• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಲಸಿಕೆ ಹಾಕಿಸಿಕೊಳ್ಳಿ, ತಪ್ಪಿದರೆ ನಿಮ್ಮ ಹೆಸರು ಡೀಸಿಗೆ ಹೋಗುತ್ತದೆ!!

cknewsnow desk by cknewsnow desk
September 2, 2021
in CHIKKABALLAPUR, COVID-19, STATE
Reading Time: 1 min read
0
ಗುಡಿಬಂಡೆಯಲ್ಲೊಬ್ಬರು ಆಮ್‌ಆದ್ಮಿಗಳ ಡಾಕ್ಟರ್!‌ ಸೋಂಕಿತರಿಗೆ ವೈದ್ಯಕೀಯ ಆರೈಕೆ ಜತೆಗೆ ಆತ್ಮಸ್ಥೈರ್ಯದ ಪಾಠ
1.2k
VIEWS
FacebookTwitterWhatsuplinkedinEmail

ಗುಡಿಬಂಡೆ ತಾಲೂಕಿನಲ್ಲಿ 90% ಲಸಿಕೀಕರಣ

by GS Bharath Gudibande

ಗುಡಿಬಂಡೆ: ತಾಲೂಕಿನಲ್ಲಿ 90% ಲಸಿಕೀಕರಣ ಮುಗಿದಿದ್ದು, ಒಟ್ಟು 30,೦೦೦ಕ್ಕೂ ಹೆಚ್ಚ ಜನ ಲಸಿಕೆ ಪಡೆದಿದ್ದಾರೆ.

ಪಟ್ಟಣ ಹಾಗೂ ಹಳ್ಳಿಗಳ ಪ್ರತಿಯೊಂದು ಮನೆ ಬಾಗಿಲಿಗೇ ಹೋಗಿ ಲಸಿಕೆ ನೀಡಲಾಗುತ್ತಿದೆ. ಒಂದು ಗ್ರಾಮ ಪಂಚಾಯತಿ ಸೇರಿದಂತೆ 5 ಹಳ್ಳಿಗಳಲ್ಲಿ ಲಸಿಕೆ ನೀಡುವುದರ ಮೂಲಕ ಯಶಸ್ವಿಯಾಗಿ 100% ಲಸಿಕೀಕರಣ ಮಾಡಲಾಗುತ್ತಿದೆ.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಶಿಕ್ಷಕರು, ವಿಟಿಎಫ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ನಿತ್ಯ ಕಾರ್ಯಗಳನ್ನು ಬಿಟ್ಟು ಲಸಿಕಾ ಮೇಳದಲ್ಲಿ ಪಾಲ್ಗೊಂಡು 100% ಲಸಿಕೀಕರಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಲಸಿಕೆ ಹಾಕಿಸಿಕೊಂಡಿಲ್ಲವೋ ಅವರ ಹೆಸರುಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಅವರು ಸಿಕೆನ್ಯೂಸ್ ನೌ ಜತೆ ಮಾತನಾಡುತ್ತಾ ತಿಳಿಸಿದ್ದಾರೆ.

1 ಪಂಚಾಯತಿ, 5 ಹಳ್ಳಿಗಳಲ್ಲಿ ಪೂರ್ಣ ವ್ಯಾಕ್ಸಿನೇಷನ್‌

ಗುಡಿಬಂಡೆ ತಾಲೂಕಿನ ದಪ್ಪರ್ತಿ ಪಂಚಾಯತಿಯ ಎಲ್ಲ ಗ್ರಾಮಗಳ ಜನರಿಗೆ ಲಸಿಕೆ ನೀಡಲಾಗಿದೆ ಹಾಗೂ ಉಲ್ಲೋಡು ಪಂಚಾಯತಿಯ 5 ಹಳ್ಳಿಗಳಾದ ಮಾಚಾವಲಹಳ್ಳಿ, ಇಡ್ರಹಳ್ಳಿ, ಯಲಕರಾಲಹಳ್ಳಿ, ಹಳೇ ಗುಡಿಬಂಡೆ ಹಾಗೂ ಲಕ್ಷ್ಮೀಸಾಗರದಲ್ಲಿ 100% ಲಸಿಕೀಕರಣ ಮುಗಿದಿದೆ. ಇನ್ನೆರಡು ಮೂರು ದಿನಗಳಲ್ಲಿ ಉಳಿದ ಹಳ್ಳಿಗಳಲ್ಲೂ ವ್ಯಾಕ್ಸಿನೇಷನ್‌ ಸಂಪೂರ್ಣವಾಗಿ ಮುಗಿಯುತ್ತದೆ ಎಂದು ಉಲ್ಲೋಡು ಕಂದಾಯ ವೃತ್ತದ ಅಧಿಕಾರಿ ವಿ.ಲಕ್ಷ್ಮೀನಾರಾಯಣ ಮಾಹಿತಿ ನೀಡಿದರು.

ತಾಲೂಕಿನಾದ್ಯಂತ 46430 ಜನ 18 ವರ್ಷ ಮೇಲ್ಪಟ್ಟವರಿದ್ದು, ಇವರಲ್ಲಿ ಅನೇಕರು ಉದ್ಯೋಗ ನಿಮಿತ್ತ ಇತರೆ ಊರುಗಳಲ್ಲಿ ಇದ್ದಾರೆ. 30 ಸಾವಿರಕ್ಕೂ ಅಧಿಕ ಜನರಿಗೆ ವ್ಯಾಕ್ಸಿನೇಷನ್‌ ಮಾಡಲಾಗಿದೆ. ಯಾರು ಲಸಿಕೆ ಪಡೆದಿಲ್ಲ ಅಂತಹವರ ಪಟ್ಟಿ ತಯಾರು ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಹಸೀಲ್ದಾರ್ ಸಿಬ್ಗತ್ ವುಲ್ಲಾ ಅವರು ಸಿಕೆನ್ಯೂಸ್ ನೌ ಗೆ ತಿಳಿಸಿದರು.

ಯಾರು ಏನಂತಾರೆ?

ತಾಲೂಕಿನ ಜನರು ಲಸಿಕೆ ವಿಷಯದಲ್ಲಿ ಅಲಕ್ಷ್ಯ ತೋರದೆ ಎಲ್ಲರೂ ಲಸಿಕೆ ಹಾಕಿಸಿಕೊಂಡು ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ನಮ್ಮ ಜತೆ ಸಹಕರಿಸಬೇಕು. ವ್ಯಾಕ್ಸಿನೇಷನ್‌ ಬಗ್ಗೆ ಅಪನಂಬಿಕೆ, ವದಂತಿಗಳಿಗೆ ಗುಡ್ ಬೈ ಹೇಳಿ ಜಾಗರೂಕರಾಗಿ ಲಸಿಕಾ ಮೇಳದಲ್ಲಿ ಭಾಗವಹಿಸಿ. ಲಸಿಕೀಕರಣದಲ್ಲಿ ತಾಲೂಕಿನ ನರ್ಸುಗಳು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.

ಸಿಬ್ಗತ್ ವುಲ್ಲಾ, ತಹಸೀಲ್ದಾರ್

ತಾಲೂಕಿನ ಲಸಿಕಾ ಮೇಳದಲ್ಲಿ ನಿನ್ನೆ (ಬುಧವಾರ) 2239 ಹಾಗೂ ಇಂದು 500 ಜನರಿಗೆ ವ್ಯಾಕ್ಸಿನೇಷನ್‌ ಮಾಡಲಾಗಿದೆ. ಒಟ್ಟು 30 ಸಾವಿರಕ್ಕೂ ಅಧಿಕ ಜನರಿಗೆ ಲಸಿಕೆ ನೀಡಿದ್ದೇವೆ. ಇನ್ನೊಂದು ತಿಂಗಳಲ್ಲಿ 100% ಲಸಿಕೀಕರಣ ತಾಲೂಕಿನಲ್ಲಿ ಮಾಡಬೇಕು ಎಂಬ ಗುರಿ ಹೊಂದಿದ್ದೇವೆ. ಯಾರು ಲಸಿಕೆ ಹಾಕಿಸಿಕೊಂಡಿಲ್ಲವೋ  ಅವರು ಮುಂದೆ ಬಂದು ಲಸಿಕೆ ಪಡೆಯಬೇಕು.

ಡಾ.ನರಸಿಂಹಮೂರ್ತಿ, ತಾಲೂಕು ವೈದ್ಯಾಧಿಕಾರಿ

ತಹಸೀಲ್ದಾರ್, ಆರೋಗ್ಯ ಇಲಾಖೆ, ತಾಲೂಕು ಪಂಚಾಯತಿ, ಫ್ರಂಟ್ʼಲೈನ್ ವಾರಿಯರ್ಸ್‌, ಪೊಲೀಸ್ ಇಲಾಖೆ, ಪಪಂ.. ಹೀಗೆ ಎಲ್ಲರೂ ಲಸಿಕೀಕರಣದಲ್ಲಿ ಭಾಗವಹಿಸಿ ಶ್ರಮಿಸುತ್ತಿದ್ದಾರೆ. ಅಧಿಕಾರಿಗಳು ಮನೆ-ಮನೆಗೂ ಭೇಟಿ ನೀಡಿ ಲಸಿಕೆ ಅರಿವು ಮೂಡಿಸಿ  ವ್ಯಾಕ್ಸಿನ್ ನೀಡುತ್ತಿರುವ ಕಾರ್ಯ ಶ್ಲಾಘನೀಯ.

ಕೆ.ಎನ್.ನವೀನ್ ಕುಮಾರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ

Tags: chikkaballapuracovid19gudibandekarnatakakarnataka fights back coronavaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕನ್ಯಾಕುಮಾರಿಯಿಂದ ಬಾಗೇಪಲ್ಲಿಗೆ ಬಂದ ಅಮೃತ ಮಹೋತ್ಸವ ಸಿಆರ್ಪಿಎಫ್ ಸೈಕಲ್ ಜಾಥಾ

ಕನ್ಯಾಕುಮಾರಿಯಿಂದ ಬಾಗೇಪಲ್ಲಿಗೆ ಬಂದ ಅಮೃತ ಮಹೋತ್ಸವ ಸಿಆರ್ಪಿಎಫ್ ಸೈಕಲ್ ಜಾಥಾ

Leave a Reply Cancel reply

Your email address will not be published. Required fields are marked *

Recommended

2023 ಚುನಾವಣೆಯಲ್ಲಿ 30-35 ಮಹಿಳೆಯರಿಗೆ ಜೆಡಿಎಸ್ ಟಿಕೆಟ್

ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹು

4 years ago
‌ಆಸೆಯೇ ದುಃಖಕ್ಕೆ ಮೂಲ ಎನ್ನುವದನ್ನು ಮರೆಯುವುದು ಬೇಡ, ಈಗಲಾದರೂ  ನಮ್ಮೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ..

‌ಆಸೆಯೇ ದುಃಖಕ್ಕೆ ಮೂಲ ಎನ್ನುವದನ್ನು ಮರೆಯುವುದು ಬೇಡ, ಈಗಲಾದರೂ ನಮ್ಮೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ..

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ