• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ದಾಖಲಾದ ಬಡ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ

cknewsnow desk by cknewsnow desk
September 4, 2021
in EDITORS'S PICKS, NATION, STATE
Reading Time: 1 min read
0
ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ದಾಖಲಾದ ಬಡ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ
990
VIEWS
FacebookTwitterWhatsuplinkedinEmail

ವಿದ್ಯಾರ್ಥಿ, ಪೋಷಕರ ಜತೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

  1. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ವಿದ್ಯಾರ್ಥಿಗೆ ಸಹಾಯ ಹಸ್ತ
  2. ಅಲೆಮಾರಿ ಜನಾಂಗದ ಬಡ ವಿದ್ಯಾರ್ಥಿ ಮೌನೇಶ್
  3. ವಿದ್ಯಾರ್ಥಿ ಮನೆ ಬಾಗಿಲಿಗೇ ಹೋಗಿ ದಾಖಲು ಮಾಡಿಕೊಂಡ ಪ್ರಾಂಶುಪಾಲರು
  4. ಪ್ರಾಂಶುಪಾಲರು, ಸಿಬ್ಬಂದಿ ಸೇವಾ ನಿಷ್ಠೆಗೆ ಸಚಿವರ ಮೆಚ್ಚುಗೆ
  5. ಉನ್ನತ ಶಿಕ್ಷಣ, ಉದ್ಯೋಗಕ್ಕೆ ಸರಕಾರದ ಸಹಕಾರದ ಭರವಸೆ ನೀಡಿದ ಸಚಿವರು
  6. ಕುಡಿತಿನಿಯಲ್ಲಿ ತಾಂತ್ರಿಕ ಶಿಕ್ಷಣದ ಮಹತ್ವದ ಸಾರಿದ ಪ್ರಾಂಶುಪಾಲರು

👌🏻

SSLCಯಲ್ಲಿ ಶೇ.90 ಅಂಕ ಗಳಿಸಿದ್ದರೂ ಮುಂದಿನ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸುವ ಚಿಂತೆಯಲ್ಲಿದ್ದ ಬಳ್ಳಾರಿ ಜಿಲ್ಲೆ ಕುಡತಿನಿಯ ಅಲೆಮಾರಿ ಜನಾಂಗದ ವಿದ್ಯಾರ್ಥಿ ಎಂ.ಮೌನೇಶನನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ಮೂಲಕ ಕೂಡ್ಲಿಗಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಎಸ್.ಮಲ್ಲಪ್ಪ ಅವರು ಪ್ರಶಂಸಾರ್ಹ ಕಾರ್ಯ ಮಾಡಿದ್ದಾರೆ.👏🏼 https://t.co/V6heRWlkVH

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) September 4, 2021

ಬೆಂಗಳೂರು: ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ.ಮೌನೇಶ್ʼಗೆ ಡಿಪ್ಲೊಮಾ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭರವಸೆ ನೀಡಿದ್ದಾರೆ.

ಶನಿವಾರದಂದು ಸಚಿವರು ಮೌನೇಶ್ ಮತ್ತವರ ಪೋಷಕರಿಗೆ ಕರೆ ಮಾಡಿ ಮಾತನಾಡಿದರಲ್ಲದೆ, ಹತ್ತನೇ ತರಗತಿಯಲ್ಲಿ ಶೇ.90ರಷ್ಟು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಯನ್ನು ಶ್ಲಾಘಿಸಿದರಲ್ಲದೆ, ಮುಂದಿನ ಮೂರು ವರ್ಷಗಳ ವಿದ್ಯಾಭ್ಯಾಸವನ್ನು ಸರಕಾರ ಸಂಪೂರ್ಣ ಉಚಿತವಾಗಿ ನೀಡಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಮೌನೇಶ್ ಪೋಷಕರ ಜತೆಯೂ ಮಾತನಾಡಿದ ಸಚಿವರು, ನಿಮ್ಮ ಪುತ್ರನಿಗೆ ಉಚಿತ ಶಿಕ್ಷಣ ನೀಡಲಾಗುವುದು. ಯಾವುದೇ ಚಿಂತೆ ನಿಮಗೆ ಬೇಡ. ಎಲ್ಲವನ್ನೂ ಸರಕಾರವೇ ನೋಡಿಕೊಳ್ಳಲಿದೆ. ತದ ನಂತರ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಬೇಕಾದರೂ ಸರಕಾರ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು. ವಿದ್ಯಾರ್ಥಿ ಮೌನೇಶ್ ಹಾಗೂ ಅವರ ಪೋಷಕರು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಾಂಶುಪಾಲರ ಕಾರ್ಯಕ್ಕೆ ಮೆಚ್ಚುಗೆ

ವಿದ್ಯಾರ್ಥಿಯ ಮನೆ ಬಾಗಿಲಿಗೇ ತೆರಳಿ ಪ್ರವೇಶಾತಿ ನೀಡಿದ ಕೂಡ್ಲಿಗಿಯ ಸರಕಾರಿ ಪಾಲಿಟೆಕ್ನಿಕ್ʼನ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಯನ್ನು ಇದೇ ವೇಳೆ ಸಚಿವ ಅಶ್ವತ್ಥನಾರಾಯಣ ಅವರು ಮನಸಾರೆ ಶ್ಲಾಘಿಸಿದರು. ಪ್ರಾಂಶುಪಾಲ ಎಸ್.ಮಲ್ಲಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ ಸಚಿವರು, “ನೀವು ಬಹಳ ಒಳ್ಳೆಯ ಕೆಲಸ ಮಾಡಿದ್ದೀರಿ. ಆ ವಿದ್ಯಾರ್ಥಿಗೆ ತಗುಲುವ ಎಲ್ಲ ವೆಚ್ಚವನ್ನೂ ಸರಕಾರವೇ ಭರಿಸಲಿದೆ. ನಿಮ್ಮದೇ ವೆಚ್ಚದಲ್ಲಿ ಬಡ ವಿದ್ಯಾರ್ಥಿಯೊಬ್ಬರನ್ನು ದತ್ತು ಪಡೆದು, ಅವರ ಮನೆ ಬಾಗಿಲಿಗೇ ಹೋಗಿ ದಾಖಲು ಮಾಡಿಕೊಂಡಿರುವ ಕ್ರಮ ಮಾದರಿಯಾದದ್ದುʼ ಎಂದು ಹೇಳಿದರು.

ಒಳ್ಳೆಯ ಉಪ ಕ್ರಮ ಎಂದ ಸಚಿವರು

ನಂತರ ಈ ಬಗ್ಗೆ ಮಾತನಾಡಿದ ಸಚಿವರು, “ಇದೊಂದು ಅತ್ಯುತ್ತಮ ಪ್ರಯತ್ನ. ಆ ಪಾಲಿಟೆಕ್ನಿಕ್ʼನ ಪ್ರಾಚಾರ್ಯರು, ಬೋಧಕರ ಬದ್ಧತೆ ನನ್ನ ಹೃದಯ ಗೆದ್ದಿದೆ. ತಾಂತ್ರಿಕ ಮತ್ತು ಉನ್ನತ ಶಿಕ್ಷಣವನ್ನು ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪಿಸಬೇಕು ಎಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯವನ್ನು ಹಾಗೂ ಶೈಕ್ಷಣಿಕ ಸಮಾನತೆಯನ್ನೂ ಇವರು ಆರಂಭದಲ್ಲೇ ಸಾಕಾರ ಮಾಡಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಈ ವರ್ಷದಿಂದ ಹೊಸದಾಗಿ ಆರಂಭ ಮಾಡಲಾದ ಡಿಪ್ಲೊಮಾ ಕೋರ್ಸಗಳಲ್ಲಿ ಒಂದಾದ ʼಸೈಬರ್ ಫಿಸಿಕಲ್ ಸಿಸ್ಟಮ್ಸ್ ಅಂಡ್ ಸೆಕ್ಯೂರಿಟಿʼ ವಿಭಾಗದ ಕೊನೆಯ ಒಂದು ಸೀಟು ಉಳಿದಿತ್ತು. ಆ ಸೀಟಿಗೆ ಬಹಳ ಬೇಡಿಕೆ ಇದ್ದರೂ ಪಾಲಿಟೆಕ್ನಿಕ್ ಪ್ರಾಚಾರ್ಯರಾದ ಎಸ್.ಮಲ್ಲಪ್ಪ, ಇತರೆ ಬೋಧಕರು ಹಾಗೂ ಸಿಬ್ಬಂದಿ ತಾಲೂಕಿನ ಕುಡಿತಿನಿ ಗ್ರಾಮದ ಗುಡಿಸಲಿನಲ್ಲಿ ವಾಸಿಸುವ ಅಲೆಮಾರಿ ಜನಾಂಗದ ಬಡ ಪ್ರತಿಭಾವಂತ ವಿದ್ಯಾರ್ಥಿ ಎಂ.ಮೌನೇಶ್ʼಗೆ ನೀಡಿದ್ದಾರೆ. ಇದು ಒಳ್ಳೆಯ ಕ್ರಮ ಎಂದು ಸಚಿವರು ತಿಳಿಸಿದರು.

ಪ್ರಾಂಶುಪಾಲರು ಏನಂದರು?

ವಿದ್ಯಾರ್ಥಿ ಎಂ.ಮೌನೇಶ್ʼಗೆ ಮೂರು ವರ್ಷದಲ್ಲಿ ಆಗುವ ಎಲ್ಲ ಖರ್ಚು-ವೆಚ್ಚವನ್ನು ನಾನೇ ಭರಿಸುವುದಾಗಿ ಹೇಳಿದ್ದೆ. ಬಳಿಕ ಮಾನ್ಯ ಸಚಿವರು ಸರಕಾರವೇ ಎಲ್ಲ ವೆಚ್ಚ ಭರಿಸಲಿದೆ ಎಂದು ಘೋಷಣೆ ಮಾಡಿದರು. ಹಾಗೆಯೇ; ಡಿಪ್ಲೊಮಾದಲ್ಲಿ ಈಗಾಗಲೇ ಅಳವಡಿಸಿಕೊಂಡಿರುವ ಜಾಗತಿಕ ಮಟ್ಟಕ್ಕೆ ಸಮನಾದ ಪಠ್ಯಕ್ರಮ, ಡಿಜಿಟಲ್ ಶಿಕ್ಷಣ, ಕಲಿಕಾ ನಿರ್ವಹಣಾ ವ್ಯವಸ್ಥೆ (LMS), ಸ್ಮಾರ್ಟ್ ಕ್ಲಾಸ್ ರೂಂ ಹಾಗೂ ಉಚಿತ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಈ ವಿದ್ಯಾರ್ಥಿಗೆ ಒದಗಿಸಲಾಗುವುದು ಎಂದು ಪ್ರಾಂಶುಪಾಲ ಎಸ್. ಮಲ್ಲಪ್ಪ ತಿಳಿಸಿದರು.

ಮೌನೇಶ್ ಬಹಳ ಬಡತನದಲ್ಲಿದ್ದಾನೆ. ಅವರು ಒಂದು ಕೊಳಗೇರಿಯಲ್ಲಿ ವಾಸ ಮಾಡುತ್ತಿದ್ದು, ಅಲ್ಲಿ ಸುಮಾರು 150 ಮನೆಗಳಿವೆ. ನಾನು, ನಮ್ಮ ಬೋಧಕರು ಮತ್ತು ಸಿಬ್ಬಂದಿ ಜತೆ ತೆರಳಿ ಅಲ್ಲಿನ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ನಮಗೆ ಸರಕಾರದಿಂದಲೂ ಉತ್ತಮ ಪ್ರೋತ್ಸಾಹವಿದೆ. ಪಾಲಿಟೆಕ್ನಿಕ್ʼನಲ್ಲಿ ಕಲಿಯಲು ಸಾಕಷ್ಟು ಸೌಲಭ್ಯಗಳಿವೆ. ಇದೆಲ್ಲವನ್ನೂ ನಾನು ಜನರಿಗೆ ವಿವರಿಸಿ ಹೇಳಿದ್ದೇನೆ. ಎಲ್ಲರಿಗೂ ಮೌನೇಶ್ ದಾಖಲಾತಿ ಮತ್ತು ದತ್ತು ಸ್ವೀಕಾರ ವಿಷಯ ಪ್ರೇರಣೆ ನೀಡಿದೆ ಎಂದು ಮಲ್ಲಪ್ಪ ಹೇಳಿದರು.

ಮುಖ್ಯವಾಗಿ ನಮ್ಮ ಪಾಲಿಟೆಕ್ನಿಕ್ʼನ ಸಹೋದ್ಯೋಗಿಗಳು ಮುಂದಿನ ವರ್ಷದಿಂದ ತಲಾ ಒಬ್ಬೊಬ್ಬ ಬಡ ವಿದ್ಯಾರ್ಥಿಯನ್ನು ದತ್ತು ತೆಗೆದುಕೊಂಡು ಓದಿಸುವ ಸಂಕಲ್ಪ ಮಾಡಿದ್ದಾರೆ. ಇದು ನನಗೆ ತುಂಬಾ ಸಂತೋಷ ಉಂಟು ಮಾಡಿದೆ. ಪಾಲಿಟೆಕ್ನಿಕ್ʼನಲ್ಲಿ ಮೂರು ವರ್ಷ ವ್ಯಾಸಂಗ ಮುಗಿದ ಮೇಲೆ ಅವರು ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಅವಖಾಶವೂ ಇದೆ. ಅಗತ್ಯಬಿದ್ದರೆ ಉನ್ನತ ಓದಿಗೂ ಹೋಗಬಹುದು. ಸರಕಾರದ ಸೌಲಭ್ಯಗಳ ಬಗ್ಗೆ ನಾವು ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

Tags: diplomadr cn ashwathnarayankarnatakakudliginep2020nepKarnatakapolytechnicpoor studenttechnical educationvijayanagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ

ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ

Leave a Reply Cancel reply

Your email address will not be published. Required fields are marked *

Recommended

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

3 years ago
ಹೆಚ್.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ನೀರಿನ 3ನೇ ಹಂತ ಸಂಸ್ಕರಣೆ; ರಾಜ್ಯಪಾಲರ ಮೊರೆ ಹೋದ ಶಾಶ್ವತ ನೀರಾವರಿ ಹೋರಾಟ ಸಮಿತಿ

ಹೆಚ್.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ನೀರಿನ 3ನೇ ಹಂತ ಸಂಸ್ಕರಣೆ; ರಾಜ್ಯಪಾಲರ ಮೊರೆ ಹೋದ ಶಾಶ್ವತ ನೀರಾವರಿ ಹೋರಾಟ ಸಮಿತಿ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ