ ಅನೇಕರು ನಿಂತ ಜಾಗದಲ್ಲೇ ನಿಂತುಬಿಡುತ್ತಾರೆ. ಯಾಕೆಂದರೆ ಸದ್ಯದ ಸ್ಥಿತಿಯಲ್ಲಿ ಗುಣಮಟ್ಟದ ಶಿಕ್ಷಣ ಎನ್ನುವುದು ಹಣವಂತರ ಮಕ್ಕಳಿಗೆ ಮಾತ್ರ ಸಿಗುತ್ತಿದೆ. ಬಡವರ ಮಕ್ಕಳು ಕಲಿಯುವ ಸರಕಾರಿ ಶಾಲೆಗಳಲ್ಲಿ ಸೌಲಭ್ಯಗಳಿಲ್ಲ, ಅಗತ್ಯ ಮೂಲಸೌಕರ್ಯಗಳೇ ಇಲ್ಲ ಎಂದರು ಸಚಿವ ಡಾ.ಅಶ್ವತ್ಥನಾರಾಯಣ.

ಶಿಕ್ಷಣದಲ್ಲಿ ಸಮಾನತೆ ತರುವ ಉದ್ದೇಶದಿಂದ ರೂಪಿತವಾದುದೇ ಶಿಕ್ಷಣ. ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಒಂದೇ ರಾಜಮಾರ್ಗ. ಇದುವರೆಗೂ ಅನೇಕರು ಶಿಕ್ಷಣ ಹಾಗಿರಬೇಕು, ಹೀಗಿರಬೇಕು ಎಂದು ಹೇಳುತ್ತಲೇ ಇದ್ದಾರೆ. ಅವರು ಹೇಳಿದ್ದೆಲ್ಲ ಈ ಶಿಕ್ಷಣ ನೀತಿಯಲ್ಲಿದೆ ಎಂದು ಸಚಿವರು ಹೇಳಿದರು.

ಎಲ್ಲ ಸಾಹಿತಿಗಳು ಶಿಕ್ಷಣ ನೀತಿಯ ಬಗ್ಗೆ ಮುಕ್ತಕಂಠದ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಈ ಬಗ್ಗೆ ತಾವೂ ಸಮಾಜದಲ್ಲಿ ಮಾತನಾಡುವುದಾಗಿ ಸಚಿವರಿಗೆ ಭರವಸೆ ನೀಡಿದರು.

ಸಂವಾದದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿ ಸದಸ್ಯರಾದ ಪ್ರೊ.ತೇಜಸ್ವಿ ಕಟ್ಟೀಮನಿ, ಪ್ರೊ.ಮಾಲತಿ ಪಟ್ಟಣಶೆಟ್ಟಿ, ಡಾ.ಡಿ.ಎಂ.ಹಿರೇಮಠ, ಡಾ.ಶಾಂತಿನಾಥ ದಿಬ್ಬದ, ಡಾ.ಜೆ.ಎಂ.ನಾಗಯ್ಯ, ಡಾ.ಎಂ.ಎಸ್.ಶಿವಪ್ರಸಾದ್, ಡಾ.ಬಾಲಣ್ಣ ಶೀಗೀಹಳ್ಳಿ, ಡಾ.ಪ್ರಜ್ಞಾ ಮತ್ತಿಹಳ್ಳಿ, ಡಾ.ಜಿನದತ್ತ ಹಡಗಲಿ, ಡಾ.ಚಿದಾನಂದ ರೆಡ್ಡಿ ಪಾಟೀಲ, ಪ್ರೊ.ಹರ್ಷ ಡಂಬಳ, ಡಾ.ಪ್ರಕಾಶ ಗರುಡ, ನಾರಾಯಣ ಪಾಂಡುರಂಗಿ, ವಿಜಯಕುಮಾರ ದಿಡ್ನವರ, ಸದಾನಂದ ಶಿವಳ್ಳಿ, ಶಂಕರ ತುಂಬಿ, ಆರ್.ಬಿ.ಚಿಲುಮಿ ಸೇರಿದಂತೆ ಅನೇಕ ಸಾಹಿತಿಗಳು ಭಾಗಿಯಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಗುಡಸಿ ಇದ್ದರು.

Tags: Chennaveera KanaviDharwaddr cn ashwathnarayankarnatakanep2020new national education policypoet
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಮಳೆ ಅನಾಹುತ ತಡೆಗೆ ಎಚ್ಚೆತ್ತ ಜಿಲ್ಲಾಡಳಿತ

ಚಿಕ್ಕಬಳ್ಳಾಪುರದಲ್ಲಿ ಮಳೆ ಅನಾಹುತ ತಡೆಗೆ ಎಚ್ಚೆತ್ತ ಜಿಲ್ಲಾಡಳಿತ

4 years ago
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ