• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಕೈಕೊಟ್ಟ ಜೆಡಿಎಸ್! ನಂಬಿ ಕೆಟ್ಟ ಕಾಂಗ್ರೆಸ್!!

P K Channakrishna by P K Channakrishna
August 26, 2021
in POLITICS, STATE
Reading Time: 2 mins read
0
ಕೈಕೊಟ್ಟ ಜೆಡಿಎಸ್! ನಂಬಿ ಕೆಟ್ಟ ಕಾಂಗ್ರೆಸ್!!

ಮೈಸೂರು ಮೇಯರ್‌ ಆಗಿ ಆಯ್ಕೆಯಾದ ಸುನಂದಾ ಪಾಲನೇತ್ರಾ.

1.1k
VIEWS
FacebookTwitterWhatsuplinkedinEmail

ಅರಮನೆ ನಗರದಲ್ಲಿ ಅರಳಿದ ಕಮಲ; ಹಳೇ ದೋಸ್ತಿಗಳ ಮೈತ್ರಿ ಖತಂ

ಮೈಸೂರಿನ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ; ಸುನಂದಾ ಪಾಲನೇತ್ರಾ ಹೊಸ ಮೇಯರ್‌

ಮೈಸೂರು: ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವಂತೆ ಕಾಂಗ್ರೆಸ್‌-ಜೆಡಿಎಸ್‌ ಜಗಳದಿಂದ ಬಿಜೆಪಿಗೆ ಲಾಭವಾಗಿದೆ.

ಮೈಸೂರು ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೇಯರ್ ಹುದ್ದೆಯನ್ನು ಅಲಂಕರಿಸಿದೆ. ಈ ಸಲವೂ ಮೇಯರ್‌ ಗಿರಿ ಪಡೆಯಬೇಕೆಂಬ ಕಾಂಗ್ರೆಸ್‌ ಕನಸು ನುಚ್ಚುನೂರಾಗಿದ್ದು, ಅದೇ ಹಠಕ್ಕೆ ಬಿದ್ದ ಜೆಡಿಎಸ್‌ ಕೂಡ ಕೈಚೆಲ್ಲಿತು.

ಈ ಎರಡೂ ಪಕ್ಷಗಳ ತಿಕ್ಕಾಟದ ಲಾಭವನ್ನು ಬಿಜೆಪಿ ಪಡೆದುಕೊಂಡಿತಲ್ಲದೆ, ಈ ಬಿಕ್ಕಟ್ಟನ್ನು ಮತ್ತಷ್ಟು ಹಿಗ್ಗಿಸಿ ಪಾಲಿಕೆಯಲ್ಲಿ ಅಧಿಕಾರ ಗಿಟ್ಟಿಸಿ ಹಿಗ್ಗಿತು. ಹಳೇ ದೋಸ್ತಿಗಳ ಮೈತ್ರಿ ಸಂಪೂರ್ಣವಾಗಿ ಮುರಿದುಬಿದ್ದಿರುವುದು ರಾಜ್ಯ ರಾಜಕಾರಣದ ಮೇಲೆ ಖಚಿತವಾಗಿ ಪರಿಣಾಮ ಬೀರಲಿದೆ.

ಕಳೆದ ಒಂದು ತಿಂಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟದಲ್ಲಿ ಕೊನೆಗೂ ಮೇಯರ್ ಹುದ್ದೆ ಪಡೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಸುನಂದಾ ಪಾಲನೇತ್ರ ಅವರು ಮೈಸೂರು ಮಹಾನಗರ ಪಾಲಿಕೆಯ ಬಿಜೆಪಿಯ ಮೊತ್ತ ಮೊದಲ ಮೇಯರ್‌ ಆಗಿ ಆಯ್ಕೆಯಾದರು.

ಪಾಲಿಕೆಯ ಒಟ್ಟು 72 ಸ್ಥಾನಗಳ ಪೈಕಿ ಬಿಜೆಪಿ 26, ಕಾಂಗ್ರೆಸ್‌ 22, ಜೆಡಿಎಸ್‌ 22 ಮತಗಳನ್ನು ಪಡೆದರೆ, ಇಬ್ಬರು ಗೈರಾಗಿದ್ದರು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮುರಿದುಬಿದ್ದ ಕಾರಣಕ್ಕೆ ಬಲವೇ ಇಲ್ಲದ ಬಿಜೆಪಿ ನಿರಾಯಾಸವಾಗಿ ಅಧಿಕಾರ ಹಿಡಿದಿದೆ.

ಆಪರೇಷನ್‌ ಕಮಲ

ಪಾಲಿಕೆಯಲ್ಲಿ ಬಿಜೆಪಿ ಅನ್ಯ ಪಕ್ಷಗಳ ಸದಸ್ಯರನ್ನು ತನ್ನತ್ತ ಸೆಳೆದುಕೊಳ್ಳಲಿಲ್ಲ ಎನ್ನುವುದು ಬಿಟ್ಟರೆ ಆಪರೇಷನ್‌ ಕಮಲದ ಎಲ್ಲ ಪಟ್ಟುಗಳನ್ನು ಪ್ರಯೋಗಿಸಿತು. ಜೆಡಿಎಸ್‌ ನಾಯಕರು, ಅದರಲ್ಲೂ ಮುಖ್ಯವಾಗಿ ಶಾಸಕ ಸಾ.ರಾ.ಮಹೇಶ್‌, ಕಮಲದ ತಂತ್ರಗಾರಿಕೆಗೆ ಸುನಾಯಾಸವಾಗಿ ಟ್ಯಾಪ್‌ ಆದರೆನ್ನಬಹದು. ಮೈಸೂರಿನ ವಿಶ್ವಸನೀಯ ಮೂಲಗಳು ಹೇಳುವ ಪ್ರಕಾರ, ಸಾ.ರಾ.ಮಹೇಶ್‌ ಅವರಿಗೆ ಕಾಂಗ್ರೆಸ್‌ ಜತೆ ಮೈತ್ರಿ ಮುರಿದುಕೊಂಡು ಬಿಜೆಪಿಗೆ ಹೆಗಲು ಕೊಡುವ ಇರಾದೆ ಇತ್ತು.

ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತೆಗೆದಿದ್ದ ಭೂ ಅಕ್ರಮಗಳ ಸುಳಿ ಅತ್ತ ಜೆಡಿಎಸ್‌, ಇತ್ತ ಬಿಜೆಪಿ ನಾಯಕರ ಕೊರಳಿಗೆ ಸುತ್ತಿಕೊಳ್ಳುವ ಭೀತಿ ಇದ್ದ ಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮೈಸೂರು ಪಾಲಿಕೆಯಲ್ಲಿ ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡವು ಎಂದು ಹೇಳಲಾಗಿದೆ. ಅಧಿಕಾರಕ್ಕೇರಲು ಬಿಜೆಪಿಗೆ ಜೆಡಿಎಸ್‌ ಹೆಗಲು ಬೇಕು, ಅದೇ ರೀತಿ ಅಕ್ರಮಗಳಿಂದ ಪಾರಾಗಲು ಜೆಡಿಎಸ್‌ಗೆ ಬಿಜೆಪಿಯ ಕೃಪೆ ಬೇಕು ಎಂದು ನಿನ್ನೆಯಷ್ಟೇ ಪಕ್ಷ ತೊರೆದ ಹಿರಿಯ ನಾಯಕರೊಬ್ಬರು ಹೇಳಿದ ಮಾತು.

  • ಸಾ.ರಾ.ಮಹೇಶ್‌ ಮತ್ತು ಎಚ್.‌ಡಿ.ಕುಮಾರಸ್ವಾಮಿ

ಅಲ್ಲದೆ, ಮೈಸೂರಿನಲ್ಲಿ ಸಾ.ರಾ.ಮಹೇಶ್‌ ಅವರಿಗೆ ಚೆಕ್‌ಮೇಟ್‌ ಕೊಡಲು ಜಿ.ಟಿ.ದೇವೇಗೌಡ ಹಾಗೂ ಸಂದೇಶ್‌ ನಾಗರಾಜ್‌ ಜೆಡಿಎಸ್‌ಗೆ ಕೈಕೊಟ್ಟರು ಎಂಬುದು ರಹಸ್ಯವೇನಲ್ಲ. ವಾರದ ಹಿಂದೆಯಷ್ಟೆ ಸಾ.ರಾ.ಮಹೇಶ್ ಜತೆ ಸಚಿವ ಸೋಮಶೇಖರ್ ಜತೆಗೆ ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ರಾಮದಾಸ್‌ & ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ, ಮುಡಾ ಅಧ್ಯಕ್ಷರು ಮೇಯರ್ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದರು. ಈ ಹೆಜ್ಜೆ ಬಿಜೆಪಿಗೆ ಬಂಗಾರದಂಥ ಅವಕಾಶ ಸೃಷ್ಟಿ ಮಾಡಿದಂತೆ ಆಯಿತು. ಒಳಗೊಳಗೇ ಜೆಡಿಎಸ್‌ ತನ್ನ ದೋಸ್ತಿ ಪಕ್ಷ ಕಾಂಗ್ರೆಸ್‌ನಿಂದ ದೂರ ಸರಿಯುತ್ತಾ ಬಿಜೆಪಿಗೆ ಹತ್ತಿರವಾಗುತ್ತಾ ಹೋಯಿತು. ಇದು ಜೆಡಿಎಸ್‌ನ ರಾಜ್ಯ ವರಿಷ್ಠರ ಅಗತ್ಯ ಎನ್ನುವುದಕ್ಕಿಂದ ಅದೆಲ್ಲ ಸಾ.ರಾ.ಮಹೇಶ್‌ ಇಚ್ಛೆಗನುಸಾರ ನಡೆಯುತ್ತಾ ಹೋಯಿತು.

ಇನ್ನು ಬಿಜೆಪಿಯೂ ಇಡೀ ಎಪಿಸೋಡ್‌ ಅನ್ನು ಅಚ್ಚುಕಟ್ಟಾಗಿ ಮ್ಯಾನೇಜ್‌ ಮಾಡಿತು. ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ರಾಮದಾಸ್‌ ಮತ್ತು ನಾಗೇಂದ್ರ ಮುಂತಾದವರು ಒಂದು ತಂಡದಂತೆ ಕೆಲಸ ಮಾಡಿದರಲ್ಲದೆ, ತಮ್ಮ ಸದಸ್ಯರು ಭದ್ರವಾಗಿ ಇರುವಂತೆ ಎಚ್ಚರ ವಹಿಸಿದರು. ಇದಕ್ಕೆ ಪೂರಕವೋ ಎನ್ನುವಂತೆ ಜಿ.ಟಿ.ದೇವೇಗೌಡ, ವಿಧಾನ ಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌ ಪಾಲಿಕೆಯತ್ತ ಸುಳಿಯಲಿಲ್ಲ. ಇದು ಬಿಜೆಪಿಗೆ ವರದಾನವಾಯಿತು. ನಿನ್ನೆ ಸಂಜೆ ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ಶಾಸಕ ಜಿಟಿಡಿ, ಜೆಡಿಎಸ್‌ ತೊರೆದಿದ್ದು ಬಿಜೆಪಿಗೆ ದೊಡ್ಡ ಪ್ಲಸ್‌ ಆಯಿತು. ಆದರೆ, ಅದನ್ನು ಪ್ಲಸ್‌ ಮಾಡಿಕೊಳ್ಳಲು ಕಾಂಗ್ರೆಸ್‌ ಯತ್ನಿಸಿತಾದರೂ ಮೊದಲೇ ಅಜೆಂಡಾ ಇಟ್ಟುಕೊಂಡ ಸಾ.ರಾ. ಅದಕ್ಕೆ ಸೊಪ್ಪು ಹಾಕಲಿಲ್ಲ. ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.‌ಡಿ.ಕುಮಾರಸ್ವಾಮಿ ತಲೆಕೆಡಿಸಿಕೊಳ್ಳಲಿಲ್ಲ. ಅವರು ನಂಬಿ ಕೆಟ್ಟರು ಎಂದು ಮೈಸೂರು ಕಾಂಗ್ರೆಸ್‌ ನಾಯಕರೊಬ್ಬರು ಸಿಕೆನ್ಯೂಸ್‌ ನೌ ಗೆ ಹೇಳಿದ ಮಾತು.

38 ವರ್ಷದ ಇತಿಹಾಸದಲ್ಲೇ ಪ್ರಥಮ

160ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ಪೌರ ಸಂಸ್ಥೆಯು 1983ರಲ್ಲಿ ಮಹಾನಗರ ಪಾಲಿಕೆಯಾಗಿ ಹೊರಹೊಮ್ಮಿತು. ಅಲ್ಲಿಂದ ಇಲ್ಲಿಯವರೆಗಿನ 38 ವರ್ಷಗಳ ಅವಧಿಯಲ್ಲಿ ಬಿಜೆಪಿ ಒಂದು ಬಾರಿಯೂ ಮೇಯರ್ ಪಟ್ಟವನ್ನು ಅಲಂಕರಿಸಿರಲಿಲ್ಲ. ಇದೀಗ ಬಿಜೆಪಿ ಸಾಧನೆ ತೋರಿದೆ.

ಮುಖ್ಯಮಂತ್ರಿ, ಮಾಜಿ ಸಿಎಂ ಅಭಿನಂದನೆ

ಕಳೆದ ಒಂದು ವರ್ಷದಿಂದ ಅತ್ಯಂತ ಚುರುಕಿನಿಂದ 24×7 ಪಕ್ಷದ ನಿರ್ದೇಶನಗಳನ್ನು ಮತ್ತು ಸರ್ಕಾರದ ಜನಪ್ರಿಯ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ಸನ್ನು ಈಗಾಗಲೇ ಸಾಧಿಸಿದ್ದೀರಿ. ಇದೀಗ ಮೈಸೂರಿನ ಮಹಾಪೌರರು ಹಾಗೂ ಉಪ ಮಹಾಪೌರರನ್ನು ಆಯ್ಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಕ್ಕೆ ಅಭಿನಂದನೆಗಳು ಎಂದು ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸಚಿವ ಸೋಮಶೇಖರ್‌ ಹಾಗೂ ನೂತನ ಮೇಯರ್ ಸುನಂದಾ ಪಾಲನೇತ್ರಾ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ 38 ವರ್ಷಗಳ ಇತಿಹಾಸದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಮೇಯರ್ ಪಟ್ಟವನ್ನು ಹೊಂದಿದೆ. ಇದಕ್ಕೆ ಸಹಕಾರ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಅವರ ಪಾತ್ರ ಬಹಳ ದೊಡ್ಡದಿದೆ. ಪಕ್ಷಕ್ಕಾಗಿ ಅವರ ದುಡಿಮೆ, ಶ್ರಮ ನಿಜಕ್ಕೂ ಸಾರ್ಥಕವಾಗಿದೆ. ಈ ಅವಕಾಶವನ್ನು ಪಕ್ಷ ಸದುಪಯೋಗಪಡಿಸಿಕೊಂಡು ಮೈಸೂರಿನಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ಮಾಡಿ ತೋರಿಸಲಿ ಎಂದು ಹಾರೈಸುವೆ.

–ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಪಕ್ಷಗಳ ಬಲಾಬಲ

  • ಒಟ್ಟು ಸ್ಥಾನ: 72
  • ಬಿಜೆಪಿ: 26
  • ಕಾಂಗ್ರೆಸ್:‌ 22
  • ಜೆಡಿಎಸ್:‌ 22
  • ಗೈರು ಹಾಜರಿ: 02
Tags: bjpCongressjdskarnatakamayormysoremysore mahanagara palikePolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆಯ ಕೀರ್ತಿ ಜಗದ ತುಂಬೆಲ್ಲ ಹರಡಲಿ

ಗುಡಿಬಂಡೆಯ ಕೀರ್ತಿ ಜಗದ ತುಂಬೆಲ್ಲ ಹರಡಲಿ

Leave a Reply Cancel reply

Your email address will not be published. Required fields are marked *

Recommended

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

1 year ago
ಕ್ಷಮಿಸಿ! ಕಾಮ್ರೇಡ್ ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಪಕ್ಷ ಹೊರಹಾಕಿದೆ!!

ಕಾಮ್ರೇಡ್‌ ಜಿ.ವಿ.ಶ್ರೀರಾಮ ರೆಡ್ಡಿ ಇನ್ನಿಲ್ಲ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ