• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮುಖ್ಯಮಂತ್ರಿ ಮಾಂಸಾಹಾರ ಬಿಟ್ಟಿದ್ದು ಯಾವಾಗ?

P K Channakrishna by P K Channakrishna
August 28, 2021
in CHIKKABALLAPUR, STATE
Reading Time: 1 min read
0
ಮುಖ್ಯಮಂತ್ರಿ ಮಾಂಸಾಹಾರ ಬಿಟ್ಟಿದ್ದು ಯಾವಾಗ?
1k
VIEWS
FacebookTwitterWhatsuplinkedinEmail

ಮುದ್ದೇನಹಳ್ಳಿಯಲ್ಲಿ ಸೇವೆಯ ಮೂಲಕ ದೈವ ಸಾಕ್ಷಾತ್ಕಾರವಾಗಿದೆ ಎಂದು ಸಿಎಂ

ಚಿಕ್ಕಬಳ್ಳಾಪುರ: ಭಗವಾನ್‌ ಸತ್ಯಸಾಯಿ ಬಾಬಾ ಅವರ ಸಾನ್ನಿಧ್ಯದಲ್ಲಿಯೇ ತಾವು ಮಾಂಸಾಹಾರವನ್ನು ತ್ಯಜಿಸಿದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆಯನ್ನು ಹಾಗೂ ಮಕ್ಕಳ ಐಸಿಯು ಘಟಕವನ್ನು ಲೋಕಾರ್ಪಣೆ ಮಾತನಾಡಿದ ಅವರು, ಸತ್ಯಸಾಯಿ ಬಾಬಾ ಅವರ ದರ್ಶನ ಹಾಗೂ ಅವರ ಸಾನ್ನಿಧ್ಯದಲ್ಲಿ ಕಳೆದ ಕೆಲ ಭಕ್ತಿಯ ಅನುಭೂತಿಗಳನ್ನು ಬಿಚ್ಚಿಟ್ಟರು.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಸತ್ಯಸಾಯಿ ಆಶ್ರಮಕ್ಕೆ ನಾನು 1998ರಲ್ಲಿ ಒಂದು ದಿನ ನಾನು ಭೇಟಿ ನೀಡಿದ್ದೆ. ಆಗ ಬಾಬಾ ಅವರು ಅಲ್ಲಿಗೆ ಬಂದಿದ್ದರು. ಅಂದು ಬಾಬಾ ಅವರ ದರ್ಶನ ಪಡೆದ ನಾನು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಆ ಸಭೆಯಲ್ಲೇ ಇದ್ದೆ. ಆ ಸಭೆಯಲ್ಲಿ ಬಾಬಾ ಅವರ ವಿದೇಶಿ ಭಕ್ತರೊಬ್ಬರು ದೇಹಕ್ಕೆ ಸಸ್ಯಹಾರ ಅಥವಾ ಮಾಂಸಹಾರಗಳಲ್ಲಿ ಯಾವುದು ಒಳ್ಳೆಯದು ಎಂಬ ಬಗ್ಗೆ ಮಾತನಾಡಿದರು. ಅವರ ಬಳಿ ಅದಕ್ಕೆ ಸಂಬಂಧಿಸಿದ ಒಂದು ಪುಸ್ತಕ ಇತ್ತು. ಅವರು ಆರೋಗ್ಯ ಮತ್ತು ವೈಜ್ಞಾನಿಕ ದೃಷ್ಟಿಯಲ್ಲಿ ಇವೆರಡೂ ಆಹಾರ ಪದ್ಧತಿಗಳ ಸಾಧಕ ಬಾಧಕಗಳನ್ನು ವಿವರಿಸಿದರು. ಅವರ ಮಾತುಗಳು ನನ್ನ ಮೇಲೆ ಗಾಢ ಪ್ರಭಾವ ಬೀರಿದವು. ನಾನು ಮಾಂಸಹಾರ ಸೇವನೆಯನ್ನು ಆ ಕ್ಷಣಕ್ಕೇ ತ್ಯಜಿಸಿದೆ ಎಂದು ಬೊಮ್ಮಾಯಿ ಅವರು ಹೇಳಿದರು.

ಬಾಬಾ ಅವರಲ್ಲಿ ನಮ್ಮ ಮನೆಮನಗಳಲ್ಲಿ ಬಹಳ ಶ್ರದ್ಧಾಭಕ್ತಿ ಇದೆ. ನಾವು ನಂಬಿ ಶ್ರದ್ಧೆಯಿಂದ ನಡೆದುಕೊಳ್ಳುತ್ತಿದ್ದೆವು. ನಾನು ಸತ್ಯಸಾಯಿ ಬಾಬಾ ಅವರನ್ನು ನಂಬಿದ್ದೆ. ಆ ನಂಬಿಕೆ ಹುಸಿಯಾಗಲಿಲ್ಲ. ಆನಾರೋಗ್ಯಕ್ಕೆ ಒಳಗಾಗಿದ್ದ ನಮ್ಮ ತಾಯಿಗೆ ಒಳ್ಳೆಯದಾಯಿತು.

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಅನೇಕರು ಹೇಳುತ್ತಿದ್ದರು, ನಾನೂ ಕೇಳಿದ್ದೇನೆ, ಆ ಅನುಭೂತಿಯನ್ನು ಸ್ವತಃ ಅನುಭವಿಸಿದ್ದೇನೆ. ಬಾಬಾ ಅವರು ಶ್ರೀಕೃಷ್ಣನ ಪ್ರತಿನಿಧಿಯಾಗಿ ಭೂಮಿಗೆ ಬಂದವರು. ಅವರು ಇದ್ದ ಕಾಲದಲ್ಲೇ ನಾವೆಲ್ಲ ಇದ್ದೆವು ಎನ್ನುವುದಕ್ಕಿಂತ  ದೊಡ್ಡ ಭಾಗ್ಯ ಬೇರೆ ಇಲ್ಲ ಎಂಬುದು ನನ್ನ ಭಾವನೆ ಎಂದು ಸಿಎಂ ನುಡಿದರು.

ಮುದ್ದೇನಹಳ್ಳಿಯಲ್ಲಿ ಭಗವಂತನ ಸಾಕ್ಷಾತ್ಕಾರ

ಸೇವೆಯ ಸಾಕಾರವೇ ದಿವ್ಯ ಸಾಕ್ಷಾತ್ಕಾರ, ಇಂಥಹ ಅವಿರತ ಸೇವೆಗೈಯುವ ಮೂಲಕ ಮುದ್ದೇನಹಳ್ಳಿಯ ಸತ್ಯಸಾಯಿಬಾಬಾ ಅವರ ಮಾನವ ಸೇವೆ ಮಾಧವ ಸೇವೆ ಎಂಬ ಸಂದೇಶದಂತೆ ಸೇವಾ ಕಾರ್ಯಕೈಗೊಂಡಿರುವ ಇಲ್ಲಿನ ಪ್ರಶಾಂತಿ ಬಾಲಮಂದಿರ ಟ್ರಸ್ಟ್‌ ಕಾರ್ಯ ಶ್ಲಾಘನೀಯ ಎಂದು ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಭಗವಂತ ಕಣ್ಣಿಗೆ ಕಾಣುವುದಿಲ್ಲ ಎನ್ನುತ್ತಾರೆ. ಆದರೆ ಮುದ್ದೇನಹಳ್ಳಿಯಲ್ಲಿ ಜನಸೇವೆ ಮಾಡುವ ಮೂಲಕ ಸಾಕ್ಷಾತ್ ಭಗವಂತನ ಸಾಕ್ಷಾತ್ಕಾರವಾಗುತ್ತದೆ, ಮಾನವ ಸೇವೆ ಮಾಧವ ಸೇವೆ ಎಂಬುದು ಬಾಬಾರವರ ಸಂದೇಶ. ಅದರ ದೈವೀರೂಪದ ಸಾಕಾರ ಮುದ್ದೇನಹಳ್ಳಿಯಲ್ಲಿ ಕಾಣಬಹುದು, ಬೇರೆಬೇರೆ ಕಾಲದಲ್ಲಿ ಅವತರಿಸಿದ ಮಹಾತ್ಮರ ಸಾಲಿನಲ್ಲಿ ಭಗವಾನ್ ಬಾಬಾರವರು ಒಬ್ಬರಾಗಿದ್ದಾರೆ. ಗುರುವಿನಲ್ಲಿ ಬೆರೆತು ಸಮ್ಮಿಳಿತವಾಗುವುದೇ ಭಕ್ತಿ. ಇಲ್ಲಿನ ಸಕಾರಾತ್ಮಕವಾದ ಕಾರ್ಯಚಟುವಟಿಕೆಯು ಮಾನವಕುಲಕ್ಕೆ ವರದಾನವಾಗಿ ಸಿಗುತಿದೆ ಆ ಸೇವೆ ಎಲ್ಲರಿಗೂ ಸಲ್ಲುವಂತಾಗಲಿ ಎಂದರು ಮಖ್ಯಮಂತ್ರಿ.

300 ಹಾಸಿಗೆಗಳ ಅತ್ಯಾಧುನಿಕ ಸರ್ವಸುಸಜ್ಜಿತ ಈ ಆಸ್ಪತ್ರೆಯು ಪ್ರಸ್ತುತ 125 ಆಮ್ಲಜನಕ ಪೂರಣ ಹಾಸಿಗೆಗಳು ಮತ್ತು 25 ತೀವ್ರ ನಿಗಾಘಟಕಗಳನ್ನು ಹೊಂದಿದ್ದು, ಮಕ್ಕಳು ಮತ್ತು ನವಜಾತ ಶಿಶು ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಹಾಗೂ ಕೋವಿಡ್ ಮೂರನೇ ಅಲೆಯ ಸಂಭಾವ್ಯ ಹೊಡೆತವನ್ನು ಎದುರಿಸಲು ಸಶಕ್ತವಾಗಿದ್ದು, ಕ್ರಮೇಣ ಮೇಲ್ದರ್ಜೆಗೆ ಏರಲಿರುವ ಯೋಜನೆ ರೂಪಿಸಿರುವ ಆಡಳಿತ ಮಂಡಳಿ ಇದೊಂದು ಸಮಾಜದ ಜನಪರ ಕಾಳಜಿಗೆ ಜ್ವಲಂತ ಸಾಕ್ಷಿ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವಿಸ್ತೃತ ವಿಭಾಗದ ಶ್ರೀ ಸತ್ಯಸಾಯಿ ರಾಜೇಶ್ವರಿ ಬ್ಲಾಕ್ʼಗೆ ಭೂಮಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ನೆರವೇರಿಸಿದರು.

ಸತ್ಯಸಾಯಿ ಗ್ರಾಮದ ಪ್ರಶಾಂತಿ ಬಾಲಮಂದಿರದ ಸದ್ಗುರು ಮಧುಸೂದನ್ ಸಾಯಿ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ, “ಸಮಾಜ, ಸರಕಾರ ಮತ್ತು ಸಂಘಸಂಸ್ಥೆಗಳು ಒಂದಾದಾಗ ಮಹತ್ವದ ಕಾರ್ಯ ಸಂಭವಿಸುತ್ತದೆ. ಮುಂಬರುವ ದಿನಗಳಲ್ಲಿ ಮುದ್ದೇನಹಳ್ಳಿಯಲ್ಲಿ ವೈದ್ಯಕೀಯ ವಿದ್ಯಾಲಯವು ಕಾರ್ಯಾಚರಿಸಲಿದೆ” ಎಂದು ನುಡಿದರು.

ಪ್ರೇಮಾಮೃತಂ ಸಭಾ ಭವನದಲ್ಲಿ ನಡೆದ ಸಭಾ ಈ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ. ಎನ್ ಬಚ್ಚೇಗೌಡ, ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಬಿ. ಎನ್. ನರಸಿಂಹ ಮೂರ್ತಿ, ಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ. ಶ್ರೀನಿವಾಸ್ ಸೇರಿ ಇನ್ನಿತರೆ ಗಣ್ಯರು ಇದ್ದರು.

Tags: basavaraj bommaibhagavan sathya sai babaKarnataka chief ministerMuddenahallisadguru sri madhusudan sai
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರೇಪ್ ಮಾಡಿದವರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳಲ್ಲ

ರೇಪ್ ಮಾಡಿದವರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳಲ್ಲ

Leave a Reply Cancel reply

Your email address will not be published. Required fields are marked *

Recommended

ಎರಡು ಒಳ್ಳೆಯ ಸುದ್ದಿ: 1. ಐಟಿಐ ಪರೀಕ್ಷೆ ಉಸ್ತುವಾರಿ ಇನ್ನು ಪರೀಕ್ಷಾ ಪ್ರಾಧಿಕಾರಕ್ಕೆ 2. ಹಳ್ಳಿ ಬಡ ಮಹಿಳೆಯರ ಆರ್ಥಿಕಾಭಿವೃದ್ಧಿಗೆ  ಕ್ಷೀರ ಸಂಜೀವಿನಿ

ಎರಡು ಒಳ್ಳೆಯ ಸುದ್ದಿ: 1. ಐಟಿಐ ಪರೀಕ್ಷೆ ಉಸ್ತುವಾರಿ ಇನ್ನು ಪರೀಕ್ಷಾ ಪ್ರಾಧಿಕಾರಕ್ಕೆ 2. ಹಳ್ಳಿ ಬಡ ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಕ್ಷೀರ ಸಂಜೀವಿನಿ

4 years ago
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ