• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS WORLD

ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

cknewsnow desk by cknewsnow desk
August 27, 2021
in WORLD
Reading Time: 1 min read
0
ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

Jo Biden / Photo courtesy: Joe Biden Facebook page

923
VIEWS
FacebookTwitterWhatsuplinkedinEmail

ನಮ್ಮ ಆಯ್ಕೆಗಳು ಮುಕ್ತವಾಗಿವೆ; ಯಾವ ಸಮಯದಲ್ಲಿ? ಎಲ್ಲಿ? ಹೇಗೆ? ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದ ಅಧ್ಯಕ್ಷ ಜೋ ಬೈಡನ್‌

ಕಾಬೂಲ್: ನಗರದ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಐಸಿಸ್-ಕೆ (ಐಸಿಸ್ ಖೊರಾಸಾಸ್) ಉಗ್ರರು ನಡೆಸಿರುವ ಪೈಶಾಚಿಕ ದಾಳಿ ಹಿನ್ನೆಲೆಯಲ್ಲಿ ಕುದಿಯುತ್ತಿರುವ ಅಮೆರಿಕ, ಆಫ್ಘಾನಿಸ್ತಾನದ ಬಗ್ಗೆ ತನ್ನ ವರಸೆಯನ್ನು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಉಗ್ರರ ದಾಳಿಯಲ್ಲಿ ಅಮೆರಿಕದ 13 ಯೋಧರು ಸೇರಿ ಒಟ್ಟು 90ಕ್ಕೂ ಹೆಚ್ಚು ಮುಗ್ಧ ಆಫ್ಘನ್ನರು ಸಾವನ್ನಪ್ಪಿದ್ದಾರೆ. ಇದರಿಂದ ಅಮೆರಿಕದ ಬೋ ಬೈಡನ್ ಆಡಳಿತ ಇದೀಗ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಮತ್ತೊಂದೆಡೆ, ಅಮೆರಿಕ ಸೇನೆ ಯಾವುದೇ ಕ್ಷಣದಲ್ಲಿ ಉಗ್ರರ ಮೇಲೆ ಮುಗಿಬೀಳುವ ಸಾಧ್ಯತೆ ನಿಶ್ಚಳವಾಗಿದೆ. ಯಾವ ಸಮಯದಲ್ಲಿ? ಎಲ್ಲಿ? ಹೇಗೆ? ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂಬುದನ್ನು ತಾನು ತಳ್ಳಿ ಹಾಕುವಂತಿಲ್ಲ. ನಮ್ಮ ಆಯ್ಕೆಗಳು ಮುಕ್ತಾಗಿವೆ ಎಂದು ಬೈಡನ್ ಸ್ಪಷ್ಟವಾಗಿ ಹೇಳಿದ್ದಾರೆ. 

ದಾಳಿಯ ಹೊಣೆಯನ್ನು ಐಸಿಸ್-ಕೆ ಸಂಘಟನೆ ಹೊತ್ತುಕೊಳ್ಳುವ ಮುನ್ನವೇ ಅಮರಿಕ ದಾಳಿಕೋರರು ಯಾರು ಎಂಬುದನ್ನು ಪತ್ತೆ ಹಚ್ಚಿತ್ತು. ಅಲ್ಲಿನ ಬೇಹುಗಾರಿಕೆ ದಳಕ್ಕೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ರೊಚ್ಚಿಗೆದಿರುವ ಬೈಡನ್, ಅಮಾಯಕರ ಸಾವಿಗೆ ಕಾರಣರಾದವರನ್ನು ಬಿಡಲ್ಲ. ನಮ್ಮವರ ಸಾವಿಗೆ ಕಾರಣರಾದವರನ್ನು ಹುಡುಕಿ ಹುಡುಕಿ ಕೊಲ್ಲುತ್ತೇವೆ ಎಂದು ಗುಡುಗಿದ್ದಾರೆ.

ಅಫ್ಘಾನಿಸ್ತಾನದಿಂದ ಅಗಸ್ಟ್ 31ರೊಳಗೆ ಎಲ್ಲ ನಮ್ಮ ಸೈನಿಕರನ್ನು ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಜೋ ಬೈಡನ್ ಹೇಳಿದ್ದು, ಈ ಕಾರ್ಯಾಚರಣೆ ಎಲ್ಲ ಮುಗಿದ ಮೇಲೆ ಹೊಸ ಕ್ರಮಕ್ಕೆ ಅಮೆರಿಕ ಮುಂದಾಗುತ್ತಾ ಎನ್ನುವ ಅನುಮಾನ ಜಾಗತಿಕ ಸಮುದಾಯವನ್ನು ಕಾಡುತ್ತಿದೆ.

ತನ್ನೆಲ್ಲ ಪ್ರಜೆಗಳು ಆಫ್ಘಾನ್ನಿಂದ ಹೊರಬಂದ ಮೇಲೆ ತಾಲಿಬಾನ್ ಮತ್ತು ಐಸಿಸ್‌ʼಗಳ ಮೇಳೆ ಕ್ರಮಕ್ಕೆ ಅಮೆರಿಕ ಮುಂದಾಗಬಹುದಾ ಎನ್ನುವ ಶಂಕೆ ಕೆಲ ಅರಬ್ ದೇಶಗಳು ವ್ಯಕ್ತಪಡಿಸಿವೆ. ಏಕೆಂದರೆ, ಈಗಾಗಲೇ ಇಸ್ರೇಲ್ ಸೇನೆ ಜತೆ ಅಮೆರಿಕ ಸಮಾಲೋಚನೆಯಲ್ಲಿದೆ. ಕುವೈತ್, ಸೌದಿ ಸೇರಿ ಅರಬ್ ವಲಯದ್ಲಲಿರುವ ಅದರ ಸೇನಾ ನೆಲೆಗಳಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ.

ಮತ್ತೊಂದೆಡೆ, ಕಾಬೂಲ್ ಅಕ್ಷರಶಃ ನರಕವಾಗಿದ್ದು, ವಿಮಾನ ನಿಲ್ದಾಣದ ಬಳಿ ಹೆಣಗಳ ರಾಶಿಯೇ ಇದೆ. ಛಿದ್ರಗೊಂಡ ದೇಹಗಳು ಎಲ್ಲೆಲ್ಲೂ ಕಾಣುತ್ತಿವೆ. 150-200 ಜನರಿಗೆ ತೀವ್ರ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

  • ಕಾಬೂಲ್‌ ವಿಮಾನ ನಿಲ್ದಾಣ

ಜಾಗತಿಕ ಸಮುದಾಯ ಖಂಡನೆ

ಘಟನೆಯನ್ನು ಭಾರತವೂ ಸೇರಿದಂತೆ ಇಡೀ ಜಗತತು ಖಂಡಿಸಿದೆ. ಭಾರತವಂತೂ, ಇದೊಂದು ಪೈಶಾಚಿಕ ಘಟನೆಯಾಗಿದ್ದು, ಮುಗ್ಧ ಆಫ್ಘನ್ನರನ್ನು ರಕ್ಷಣೆ ಮಾಡಬೇಕಿದೆ ಎಂದು ಹೇಳಿದೆ. ಉಳಿದಂತೆ ಬ್ರಿಟನ್, ಜರ್ಮನಿ ಸೇರಿ ಯುರೋಪಿಯನ್ ಒಕ್ಕೂಟದ ದೇಶಗಳು, ಆಸ್ಟ್ರೇಲಿಯಾ, ಕೆನಡಾ, ಜಪಾನಿನಂಥ ಬಲಿಷ್ಠ ದೇಶಗಳು ಉಗ್ರರ ಕೃತ್ಯವನ್ನು ಖಂಡಿಸಿವೆ.

ಇನ್ನೊಂದೆಡೆ, ದಾಳಿಗೂ ನಮಗೂ ಸಂಬಂಧವಿಲ್ಲ ಎಂದ ತಾಲಿಬಾನ್ ನಾಯಕರು ನಾಟಕ ಮಾಡುತ್ತಿದ್ದಾರೆ. .ಇನ್ನು, ಆಫ್ಘನ್ ಬೆಂಕಿಯಲ್ಲಿ ಬೇಳೆ ಬೇಯಿಸಿಕೊಳ್ಳಲು ಹೊಂಚು ಹಾಕಿರುವ ಚೀನಾ ಮತ್ತು ರಷ್ಯಾ ದೇಶಗಳ ನಡೆ ಬಗ್ಗೆ ತೀವ್ರ ಕುತೂಹಲವಿದ್ದು, ಈಗಾಗಲೇ ತಾಲಿಬಾನ್ ಪರ ಎರಡೂ ದೇಶಗಳು ನಿಂತಿವೆ.

ಸೋಮವಾರ ಭದ್ರತಾ ಮಂಡಳಿ ಸಭೆ

ಕಾಬೂಲ್ ಸರಣಿ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ವಿಶ್ವಸಂಸ್ಥೆ ಕೂಡ ತೀವ್ರವಾಗಿ ಪ್ರತಿಕ್ರಿಯಿಸಿದೆ. ಸೋಮವಾರ ಭದ್ರತಾ ಮಂಡಳಿ ಸಭೆ ನಡೆಯಲಿದ್ದು, ನಿಶ್ಚಿತವಾಗಿ ಅಮೆರಿಕ, ಬ್ರಿಟನ್ ಮತ್ತು ಫ್ರಾನ್ಸ್ ದೇಶಗಳು ಉಗ್ರರ ವಿರುದ್ಧ ಕಠಿಣ ನಿಲುವು ತಳೆಯುವುದರಲ್ಲಿ ದೌಟೇ ಇಲ್ಲ. ಆದರೆ, ಗೊಸುಂಬೆಗಳಂತೆ ವರ್ತಿಸುತ್ತಿರುವ ರಷ್ಯ, ಚೀನಾಗಳು ಏನು ಮಾಡುತ್ತವೆ ಎಂಬುದೇ ಪ್ರಶ್ನೆಯಾಗಿದೆ.‌

Tags: AfghanistanIslamic State suicide bombersjoe bidenKabul BlaststalibanTaliban CrisisUN SecurityCouncil
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

by cknewsnow desk
April 17, 2024
0

ಭಕ್ತಿ ಪರವಶತೆಯಿಂದ ಈ ದಿವ್ಯಕ್ಷಣವನ್ನು ಕಣ್ತುಂಬಿಕೊಂಡ ಅಸಂಖ್ಯಾತ ಭಕ್ತರು

Next Post
ನೇಮಕವಾದ ವೈದ್ಯರು 4,000, ಕೆಲಸಕ್ಕೆ ಹಾಜರಾಗಿದ್ದು 2,500!!

ನೇಮಕವಾದ ವೈದ್ಯರು 4,000, ಕೆಲಸಕ್ಕೆ ಹಾಜರಾಗಿದ್ದು 2,500!!

Leave a Reply Cancel reply

Your email address will not be published. Required fields are marked *

Recommended

ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹಿರಿಯ ಪತ್ರಕರ್ತ ಕೋಲಾರದ ಸಚ್ಚಿ ಇನ್ನಿಲ್ಲ

ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹಿರಿಯ ಪತ್ರಕರ್ತ ಕೋಲಾರದ ಸಚ್ಚಿ ಇನ್ನಿಲ್ಲ

2 years ago
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಹೊಸ ವರ್ಷಕ್ಕೆ ಶಾಲೆ-ಕಾಲೇಜು ಆರಂಭ; ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ನೇರ ತರಗತಿ ಶುರುವಿಗೆ ಸಿಎಂ ಸಮ್ಮತಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ