• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ತಲೆಗೂದಲು ತೆರೆದಿಟ್ಟ ಸತ್ಯ

cknewsnow desk by cknewsnow desk
August 24, 2021
in CRIME, STATE
Reading Time: 2 mins read
0
ತಲೆಗೂದಲು ತೆರೆದಿಟ್ಟ ಸತ್ಯ

ಸಂಜನಾ ಮತ್ತು ರಾಗಿಣಿ / ಸಂಗ್ರಹ ಚಿತ್ರ/ by BNMK Photographs

965
VIEWS
FacebookTwitterWhatsuplinkedinEmail

ಸಂಕಷ್ಟದಲ್ಲಿ ರಾಗಿಣೆ, ಸಂಜನಾ; ಡ್ರಗ್‌ ಸೇವನೆ ಮಾಡಿರುವ ಬಗ್ಗೆ ಸಿಎಪ್‌ಎಸ್ಎಲ್ ವರದಿಯಲ್ಲಿ ದೃಢ

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಮಾದಕ ವಸ್ತು (ಡ್ರಗ್) ಕೇಸಿನಲ್ಲಿ ಸಿಕ್ಕಿಕೊಂಡು ಕಳೆದ ವರ್ಷ ಜೈಲುವಾಸ ಅನುಭವಿಸಿದ್ದ ಸ್ಯಾಂಡಲ್ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರಿಗೆ ಪುನಾ ಸಂಕಷ್ಟ ಎದುರಾಗಿದ್ದು, ಅವರು ಡ್ರಗ್ ಸೇವನೆ ಮಾಡಿದ್ದರೆಂಬ ಅಂಶ ದೃಢಪಟ್ಟಿದೆ.

ಈ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿರುವುದು ಎಫ್‍ಎಸ್‍ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಈ ವಿಷಯ ಹೊರಬರುತ್ತಿದ್ದಂತೆ ಕನ್ನಡ ಚಿತ್ರರಂಗ ಮತ್ತೆ ಶಾಕ್’ಗೆ ಗುರಿಯಾಗಿದೆ. ಆದರೆ, ಈ ಬಗ್ಗೆ ನಟಿಯರಿಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೈದರಾಬಾದ್’ನ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್‍ಎಸ್‍ಎಲ್) ವರದಿಯಲ್ಲಿ ಈ ಸ್ಪೋಟಕ ಸತ್ಯ ಬಯಲಾಗಿದ್ದು, ಈ ಅಂಶವನ್ನು ಪೆÇಲೀಸ್ ಮೂಲಗಳು ಖಚಿತಪಡಿಸಿವೆ.

ಈ ನಟಿಯರಿಬ್ಬರ ಜತೆಗೆ, ಪ್ರರಣದಲ್ಲಿ ಬಂಧಿತರಾಗಿದ್ದ ವೀರೇಶ್ ಖನ್ನಾ, ರವಿ ಶಂಕರ್, ರಾಹುಲ್ ತೋನ್ಸೆ ಹಾಗೂ ಲೂಮ್ ಪೆಪ್ಪರ್ ಕೂಡ ಡ್ರಗ್ ಸೇವಿಸಿರುವುದು ದೃಢಪಟ್ಟಿದೆ.

ಅದರಲ್ಲೂ ದುಬಾರಿ ಬೆಲೆಯ ಮಾದಕವಸ್ತುಗಳನ್ನು ಇವರು ಸೇವನೆ ಮಾಡಿರುವ ಅಂಶವೂ ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ.

ಇನ್ನೊಂದೆಡೆ ವರದಿಯನ್ನು ಕೂಲಂಕಶವಾಗಿ ಪರಿಶೀಲನೆ ಮಾಡುತ್ತಿರುವ ಸಿಸಿಬಿ ಪೊಲೀಸರು ಮುಂದಿನ ಕ್ರಮದ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ.

ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಬೇಕೆ ಅಥವಾ ನೇರವಾಗಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬೇಕೆ ಎಂಬ ಬಗ್ಗೆ ಅವರು ಸಮಾಲೋಚನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಸಂಗ್ರಹ ಮಾಡಿಕೊಂಡಿರುವ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ರಾಜ್ಯ ಮಾತ್ರವಲ್ಲದೆ, ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಸ್ಯಾಡಲ್ವುಡ್ ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಕಳೆದ ವರ್ಷ (2020) ಸೆಪ್ಟೆಂಬರ್ 14ರಂದು ನಟಿ ರಾಗಿಣಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರು ನಿರಂತರ ನೂರಾ ನಲವತ್ತು ದಿನ ಜೈಲಿನಲ್ಲಿದ್ದರು. ಬಳಿಕ ನ್ಯಾಯಲಯದಲ್ಲಿ ನಡೆದ ಹಲವಾರು ವಿಚಾರಣೆಗಳ ನಂತರ 2021ರ ಜನವರಿ 21ರಂದು ಸುಪ್ರೀಂ ಕೋರ್ಟ್ ರಾಗಿಣಿಗೆ ಜಾಮೀನು ನೀಡಿತ್ತು. ಜನವರಿ 25ರಂದು ಅವರು ಜೈಲಿಂದ ಬಿಡುಗಡೆ ಹೊಂದಿದ್ದರು.

ಇನ್ನು ಕಳೆದ ವರ್ಷ ಸೆಪ್ಟೆಂಬರ್ 16ರಂದು ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದ ಸಂಜನಾ ಅವರು ಅದೇ ವರ್ಷ ಡಿಸೆಂಬರ್ 11ರಂದೇ ಜೈಲಿನಿಂದ ರಿಲಿಸ್ ಆಗಿದ್ದರು. ಇವರೂ ಸಹ 56 ದಿನ ಜೈಲುವಾಸ ಅನುಭವಿಸಿದ್ದರು.

  • ಹೈದರಾಬಾದ್‌ನ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಪ್‌ಎಸ್ಎಲ್)

ಸತ್ಯ ಹೊರಬಿದ್ದಿದ್ದು ಹೇಗೆ?

ಪ್ರಕರಣ ಬಯಲಿಗೆ ಬಂದ ಹತ್ತು ತಿಂಗಳ ಬಳಿಕ ಎಫ್‍ಎಸ್‍ಎಲ್ ವರದಿ ಹೊರ ಬಂದಿದ್ದು, ನಟಿಮಣಿಯರ ತಲೆಕೂದಲು ಪರೀಕ್ಷೆಯಿಂದ ಸತ್ಯ ಬಯಲಾಗಿದೆ. ಇದರೊಂದಿಗೆ ರಾಗಿಣಿ ಮತ್ತು ಸಂಜನಾ ಅವರು ಭಾಗಿಯಾಗಿದ್ದ ಸ್ಯಾಂಡಲ್ವುಡ್ ಡ್ರಗ್ ಕೇಸಿಗೆ ಮಹತ್ವದ ತಿರುವು ಸಿಕ್ಕಿದ್ದು, ಪೊಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಮುಂದುವರಿಸಿದ್ದಾರೆ.

ತಲೆಗೂದಲಿಂದ ಡ್ರಗ್ ಸೇವನೆ ಪತ್ತೆ ಹಚ್ಚಿದ ಬಗ್ಗೆ ಸಿಸಿಬಿ ಮುಖ್ಯಸ್ಥ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ರೋಚಕ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹೇಳಿದ್ದಿಷ್ಟು;

  • ಕರ್ನಾಟಕದಲ್ಲಿ ಇದೇ ಮೊದಲ ಬಾರಿ ತಲೆಗೂದಲನ್ನು ಪರೀಕ್ಷೆಗೆ ಒಳಪಡಿಸಿ ಡ್ರಗ್ ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಲಾಗಿದೆ. ಕಳೆದ ವರ್ಷ ದಾಖಲಾಗಿದ್ದ ಡ್ರಗ್ ಕೇಸಿನಲ್ಲಿ ಬಂಧಿತರಾಗಿದ್ದ ಆರೋಪಿಗಳ ತಲೆಗೂದಲನ್ನು ಹೈದರಾಬಾದ್ ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿ ಅಲ್ಲಿಂದ ವರದಿ ಪಡೆಯಲಾಗಿದ್ದು ಆರೋಪಿಗಳು ಡ್ರಗ್ ಸೇವನೆ ಮಾಡಿರುವುದು ರುಜುವಾತಾಗಿದೆ.
  • ಈ ಮೊದಲು ಡ್ರಗ್ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೆ ಅವರ ರಕ್ತ ಮತ್ತು ಮೂತ್ರದ ಸ್ಯಾಂಪಲ್ ಗಳನ್ನು ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿತ್ತು. ಡ್ರಗ್ ಸೇವನೆ ಮಾಡಿದ ಒಂದೆರಡು ದಿನದಲ್ಲಿ ಮಾತ್ರ ಸ್ಯಾಂಪಲ್ ತೆಗೆದುಕೊಂಡರೆ ಪಾಸಿಟಿವ್ ಅಂತ ಬರುತ್ತಿತ್ತು. ತಡವಾದರೆ, ನೆಗೆಟೀವ್ ಅಂತ ಬರುತ್ತಿತ್ತು.
  • ಬಹಳಷ್ಟು ಆರೋಪಿಗಳು ಕೇಸ್ ದಾಖಲಿಸಿ ಎಫ್‍ಐಆರ್ ಮಾಡಿದ ಕೂಡಲೇ ಪರಾರಿಯಾಗಿ ಬಿಡುತ್ತಿದ್ದರು. ಒಂದೆರಡು ತಿಂಗಳಾದರೂ ಸಿಗುತ್ತಿರಲಿಲ್ಲ. ಆಮೇಲೆ ನ್ಯಾಯಾಲಯಕ್ಕೆ ಶರಣಾಗುವುದೋ ಅಥವಾ ಪೊಲೀಸರಿಗೆ ಶರಣಾಗುವುದೋ ಮಾಡುತ್ತಾರೆ. ಹೀಗೆ ಮಾಡಿದಾಗ ಅವರ ರಕ್ತ-ಮೂತ್ರಗಳ ಸ್ಯಾಂಪಲ್ ಗಳಿಂದ ಡ್ರಗ್ ಸೇವನೆ ಮಾಡುವುದು ಪತ್ತೆ ಮಾಡುವುದು ಕಷ್ಟವಾಗುತ್ತಿತ್ತು. ಬಹಳ ಆರೋಪಿಗಳು ಇದನ್ನೇ ಪ್ಲಸ್ ಪಾಯಂಟ್ ಮಾಡಿಕೊಂಡು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದರು.
  • ಇದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಡ್ರಗ್ ಪ್ರಕರರಣಗಳಲ್ಲಿ ಇನ್ನು ಹೆಚ್ಚಿನ ವೈಜ್ಞಾನಿಕ ದಾಖಲೆ, ಸಾಕ್ಷ್ಯಾಧಾರಗಳನ್ನು ಸಂಗ್ರಹ ಮಾಡುವುದು ಹೇಗೆ ಎಂದು ನಾವು ಆಲೋಚನೆ ಮಾಡುತ್ತಿದ್ದಾಗ ತಲೆಗೂದಲು ಮೂಲಕವೂ ಡ್ರಗ್ ಸೇವನೆಯನ್ನು ಪತ್ತೆ ಹಚ್ಚಿಬಹುದು ಎಂದು ಒಂದು ಅಧ್ಯಯನದಿಂದ ಗೊತ್ತಾಯಿತು.
  • ಕೂಡಲೇ ನಾವು ಕಳೆದ ವರ್ಷದ ಕೆಲ ಹೈ ಪ್ರೊಫೈಲ್ ಕೇಸುಗಳು ಸೇರಿ ಹಲವಾರು ಡ್ರಗ್ ಪ್ರಕರಣಗಳ ತನಿಖೆಗೆ ಆರೋಪಿಗಳ ತಲೆಗೂದಲನ್ನೂ ಸಂಗ್ರಹ ಮಾಡಿ ಹೈದರಾಬಾದ್ ನಲ್ಲಿರುವ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್‍ಎಸ್‍ಎಲ್)ಕ್ಕೆ ಕಳಿಸಿಕೊಟ್ಟೆವು. ಕರ್ನಾಟಕ ಪೊಲೀಸ್ ವ್ಯವಸ್ಥೆಯಲ್ಲಿ ಇಂಥ ಪ್ರಯತ್ನ ಇದೇ ಮೊದಲು.
  • ಈಗ ಹೈದರಾಬಾದ್ ನಿಂದ ವರದಿ ಬಂದಿದ್ದು, ಆರೋಪಿಗಳು ಡ್ರಗ್ ಸೇವನೆ ಮಾಡಿರುವುದು ದೃಢಪಟ್ಟಿದೆ.

ಎಚ್ಚರಿಕೆ ಘಂಟೆ

ಆರೋಪಿಗಳಿಗೆ ಇದೊಂದು ಎಚ್ಚರಿಕೆ ಘಂಟೆಯಾಗಿದೆ. ಈ ಮೊದಲು ರಕ್ತ-ಮೂತ್ರದ ಸ್ಯಾಂಪಲ್ಗಳನ್ನು ಪಡೆಯುವಾಗ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ, ಡ್ರಗ್ ಸೇವನೆ ಮಾಡಿದ ನಂತರ ಒಂದು ವರ್ಷವಾದ ಮೇಲೂ ಸತ್ಯವನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಮೂಲಕ ಪತ್ತೆ ಹಚ್ಚಬಹುದು ಎಂದಬುದು ಗೊತ್ತಾದ ಮೇಲೆ ಅಂಥ ತಪ್ಪು ಮಾಡಲು ಯೋಚಿಸುತ್ತಾರೆ. ಒಂದು ರೀತಿಯಲ್ಲಿ ದೊಡ್ಡ ಎಚ್ಚರಿಕೆ ಇದು. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಮಾದಕ ವಸ್ತು ಸೇವನೆಯನ್ನು ತಡೆಯಲು ತಲೆಗೂದಲಿನಿಂದ ಸತ್ಯಾಂಶ ಹೊರಬರುವ ವಿಷಯ ಹೆಚ್ಚು ಸಹಕಾರಿ. ಈ ನಿಟ್ಟಿನಲ್ಲಿ ಪೊಲೀಸರು ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ.

-ಸಂದೀಪ್ ಪಾಟೀಲ್, ಜಂಟಿ ಪೊಲೀಸ್ ಆಯುಕ್ತ, ಸಿಸಿಬಿ

ಇದು ಸಿಸಿಬಿ ಗೆಲುವು

ಹೈದರಾಬಾದ್‌ ಸಿಎಫ್‌ಎಸ್‌ಎಲ್‌ ವರದಿ ಖುಷಿ ತಂದಿದೆ. ಇದು ನಿಜಕ್ಕೂ ಸಿಸಿಬಿಗೆ ಸಿಕ್ಕಿದ ಗೆಲುವು. ಕಳೆದ ಸೆಪ್ಟೆಂಬರ್‌ ಆಸುಪಾಸು ನಾವು ದಾಖಲು ಮಾಡಿದ್ದ ಕೇಸುಗಳಿಗೆ ಒಳ್ಳೆಯ ಮುನ್ನಡೆ ಸಿಕ್ಕಿದೆ. ವೈಜ್ಞಾನಿಕವಾಗಿ ಸಾಕ್ಷ್ಯಾಧಾರಗಳನ್ನು ಸಿಸಿಬಿ ಸಂಗ್ರಹ ಮಾಡಿದೆ. ಕೆಲ ಮಹತ್ವದ ಮಾಹಿತಿಗಳಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.

ಕಮಲ್‌ ಪಂತ್‌, ಬೆಂಗಳೂರು ಪೊಲೀಸ್‌ ಆಯುಕ್ತ

Tags: bangalore policeccbCentral Forensic Science Laboratorycsflkarnatakaragini dwivedisandalwood drug casesanjana galrani
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೆಡಿಎಸ್‌ಗೆ ಗುಡ್ ಬೈ ಹೇಳಿದ ಜಿ.ಟಿ.ದೇವೇಗೌಡ

ಜೆಡಿಎಸ್‌ಗೆ ಗುಡ್ ಬೈ ಹೇಳಿದ ಜಿ.ಟಿ.ದೇವೇಗೌಡ

Leave a Reply Cancel reply

Your email address will not be published. Required fields are marked *

Recommended

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

3 years ago
ಉದ್ಘಾಟನೆಯಾಗದ ಕೋಲಾರದ ಯರಗೋಳ್ ಯೋಜನೆ; ಸರಕಾರದ ವಿಳಂಬ ನೀತಿ ನಾಚಿಕೆಗೇಡು

ಉದ್ಘಾಟನೆಯಾಗದ ಕೋಲಾರದ ಯರಗೋಳ್ ಯೋಜನೆ; ಸರಕಾರದ ವಿಳಂಬ ನೀತಿ ನಾಚಿಕೆಗೇಡು

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ